AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಸಕ, ಮಂತ್ರಿ ಮಾಡೋ ಕೆಲಸವನ್ನ ಪ್ರಧಾನಿಯಿಂದ ಮಾಡಿಸ್ತಿದ್ದಾರೆ: ಬಿಜೆಪಿಗೆ ಪ್ರಿಯಾಂಕ್ ಖರ್ಗೆ ಟಾಂಗ್

ಪ್ರಧಾನಿ ನರೇಂದ್ರ ಮೋದಿ ಅವರು ಕಲಬುರಗಿಗೆ ಭೇಟಿ ನೀಡುತ್ತಿರುವುದಕ್ಕೆ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ವ್ಯಂಗ್ಯವಾಡಿದ್ದಾರೆ.

ಶಾಸಕ, ಮಂತ್ರಿ ಮಾಡೋ ಕೆಲಸವನ್ನ ಪ್ರಧಾನಿಯಿಂದ ಮಾಡಿಸ್ತಿದ್ದಾರೆ: ಬಿಜೆಪಿಗೆ ಪ್ರಿಯಾಂಕ್ ಖರ್ಗೆ ಟಾಂಗ್
ಪ್ರಿಯಾಂಕ್ ಖರ್ಗೆ , ನರೇಂದ್ರ ಮೋದಿ
TV9 Web
| Edited By: |

Updated on:Jan 17, 2023 | 4:05 PM

Share

ಕಲಬುರಗಿ: ಇದೇ ಜನವರಿ 19ರಂದು ಪ್ರಧಾನಿ ನರೇಂದ್ರ ಮೋದಿ(Narendra Modi) ಅವರು ಕಲಬುರಗಿ(Kalaburagi) ಜಿಲ್ಲೆಗೆ ಭೇಟಿ ನೀಡಲಿದ್ದು, ನೂತನವಾಗಿ ರಚಿಸಲಾಗಿರುವ ಕಂದಾಯ ಗ್ರಾಮಗಳ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಿಸಲಿದ್ದಾರೆ. ಅಲ್ಲದೇ ಇದೇ ವೇಳೆ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಿಲಾನ್ಯಾಸ ಮತ್ತು ಉದ್ಘಾಟನೆ ಮಾಡಲಿದ್ದಾರೆ. ಇನ್ನು ಇದಕ್ಕೆ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ (Priyank Kharge) ಪ್ರತಿಕ್ರಿಯಿಸಿ, ಶಾಸಕ, ಮಂತ್ರಿ ಮಾಡೋ ಕೆಲಸವನ್ನ ಪ್ರಧಾನಿಯಿಂದ ಮಾಡಿಸ್ತಿದ್ದಾರೆ ಎಂದು ಲೇವಡಿ ಮಾಡಿದ್ದಾರೆ.

ಇದನ್ನೂ ಓದಿ: ಜ.19 ರಂದು ಕಲ್ಯಾಣ ಕರ್ನಾಟಕಕ್ಕೆ ಪ್ರಧಾನಿ ಮೋದಿ: ಇಲ್ಲಿದೆ ಯಾದಗಿರಿ, ಕಲಬುರಗಿ ಜಿಲ್ಲಾ ಪ್ರವಾಸ ವೇಳಾಪಟ್ಟಿ

ಕಲಬುರಗಿಯಲ್ಲಿ ಇಂದು(ಜನವರಿ 17) ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಿಯಾಂಕ್ ಖರ್ಗೆ, ಶಾಸಕ, ಮಂತ್ರಿ ಮಾಡುವ ಕೆಲಸವನ್ನ ಪ್ರಧಾನಿಯಿಂದ ಮಾಡಿಸುತ್ತಿದ್ದಾರೆ. ಕಂದಾಯ ಗ್ರಾಮ ಮಾಡಬೇಕೆಂದು ಕಾಂಗ್ರೆಸ್​ ಸರ್ಕಾರದಲ್ಲೇ ಆಗಿತ್ತು. ಬಿಜೆಪಿ ಸರ್ಕಾರದ ಸಾಧನೆ ಶೂನ್ಯ. ಬಿಜೆಪಿಯವರಿಗೆ ಇರೋದು ನಡುಕ. ಬಿಜೆಪಿ ನಾಯಕರಿಗೆ ಯತ್ನಾಳ್​ ಬಾಯಿ ಮುಚ್ಚಿಸಲು ಆಗುತ್ತಿಲ್ಲ ಎಂದು ಟಾಂಗ್ ಕೊಟ್ಟರು.

ಮುಖ್ಯಮಂತ್ರಿ ಕಚೇರಿಯಲ್ಲಿ ಹನಿಟ್ರ್ಯಾಪ್​ ಆಗಿರುವುದು ನಿಜಾನಾ, ಸುಳ್ಳಾ? ಹೈಕೋರ್ಟ್​​ನಲ್ಲಿ ಶಾಸಕರು ಜಾಮೀನು ಪಡೆದಿದ್ದು, ನಿಜಾನಾ, ಸುಳ್ಳಾ? ಇದು ಲಂಚ, ಮಂಚದ ಸರ್ಕಾರವಲ್ಲವಾ? ಲಂಚ, ಮಂಚದ ಸರ್ಕಾರ ಅಂದಾಗ ನನ್ನ ಮೇಲೆ ಮುಗಿದು ಬಿದ್ದಿದ್ದರು. ಸ್ಯಾಂಟ್ರೋ ರವಿ ಪಿಂಪ್ ಎನ್ನುವುದು ನಿಜಾನಾ ಸುಳ್ಳಾ? ಎಂದು ಪ್ರಿಯಾಂಕ್​ ಖರ್ಗೆ ಪ್ರಶ್ನಿಸಿದರು.

ಮೋದಿ ಕಲಬುರಗಿ ಜಿಲ್ಲಾ ಪ್ರವಾಸ

ಪ್ರಧಾನಿ ನರೇಂದ್ರ ಮೋದಿ ಅವರು ಜ.19ರಂದು ಕಲಬುರಗಿ ಜಿಲ್ಲೆಗೆ ಭೇಟಿ ನೀಡಲಿದ್ದು, ಸೇಡಂ ತಾಲೂಕಿನ ಮಳಖೇಡ ಹೆಲಿಪ್ಯಾಡ್​ನಲ್ಲಿ ಮಧ್ಯಾಹ್ನ 2 ಗಂಟೆಗೆ ಇಳಿಯಲಿದ್ದಾರೆ. ಮಳಖೇಡನಲ್ಲಿ ಮಧ್ಯಾಹ್ನ 02.15ಕ್ಕೆ ನಡೆಯುವ ಕಾರ್ಯಕ್ರಮ ಸ್ಥಳಕ್ಕೆ ಆಗಮಿಸಿ, ನೂತನವಾಗಿ ರಚಿಸಲಾಗಿರುವ ಕಂದಾಯ ಗ್ರಾಮಗಳ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಿಸಲಿದ್ದಾರೆ. ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಿಲಾನ್ಯಾಸ ಮತ್ತು ಉದ್ಘಾಟನೆ ಮಾಡಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಮಳಖೇಡ ಕಾರ್ಯಕ್ರಮ ಸ್ಥಳದಿಂದ ನಿರ್ಗಮಿಸಿ, 03.05ಕ್ಕೆ ಹೆಲಿಕಾಪ್ಟರ್ ಮೂಲಕ ಕಲಬುರಗಿ ಏರ್​ಪೋರ್ಟ್​​ಗೆ ಹೋಗುತ್ತಾರೆ. ಅಲ್ಲಿಂದ 03.35ಕ್ಕೆ ಕಲಬುರಗಿ ಏರ್​ಪೋರ್ಟ್​​ನಿಂದ ದೆಹಲಿಗೆ ವಾಪಸ್ ಆಗಲಿದ್ದಾರೆ.

Published On - 4:02 pm, Tue, 17 January 23

ಕೈಕೊಟ್ಟ ಕೇಂದ್ರದ ವಾಹನ್-4: ಬೇರೆ ರಾಜ್ಯಗಳಿಗೆ ತೆರಳುವ ವಾಹನಗಳ ಪರದಾಟ
ಕೈಕೊಟ್ಟ ಕೇಂದ್ರದ ವಾಹನ್-4: ಬೇರೆ ರಾಜ್ಯಗಳಿಗೆ ತೆರಳುವ ವಾಹನಗಳ ಪರದಾಟ
ರಾಶಿಕಾ ಬಗ್ಗೆ ಅಪರೂಪದ ವಿಷಯಗಳ ಹೇಳಿದ ತಾಯಿ
ರಾಶಿಕಾ ಬಗ್ಗೆ ಅಪರೂಪದ ವಿಷಯಗಳ ಹೇಳಿದ ತಾಯಿ
ಕಾಡಾನೆ ಓಡಿಸಲೂ ಬಂತು AI ಕ್ಯಾಮರಾ: ಹೇಗೆ ಕೆಲಸ ಮಾಡುತ್ತೆ ಗೊತ್ತಾ?
ಕಾಡಾನೆ ಓಡಿಸಲೂ ಬಂತು AI ಕ್ಯಾಮರಾ: ಹೇಗೆ ಕೆಲಸ ಮಾಡುತ್ತೆ ಗೊತ್ತಾ?
GBA ಕಂದಾಯ ಆಯುಕ್ತ ಮುನೀಶ್ ಮೌದ್ಗಿಲ್ ವಿರುದ್ಧ ಸಿಡಿದೆದ್ದ ನೌಕರರು
GBA ಕಂದಾಯ ಆಯುಕ್ತ ಮುನೀಶ್ ಮೌದ್ಗಿಲ್ ವಿರುದ್ಧ ಸಿಡಿದೆದ್ದ ನೌಕರರು
ಜ್ಯುವೆಲ್ಲರಿ ಅಂಗಡಿಗೆ ಕನ್ನ: ಸಿಸಿಟಿವಿಯ ಡಿವಿಆರ್ ಕದ್ದೊಯ್ದ ಖದೀಮರು
ಜ್ಯುವೆಲ್ಲರಿ ಅಂಗಡಿಗೆ ಕನ್ನ: ಸಿಸಿಟಿವಿಯ ಡಿವಿಆರ್ ಕದ್ದೊಯ್ದ ಖದೀಮರು
ಮದ್ವೆಯಾದ ಹತ್ತೇ ದಿನದಲ್ಲಿ ನವವಿವಾಹಿತ ಜೈಲು ಪಾಲು!
ಮದ್ವೆಯಾದ ಹತ್ತೇ ದಿನದಲ್ಲಿ ನವವಿವಾಹಿತ ಜೈಲು ಪಾಲು!
ಅಲೋಕ್ ಕುಮಾರ್ ವಿಶೇಷ ಕಾರ್ಯಾಚರಣೆ:ಮಂಗಳೂರು ಜೈಲು ಪರಿಶೀಲನೆ
ಅಲೋಕ್ ಕುಮಾರ್ ವಿಶೇಷ ಕಾರ್ಯಾಚರಣೆ:ಮಂಗಳೂರು ಜೈಲು ಪರಿಶೀಲನೆ
ವಾಹನ ಸವಾರರೇ ಎಚ್ಚರ ಎಚ್ಚರ: ಬೆಂಗಳೂರಲ್ಲಿ ಪಂಕ್ಚರ್ ಮಾಫಿಯಾ ಮತ್ತೆ ಸಕ್ರಿಯ
ವಾಹನ ಸವಾರರೇ ಎಚ್ಚರ ಎಚ್ಚರ: ಬೆಂಗಳೂರಲ್ಲಿ ಪಂಕ್ಚರ್ ಮಾಫಿಯಾ ಮತ್ತೆ ಸಕ್ರಿಯ
ದಂಪತಿ ರೈಲಿನಿಂದ ಹಾರುವ ಮುನ್ನ ಇಬ್ಬರ ನಡುವೆ ರೈಲಿನಲ್ಲಿ ಏನಾಗಿತ್ತು ನೋಡಿ
ದಂಪತಿ ರೈಲಿನಿಂದ ಹಾರುವ ಮುನ್ನ ಇಬ್ಬರ ನಡುವೆ ರೈಲಿನಲ್ಲಿ ಏನಾಗಿತ್ತು ನೋಡಿ
ಚಾಮರಾಜನಗರ: ಚಿರತೆ ಸೆರೆಗೆ ಇಟ್ಟಿದ್ದ ಬೋನಿನಲ್ಲಿ ಸಿಕ್ಕಿಬಿದ್ದ ವ್ಯಕ್ತಿ!
ಚಾಮರಾಜನಗರ: ಚಿರತೆ ಸೆರೆಗೆ ಇಟ್ಟಿದ್ದ ಬೋನಿನಲ್ಲಿ ಸಿಕ್ಕಿಬಿದ್ದ ವ್ಯಕ್ತಿ!