AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿಯಲ್ಲಿ ನಡೆದ ಎರಡು ಆತ್ಮಹತ್ಯೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕರ ಪಾತ್ರವಿದೆ: ಎನ್ ರವಿಕುಮಾರ್

ಬಿಜೆಪಿ ಕಾರ್ಯಕರ್ತ ಶಿವಕುಮಾರ್ ಆತ್ಮಹತ್ಯೆ ಪ್ರಕರಣ ಸಂಬಂಧ ಶಿವಕುಮಾರ್ ಮನೆಗೆ ಬಿಜೆಪಿ ಎಂಎಲ್​ಸಿ ಎನ್​.ರವಿಕುಮಾರ್ ಭೇಟಿ ನೀಡಿದರು. ಬಳಿಕ ಮಾತನಾಡಿದ ಅವರು, ಕಲಬುರಗಿಯಲ್ಲಿ ಎರಡು ಕಡೆ ಆತ್ಮಹತ್ಯೆ ಆಗಿದ್ದು ಎರಡು ಕಡೆ ಕಾಂಗ್ರೆಸ್ ನಾಯಕರ ಪಾತ್ರವಿದೆ ಎಂದು ಆರೋಪಿಸಿದರು.

ಕಲಬುರಗಿಯಲ್ಲಿ ನಡೆದ ಎರಡು ಆತ್ಮಹತ್ಯೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕರ ಪಾತ್ರವಿದೆ: ಎನ್ ರವಿಕುಮಾರ್
ಎನ್​ ರವಿಕುಮಾರ್
Follow us
TV9 Web
| Updated By: Rakesh Nayak Manchi

Updated on: Oct 22, 2023 | 8:50 PM

ಕಲಬುರಗಿ, ಅ.22: ಬಿಜೆಪಿ ಕಾರ್ಯಕರ್ತ ಶಿವಕುಮಾರ್ ಆತ್ಮಹತ್ಯೆ ಪ್ರಕರಣ ಸಂಬಂಧ ಶಿವಕುಮಾರ್ ಮನೆಗೆ ಬಿಜೆಪಿ ಎಂಎಲ್​ಸಿ ಎನ್​.ರವಿಕುಮಾರ್ (N.Ravikumar) ಭೇಟಿ ನೀಡಿದರು. ಬಳಿಕ ಮಾತನಾಡಿದ ಅವರು, ಕಲಬುರಗಿಯಲ್ಲಿ (Kalaburagi) ಎರಡು ಕಡೆ ಆತ್ಮಹತ್ಯೆ ಆಗಿದ್ದು ಎರಡು ಕಡೆ ಕಾಂಗ್ರೆಸ್ ನಾಯಕರ ಪಾತ್ರವಿದೆ ಎಂದು ಆರೋಪಿಸಿದರು.

ಕಲಗುರ್ತಿಯಲ್ಲಿ ದೇವಾನಂದ ಹಾಗೂ ಶಿರೋಳಿಯಲ್ಲಿ ಶಿವಕುಮಾರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶಿರೋಳಿಯಲ್ಲಿ ಸಾವಿಗೂ ಮುನ್ನ ಶರಣಪ್ರಕಾಶ್ ಪಾಟೀಲ್ ಕಾರಣ ಅಂತಾ ಹೇಳಿದ್ದಾನೆ. ಯಾವ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂಬುದನ್ನು ಶಿವಕುಮಾರ್ ಆತ್ಮಹತ್ಯೆಗೆ ಮುನ್ನ ಹೇಳಿದ್ದಾನೆ ಎಂದರು.

ಇದನ್ನೂ ಓದಿ: ಕಲಬುರಗಿ ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ ಪ್ರಕರಣದ ತನಿಖೆ ಸಿಐಡಿಗೆ, ಮೃತನ ತಾಯಿ ಹೇಳಿದ್ದೇನು?

ಕಾಂಗ್ರೆಸ್​ನ ಒಂದು ದೊಡ್ಡ ಗುಂಪು ಇವರ ಸಾವಿಗೆ ಕಾರಣ. ಸಾವಿನ ಬಳಿಕ ಕಾಂಗ್ರೆಸ್ ಮುಖಂಡ ಜಗದೀಶ್ ಹಾಗೂ ಇತರರು ಶವ ಯಾಕೆ ಇಳಿಸಿದ್ದು? ಶಿವಕುಮಾರ್ ಮೊಬೈಲ್ ಯಾಕೆ ಸಿಗುತ್ತಿಲ್ಲ? ಮೃತ ಸ್ಥಳದಿಂದ ಬೇರೆ ಕಡೆ ಶವವನ್ನು ಯಾಕೆ ಕೈ ಮುಖಂಡರು ಸ್ಥಳಾಂತರ ಮಾಡಿದರು ಎಂದು ಪ್ರಶ್ನಿಸಿದರು.

ಎಲ್ಲಾ ಕೆಲಸ‌ ಮುಗಿದ‌ ಮೇಲೆ ಪೊಲೀಸರಿಗೆ ಬರಲು ಹೇಳಿದ್ದಾರೆ. ಪೊಲೀಸರು ಶವದ ಪಂಚನಾಮೇ ಯಾಕೆ ಮಾಡಿಲ್ಲಾ? ಪೊಲೀಸರು ಕಾಂಗ್ರೆಸ್ ಏಜೆಂಟರಾ? ಕುಟುಂಬಸ್ಥರಿಗೆ ನೀಜ ಹೇಳಬಾರದು ಅಂತಾ ಕುಟುಂಬಸ್ಥರಿಗೆ ಜೀವ ಬೆದರಿಕೆಯಿದೆ ಎಂದು ಆರೋಪಿಸಿದರು.

ಶಿವಕುಮಾರ್ ಬಿಜೆಪಿ ಹಾಗೂ ಹಿಂದು ಕಾರ್ಯಕರ್ತನಾಗಿದ್ದನು. ಚುನಾವಣೆ ಬಳಿಕ ದ್ವೇಷದ ರಾಜಕಾರಣ‌ ಕಾಂಗ್ರೆಸ್ ಮಾಡುತ್ತಿದೆ. ಕೂಡಲೇ ಸಿಬಿಐಗೆ ಪ್ರಕರಣ ನೀಡಬೇಕು. ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ರಾಜೀನಾಮೆ ಕೊಡಬೇಕು ಎಂದು ಒತ್ತಾಯಿಸಿದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕ್ರೀಡಾ ಸ್ಫೂರ್ತಿ ಅಲ್ಲ... ರಿಷಭ್ ಪಂತ್​ ಮಾಡಿದ್ದು ನಾಟಕ: ಇಲ್ಲಿದೆ ವಿಡಿಯೋ
ಕ್ರೀಡಾ ಸ್ಫೂರ್ತಿ ಅಲ್ಲ... ರಿಷಭ್ ಪಂತ್​ ಮಾಡಿದ್ದು ನಾಟಕ: ಇಲ್ಲಿದೆ ವಿಡಿಯೋ
VIDEO: ನಿಜಕ್ಕೂ ಇದು ನೋ ಬಾಲಾ? ಇಲ್ಲಿದೆ ಉತ್ತರ 
VIDEO: ನಿಜಕ್ಕೂ ಇದು ನೋ ಬಾಲಾ? ಇಲ್ಲಿದೆ ಉತ್ತರ 
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್
VIDEO: ಮಂಕಡ್ ರನೌಟ್​ಗೆ ಅಪೀಲ್​ ಮಾಡುತ್ತಿದ್ದಂತೆ, ವಿರಾಟ್ ಕೊಹ್ಲಿ ಆಕ್ರೋಶ
VIDEO: ಮಂಕಡ್ ರನೌಟ್​ಗೆ ಅಪೀಲ್​ ಮಾಡುತ್ತಿದ್ದಂತೆ, ವಿರಾಟ್ ಕೊಹ್ಲಿ ಆಕ್ರೋಶ
ಪರೀಕ್ಷಾರ್ಥ ಹಾರಾಟ ವೇಳೆ ಸಮುದ್ರಕ್ಕೆ ಅಪ್ಪಳಿಸಿದ ಸ್ಪೇಸ್​ಎಕ್ಸ್​ನ ರಾಕೆಟ್
ಪರೀಕ್ಷಾರ್ಥ ಹಾರಾಟ ವೇಳೆ ಸಮುದ್ರಕ್ಕೆ ಅಪ್ಪಳಿಸಿದ ಸ್ಪೇಸ್​ಎಕ್ಸ್​ನ ರಾಕೆಟ್
VIDEO: ದಿಗ್ವೇಶ್ ಮಹಾ ಎಡವಟ್ಟು... ಇದೇ ಕಾರಣಕ್ಕೆ ಅಂಪೈರ್ ಔಟ್ ನೀಡಿಲ್ಲ
VIDEO: ದಿಗ್ವೇಶ್ ಮಹಾ ಎಡವಟ್ಟು... ಇದೇ ಕಾರಣಕ್ಕೆ ಅಂಪೈರ್ ಔಟ್ ನೀಡಿಲ್ಲ
ವಸ್ತ್ರದಾನದ ಮಹತ್ವ ಬಗ್ಗೆ ಖ್ಯಾತ ಜ್ಯೋತಿಷಿ ಬಸವರಾಜ ಗುರೂಜಿ ತಿಳಿಸಿದ್ದಾರೆ
ವಸ್ತ್ರದಾನದ ಮಹತ್ವ ಬಗ್ಗೆ ಖ್ಯಾತ ಜ್ಯೋತಿಷಿ ಬಸವರಾಜ ಗುರೂಜಿ ತಿಳಿಸಿದ್ದಾರೆ
ಮೇಷ ರಾಶಿಯವರಿಗೆ ಆರು ಗ್ರಹಗಳ ಶುಭಫಲವಿದ್ದು, ಆರ್ಥಿಕವಾಗಿ ಪ್ರಗತಿ ಹೊಂದುವರು
ಮೇಷ ರಾಶಿಯವರಿಗೆ ಆರು ಗ್ರಹಗಳ ಶುಭಫಲವಿದ್ದು, ಆರ್ಥಿಕವಾಗಿ ಪ್ರಗತಿ ಹೊಂದುವರು
ಆರ್​ಸಿಬಿ ಗೆಲುವಿನ ಸಂಭ್ರಮಾಚರಣೆ ಹೇಗಿತ್ತು? ವಿಡಿಯೋ ನೋಡಿ
ಆರ್​ಸಿಬಿ ಗೆಲುವಿನ ಸಂಭ್ರಮಾಚರಣೆ ಹೇಗಿತ್ತು? ವಿಡಿಯೋ ನೋಡಿ
ಗಾಜಿಯಾಬಾದ್ ಅಪಾರ್ಟ್​ಮೆಂಟ್​​ ಲಿಫ್ಟ್‌ನಲ್ಲಿ ಸಿಲುಕಿದ ಮಗು
ಗಾಜಿಯಾಬಾದ್ ಅಪಾರ್ಟ್​ಮೆಂಟ್​​ ಲಿಫ್ಟ್‌ನಲ್ಲಿ ಸಿಲುಕಿದ ಮಗು