AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿ ಸೆಂಟ್ರಲ್ ಜೈಲಿನಲ್ಲಿ ಮತ್ತೆ ಅಕ್ರಮ; ಗಾಂಜಾಗಾಗಿ ಜೈಲು ಸಿಬ್ಬಂದಿ ಹಾಗೂ ವಿಚಾರಣಾಧೀನ ಖೈದಿ ಮಧ್ಯೆ ಗಲಾಟೆ

ಅಪರಿಚಿತ ವ್ಯಕ್ತಿಗಳು ಕಲಬುರಗಿ ಸೆಂಟ್ರಲ್ ಜೈಲಿನ ಒಳಗೆ ಎರಡು ಗಾಂಜಾ ಪ್ಯಾಕೆಟ್​ಗಳನ್ನು ಎಸೆದಿದ್ದರು. ಜೈಲೊಳಗೆ ಬಿದ್ದ ಗಾಂಜಾ ವಶಪಡಿಸಿಕೊಳ್ಳುವಾಗ ವಿಚಾರಣಾಧೀನ ಖೈದಿ ಶಾಹೀದ್ ಖುರೇಷಿ ಜೈಲು ಸಿಬ್ಬಂದಿಯ ಜೊತೆ ಗಲಾಟೆ ಮಾಡಿದ್ದಾನೆ. ಗಾಂಜಾ ನನಗೆ ಬೇಕು ಕೊಡಿ ಎಂದು ಜಗಳವಾಡಿದ್ದಾನೆ.

ಕಲಬುರಗಿ ಸೆಂಟ್ರಲ್ ಜೈಲಿನಲ್ಲಿ ಮತ್ತೆ ಅಕ್ರಮ; ಗಾಂಜಾಗಾಗಿ ಜೈಲು ಸಿಬ್ಬಂದಿ ಹಾಗೂ ವಿಚಾರಣಾಧೀನ ಖೈದಿ ಮಧ್ಯೆ ಗಲಾಟೆ
ಸಾಂದರ್ಭಿಕ ಚಿತ್ರ
ದತ್ತಾತ್ರೇಯ ಪಾಟೀಲ, ಕಲಬುರಗಿ
| Edited By: |

Updated on: Jan 16, 2024 | 10:22 AM

Share

ಕಲಬುರಗಿ, ಜ.16: ಅಪರಾಧಿಗಳನ್ನು ತಿದ್ದಿ ಜೀವನ ಸುಧಾರಣೆ ಪಾಠ ಮಾಡಬೇಕಿದ್ದ ಜೈಲುಗಳು ಐಶಾರಾಮಿ ಹೋಟೆಲ್​ಗಳಂತೆ ಸರ್ವಿಸ್ ನೀಡುತ್ತಿವೆ. ಹಣವೊಂದಿದ್ದರೆ ಸಾಕು ಎಂತಹ ದೊಡ್ಡ ಅಪರಾಧಿಯಾದರೂ ಅವರಿಗೆ ಸೆಂಟ್ರಲ್ ಜೈಲುಗಳಲ್ಲಿ ಉತ್ತಮ ಸರ್ವಿಸ್ ಸಿಗುತ್ತೆ. ಈ ಅಕ್ರಮದ ಬಗ್ಗೆ ಈಗಾಗಲೇ ಟಿವಿ9 ಎಳೆ ಎಳೆಯಾಗಿ ವರದಿ ಮಾಡಿದೆ. ಆದರೂ ಈ ಜೈಲಿನಲ್ಲಿ ಇನ್ನೂ ಈ ಅಕ್ರಮಕ್ಕೆ ಕಡಿವಾಣ ಹಾಕಲಾಗಿಲ್ಲ. ಕಲಬುರಗಿ ಸೆಂಟ್ರಲ್ ಜೈಲಿನಲ್ಲಿ(Kalaburagi Central Jail) ಮತ್ತೆ ಗಾಂಜಾ (Ganja) ಪತ್ತೆಯಾಗಿದೆ. ಗಾಂಜಾಗಾಗಿ ಜೈಲು ಸಿಬ್ಬಂದಿ ಹಾಗೂ ವಿಚಾರಣಾಧೀನ ಖೈದಿ ಮಧ್ಯೆ ಗಲಾಟೆ ನಡೆದಿದೆ.

ಅಪರಿಚಿತ ವ್ಯಕ್ತಿಗಳು ಕಲಬುರಗಿ ಸೆಂಟ್ರಲ್ ಜೈಲಿನ ಒಳಗೆ ಎರಡು ಗಾಂಜಾ ಪ್ಯಾಕೆಟ್​ಗಳನ್ನು ಎಸೆದಿದ್ದರು. ಜೈಲೊಳಗೆ ಬಿದ್ದ ಗಾಂಜಾ ವಶಪಡಿಸಿಕೊಳ್ಳುವಾಗ ವಿಚಾರಣಾಧೀನ ಖೈದಿ ಶಾಹೀದ್ ಖುರೇಷಿ ಜೈಲು ಸಿಬ್ಬಂದಿಯ ಜೊತೆ ಗಲಾಟೆ ಮಾಡಿದ್ದಾನೆ. ಗಾಂಜಾ ನನಗೆ ಬೇಕು ಕೊಡಿ ಎಂದು ಜಗಳವಾಡಿದ್ದಾನೆ. ಇನ್ನು ಪ್ಯಾಕೆಟ್ ತೆಗೆದು ನೋಡಿದಾಗ ಅದರಲ್ಲಿ 150 ಗ್ರಾಂ ಗಾಂಜಾ ಹಾಗೂ ಎರಡು ಮೊಬೈಲ್ ಪತ್ತೆಯಾಗಿದೆ. ಘಟನೆ ಸಂಬಂಧ ಫರತಹಬಾದ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.

ಇದನ್ನೂ ಓದಿ: TV9 Big Impact | ಟಿವಿ9 ರಹಸ್ಯ ಕಾರ್ಯಾಚರಣೆ ವರದಿ ಫಲಶ್ರುತಿ: ಬೆಂಗಳೂರು-ಬೆಳಗಾವಿ ಸೇರಿದಂತೆ ಜೈಲು ಅಕ್ರಮದಲ್ಲಿದ್ದ 6 ಅಧಿಕಾರಿಗಳು ಸಸ್ಪೆಂಡ್​!

ಬಿಗಿ ಭದ್ರತೆಯಿದ್ದರೂ ಜೈಲೊಳಗೆ ಗಾಂಜಾ ಬಂದಿದ್ದು ಹೇಗೆ?

ಜೈಲುಗಳಲ್ಲಿ ಅಕ್ರಮ ಹಿನ್ನೆಲೆ ಬಿಗಿ ಭದ್ರತೆಯನ್ನು ಕೈಗೊಳ್ಳಲಾಗಿದೆ. ಆದರೆ ಭದ್ರತೆ ಇದ್ದರೂ ಜೈಲಿನೊಳಗೆ ಗಾಂಜಾ ಪತ್ತೆಯಾಗಿದೆ. ಅಪರಿಚಿತ ವ್ಯಕ್ತಿಗಳು ಜೈಲಿನೊಳಗೆ ಗಾಂಜಾ ಎಸೆದು ಹೋಗಿದ್ದಾರೆ ಎಂದು ಜೈಲು ಅಧಿಕಾರಿಗಳು ಕಥೆ ಕಟ್ಟಿದ್ದಾರೆ. ಹಾಗಾದ್ರೆ ಜೈಲು ಭದ್ರತೆಗಿದ್ದ ಕೆಎಸ್ಐಎಸ್​ಎಫ್ ಅಧಿಕಾರಿಗಳು ಏನು ಮಾಡ್ತಿದ್ದರು? ಓರ್ವ ಇನ್ಸ್ಪೆಕ್ಟರ್ ನೇತೃತ್ವದಲ್ಲಿ ಇರುವ ಭದ್ರತಾ ಪಡೆ, ಜೈಲು ಸುತ್ತ ಕಣ್ಗಾವಲಿರೋ ಪಡೆ ಏನು ಕೆಲಸ ಮಾಡುತ್ತಿದೆ? ಎಂಬ ಪ್ರಶ್ನೆ ಎದ್ದಿದೆ.

ಕಳೆದ ತಿಂಗಳು ಕಲಬುರಗಿ ಸೆಂಟ್ರಲ್ ಜೈಲಿನ ರಾಜಾತೀಥ್ಯದ ಬಗ್ಗೆ ಟಿವಿ9 ವಿಸ್ತೃತ ವರದಿ ಮಾಡಿತ್ತು. ಈ ವೇಳೆ ಕೆಎಸ್​ಐಎಸ್​ಎಫ್ ಇನ್ಸ್ಪೆಕ್ಟರ್ ವಿರುದ್ದ ಅಲ್ಲಿನ ಸಿಬ್ಬಂದಿ ದೂರಿದ್ದರು. ಅವರೇ ಲಂಚ ತೆಗೆದುಕೊಂದು ನಿಷೇಧಿತ ವಸ್ತು ಸರಬರಾಜು ಮಾಡ್ತಾರೆ ಅಂತ ಸಿಬ್ಬಂದಿ ಪತ್ರ ಬರೆದಿದ್ದರು. ಈ ವಿಚಾರವನ್ನು ಟಿವಿ9 ಕನ್ನಡ ಸಾಕ್ಷಿ ಸಮೇತ ವರದಿ ಮಾಡಿತ್ತು. ಆದರೂ ತನಿಖೆ ಮಾಡ್ತಿದ್ದೀವಿ ಅಂತ ಇಲಾಖೆ ಜಾರಿಕೊಂಡಿತ್ತು. ಇದೀಗ ಗಾಂಜಾಗಾಗಿ ಗಲಾಟೆಯಂತ ಗಂಭೀರ ಪ್ರಕರಣ ನಡೆದರೂ ಇಲಾಖೆ ಕಣ್ಮುಚ್ಚಿ ಕುಳಿತಿದೆ. ದೂರು ಪಡೆದು ಸುಮ್ಮನಾಗಿದೆ. ಯಾರನ್ನು ರಕ್ಷಿಸಲು ಈ ನಿರ್ಲಕ್ಷ್ಯ? ಭದ್ರತಾ ಲೋಪದಂತಹ ಗಂಭೀರ ಪ್ರಕರಣ ನಡೆದರೂ ಯಾಕೆ ಕ್ರಮ ಕೈಗೊಳ್ಳುತ್ತಿಲ್ಲ ಎಂಬ ಪ್ರಶ್ನೆ ಎದ್ದಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ