AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಿಎಸ್ಐ ಹುದ್ದೆಗಳಿಗೆ ನೇಮಕಾತಿಯಲ್ಲಿ ಅಕ್ರಮ ವಿಚಾರ; ಪರಾರಿಯಾಗಿರುವ ಪ್ರಮುಖ ಆರೋಪಿಗಳು ಒಂದೇ ಕಡೆ ಇರುವ ಅನುಮಾನ

ಪ್ರಕರಣದ ವಿಚಾರಣೆಯನ್ನು ತೀವ್ರಗೊಳಿಸಿದ ಸಿಐಡಿ ಅಧಿಕಾರಿಗಳು, ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿರುವ 50 ಅಭ್ಯರ್ಥಿಗಳಿಗೆ ನೋಟಿಸ್ ನೀಡಿದ್ದಾರೆ. ಇಂದು ವಿಚಾರಣೆಗೆ ಹಾಜರಾಗುವಂತೆ ಸಿಆರ್ಪಿಸಿ ಕಲಂ 91ರಡಿ ನೋಟಿಸ್ ನೀಡಿದ್ದಾರೆ.

ಪಿಎಸ್ಐ ಹುದ್ದೆಗಳಿಗೆ ನೇಮಕಾತಿಯಲ್ಲಿ ಅಕ್ರಮ ವಿಚಾರ; ಪರಾರಿಯಾಗಿರುವ ಪ್ರಮುಖ ಆರೋಪಿಗಳು ಒಂದೇ ಕಡೆ ಇರುವ ಅನುಮಾನ
ಆರೋಪಿ ಮಂಜುನಾಥ ಮೇಳಕುಂದಿ, ವಿರೇಶ್
TV9 Web
| Edited By: |

Updated on:Apr 21, 2022 | 8:46 AM

Share

ಕಲಬುರಗಿ: 545 ಪಿಎಸ್ಐ ಹುದ್ದೆಗಳಿಗೆ (PSI Recruitment) ನೇಮಕಾತಿಯಲ್ಲಿ ಅಕ್ರಮ ನಡೆದಿರುವ ಆರೋಪ ವಿಚಾರಕ್ಕೆ ಸಂಬಂಧಿಸಿ ಸಿಐಡಿ ಪೊಲೀಸರು (CID Police) ಪ್ರಮುಖ ಆರೋಪಿಗಳಿಗಾಗಿ ಹುಡುಕಾಟ ನಡೆಸಿದ್ದಾರೆ. ಪ್ರಕರಣದ ಕಿಂಗ್​ಪಿನ್​ ಕಾಶಿನಾಥ್, ಮಂಜುನಾಥ ಮೇಳಕುಂದಿ, ದಿವ್ಯಾ ಹಾಗರಗಿ, ಇಬ್ಬರು ಕೊಠಡಿ ಮೇಲ್ವಿಚಾರಕಿಯರು ನಾಪತ್ತೆಯಾಗಿದ್ದಾರೆ. ಸದ್ಯ ಬಂಧಿತ ಆರೋಪಿಗಳಿಂದ ಹೆಚ್ಚಿನ ಮಾಹಿತಿ ಸಿಗಲಿಲ್ಲ. ಕೇಸ್ ದಾಖಲಾಗುತ್ತಿದ್ದಂತೆ ಪ್ರಮುಖ ಆರೋಪಿಗಳು ನಾಪತ್ತೆಯಾಗಿದ್ದಾರೆ. ನಾಪತ್ತೆಯಾಗಿರುವ ಎಲ್ಲರೂ ಒಂದೇ ಕಡೆ ಇರುವ ಬಗ್ಗೆ ಅನುಮಾನ ಇದೆ. ಕಳೆದ ಕೆಲ ದಿನಗಳಿಂದ ಸಿಐಡಿ ಪೊಲೀಸರು ಐವರಿಗಾಗಿ ಬಲೆ ಬೀಸಿದ್ದಾರೆ.

ಆರೋಪಿ ಮಂಜುನಾಥ ಮೇಳಕುಂದಿ ಕಲಬುರಗಿ ನೀರಾವರಿ ಇಲಾಖೆಯು ಸಹಾಯಕ ಇಂಜನೀಯರ್. ಈತ ವಿರೇಶ್ ಅನ್ನೋ ಅಭ್ಯರ್ಥಿಯಿಂದ ಬರೋಬ್ಬರಿ 39 ಲಕ್ಷ ಹಣ ಪಡೆದಿದ್ದಾನಂತೆ. ವಿರೇಶ್, ಅಕ್ರಮವಾಗಿ ಪರೀಕ್ಷೆ ಬರೆದು ಆಯ್ಕೆಯಾಗಿದ್ದ. ಇಡೀ ಪ್ರಕರಣ ಬೆಳಕಿಗೆ ಬಂದಿದ್ದೆ ವಿರೇಶ್ ಅನ್ನೋ ಅಭ್ಯರ್ಥಿ ಬಂಧನದ ನಂತರ. ವಿರೇಶ್, ಕಲಬುರಗಿ ಜಿಲ್ಲೆಯ ಸೇಡಂ ನಿವಾಸಿ. ವಿಚಾರಣೆ ವೇಳೆ ತಾನು ಮಂಜುನಾಥ ಎಂಬುವವನಿಗೆ 39 ಲಕ್ಷ ಹಣ ನೀಡಿರೋದಾಗಿ ವಿರೇಶ್ ಒಪ್ಪಿಕೊಂಡಿದ್ದಾನೆ.

ಪ್ರಕರಣದ ವಿಚಾರಣೆಯನ್ನು ತೀವ್ರಗೊಳಿಸಿದ ಸಿಐಡಿ ಅಧಿಕಾರಿಗಳು, ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿರುವ 50 ಅಭ್ಯರ್ಥಿಗಳಿಗೆ ನೋಟಿಸ್ ನೀಡಿದ್ದಾರೆ. ಇಂದು ವಿಚಾರಣೆಗೆ ಹಾಜರಾಗುವಂತೆ ಸಿಆರ್ಪಿಸಿ ಕಲಂ 91ರಡಿ ನೋಟಿಸ್ ನೀಡಿದ್ದಾರೆ. ಬೆಂಗಳೂರಿನ ಸಿಐಡಿ ಕಚೇರಿಗೆ ಬರುವಂತೆ ಸೂಚನೆ ನೀಡಿದ್ದಾರೆ. ಹಾಲ್ಟಿಕೆಟ್, ಒಎಂಆರ್ ಶೀಟ್​ನ ಕಾರ್ಬನ್ ಪ್ರತಿ ತರಬೇಕು ಎಂದಿದ್ದಾರೆ. ಹಂತ ಹಂತವಾಗಿ ವಿಚಾರಣೆ ನಡೆಸಲಿರುವ ಸಿಐಡಿ ಅಧಿಕಾರಿಗಳು, ಆಯ್ಕೆಯಾಗಿರುವ 545 ಅಭ್ಯರ್ಥಿಗಳನ್ನೂ ವಿಚಾರಣೆ ಮಾಡುವ ಸಾಧ್ಯತೆಯಿದೆ.

ಬಿಜೆಪಿ ನಾಯಕರ ಕೊರಳಿಗೆ ಸುತ್ತಿಕೊಳ್ಳುತ್ತಾ?: ಈ ಅಕ್ರಮ ಬಿಜೆಪಿಯ ಅನೇಕ ನಾಯಕರ ಕೊರಳಿಗೆ ಸುತ್ತಿಕೊಳ್ಳುತ್ತಾ? ಎಂಬ ಪ್ರಶ್ನೆ ಮೂಡಿದೆ. ಜ್ಞಾನಜ್ಯೋತಿ ಶಾಲೆಗೆ PSI ಪರೀಕ್ಷಾ ಕೇಂದ್ರ ಅನುಮತಿ ಪತ್ರ ಪತ್ರವನ್ನು ಕೆಲ ಜನಪ್ರತಿನಿಧಿಗಳು ನೀಡಿರುವ ಶಂಕೆ ಇದೆ. ಅದರ ಬಗ್ಗೆಯೂ ತನಿಖೆಯಾಗಬೇಕೆಂದು ಕಾಂಗ್ರೆಸ್ ನಾಯಕರು ಆಗ್ರಹಿಸಿದ್ದಾರೆ.

ಇದನ್ನೂ ಓದಿ

Virgin Food Addiction: ‘ಕನ್ಯೆಯರು ಖಾದ್ಯಗಳಿಗೆ ವ್ಯಸನಿಗಳಾಗಲಿ’ ಎಂದ ಫಾಸ್ಟ್ ಫುಡ್ ಕಂಪೆನಿ ಎಂಡಿ ವಜಾ

ರಷ್ಯಾದಿಂದ ಹೊಸ ಕ್ಷಿಪಣಿ ಪರೀಕ್ಷೆ; ಶತ್ರು ರಾಷ್ಟ್ರಗಳು ಬೆದರಿಕೆಯೊಡ್ಡುವ ಮುನ್ನ ಎರಡು ಬಾರಿ ಯೋಚಿಸಿ ಎಂದ ಪುಟಿನ್

Published On - 8:41 am, Thu, 21 April 22

ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ