AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವದುರ್ಗ ಆಡಿಯೋ ಪ್ರಕರಣ: ಇಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಸಿಎಂ ಯಡಿಯೂರಪ್ಪ ವಿರುದ್ಧ ಪ್ರಕರಣದ ವಿಚಾರಣೆ

Operation kamala: ಸಿಎಂ ಯಡಿಯೂರಪ್ಪ ವಿರುದ್ಧದ ದೇವದುರ್ಗ ಆಡಿಯೋ ಬಾಂಬ್ ಕೇಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾ.ಜಾನ್ ಮೈಕೆಲ್ ಕುನ್ಹಾ ಪೀಠದಲ್ಲಿ ಇಂದು ವಿಚಾರಣೆ ನಡೆಯಲಿದೆ.

ದೇವದುರ್ಗ ಆಡಿಯೋ ಪ್ರಕರಣ: ಇಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಸಿಎಂ ಯಡಿಯೂರಪ್ಪ ವಿರುದ್ಧ ಪ್ರಕರಣದ ವಿಚಾರಣೆ
ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ
ಪೃಥ್ವಿಶಂಕರ
|

Updated on:Feb 20, 2021 | 8:50 AM

Share

ಕಲಬುರಗಿ: ಸಿಎಂ ಯಡಿಯೂರಪ್ಪ ವಿರುದ್ಧದ ದೇವದುರ್ಗ ಆಡಿಯೋ ಬಾಂಬ್ ಕೇಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾ.ಜಾನ್ ಮೈಕೆಲ್ ಕುನ್ಹಾ ಪೀಠದಲ್ಲಿ ಇಂದು ವಿಚಾರಣೆ ನಡೆಯಲಿದೆ. ನ್ಯಾ.ಜಾನ್ ಮೈಕೆಲ್ ಕುನ್ಹಾ ಕಲಬುರಗಿಯಲ್ಲಿರುವ ಹಿನ್ನೆಲೆಯಿಂದಾಗಿ ವಿಡಿಯೋ ಕಾನ್ಪರೆನ್ಸ್ ಮೂಲಕ ಕಲಬುರಗಿ ಹೈಕೋರ್ಟ್​ನಲ್ಲಿ ನ್ಯಾಯಮೂರ್ತಿ ಕುನ್ಹಾ ವಿಚಾರಣೆ ನಡೆಸಲಿದ್ದಾರೆ. ಮಧ್ಯಾಹ್ನ 2.30 ಕ್ಕೆ ವಿಚಾರಣೆ ನಡೆಯಲಿದೆ.

ಯಾದಗಿರಿ ಜಿಲ್ಲೆಯ ಗುರುಮಠಕಲ್ ಶಾಸಕ ನಾಗನಗೌಡ ಕಂದಕೂರ ಪುತ್ರ ಶರಣಗೌಡ ದೂರು ನೀಡಿದ್ದರು. ರಾಯಚೂರು ಜಿಲ್ಲೆಯ ದೇವದುರ್ಗ ಠಾಣೆಯಲ್ಲಿ ಬಿಎಸವೈ ಸೇರಿ ನಾಲ್ವರ ವಿರುದ್ಧ ದೂರು ದಾಖಲಾಗಿತ್ತು. ಈ ಬಗ್ಗೆ ಕಲಬುರಗಿ ಹೈಕೋರ್ಟ್​ನಿಂದ ಬಿಎಸ್​ವೈ ವಿಚಾರಣೆಗೆ ತಡೆ ಪಡೆದಿದ್ದರು. ಕಳೆದ ತಿಂಗಳು ಕಲಬುರಗಿ ಹೈಕೋರ್ಟ್ ಪೀಠ ಪ್ರಕರಣವನ್ನು ಜನಪ್ರತಿನಿಧಿಗಳ ಕೋರ್ಟ್​ಗೆ ವರ್ಗಾಯಿಸಿತ್ತು.

ಆಪರೇಷನ್​ ಕಮಲದಡಿಯಲ್ಲಿ ಬಿಎಸವೈ ಸೇರಿ ಇನ್ನೂ ನಾಲ್ವರು ನನ್ನನ್ನು ಬಿಜೆಪಿಗೆ ಸೇರುವಂತೆ ಆಮಿಷವೊಡಿದ್ದರು ಎಂದು ಗುರುಮಠಕಲ್ ಶಾಸಕ ನಾಗನಗೌಡ ಕಂದಕೂರ ಪುತ್ರ ಶರಣಗೌಡ ದೂರು ನೀಡಿದ್ದರು. ಅದಕ್ಕೆ ಸಂಬಂಧಿಸಿದಂತೆ ಸುದ್ದಿಗೋಷ್ಠಿ ನಡೆಸಿ ಆಡಿಯೋ ಬಾಂಬ್ ಸಹ ಸಿಡಿಸಿದ್ದರು. 2018 ರ ಪೆಬ್ರವರಿಯಲ್ಲಿ ಈ ಘಟನೆ ನಡೆದಿತ್ತು.

Published On - 8:47 am, Sat, 20 February 21

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ