AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಿಎಸ್ಐ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ ಪ್ರಕರಣ; ಕಲಬುರಗಿ ಪೊಲೀಸ್ ಆಯುಕ್ತ ರವಿಕುಮಾರ್​ಗೆ ಸಿಐಡಿ ಪತ್ರ

ಜ್ಞಾನಜ್ಯೋತಿ ಶಾಲೆಯಲ್ಲಿ ಪಿಐಎಸ್ ನೇಮಕಾತಿ ಪರೀಕ್ಷೆ ನಡೆದಿತ್ತು. ಬಳಿಕ ಪಿಎಸ್ಐ ಪರೀಕ್ಷೆ ವೇಳೆ ಅಕ್ರಮ ನಡೆದ ವಿಷಯ ಬಹಿರಂಗವಾಗಿತ್ತು.

ಪಿಎಸ್ಐ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ ಪ್ರಕರಣ; ಕಲಬುರಗಿ ಪೊಲೀಸ್ ಆಯುಕ್ತ ರವಿಕುಮಾರ್​ಗೆ ಸಿಐಡಿ ಪತ್ರ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Jul 25, 2022 | 10:24 AM

Share

ಕಲಬುರಗಿ: ಪಿಎಸ್ಐ ಹುದ್ದೆಗಳ (PSI Recruitment) ನೇಮಕಾತಿಯಲ್ಲಿ ನಡೆದ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿ ಸಿಐಡಿ ಅಧಿಕಾರಿಗಳು (CID Officials) ಕಲಬುರಗಿ ನಗರ ಪೊಲೀಸ್ ಆಯುಕ್ತ ರವಿಕುಮಾರ್​ಗೆ ಪತ್ರ ಬರೆದಿದ್ದಾರೆ. ಜ್ಞಾನಜ್ಯೋತಿ ಶಾಲೆಯಲ್ಲಿ ಪಿಐಎಸ್ ನೇಮಕಾತಿ ಪರೀಕ್ಷೆ ನಡೆದಿತ್ತು. ಬಳಿಕ ಪಿಎಸ್ಐ ಪರೀಕ್ಷೆ ವೇಳೆ ಅಕ್ರಮ ನಡೆದ ವಿಷಯ ಬಹಿರಂಗವಾಗಿತ್ತು. ಈ ಹಿನ್ನೆಲೆ ಜ್ಞಾನಜ್ಯೋತಿ ಶಾಲೆಯ ಅಕ್ರಮ ಸೇರಿದಂತೆ ಪ್ರಕರಣ ಸಂಬಂಧ ಹಲವು ವಿಷಯಗಳ ಬಗ್ಗೆ ಮಾಹಿತಿ ನೀಡುವಂತೆ ಅಧಿಕಾರಿಗಳು ಪೊಲೀಸ್ ಆಯುಕ್ತರನ್ನ ಕೇಳಿದ್ದಾರೆ.

ಜ್ಞಾನಜ್ಯೋತಿ ಶಾಲೆಗೆ ಅಂದು ಡಿವೈಎಸ್​ಪಿ ಎಸ್.ಎಸ್.ಹುಲ್ಲೂರ್ ಬಿಡುಗಡೆ ಮಾಡಿದ್ದೇಕೆ? ಹುಲ್ಲೂರ್ ಅವರನ್ನು ಪರೀಕ್ಷಾ ಕೇಂದ್ರದಿಂದ ಬಿಡುಗಡೆಗೆ ರಾಯಚೂರು ಎಸ್​ಪಿ ಪತ್ರ ಬರೆದಿದ್ದರಾ? ಪರೀಕ್ಷಾ ಕೇಂದ್ರದಿಂದ ಬಿಡುಗಡೆ ಮಾಡುವಂತೆ ಹುಲ್ಲೂರ ಆಯುಕ್ತರ ಕಚೇರಿಗೆ ಮನವಿ ಪತ್ರ ಕೊಟ್ಟಿದಾರೆಯೇ? ಡಿವೈಎಸ್​ಪಿ ಹುಲ್ಲೂರ್ ಸ್ಥಳಕ್ಕೆ ಹೊಸಮನಿ ನೇಮಿಸದಕ್ಕೆ, ಹೊಸಮನಿ ಅವರ ಜಾಗಕ್ಕೆ ಯಾರನ್ನು ನೇಮಕ ಮಾಡಲಾಯಿತು? ಪಿಎಸ್ಐ ಪರೀಕ್ಷೆ ವೇಳೆ ಲೋಹ ಶೋಧಕ ಯಂತ್ರ ಇದ್ದರೂ ಸಹ ಪರೀಕ್ಷೆ ಒಳಗಡೆ ಡಿವೈಸ್ ತೆಗೆದುಕೊಂಡು ಹೋಗಿದ್ದಾರೆ. ಆದರೆ ಬಾಗಿಲಲ್ಲಿ ಇರುವ ನಿಮ್ಮ ಸಿಬ್ಬಂದಿ ಯಾಕೆ ಇದನ್ನು ಪತ್ತೆ ಮಾಡಲಿಲ್ಲ? ಡಿವೈಎಸ್​ಪಿ ಹುಲ್ಲೂರ್​ರನ್ನು ದಿಢೀರನೆ ಯಾಕೆ ಆ ಕೇಂದದಿಂದ ಬದಲಾವಣೆ ಮಾಡಲಾಯಿತು? ಆ ಕೇಂದ್ರಕ್ಕೆ ನೇಮಕವಾದ ಡಿವೈಎಸ್​ಪಿ ಹೊಸಮನಿ ಅವರಿಗೆ ಪರೀಕ್ಷಾ ತರಬೇತಿ ನೀಡಲಾಗಿತ್ತಾ? ಅಕ್ರಮ‌ ನಡೆದ ಹಲವು ಕೇಂದ್ರಗಳಲ್ಲಿ ಮೆಟಲ್ ಡಿಟಕ್ಟರ್ ಲೋಪ್ ಕಂಡು ಬಂದಿರುವದು ಯಾಕೆ? ಎಂಬ ಅನೇಕ ವಿಷಯಗಳ ಬಗ್ಗೆ ಮಾಹಿತಿ ನೀಡುವಂತೆ ಸಿಐಡಿ ಪತ್ರ ಬರೆದಿದೆ.

ಇದನ್ನೂ ಓದಿ: Viral Video: ಜಪಾನ್‌ನಲ್ಲಿ ಸಕುರಾಜಿಮಾ ಜ್ವಾಲಮುಖಿ ಸ್ಫೋಟ; ಬೂದಿ, ಬಂಡೆಗಳನ್ನು ಉಗುಳುತ್ತಿರುವ ಜ್ವಾಲಾಮುಖಿ ವೈರಲ್ ವಿಡಿಯೋ ಇಲ್ಲಿದೆ

ಇದನ್ನೂ ಓದಿ
Image
KPSC: ಕೆಪಿಎಸ್​ಸಿ ಎದುರು ಪ್ರತಿಭಟನೆ ನಡೆಸಲು ಉದ್ಯೋಗಾಕಾಂಕ್ಷಿಗಳು ಸಜ್ಜು
Image
Murder: ಡ್ರಗ್ಸ್​​ ಸೇವಿಸುತ್ತಿದ್ದ ಮಗನನ್ನು ಕತ್ತರಿಸಿ, ಪ್ಲಾಸ್ಟಿಕ್ ಬ್ಯಾಗ್​ನಲ್ಲಿ ತುಂಬಿ ಬಿಸಾಡಿದ ಅಪ್ಪ!
Image
Viral Video: ಜಪಾನ್‌ನಲ್ಲಿ ಸಕುರಾಜಿಮಾ ಜ್ವಾಲಮುಖಿ ಸ್ಫೋಟ; ಬೂದಿ, ಬಂಡೆಗಳನ್ನು ಉಗುಳುತ್ತಿರುವ ಜ್ವಾಲಾಮುಖಿ ವೈರಲ್ ವಿಡಿಯೋ ಇಲ್ಲಿದೆ
Image
Black Rice: ಕಪ್ಪು ಅಕ್ಕಿಯಿಂದಾಗುವ ಆರೋಗ್ಯ ಪ್ರಯೋಜನಗಳ ಬಗ್ಗೆ ತಿಳಿಯಿರಿ

ಪರೀಕ್ಷೆ ರದ್ದು ಮಾಡುವುದು ಬೇಡವೆಂದಿದ್ದ ಅಭ್ಯರ್ಥಿಗಳ ಅರ್ಜಿ ವಜಾ: ಪಿಎಸ್ಐ ನೇಮಕಾತಿ ಪರೀಕ್ಷೆ ರದ್ದು ಮಾಡಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದ ಅಭ್ಯರ್ಥಿಗಳ ಅರ್ಜಿಯನ್ನು ವಜಾಗೊಳಿಸಿ ಕರ್ನಾಟಕ ಆಡಳಿತ ನ್ಯಾಯಮಂಡಳಿ ಆದೇಶ ಹೊರಡಿಸಿದೆ. ಪಿಎಸ್​ಐ ಅಭ್ಯರ್ಥಿಗಳು ಪರೀಕ್ಷೆ ರದ್ದು ಆದೇಶ ಪ್ರಶ್ನಿಸಿ ತನಿಖೆ ಮೂಲಕ ಕಳಂಕಿತರನ್ನು ಪ್ರತ್ಯೇಕಿಸಲು ಮನವಿ ಮಾಡಿದ್ದರು. ಆದ್ರೆ ಈಗ ಕಾರಣಕೊಟ್ಟು ಅಭ್ಯರ್ಥಿಗಳ ಅರ್ಜಿ ವಜಾಗೊಳಿಸಿ ಕರ್ನಾಟಕ ಆಡಳಿತ ನ್ಯಾಯಮಂಡಳಿ ಆದೇಶ ಹೊರಡಿಸಿದೆ.

ಇದನ್ನೂ ಓದಿ: ಉತ್ತರ ಪ್ರದೇಶದ ಪೂರ್ವಾಂಚಲ್ ಎಕ್ಸ್​ಪ್ರೆಸ್​ವೇಯಲ್ಲಿ ಭೀಕರ ಅಪಘಾತ; ಬಸ್​ಗಳು ಡಿಕ್ಕಿ ಹೊಡೆದು 8 ಜನ ಸಾವು

Published On - 10:18 am, Mon, 25 July 22

Follow Us
Web contact
Web contact

TV9 Kannada

Read More
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!