AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿ ಬಿಜೆಪಿ ಮುಖಂಡ ವಿಡಿಯೋ ರಿಲೀಸ್ ಮಾಡಿದ ಬೆನ್ನಲ್ಲೇ ಪ್ರಿಯಾಂಕ್ ಖರ್ಗೆ ಬೆಂಬಲಿಗ ಅರೆಸ್ಟ್!

ಬಿಜೆಪಿ ಮುಖಂಡ ವಿಡಿಯೋ ಬಿಡುಗಡೆ ಮಾಡಿದ ಬೆನ್ನಲ್ಲೇ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಆಪ್ತ, ಕಲಬುರಗಿ ಮಹಾನಗರ ಪಾಲಿಕೆ ಸದಸ್ಯನನ್ನು ಪೊಲೀಸರು ಬಂಧಿಸಿದ್ದಾರೆ.

ಕಲಬುರಗಿ ಬಿಜೆಪಿ ಮುಖಂಡ ವಿಡಿಯೋ ರಿಲೀಸ್ ಮಾಡಿದ ಬೆನ್ನಲ್ಲೇ ಪ್ರಿಯಾಂಕ್ ಖರ್ಗೆ ಬೆಂಬಲಿಗ ಅರೆಸ್ಟ್!
ರಾಜು ಕಪನೂರ್
TV9 Web
| Edited By: |

Updated on:Dec 03, 2022 | 10:02 PM

Share

ಕಲಬುರಗಿ: ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ (Priyank Kharge) ಹಾಗೂ ಬಿಜೆಪಿ  ಮುಖಂಡ ಮಣಿಕಂಠ ರಾಠೋಡ್ ನಡುವಿನ ಆರೋಪ-ಪ್ರತ್ಯಾರೋಪಗಳು ಜೋರಾಗಿವೆ. ಇದರ ಮಧ್ಯೆ ಮಣಿಕಂಠ ರಾಠೋಡ್ ವಿಡಿಯೋ ರಿಲೀಸ್ ಮಾಡಿದ ಬೆನ್ನಲ್ಲೇ ಪ್ರಿಯಾಂಕ್​ ಖರ್ಗೆ ಅವರ ಬೆಂಬಲಿಗ ಕಲಬುರಗಿ ಮಹಾನಗರ ಪಾಲಿಕೆ ಮಾಜಿ ಸದಸ್ಯ ರಾಜು ಕಪನೂರ್​ನನ್ನು​ ಇಂದು(ಡಿಸೆಂಬರ್ 03) ಪೊಲೀಸು ಬಂಧಿಸಿದ್ದಾರೆ.

ಸೆಪ್ಟೆಂಬರ್​ನಲ್ಲಿ ಗುರಲಿಂಗಪ್ಪ ಎಂಬುವರಿಂದ ಎರಡು ಕಂಟ್ರಿಮೇಡ್ ಪಿಸ್ತೂಲ್ ಹಾಗೂ 30 ಗುಂಡು ಖರೀದಿ ಮಾಡಿದ್ದ ಆರೋಪದ ಮೇಲೆ ರಾಜು ಕಪನೂರ್ ಅವರನ್ನ ಕಲಬುರಗಿ ಜಿಲ್ಲೆಯ ಯಡ್ರಾಮಿ ಪೊಲೀಸರು ಬಂಧಿಸಿದ್ದಾರೆ. ಸೆಪ್ಟೆಂಬರ್ ನಲ್ಲಿ ನಾಡ ಪಿಸ್ತೂಲ್​ಗಳನ್ನು ರಾಜು ಕಪನೂರ್​ಗೆ ನೀಡಿದ್ದೆ ಎಂದು ಗುರಲಿಂಗಪ್ಪ ಪೊಲೀಸರ ಮುಂದೆ ನೀಡಿದ್ದ ವಿಡಿಯೋ ಹೇಳಿಕೆಯಲ್ಲಿ ರಾಜು ಹೆಸರು ಉಲ್ಲೇಖಿಸಿದ್ದ. ಬಳಿಕ ಪೊಲೀಸರು ರಾಜು ಕಪನೂರ್​ಗೆ ಎರಡು ನೊಟೀಸ್ ನೀಡಿದ್ದರು. ಆದ್ರೆ, ಪೊಲೀಸ್​ ನೊಟೀಸ್​ಗೆ ರಾಜು ಉತ್ತರ ನೀಡಿರಲಿಲ್ಲ,

ಇದನ್ನೂ ಓದಿ: ಕಲಬುರಗಿ: ನಗರ ಪೊಲೀಸ್ ಕಮಿಷನರ್ ಪತ್ನಿ ವಿರುದ್ಧ ಹಣಕ್ಕೆ ಬೇಡಿಕೆ; ಬಿಜೆಪಿ ಮುಖಂಡನಿಂದ ಆರೋಪ

ಇನ್ನು ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಸುದ್ದಿಗೋಷ್ಠಿ ನಡೆಸಿ, ರಾಜು ಕಪನೂರ್ ನನ್ನನ್ನು ಕೊಲೆ ಮಾಡುವುದಕ್ಕೆ ಗನ್ ಖರೀದಿ ಮಾಡಿದ್ದಾನೆ ಎಂದು ಗಂಭೀರ ಆರೋಪ ಮಾಡಿದ್ದರು.

ಚಿತ್ತಾಪುರ ಶಾಸಕ ಪ್ರಿಯಾಂಕ್ ಖರ್ಗೆ ಬಲಗೈ ಬಂಟರು ನನ್ನ ಹತ್ಯೆ ಮಾಡಲು ಸ್ಕೆಚ್ ಹಾಕಿದ್ದಾರೆ. ಅದಕ್ಕಾಗಿ ದೇಶಿ ನಿರ್ಮಿತ ಪಿಸ್ತೂಲ್ ನಿಂದ ನನ್ನನ್ನು ಕೊಲ್ಲಲು ಪ್ಲಾನ್‌ ಮಾಡಿದ್ದಾರೆ. ಕೊಲೆ ಮಾಡೋದಕ್ಕೆ 2 ದೇಶಿ ನಿರ್ಮಿತ ಪಿಸ್ತೂಲ್, 30 ಬುಲೆಟ್‌ಗಳನ್ನು ಖರೀದಿಸಿದ್ದಾರೆ. ಆದರೆ ದೇಶಿ ನಿರ್ಮಿತ ಪಿಸ್ತೂಲ್ ಮಾರಾಟ ಮಾಡಿದ್ದ ಆರೋಪಿಯನ್ನ ಬಂಧಿಸಿದ್ದ ಪೊಲೀಸರು, ಗನ್ ಕೇಸ್‌ನಲ್ಲಿ ಪ್ರಿಯಾಂಕ್ ಖರ್ಗೆ ಬೆಂಬಲಿಗರ ಹೆಸರು ತೆಗೆಯೋದಕ್ಕೆ ಡಿವೈಎಸ್‌ಪಿ 10 ಲಕ್ಷ ಹಣ ಪಡೆದಿದ್ದಾರೆ ಎಂದು ಆರೋಪಿಸಿದ್ದರು.

ನನಗೆ ಜೀವ ಬೆದರಿಕೆ ಇದೆ ಅಂತ ಗನ್‌ ಮ್ಯಾನ್‌ ನೀಡುವಂತೆ ಕೇಳಿದ್ದೆ, ಜೀವ ಬೆದರಿಕೆ ಇದ್ದರು ಇಲ್ಲಿವರೆಗೂ ಗನ್‌ ಮ್ಯಾನ್‌ ಕೊಟ್ಟಿಲ್ಲ. ಎಲ್ಲರ ಗಮನಕ್ಕೆ ಇದ್ದರು ಯಾರೂ ಕೇರ್‌ ಮಾಡುತ್ತಿಲ್ಲ. ದೂರು ಕೊಡಲು ಹೋದರು ನನ್ನ ದೂರು ಸ್ವೀಕರಿಸಿಲ್ಲ ಎಂದು ಮಣಿಕಂಠ ರಾಠೋಡ್ ಅಸಮಾಧಾನ ವ್ಯಕ್ತಪಡಿಸಿದ್ದರು.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 10:00 pm, Sat, 3 December 22

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ