AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿಯಲ್ಲಿ ಕೋಮು ಸಂಘರ್ಷ: ಗಣೇಶ ಕಟ್ಟೆ ನಿರ್ಮಾಣ ವಿಚಾರವಾಗಿ ಎರಡು ತಂಡಗಳ ನಡುವೆ ಗಲಾಟೆ

ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಅಂಕಲಗಿ ಗ್ರಾಮದಲ್ಲಿ ಪಂಚಾಯತ್​ಗೆ ಸೇರಿದ ಜಾಗದಲ್ಲಿ ಗಣೇಶ ಕಟ್ಟೆ ನಿರ್ಮಾಣ ವಿಚಾರವಾಗಿ ಎರಡು ಕೋಮುಗಳ ನಡುವೆ ಗಲಾಟೆ ನಡೆದಿದೆ. ಎರಡು ತಿಂಗಳ ಹಿಂದೆಯೂ ಇದೇ ರೀತಿ ಗಲಾಟೆ ನಡೆದಿತ್ತು. ಆ ವೇಳೆ, ಸ್ಥಳಕ್ಕೆ ಆಗಮಿಸಿದ್ದ ಜೇವರ್ಗಿ ತಹಶೀಲ್ದಾರ್, ಸರ್ವೆ ಮಾಡಿ ಪಂಚಾಯ್ತಿ ಜಾಗ ಎಂದು ಗುರುತಿಸಿ ಹೋಗಿದ್ದರು.

ಕಲಬುರಗಿಯಲ್ಲಿ ಕೋಮು ಸಂಘರ್ಷ: ಗಣೇಶ ಕಟ್ಟೆ ನಿರ್ಮಾಣ ವಿಚಾರವಾಗಿ ಎರಡು ತಂಡಗಳ ನಡುವೆ ಗಲಾಟೆ
ಅಂಕಲಗಿ ಗ್ರಾಮದಲ್ಲಿ ಪೊಲೀಸ್ ಭದ್ರತೆ
ದತ್ತಾತ್ರೇಯ ಪಾಟೀಲ, ಕಲಬುರಗಿ
| Edited By: |

Updated on: Nov 27, 2023 | 3:42 PM

Share

ಕಲಬುರಗಿ, ನ.27: ಜಿಲ್ಲೆಯ (Kalaburagi) ಜೇವರ್ಗಿ ತಾಲೂಕಿನ ಅಂಕಲಗಿ ಗ್ರಾಮದಲ್ಲಿ ಪಂಚಾಯತ್​ಗೆ ಸೇರಿದ ಜಾಗದಲ್ಲಿ ಗಣೇಶ ಕಟ್ಟೆ ನಿರ್ಮಾಣ ವಿಚಾರವಾಗಿ ಮತ್ತೆ ಎರಡು ಕೋಮುಗಳ ನಡುವೆ ಗಲಾಟೆ ನಡೆದಿದೆ. ತಂಡವೊಂದು ಗಣೇಶ ಕಟ್ಟೆ ನಿರ್ಮಾಣಕ್ಕೆ ಮುಂದಾದಾಗ ಈ ಜಾಗ ಮಸೀದಿಗೆ ಸೇರಿದ್ದು ಎಂದು ಮತ್ತೊಂದು ತಂಡ ಚಕಾರ ಎತ್ತಿದೆ. ಅಲ್ಲದೆ, ಮಸೀದಿ ಜಾಗದಲ್ಲಿ ಗಣೇಶ ಕಟ್ಟೆ ನಿರ್ಮಾಣ ಮಾಡುತ್ತಿದ್ದಾರೆ ಅಂತಾ ಗಲಾಟೆ ನಡೆಸಿದ್ದಾರೆ.

ಎರಡು ತಿಂಗಳ ಹಿಂದೆಯೂ ಇದೇ ವಿಚಾರಕ್ಕೆ ಗಲಾಟೆ ನಡೆದಿತ್ತು. ಆ ವೇಳೆ, ಜೇವರ್ಗಿ ತಹಶೀಲ್ದಾರ್ ಸ್ಥಳಕ್ಕೆ ಆಗಮಿಸಿ ಸರ್ವೆ ಮಾಡಿ ಪಂಚಾಯತ್ ಸ್ಥಳ ಎಂದು ಗುರುತಿಸಿ ಹೋಗಿದ್ದರು. ಎರಡು ಸಮುದಾಯದವರು ಸಮ್ಮತಿ ಸೂಚಿಸಿ ಒಪ್ಪಿಗೆ ಪತ್ರ ಕೂಡ ಬರೆದು ಕೊಟ್ಟಿದ್ದರು. ಇದೀಗ ಪಂಚಾಯತಿ ಜಾಗದಲ್ಲಿ ಕಟ್ಟೆ ನಿರ್ಮಾಣಕ್ಕೆ ಮುಂದಾದ ಹಿನ್ನೆಲೆ ಮತ್ತೆ ಗಲಾಟೆ ನಡೆದಿದೆ.

ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಮಾಹಿತಿ

ಘಟನೆ ಸಂಬಂಧ ಮಾತನಾಡಿದ ಕಲಬುರಗಿ ಎಸ್​ಪಿ ಅಡ್ಡೂರು ಶ್ರೀನಿವಾಸಲು, ಅಂಕಲಗಿ ಗ್ರಾಮದಲ್ಲಿ ನಡೆದ ಘಟನೆ ಬಗ್ಗೆ ಮಾಹಿತಿ ಬಂದ ತಕ್ಷಣ ನಾನು ಇಲ್ಲಿಗೆ ಬಂದಿದ್ದೇನೆ. ಗ್ರಾಮದಲ್ಲಿ ಸದ್ಯ ಎಲ್ಲವು ಹತೋಟಿಯಲ್ಲಿದೆ. ಗ್ರಾಮದಲ್ಲಿ ಒರ್ವ ವ್ಯಕ್ತಿ ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಮಾಹಿತಿ ಹಂಚಿದ್ದ. ಇದರಿಂದಾಗಿ ಬೆಳಿಗ್ಗೆ ಗಲಾಟೆಯಾಗಿತ್ತು ಎಂದರು.

ಇದನ್ನೂ ಓದಿ: ಕಲಬುರಗಿ: 11 ತಿಂಗಳು ಶಾಲೆಗೆ ಗೈರಾಗಿದ್ದರೂ ಶಿಕ್ಷಕನಿಗೆ ವೇತನ ಬಿಡುಗಡೆ: ಮೂವರಿಗೆ ಕಡ್ಡಾಯ ನಿವೃತ್ತಿ

ಸದ್ಯ ಸ್ಥಳದಲ್ಲಿ ಪೊಲೀಸ್ ಸಿಬ್ಬಂದಿಯನ್ನ ನಿಯೋಜನೆ ಮಾಡಿದ್ದೇವೆ. ಮುಂಜಾಗ್ರತಾ ಕ್ರಮವಾಗಿ 144 ಸೆಕ್ಷನ್ ಜಾರಿ ಮಾಡುತ್ತೇವೆ. ಗಣೇಶ ಕಟ್ಟೆ ವಿವಾದ ತಾಲೂಕಾಡಳಿತ ಬಗೆ ಹರಿಸಿದೆ. ಎರಡೂ ಕಡೆಯವರು ಒಪ್ಪಿಗೆ ನೀಡಿದ್ದಾರೆ. ಅದು ಸ್ಥಳೀಯ ಪಂಚಾಯತ್​ಗೆ ಸೇರಿದ ಜಾಗ ಎಂದು ಗುರುತಿಸಲಾಗಿದೆ. ಆದರೆ ಈ ಬಗ್ಗೆ ಪ್ರಚೋದಕಾರಿ ಮಾಹಿತಿ ಹಂಚಿದ್ದರಿಂದ ಗಲಾಟೆಯಾಗಿದೆ ಎಂದರು.

ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Dattatraya Patil
Dattatraya Patil

ಮೂಲತಃ ಕಲಬುರಗಿ ಜಿಲ್ಲೆಯವರಾದ ದತ್ತಾತ್ರೇಯ ಪಾಟೀಲ್ ಸಧ್ಯ ಟಿರ್ವಿ ಕನ್ನಡ ವಾಹಿನಿಯ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಕಳೆದ 9 ವರ್ಷಗಳಿಂದ ಟಿರ್ವಿ ಸಂಸ್ಥೆಯಲ್ಲಿ ಕೆಲಸ‌ ಮಾಡುತ್ತಿದ್ದು ಜ,2015 ರಿಂದ 22 ರವೆಗೆ ಹುಬ್ಬಳ್ಳಿಯ ವರದಿಗಾರಾಗಿ, ಕಳೆದೊಂದು ವರ್ಷ ಕೊಪ್ಪಳ ಸಧ್ಯ ಮೂರು ತಿಂಗಳಿಮದ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದು, ಕೊರೊನಾ ಸಮಯದಲ್ಲಿ ವೈದ್ಯರ ಕಳ್ಳಾಟದ ಮಾಡಿದ ರಹಸ್ಯ ಕಾರ್ಯಚರಣೆ.ಆಪರೇಷನ್ ಕಮಲದ ಕುರಿತು ಸ್ಪೋಟಕ ಬಿಎಸ್ ವೈ ವಿಡಿಯೋ ದ ಎಕ್ಸಕ್ಲೂಸಿವ್ ವರದಿಯ ಜೊತೆಗೆ ರಾಜಕೀಯ ವರದಿಗಾರಿಕೆಯಲ್ಲಿಯೂ ಆಸಕ್ತಿ ಹೊಂದಿದ್ದು, ಬಿಡುವಿನ ಸಮಯದಲ್ಲಿ ಪುಸ್ತಕ ಓದುವುದು,ಪ್ರೇಕ್ಷಣೀಯ ಹಾಗೂ ಐತಿಹಾಸಿಕ ಸ್ಥಳಗಳ ಪ್ರವಾಸ,ಮತ್ತು ಟ್ರೆಕ್ಕಿಂಗ್ ಹವ್ಯಾಸ ರೂಢಿಸಿಕೊಂಡಿದ್ದಾರೆ.

Read More