AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿಯಲ್ಲಿ ಅಪರಿಚಿತ ಬೈಕ್​ ಡಿಕ್ಕಿ: ಕಾಂಗ್ರೆಸ್ ಎಂಎಲ್​ಸಿ ತಾಯಿ ಸಾವು

ಕಾಂಗ್ರೆಸ್​ ವಿಧಾನ ಪರಿಷತ್ ಸದಸ್ಯ ಅರವಿಂದ ಕುಮಾರ್ ಅರಳಿ ಅವರ ತಾಯಿ ಹಿಟ್ ಆ್ಯಂಡ್​ ರನ್​ಗೆ ಬಲಿಯಾಗಿದ್ದಾರೆ. ಅಪರಿಚಿತ ಬೈಕ್​ ವೇಗವಾಗಿ ಬಂದು ಅರವಿಂದ ಅರಳಿ ಅವರ ತಾಯಿ ಸುಮಿತ್ರಾ ಅವರಿಗೆ ಗುದ್ದಿದೆ. ಪರಿಣಾಮ ಸುಮಿತ್ರಾ ಅವರು ಮೃತಪಟ್ಟಿದ್ದಾರೆ.

ಕಲಬುರಗಿಯಲ್ಲಿ ಅಪರಿಚಿತ ಬೈಕ್​ ಡಿಕ್ಕಿ: ಕಾಂಗ್ರೆಸ್ ಎಂಎಲ್​ಸಿ ತಾಯಿ ಸಾವು
ಮೃತ ಸುಮಿತ್ರಾ
ದತ್ತಾತ್ರೇಯ ಪಾಟೀಲ, ಕಲಬುರಗಿ
| Edited By: |

Updated on:Dec 13, 2023 | 11:39 PM

Share

ಕಲಬುರಗಿ, (ಡಿಸೆಂಬರ್ 13): ಕಾಂಗ್ರೆಸ್​ ವಿಧಾನ ಪರಿಷತ್ ಸದಸ್ಯ ಅರವಿಂದ ಕುಮಾರ್ ಅರಳಿ( Aravinda Kumar Arali)  ಅವರ ತಾಯಿ ಹಿಟ್ ಆ್ಯಂಡ್​ ರನ್​ಗೆ ಬಲಿಯಾಗಿದ್ದಾರೆ. ಕಲಬುರಗಿಯ (Kalaburagi) ಸೇಡಂ ರಿಂಗ್ ರಸ್ತೆಯಲ್ಲಿರುವ ಟೊಯೋಟಾ ಶೋರೂಂ ಬಳಿ ಅರವಿಂದ ಅರಳಿ ಅವರ ತಾಯಿ ಸುಮಿತ್ರಾಗೆ ಬೈಕ್ ಬಂದು ಗುದ್ದಿದೆ. ಪರಿಣಾಮ ಸುಮೀತ್ರಾಬಾಯಿ (75) ಮೃತಪಟ್ಟಿದ್ದಾರೆ.

ಬೀದರ್‌ನಿಂದ ಕಲಬುರಗಿಯಲ್ಲಿರುವ ಅಳಿಯನ ಮನೆಗೆ ಬಂದಿದ್ದ ಸುಮಿತ್ರಾ ಅವರು, ಇಂದು(ಡಿಸೆಂಬರ್ 13) ಟೊಯೋಟಾ ಶೋರೂಂ ಬಳಿ ರಸ್ತೆ ದಾಟುತ್ತಿದ್ದಾಗ ಅಪರಿಚಿತ ಬೈಕ್ ಬಂದು​ ಡಿಕ್ಕಿ ಹೊಡಿದೆ.​ ಬೈಕ್​ ಗುದ್ದಿದ ರಭಸಕ್ಕೆ ಸುಮಿತ್ರಾ ಸ್ಥಳದಲ್ಲೇ ಕುಸಿದುಬಿದ್ದಿದ್ದು, ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ವಿಷಯ ತಿಳಿದು ಸ್ಥಳಕ್ಕೆ ಡಿಸಿಪಿ ಕನ್ನಿಕಾ, ಇನ್ಸ್​ಪೆಕ್ಟರ್ ಖಾಜಾ ಹುಸೇನ್​ ಮತ್ತು ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇನ್ನು ಈ ಸಂಬಂಧ ಕಲಬುರಗಿ ಸಂಚಾರಿ ಠಾಣೆ 1 ರಲ್ಲಿ ಪ್ರಕರಣ ದಾಖಲಾಗಿದೆ. ಇನ್ನು ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಭಾಗಿಯಾಗಿದ್ದ ಪುತ್ರ, ಪರಿಷತ್ ಸದಸ್ಯ ಅರವಿಂದ ಕುಮಾರ್ ಅರಳಿ ಅವರು ತಾಯಿ ವಿಷಯ ತಿಳಿಯುತ್ತಿದ್ದಂತೆಯೇ ಕಲಬುರಗಿಯೆ ದೌಡಾಯಿಸಿದ್ದಾರೆ.

ಗುದ್ದಿದ ಬೈಕ್​ ಯಾವುದು ಎನ್ನುವ ಮಾಹಿತಿ ಸಿಕ್ಕಿಲ್ಲ. ಈ ಬಗ್ಗೆ ಪೊಲೀಸರು ತನಿಖೆ ನಡೆಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:32 pm, Wed, 13 December 23

ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ