ಕಲಬುರಗಿಯಲ್ಲಿ ಒಂದೇ ಸಮುದಾಯದ ಎರಡು ಕುಟುಂಬಗಳ ನಡುವೆ ಕಲ್ಲು ತೂರಾಟ

ಮೊಹರಂ ಹಬ್ಬದಂದು ಎರಡು ಕುಟುಂಬಗಳ ನಡುವೆ ಗಲಾಟೆ ನಡೆದಿರುವ ಘಟನೆ ಜಿಲ್ಲೆಯ ಚಿತ್ತಾಪುರ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ.

ಕಲಬುರಗಿಯಲ್ಲಿ ಒಂದೇ ಸಮುದಾಯದ ಎರಡು ಕುಟುಂಬಗಳ ನಡುವೆ ಕಲ್ಲು ತೂರಾಟ
ಎರಡು ಕುಟುಂಬಗಳ ನಡುವೆ ಕಲ್ಲು ತೂರಾಟ
Edited By:

Updated on: Jul 30, 2023 | 8:34 AM

ಕಲಬುರಗಿ: ಭಾವೈಕ್ಯತೆಯ ಮೊಹರಂ (Muharram) ಹಬ್ಬವನ್ನು ನಿನ್ನೆ (ಜು.29) ನಾಡಿನಾದ್ಯಂತ ಅದ್ಧೂರಿಯಾಗಿ ಆಚರಿಸಲಾಯಿತು. ಹಿಂದೂ-ಮುಸ್ಲಿಂ (Hindu-Muslim) ಬಾಂಧವರು ಒಟ್ಟಾಗಿ ವಿಜೃಂಭಣೆಯಿಂದ ಆಚರಿಸಿದರು. ಈ ಹಬ್ಬದ ದಿನದಂದೇ ಜಿಲ್ಲೆಯ ಚಿತ್ತಾಪುರ (Chittapur) ತಾಲೂಕಿನ ಇಂಗಳಗಿ ಗ್ರಾಮದಲ್ಲಿ ಎರಡು ಕುಟುಂಬಗಳ (Families) ನಡುವೆ ಗಲಾಟೆ ನಡೆದಿದೆ. ಒಂದೇ ಸಮುದಾಯದ ಹೊನಗುಂಟಾ, ಗೋಟಾಳ್ ಕುಟುಂಬಗಳ ನಡುವೆ ಕಲ್ಲು ತೂರಾಟವಾಗಿ ಎಂಟು ಜನರಿಗೆ ಗಾಯಗಳಾಗಿವೆ. ಪ್ರೇಮ ವಿವಾಹಕ್ಕೆ ಸಂಬಂಧಿಸಿದಂತೆ ಎರಡು ಕುಟುಂಬದ ನಡುವೆ ಕಳೆದ ಕೆಲ ವರ್ಷಗಳಿಂದ ದ್ವೇಷವಿದ್ದ ಹಿನ್ನೆಲೆ ಗಲಾಟೆ ನಡೆದಿದೆ ಎನ್ನಲಾಗುತ್ತಿದೆ. ವಾಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಇದನ್ನೂ ಓದಿ: ನಾಲೆಗೆ ಪಲ್ಟಿಯಾದ ಕಾರು: ನಾಲ್ವರು ಮಹಿಳೆಯರು ದುರ್ಮರಣ

8 ಮೂಟೆಯಷ್ಟು ಶುಂಠಿ ಕಟಾವು ಮಾಡಿ ಕಳ್ಳತನ

ಮೈಸೂರು: ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಟಿಬೇಟಿಯನ್ ಕಾಲೋನಿಯ ಜಮೀನಿನಲ್ಲಿ ಬೆಳೆದ ಎಂಟು ಮೂಟೆಯಷ್ಟು ಶುಂಠಿಯನ್ನು ಅಪರಿಚಿತರು ಕಟಾವು ಮಾಡಿ ತೆಗೆದುಕೊಂಡು ಹೋಗಿದ್ದಾರೆ. ಇದರಿಂದ  ರೈತ ಲಾಖಪಾ ಸೇರಿಂಗ್ ಅಪಾರ ನಷ್ಟವಾಗಿದೆ. ಪಿರಿಯಾಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:19 am, Sun, 30 July 23