AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವದುರ್ಗ ಆಡಿಯೋ ಪ್ರಕರಣ: ಇಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಸಿಎಂ ಯಡಿಯೂರಪ್ಪ ವಿರುದ್ಧ ಪ್ರಕರಣದ ವಿಚಾರಣೆ

Operation kamala: ಸಿಎಂ ಯಡಿಯೂರಪ್ಪ ವಿರುದ್ಧದ ದೇವದುರ್ಗ ಆಡಿಯೋ ಬಾಂಬ್ ಕೇಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾ.ಜಾನ್ ಮೈಕೆಲ್ ಕುನ್ಹಾ ಪೀಠದಲ್ಲಿ ಇಂದು ವಿಚಾರಣೆ ನಡೆಯಲಿದೆ.

ದೇವದುರ್ಗ ಆಡಿಯೋ ಪ್ರಕರಣ: ಇಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಸಿಎಂ ಯಡಿಯೂರಪ್ಪ ವಿರುದ್ಧ ಪ್ರಕರಣದ ವಿಚಾರಣೆ
ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ
ಪೃಥ್ವಿಶಂಕರ
|

Updated on:Feb 20, 2021 | 8:50 AM

Share

ಕಲಬುರಗಿ: ಸಿಎಂ ಯಡಿಯೂರಪ್ಪ ವಿರುದ್ಧದ ದೇವದುರ್ಗ ಆಡಿಯೋ ಬಾಂಬ್ ಕೇಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾ.ಜಾನ್ ಮೈಕೆಲ್ ಕುನ್ಹಾ ಪೀಠದಲ್ಲಿ ಇಂದು ವಿಚಾರಣೆ ನಡೆಯಲಿದೆ. ನ್ಯಾ.ಜಾನ್ ಮೈಕೆಲ್ ಕುನ್ಹಾ ಕಲಬುರಗಿಯಲ್ಲಿರುವ ಹಿನ್ನೆಲೆಯಿಂದಾಗಿ ವಿಡಿಯೋ ಕಾನ್ಪರೆನ್ಸ್ ಮೂಲಕ ಕಲಬುರಗಿ ಹೈಕೋರ್ಟ್​ನಲ್ಲಿ ನ್ಯಾಯಮೂರ್ತಿ ಕುನ್ಹಾ ವಿಚಾರಣೆ ನಡೆಸಲಿದ್ದಾರೆ. ಮಧ್ಯಾಹ್ನ 2.30 ಕ್ಕೆ ವಿಚಾರಣೆ ನಡೆಯಲಿದೆ.

ಯಾದಗಿರಿ ಜಿಲ್ಲೆಯ ಗುರುಮಠಕಲ್ ಶಾಸಕ ನಾಗನಗೌಡ ಕಂದಕೂರ ಪುತ್ರ ಶರಣಗೌಡ ದೂರು ನೀಡಿದ್ದರು. ರಾಯಚೂರು ಜಿಲ್ಲೆಯ ದೇವದುರ್ಗ ಠಾಣೆಯಲ್ಲಿ ಬಿಎಸವೈ ಸೇರಿ ನಾಲ್ವರ ವಿರುದ್ಧ ದೂರು ದಾಖಲಾಗಿತ್ತು. ಈ ಬಗ್ಗೆ ಕಲಬುರಗಿ ಹೈಕೋರ್ಟ್​ನಿಂದ ಬಿಎಸ್​ವೈ ವಿಚಾರಣೆಗೆ ತಡೆ ಪಡೆದಿದ್ದರು. ಕಳೆದ ತಿಂಗಳು ಕಲಬುರಗಿ ಹೈಕೋರ್ಟ್ ಪೀಠ ಪ್ರಕರಣವನ್ನು ಜನಪ್ರತಿನಿಧಿಗಳ ಕೋರ್ಟ್​ಗೆ ವರ್ಗಾಯಿಸಿತ್ತು.

ಆಪರೇಷನ್​ ಕಮಲದಡಿಯಲ್ಲಿ ಬಿಎಸವೈ ಸೇರಿ ಇನ್ನೂ ನಾಲ್ವರು ನನ್ನನ್ನು ಬಿಜೆಪಿಗೆ ಸೇರುವಂತೆ ಆಮಿಷವೊಡಿದ್ದರು ಎಂದು ಗುರುಮಠಕಲ್ ಶಾಸಕ ನಾಗನಗೌಡ ಕಂದಕೂರ ಪುತ್ರ ಶರಣಗೌಡ ದೂರು ನೀಡಿದ್ದರು. ಅದಕ್ಕೆ ಸಂಬಂಧಿಸಿದಂತೆ ಸುದ್ದಿಗೋಷ್ಠಿ ನಡೆಸಿ ಆಡಿಯೋ ಬಾಂಬ್ ಸಹ ಸಿಡಿಸಿದ್ದರು. 2018 ರ ಪೆಬ್ರವರಿಯಲ್ಲಿ ಈ ಘಟನೆ ನಡೆದಿತ್ತು.

Published On - 8:47 am, Sat, 20 February 21

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More