AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿ ಬಿಜೆಪಿ ಮುಖಂಡ ವಿಡಿಯೋ ರಿಲೀಸ್ ಮಾಡಿದ ಬೆನ್ನಲ್ಲೇ ಪ್ರಿಯಾಂಕ್ ಖರ್ಗೆ ಬೆಂಬಲಿಗ ಅರೆಸ್ಟ್!

ಬಿಜೆಪಿ ಮುಖಂಡ ವಿಡಿಯೋ ಬಿಡುಗಡೆ ಮಾಡಿದ ಬೆನ್ನಲ್ಲೇ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಆಪ್ತ, ಕಲಬುರಗಿ ಮಹಾನಗರ ಪಾಲಿಕೆ ಸದಸ್ಯನನ್ನು ಪೊಲೀಸರು ಬಂಧಿಸಿದ್ದಾರೆ.

ಕಲಬುರಗಿ ಬಿಜೆಪಿ ಮುಖಂಡ ವಿಡಿಯೋ ರಿಲೀಸ್ ಮಾಡಿದ ಬೆನ್ನಲ್ಲೇ ಪ್ರಿಯಾಂಕ್ ಖರ್ಗೆ ಬೆಂಬಲಿಗ ಅರೆಸ್ಟ್!
ರಾಜು ಕಪನೂರ್
TV9 Web
| Edited By: |

Updated on:Dec 03, 2022 | 10:02 PM

Share

ಕಲಬುರಗಿ: ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ (Priyank Kharge) ಹಾಗೂ ಬಿಜೆಪಿ  ಮುಖಂಡ ಮಣಿಕಂಠ ರಾಠೋಡ್ ನಡುವಿನ ಆರೋಪ-ಪ್ರತ್ಯಾರೋಪಗಳು ಜೋರಾಗಿವೆ. ಇದರ ಮಧ್ಯೆ ಮಣಿಕಂಠ ರಾಠೋಡ್ ವಿಡಿಯೋ ರಿಲೀಸ್ ಮಾಡಿದ ಬೆನ್ನಲ್ಲೇ ಪ್ರಿಯಾಂಕ್​ ಖರ್ಗೆ ಅವರ ಬೆಂಬಲಿಗ ಕಲಬುರಗಿ ಮಹಾನಗರ ಪಾಲಿಕೆ ಮಾಜಿ ಸದಸ್ಯ ರಾಜು ಕಪನೂರ್​ನನ್ನು​ ಇಂದು(ಡಿಸೆಂಬರ್ 03) ಪೊಲೀಸು ಬಂಧಿಸಿದ್ದಾರೆ.

ಸೆಪ್ಟೆಂಬರ್​ನಲ್ಲಿ ಗುರಲಿಂಗಪ್ಪ ಎಂಬುವರಿಂದ ಎರಡು ಕಂಟ್ರಿಮೇಡ್ ಪಿಸ್ತೂಲ್ ಹಾಗೂ 30 ಗುಂಡು ಖರೀದಿ ಮಾಡಿದ್ದ ಆರೋಪದ ಮೇಲೆ ರಾಜು ಕಪನೂರ್ ಅವರನ್ನ ಕಲಬುರಗಿ ಜಿಲ್ಲೆಯ ಯಡ್ರಾಮಿ ಪೊಲೀಸರು ಬಂಧಿಸಿದ್ದಾರೆ. ಸೆಪ್ಟೆಂಬರ್ ನಲ್ಲಿ ನಾಡ ಪಿಸ್ತೂಲ್​ಗಳನ್ನು ರಾಜು ಕಪನೂರ್​ಗೆ ನೀಡಿದ್ದೆ ಎಂದು ಗುರಲಿಂಗಪ್ಪ ಪೊಲೀಸರ ಮುಂದೆ ನೀಡಿದ್ದ ವಿಡಿಯೋ ಹೇಳಿಕೆಯಲ್ಲಿ ರಾಜು ಹೆಸರು ಉಲ್ಲೇಖಿಸಿದ್ದ. ಬಳಿಕ ಪೊಲೀಸರು ರಾಜು ಕಪನೂರ್​ಗೆ ಎರಡು ನೊಟೀಸ್ ನೀಡಿದ್ದರು. ಆದ್ರೆ, ಪೊಲೀಸ್​ ನೊಟೀಸ್​ಗೆ ರಾಜು ಉತ್ತರ ನೀಡಿರಲಿಲ್ಲ,

ಇದನ್ನೂ ಓದಿ: ಕಲಬುರಗಿ: ನಗರ ಪೊಲೀಸ್ ಕಮಿಷನರ್ ಪತ್ನಿ ವಿರುದ್ಧ ಹಣಕ್ಕೆ ಬೇಡಿಕೆ; ಬಿಜೆಪಿ ಮುಖಂಡನಿಂದ ಆರೋಪ

ಇನ್ನು ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಸುದ್ದಿಗೋಷ್ಠಿ ನಡೆಸಿ, ರಾಜು ಕಪನೂರ್ ನನ್ನನ್ನು ಕೊಲೆ ಮಾಡುವುದಕ್ಕೆ ಗನ್ ಖರೀದಿ ಮಾಡಿದ್ದಾನೆ ಎಂದು ಗಂಭೀರ ಆರೋಪ ಮಾಡಿದ್ದರು.

ಚಿತ್ತಾಪುರ ಶಾಸಕ ಪ್ರಿಯಾಂಕ್ ಖರ್ಗೆ ಬಲಗೈ ಬಂಟರು ನನ್ನ ಹತ್ಯೆ ಮಾಡಲು ಸ್ಕೆಚ್ ಹಾಕಿದ್ದಾರೆ. ಅದಕ್ಕಾಗಿ ದೇಶಿ ನಿರ್ಮಿತ ಪಿಸ್ತೂಲ್ ನಿಂದ ನನ್ನನ್ನು ಕೊಲ್ಲಲು ಪ್ಲಾನ್‌ ಮಾಡಿದ್ದಾರೆ. ಕೊಲೆ ಮಾಡೋದಕ್ಕೆ 2 ದೇಶಿ ನಿರ್ಮಿತ ಪಿಸ್ತೂಲ್, 30 ಬುಲೆಟ್‌ಗಳನ್ನು ಖರೀದಿಸಿದ್ದಾರೆ. ಆದರೆ ದೇಶಿ ನಿರ್ಮಿತ ಪಿಸ್ತೂಲ್ ಮಾರಾಟ ಮಾಡಿದ್ದ ಆರೋಪಿಯನ್ನ ಬಂಧಿಸಿದ್ದ ಪೊಲೀಸರು, ಗನ್ ಕೇಸ್‌ನಲ್ಲಿ ಪ್ರಿಯಾಂಕ್ ಖರ್ಗೆ ಬೆಂಬಲಿಗರ ಹೆಸರು ತೆಗೆಯೋದಕ್ಕೆ ಡಿವೈಎಸ್‌ಪಿ 10 ಲಕ್ಷ ಹಣ ಪಡೆದಿದ್ದಾರೆ ಎಂದು ಆರೋಪಿಸಿದ್ದರು.

ನನಗೆ ಜೀವ ಬೆದರಿಕೆ ಇದೆ ಅಂತ ಗನ್‌ ಮ್ಯಾನ್‌ ನೀಡುವಂತೆ ಕೇಳಿದ್ದೆ, ಜೀವ ಬೆದರಿಕೆ ಇದ್ದರು ಇಲ್ಲಿವರೆಗೂ ಗನ್‌ ಮ್ಯಾನ್‌ ಕೊಟ್ಟಿಲ್ಲ. ಎಲ್ಲರ ಗಮನಕ್ಕೆ ಇದ್ದರು ಯಾರೂ ಕೇರ್‌ ಮಾಡುತ್ತಿಲ್ಲ. ದೂರು ಕೊಡಲು ಹೋದರು ನನ್ನ ದೂರು ಸ್ವೀಕರಿಸಿಲ್ಲ ಎಂದು ಮಣಿಕಂಠ ರಾಠೋಡ್ ಅಸಮಾಧಾನ ವ್ಯಕ್ತಪಡಿಸಿದ್ದರು.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 10:00 pm, Sat, 3 December 22

Follow Us
Web contact
Web contact

TV9 Kannada

Read More
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್