AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ನೇಹಿತರ ಜೊತೆ ತೆರಳಿದ್ದ ಕಾಲೇಜು ವಿದ್ಯಾರ್ಥಿ ಶವವಾಗಿ ಪತ್ತೆ; ಸೇತುವೆ ಮೇಲಿಂದ ತಳ್ಳಿ ಕೊಲೆ ಶಂಕೆ

ಭಾನುವಾರ ತನ್ನ ಸ್ನೇಹಿತರ ಜೊತೆ ತೆರಳಿದ್ದ ಪಿಯುಸಿ ವಿದ್ಯಾರ್ಥಿ ಶವವಾಗಿ ಪತ್ತೆಯಾಗಿದ್ದಾನೆ. ಸ್ನೇಹಿತರೇ ಸೇತುವೆ ಮೇಲಿಂದ ತಳ್ಳಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು ಪ್ರಕರಣ ದಾಖಲಾಗಿದೆ.

ಸ್ನೇಹಿತರ ಜೊತೆ ತೆರಳಿದ್ದ ಕಾಲೇಜು ವಿದ್ಯಾರ್ಥಿ ಶವವಾಗಿ ಪತ್ತೆ; ಸೇತುವೆ ಮೇಲಿಂದ ತಳ್ಳಿ ಕೊಲೆ ಶಂಕೆ
ಶಿವಕುಮಾರ್
ಆಯೇಷಾ ಬಾನು
|

Updated on:Jun 21, 2023 | 9:32 AM

Share

ಕಲಬುರಗಿ: ಸ್ನೇಹಿತರ(Friends) ಜೊತೆ ಹೋಗಿದ್ದ ಕಾಲೇಜು ವಿದ್ಯಾರ್ಥಿಯನ್ನು(College Students) ಸೇತುವೆ ಮೇಲಿಂದ ತಳ್ಳಿ ಕೊಲೆ(Murder) ಮಾಡಲಾಗಿರುವ ಭಯಾನಕ ಘಟನೆ ಜಿಲ್ಲೆಯ ಜೇವರ್ಗಿ ತಾಲೂಕಿನ ನಾಗರಾಣಿ ಬಳಿ ನಡೆದಿದೆ. ಕಲಬುರಗಿ ನಗರದ ಕಮಲನಗರ ನಿವಾಸಿ ಶಿವಕುಮಾರ್ (17) ಕೊಲೆಯಾದ ಕಾಲೇಜು ವಿದ್ಯಾರ್ಥಿ. ಈತ ಕೊಲೆಯಾಗುವುದಕ್ಕೂ ಮುನ್ನ ತನ್ನ ಸ್ನೇಹಿತರ ಜೊತೆ ತೆರಳಿದ್ದ ಹೀಗಾಗಿ ಸ್ನೇಹಿತರೇ ಕೊಲೆ ಮಾಡಿದ್ದಾರೆ ಎನ್ನಲಾಗುತ್ತಿದೆ.

ಕಲಬುರಗಿ ನಗರದ ಖಾಸಗಿ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದ ಮೃತ ಶಿವಕುಮಾರ್, ಜೂ.18ರ ಭಾನುವಾರ ಮನೆಯಿಂದ ಸ್ನೇಹಿತರ ಜೊತೆಗೆ ಹೊರಗೆ ಹೋಗಿದ್ದ. ಆದರೆ ಸ್ನೇಹಿತರು ತಮ್ಮ ತಮ್ಮ ಮನೆಗೆ ವಾಪಾಸ್ ಆದ್ರೂ ಶಿವಕುಮಾರ್ ಮಾತ್ರ ತನ್ನ ಮನೆಗೆ ಬಂದಿರಲಿಲ್ಲಾ. ಇದರಿಂದ ಗಾಬರಿಗೊಂಡ ಪೋಷಕರು ಶಿವಕುಮಾರ್​ಗಾಗಿ ಹುಡುಕಾಟ ನಡೆಸಿದ್ದಾರೆ. ನಿನ್ನೆ (ಜೂ.19) ಸಂಜೆ ನಾಗರಾಣಿ ಬಳಿಯಿರೋ ಭೀಮಾ ನದಿಯಲ್ಲಿ ಶಿವಕುಮಾರ್ ಶವ ಪತ್ತೆಯಾಗಿದೆ. ಶಿವಕುಮಾರ್​ನನ್ನು ಕರೆದುಕೊಂಡು ಹೋಗಿದ್ದ ಸ್ನೇಹಿತರೇ ಕೊಲೆ ಮಾಡಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. ನೆಲೋಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತನಿಖೆ ನಂತರವೇ ಸತ್ಯ ಬಯಲಾಗಲಿದೆ.

ಇದನ್ನೂ ಓದಿ: ಭೋವಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಂತರ ರೂ. ಅವ್ಯವಹಾರ: ಸಿಐಡಿಗೆ ಪತ್ರ ಬರೆದ ಮಾಜಿ ಶಾಸಕ

ಕ್ಷುಲ್ಲಕ ಕಾರಣಕ್ಕೆ ಚಾಕಿ ಇರಿತ

ಬೈಕನ್ನು ಸೈಡ್​ಗೆ ತಗೊ ಎಂದಿದಕ್ಕೆ ಚಾಕುವಿಂದ ಹಲ್ಲೆ ನಡೆಸಿರುವ ಘಟನೆ ಇದೇ ತಿಂಗಳ 18ನೇ‌ ತಾರೀಖಿನಂದು ರಾತ್ರಿ ಪದ್ಮನಾಭ ನಗರದ ರಾಘವೇಂದ್ರ ಕಾಲೋನಿಯಲ್ಲಿ ನಡೆದಿದೆ. ಘಟನೆ ಸಂಬಂಧ ಏಳು ಜನರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಪ್ರದೀಪ್ ಎಂಬಾತ ಟಾಟಾ ಏಸ್ ನಲ್ಲಿ ಫ್ಲೆಕ್ಸ್ ತರಲು ಮುಂದಾಗಿದ್ದ ಈ ವೇಳೆ  ವಾಪಸ್ ತೆರಳಲು ಟಾಟಾ ಏಸ್ ನನ್ನು ತೆಗೆಯಲು ಹೋದಾಗ ಬೈಕ್ ಒಂದು ಅಡ್ಡ ನಿಂತಿತ್ತು. ಆಗ ಬೈಕ್ ಸೈಡಿಗೆ ತೆಗೆಯಿರಿ ನಾವು ಹೋಗಬೇಕು ಎಂದಿದ್ದ. ಅಷ್ಟಕ್ಕೆ ಗಲಾಟೆ ಶುರುವಾಗಿದೆ. ಆಗ ಪ್ರತಾಪ್ ಶೆಟ್ಟಿ ಎಂಬಾತ ಹಾಗು ಗ್ಯಾಂಗ್ ಹಲ್ಲೆ ನಡೆಸಿ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾರೆ. ಜೊತೆಗೆ ಬೆದರಿಕೆ ಹಾಕಿದ್ದಾರೆ. ಪ್ರತಾಪ್ ಜೊತೆಗೆ 10 ಕ್ಕು ಹೆಚ್ಚು ಪುಡಿ ರೌಡಿಗಳಿಂದ ಹಲ್ಲೆ ನಡೆದಿದೆ. ಬನಶಂಕರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 8:11 am, Wed, 21 June 23

ಬಿಗ್​​ಬಾಸ್ ವಿನ್ನರ್ ಗಿಲ್ಲಿಗೆ ಸಿಎಂ ಕೇಳಿದ ಪ್ರಶ್ನೆಗಳೇನು: ವಿಡಿಯೋ ನೋಡಿ
ಬಿಗ್​​ಬಾಸ್ ವಿನ್ನರ್ ಗಿಲ್ಲಿಗೆ ಸಿಎಂ ಕೇಳಿದ ಪ್ರಶ್ನೆಗಳೇನು: ವಿಡಿಯೋ ನೋಡಿ
ಪ್ರಿಯಕರನ ಜೊತೆ ಮಗಳು ಓಡಿಹೋಗಿದ್ದಕ್ಕೆ ಕಿರುಕುಳ: ಪತ್ನಿಯಿಂದಲೇ ಪತಿ ಹತ್ಯೆ
ಪ್ರಿಯಕರನ ಜೊತೆ ಮಗಳು ಓಡಿಹೋಗಿದ್ದಕ್ಕೆ ಕಿರುಕುಳ: ಪತ್ನಿಯಿಂದಲೇ ಪತಿ ಹತ್ಯೆ
ಪ್ರಾಮಾಣಿಕತೆಗೆ ಫಲ:ಸರ್ಕಾರಕ್ಕೆ ನಿಧಿ ಕೊಟ್ಟ ರಿತ್ತಿ ಕುಟುಂಬಕ್ಕೆ ಸೈಟ್​!
ಪ್ರಾಮಾಣಿಕತೆಗೆ ಫಲ:ಸರ್ಕಾರಕ್ಕೆ ನಿಧಿ ಕೊಟ್ಟ ರಿತ್ತಿ ಕುಟುಂಬಕ್ಕೆ ಸೈಟ್​!
ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು?
ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು?
ದೋಡಾದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ
ದೋಡಾದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ
ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ
ಭಾಷಣಕ್ಕೆ ಹರಿಪ್ರಸಾದ್​​ ಪಟ್ಟು: ಸದನದಿಂದ ಹೊರಟ ಗವರ್ನರ್​ ತಡೆದು ಹೈಡ್ರಾಮಾ
ಭಾಷಣಕ್ಕೆ ಹರಿಪ್ರಸಾದ್​​ ಪಟ್ಟು: ಸದನದಿಂದ ಹೊರಟ ಗವರ್ನರ್​ ತಡೆದು ಹೈಡ್ರಾಮಾ
ವಾಸ್ತವಕ್ಕೆ ಬರಲು ಒದ್ದಾಡಿದ ಗಿಲ್ಲಿ; ಹೊಸ ವಿಡಿಯೋ ವೈರಲ್
ವಾಸ್ತವಕ್ಕೆ ಬರಲು ಒದ್ದಾಡಿದ ಗಿಲ್ಲಿ; ಹೊಸ ವಿಡಿಯೋ ವೈರಲ್