AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಿಎಸ್ಐ ಹುದ್ದೆಗಳಿಗೆ ನೇಮಕಾತಿಯಲ್ಲಿ ಅಕ್ರಮ ವಿಚಾರ; ಪರಾರಿಯಾಗಿರುವ ಪ್ರಮುಖ ಆರೋಪಿಗಳು ಒಂದೇ ಕಡೆ ಇರುವ ಅನುಮಾನ

ಪ್ರಕರಣದ ವಿಚಾರಣೆಯನ್ನು ತೀವ್ರಗೊಳಿಸಿದ ಸಿಐಡಿ ಅಧಿಕಾರಿಗಳು, ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿರುವ 50 ಅಭ್ಯರ್ಥಿಗಳಿಗೆ ನೋಟಿಸ್ ನೀಡಿದ್ದಾರೆ. ಇಂದು ವಿಚಾರಣೆಗೆ ಹಾಜರಾಗುವಂತೆ ಸಿಆರ್ಪಿಸಿ ಕಲಂ 91ರಡಿ ನೋಟಿಸ್ ನೀಡಿದ್ದಾರೆ.

ಪಿಎಸ್ಐ ಹುದ್ದೆಗಳಿಗೆ ನೇಮಕಾತಿಯಲ್ಲಿ ಅಕ್ರಮ ವಿಚಾರ; ಪರಾರಿಯಾಗಿರುವ ಪ್ರಮುಖ ಆರೋಪಿಗಳು ಒಂದೇ ಕಡೆ ಇರುವ ಅನುಮಾನ
ಆರೋಪಿ ಮಂಜುನಾಥ ಮೇಳಕುಂದಿ, ವಿರೇಶ್
TV9 Web
| Edited By: sandhya thejappa|

Updated on:Apr 21, 2022 | 8:46 AM

Share

ಕಲಬುರಗಿ: 545 ಪಿಎಸ್ಐ ಹುದ್ದೆಗಳಿಗೆ (PSI Recruitment) ನೇಮಕಾತಿಯಲ್ಲಿ ಅಕ್ರಮ ನಡೆದಿರುವ ಆರೋಪ ವಿಚಾರಕ್ಕೆ ಸಂಬಂಧಿಸಿ ಸಿಐಡಿ ಪೊಲೀಸರು (CID Police) ಪ್ರಮುಖ ಆರೋಪಿಗಳಿಗಾಗಿ ಹುಡುಕಾಟ ನಡೆಸಿದ್ದಾರೆ. ಪ್ರಕರಣದ ಕಿಂಗ್​ಪಿನ್​ ಕಾಶಿನಾಥ್, ಮಂಜುನಾಥ ಮೇಳಕುಂದಿ, ದಿವ್ಯಾ ಹಾಗರಗಿ, ಇಬ್ಬರು ಕೊಠಡಿ ಮೇಲ್ವಿಚಾರಕಿಯರು ನಾಪತ್ತೆಯಾಗಿದ್ದಾರೆ. ಸದ್ಯ ಬಂಧಿತ ಆರೋಪಿಗಳಿಂದ ಹೆಚ್ಚಿನ ಮಾಹಿತಿ ಸಿಗಲಿಲ್ಲ. ಕೇಸ್ ದಾಖಲಾಗುತ್ತಿದ್ದಂತೆ ಪ್ರಮುಖ ಆರೋಪಿಗಳು ನಾಪತ್ತೆಯಾಗಿದ್ದಾರೆ. ನಾಪತ್ತೆಯಾಗಿರುವ ಎಲ್ಲರೂ ಒಂದೇ ಕಡೆ ಇರುವ ಬಗ್ಗೆ ಅನುಮಾನ ಇದೆ. ಕಳೆದ ಕೆಲ ದಿನಗಳಿಂದ ಸಿಐಡಿ ಪೊಲೀಸರು ಐವರಿಗಾಗಿ ಬಲೆ ಬೀಸಿದ್ದಾರೆ.

ಆರೋಪಿ ಮಂಜುನಾಥ ಮೇಳಕುಂದಿ ಕಲಬುರಗಿ ನೀರಾವರಿ ಇಲಾಖೆಯು ಸಹಾಯಕ ಇಂಜನೀಯರ್. ಈತ ವಿರೇಶ್ ಅನ್ನೋ ಅಭ್ಯರ್ಥಿಯಿಂದ ಬರೋಬ್ಬರಿ 39 ಲಕ್ಷ ಹಣ ಪಡೆದಿದ್ದಾನಂತೆ. ವಿರೇಶ್, ಅಕ್ರಮವಾಗಿ ಪರೀಕ್ಷೆ ಬರೆದು ಆಯ್ಕೆಯಾಗಿದ್ದ. ಇಡೀ ಪ್ರಕರಣ ಬೆಳಕಿಗೆ ಬಂದಿದ್ದೆ ವಿರೇಶ್ ಅನ್ನೋ ಅಭ್ಯರ್ಥಿ ಬಂಧನದ ನಂತರ. ವಿರೇಶ್, ಕಲಬುರಗಿ ಜಿಲ್ಲೆಯ ಸೇಡಂ ನಿವಾಸಿ. ವಿಚಾರಣೆ ವೇಳೆ ತಾನು ಮಂಜುನಾಥ ಎಂಬುವವನಿಗೆ 39 ಲಕ್ಷ ಹಣ ನೀಡಿರೋದಾಗಿ ವಿರೇಶ್ ಒಪ್ಪಿಕೊಂಡಿದ್ದಾನೆ.

ಪ್ರಕರಣದ ವಿಚಾರಣೆಯನ್ನು ತೀವ್ರಗೊಳಿಸಿದ ಸಿಐಡಿ ಅಧಿಕಾರಿಗಳು, ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿರುವ 50 ಅಭ್ಯರ್ಥಿಗಳಿಗೆ ನೋಟಿಸ್ ನೀಡಿದ್ದಾರೆ. ಇಂದು ವಿಚಾರಣೆಗೆ ಹಾಜರಾಗುವಂತೆ ಸಿಆರ್ಪಿಸಿ ಕಲಂ 91ರಡಿ ನೋಟಿಸ್ ನೀಡಿದ್ದಾರೆ. ಬೆಂಗಳೂರಿನ ಸಿಐಡಿ ಕಚೇರಿಗೆ ಬರುವಂತೆ ಸೂಚನೆ ನೀಡಿದ್ದಾರೆ. ಹಾಲ್ಟಿಕೆಟ್, ಒಎಂಆರ್ ಶೀಟ್​ನ ಕಾರ್ಬನ್ ಪ್ರತಿ ತರಬೇಕು ಎಂದಿದ್ದಾರೆ. ಹಂತ ಹಂತವಾಗಿ ವಿಚಾರಣೆ ನಡೆಸಲಿರುವ ಸಿಐಡಿ ಅಧಿಕಾರಿಗಳು, ಆಯ್ಕೆಯಾಗಿರುವ 545 ಅಭ್ಯರ್ಥಿಗಳನ್ನೂ ವಿಚಾರಣೆ ಮಾಡುವ ಸಾಧ್ಯತೆಯಿದೆ.

ಬಿಜೆಪಿ ನಾಯಕರ ಕೊರಳಿಗೆ ಸುತ್ತಿಕೊಳ್ಳುತ್ತಾ?: ಈ ಅಕ್ರಮ ಬಿಜೆಪಿಯ ಅನೇಕ ನಾಯಕರ ಕೊರಳಿಗೆ ಸುತ್ತಿಕೊಳ್ಳುತ್ತಾ? ಎಂಬ ಪ್ರಶ್ನೆ ಮೂಡಿದೆ. ಜ್ಞಾನಜ್ಯೋತಿ ಶಾಲೆಗೆ PSI ಪರೀಕ್ಷಾ ಕೇಂದ್ರ ಅನುಮತಿ ಪತ್ರ ಪತ್ರವನ್ನು ಕೆಲ ಜನಪ್ರತಿನಿಧಿಗಳು ನೀಡಿರುವ ಶಂಕೆ ಇದೆ. ಅದರ ಬಗ್ಗೆಯೂ ತನಿಖೆಯಾಗಬೇಕೆಂದು ಕಾಂಗ್ರೆಸ್ ನಾಯಕರು ಆಗ್ರಹಿಸಿದ್ದಾರೆ.

ಇದನ್ನೂ ಓದಿ

Virgin Food Addiction: ‘ಕನ್ಯೆಯರು ಖಾದ್ಯಗಳಿಗೆ ವ್ಯಸನಿಗಳಾಗಲಿ’ ಎಂದ ಫಾಸ್ಟ್ ಫುಡ್ ಕಂಪೆನಿ ಎಂಡಿ ವಜಾ

ರಷ್ಯಾದಿಂದ ಹೊಸ ಕ್ಷಿಪಣಿ ಪರೀಕ್ಷೆ; ಶತ್ರು ರಾಷ್ಟ್ರಗಳು ಬೆದರಿಕೆಯೊಡ್ಡುವ ಮುನ್ನ ಎರಡು ಬಾರಿ ಯೋಚಿಸಿ ಎಂದ ಪುಟಿನ್

Published On - 8:41 am, Thu, 21 April 22

Follow Us
TV9 Web
TV9 Web

TV9 Kannada

Read More
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್