AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿ: ಜೆಡಿಎಸ್ ಮುಖಂಡ ಮತ್ತು ಪೊಲೀಸ್ ಕಮಿಷನರ್ ನಡುವೆ ವಾಗ್ವಾದ, ನಾಸೀರ್ ಹುಸೇನ್ ವಿರುದ್ಧ ದೂರು ದಾಖಲು

ಜೆಡಿಎಸ್ ಮುಖಂಡ ಮತ್ತು ಪೊಲೀಸ್ ಕಮಿಷನರ್ ನಡುವೆ ವಾಗ್ವಾದ ನಡೆದಿರುವ ಘಟನೆ ಕಲಬುರಗಿ ನಗರದ ಮುಸ್ಲಿಂ ಚೌಕ್‌ನಲ್ಲಿ ನಿನ್ನೆ (ಏ.6) ರಾತ್ರಿ ನಡೆದಿದೆ.

ಕಲಬುರಗಿ: ಜೆಡಿಎಸ್ ಮುಖಂಡ ಮತ್ತು ಪೊಲೀಸ್ ಕಮಿಷನರ್ ನಡುವೆ ವಾಗ್ವಾದ, ನಾಸೀರ್ ಹುಸೇನ್ ವಿರುದ್ಧ ದೂರು ದಾಖಲು
ಜೆಡಿಎಸ್​ ಮುಖಂಡ ನಾಸಿರ್​ ಹುಸೇನ್​, ಪೊಲೀಸ್​ ಕಮಿಷನರ್​ ಆರ್.ಚೇತನ್​​ ನಡುವೆ ವಾಗ್ವಾದ್​​
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on:Apr 07, 2023 | 2:09 PM

Share

ಕಲಬುರಗಿ: ಜೆಡಿಎಸ್ ಮುಖಂಡ (JDS Leader) ಮತ್ತು ಪೊಲೀಸ್ ಕಮಿಷನರ್ (Police Commissioner) ನಡುವೆ ವಾಗ್ವಾದ ನಡೆದಿರುವ ಘಟನೆ ಕಲಬುರಗಿ (Kalaburgi) ನಗರದ ಮುಸ್ಲಿಂ ಚೌಕ್‌ನಲ್ಲಿ ನಿನ್ನೆ (ಏ.6) ರಾತ್ರಿ ನಡೆದಿದೆ. ವ್ಯಾಪಾರಸ್ಥರು (Businessman) ರಸ್ತೆ ಮೇಲೆ ಆಹಾರ ಸಾಮಾಗ್ರಿ ಮಾರಾಟ ಮಾಡುತ್ತಿದ್ದರು. ಈ ವೇಳೆ ನೈಟ್ ರೌಂಡ್‌‌ಗೆ ತೆರಳಿದ್ದ ಕಮಿಷನರ್ ಆರ್.ಚೇತನ್ ಅವರು ಇದನ್ನು ಕಂಡು ವ್ಯಾಪಾರದಿಂದ ಫುಲ್ ಟ್ರಾಫಿಕ್​ಜಾಮ್ ಆಗುತ್ತಿದೆ, ತಕ್ಷಣ ವ್ಯಾಪಾರಸ್ಥರನ್ನು ತೆರವುಗೊಳಿಸುವಂತೆ ಸಿಬ್ಬಂದಿಗೆ ಸೂಚಿಸಿದ್ದಾರೆ. ಈ ವೇಳೆ ಸ್ಥಳಕ್ಕೆ ಬಂದ ಜೆಡಿಎಸ್​ ಮುಖಂಡ ನಾಸೀರ್ ಹುಸೇನ್ ಉಸ್ತಾದ್, ರಂಜಾನ್ ವೇಳೆ ಮಳಿಗೆ ಹಾಕುವುದು ಮೊದಲಿನಿಂದಲೂ ರೂಢಿಯಲ್ಲಿದೆ ಎಂದಿದ್ದಾರೆ.

ಇದಕ್ಕೆ ಕಮಿಷನರ್ ಆರ್.ಚೇತನ್ ನೀವು 50 ಬಾರಿ ಮಳಿಗೆ ಹಾಕಿರಬಹುದು, 51ನೇ ಬಾರಿ ಅವಕಾಶವಿಲ್ಲ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ. ಈ ವೇಳೆ ಕಮಿಷನರ್ ಮಾತಿಗೆ ಕೆರಳಿದ ವ್ಯಾಪಾರಸ್ಥರು ಪ್ರತಿಭಟನೆ ನಡೆಸಿದ್ದಾರೆ. ಈ ಸಂಬಂಧ ಪ್ರತಿಭಟನೆ ನಡೆಸಿದ ನಾಸೀರ್ ಹುಸೇನ್ ಉಸ್ತಾದ್ ಸೇರಿದಂತೆ ಹಲವರ ವಿರುದ್ಧ ಕಲಬುರಗಿ ನಗರದ ರೋಜಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಇದನ್ನೂ ಓದಿ: ಆರೋಪಿ ಪುನೀತ್ ಕೆರೆಹಳ್ಳಿ ತಂಡವನ್ನು ರಾಜಸ್ಥಾನದಿಂದ ರಾಮನಗರಕ್ಕೆ ಕರೆತರಲು ಪೊಲೀಸ್ ಸಿದ್ಧತೆ

ಬಿಜೆಪಿ, ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಕಲ್ಲು ತೂರಾಟ, 15 ಕಾರುಗಳು ಜಖಂ

ಯಾದಗಿರಿ: ಜಿಲ್ಲೆಯ ಹುಣಸಗಿ ತಾಲೂಕಿನ ಕೊಡೆಕಲ್ ಗ್ರಾಮದಲ್ಲಿ ಬಿಜೆಪಿ (BJP) ಹಾಗೂ ಕಾಂಗ್ರೆಸ್ (Congress) ಕಾರ್ಯಕರ್ತರ ಮದ್ಯೆ ನಿನ್ನ (ಏ.6)  ಸಂಘರ್ಷ ನಡೆದಿದ್ದು, ಎರಡೂ ಕಡೆಯ ಕಾರ್ಯಕರ್ತರು ಕಲ್ಲು ತೂರಾಟ (Stone Pelting) ನಡೆಸಿದ್ದರು. ಕಲ್ಲು ತೂರಾಟದಲ್ಲಿ ಕಾಂಗ್ರೆಸ್ ಮುಖಂಡರ 15 ಕಾರುಗಳು ಜಖಂಗೊಂಡಿದ್ದವು. ಕಾರುಗಳ ಗಾಜು ಪುಡಿ ಪುಡಿಯಾಗಿದ್ದವು. ಕಲ್ಲು ತೂರಾಟದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿಯ ನಾಲ್ಕೈದು ಜನ ಕಾರ್ಯಕರ್ತರೂ ಗಾಯಗೊಂಡಿದ್ದರು. ಗಾಯಾಳುಗಳನ್ನ ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿತ್ತು. ಸ್ಥಳಕ್ಕೆ ಯಾದಗಿರಿ ಎಸ್​​ಪಿ ಡಾ. ಸಿ.ಬಿ. ವೇದಾಮೂರ್ತಿ ಭೇಟಿ ನೀಡಿದ್ದಾರೆ. ಸದ್ಯ ಪರಿಸ್ಥಿತಿಯನ್ನು ಹತೋಟಿಗೆ ತರಲಾಗಿದೆ ಎಂದು ಪೊಲೀಸರು ತಿಳಿಸಿದ್ದರು.

2 ದಿನ ನಿಷೇಧಾಜ್ಞೆ ಜಾರಿ

ಈ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಮುಂಜಾಗ್ರತಾ ಕ್ರಮವಾಗಿ ಸುರಪುರ ವಿಧಾನಸಭಾ ಕ್ಷೇತ್ರದಾದ್ಯಂತ 2 ದಿನ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಸುರಪುರ ಕ್ಷೇತ್ರದಲ್ಲಿ ಇಂದಿನಿಂದ ನಾಳೆ(ಏಪ್ರಿಲ್ 08) ರಾತ್ರಿ 8 ಗಂಟೆವರೆಗೂ ನಿಷೇಧಾಜ್ಞೆ ಜಾರಿ ಮಾಡಿ ಯಾದಗಿರಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಕಲಬುರಗಿ ಈಶಾನ್ಯ ವಲಯ ವಿಭಾಗೀಯ ಐಜಿಪಿ ಅನುಪಮ ಅಗರ್ವಾಲ್ ನಿನ್ನೆ ರಾತ್ರಿಯಿಂದಲೂ ಕೊಡೆಕಲ್​ನಲ್ಲೇ ಮೊಕ್ಕಾಂ ಹೂಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:07 pm, Fri, 7 April 23

Follow Us
Vivek Biradar
Vivek Biradar

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.

ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್