AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಣ್ಣು ತುಂಬಿ ರಸ್ತೆಯಲ್ಲಿದ್ದ ಗುಂಡಿ ಮುಚ್ಚಿದ ಕಾನ್ಸ್‌ಟೇಬಲ್; ಸಂಚಾರಿ ಠಾಣೆ ಪಿಸಿ ಚಂದ್ರಕಾಂತ್ ಕೆಲಸಕ್ಕೆ ಸಾರ್ವಜನಿಕರ ಮೆಚ್ಚುಗೆ

ದ್ವಿಚಕ್ರ ವಾಹನ ಸವಾರರು ಈ ಗುಂಡಿಯಲ್ಲಿ ಬಿದ್ದು ಗಾಯಗೊಳ್ಳುತ್ತಿರುವುದನ್ನು ಕಂಡ ಪಿಸಿ ಚಂದ್ರಕಾಂತ್, ಇದಕ್ಕೆ ಪರಿಹಾರ ನೀಡಲು ಯೋಚಿಸಿದ್ದಾರೆ. ಹೀಗಾಗಿ ಗುಂಡಿಗಳಿಗೆ ಮಣ್ಣು ಹಾಕಿ, ಮುಚ್ಚಿದ್ದಾರೆ. ಪೊಲೀಸ್ ಕೆಲಸದಲ್ಲಿದ್ದರೂ ಸ್ವತಃ ತಾವೇ ಗುಂಡಿ ಮುಚ್ಚಿದ್ದಕ್ಕೆ ಜನರು ಶ್ಲಾಘಿಸಿದ್ದಾರೆ.

ಮಣ್ಣು ತುಂಬಿ ರಸ್ತೆಯಲ್ಲಿದ್ದ ಗುಂಡಿ ಮುಚ್ಚಿದ ಕಾನ್ಸ್‌ಟೇಬಲ್; ಸಂಚಾರಿ ಠಾಣೆ ಪಿಸಿ ಚಂದ್ರಕಾಂತ್ ಕೆಲಸಕ್ಕೆ ಸಾರ್ವಜನಿಕರ ಮೆಚ್ಚುಗೆ
ಮಣ್ಣು ತುಂಬಿ ರಸ್ತೆಯಲ್ಲಿದ್ದ ಗುಂಡಿ ಮುಚ್ಚಿದ ಕಾನ್ಸ್‌ಟೇಬಲ್
TV9 Web
| Edited By: |

Updated on: Sep 26, 2021 | 10:23 AM

Share

ಕಲಬುರಗಿ: ರಸ್ತೆಯಲ್ಲಿದ್ದ ಗುಂಡಿಗೆ ಮಣ್ಣು ತುಂಬಿ ಮುಚ್ಚಿದ ಕಾನ್ಸ್‌ಟೇಬಲ್ ಕಾರ್ಯಕ್ಕೆ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ. ಸಂಚಾರಿ ಠಾಣೆ ಪಿಸಿ ಚಂದ್ರಕಾಂತ್ ಕಲಬುರಗಿ ನಗರದ ಆಳಂದ ಚೆಕ್‌ಪೋಸ್ಟ್‌ನಲ್ಲಿದ್ದ ಗುಂಡಿಗಳನ್ನು ಮುಚ್ಚಿದ್ದಾರೆ. ಸಂಚಾರಿ ಪೊಲೀಸ್ ಠಾಣೆ 2 ರಲ್ಲಿ ಕಾರ್ಯನಿರ್ವಹಿಸುವ ಚಂದ್ರಕಾಂತ್, ನಿನ್ನೆ (ಸೆಪ್ಟೆಂಬರ್ 25) ಸ್ವತಃ ತಾವೇ ಗುಂಡಿಗಳನ್ನು ಮುಚ್ಚಿ ವಿಭಿನ್ನ ಕಾರ್ಯಕ್ಕೆ ಪಾತ್ರರಾಗಿದ್ದಾರೆ.

ದ್ವಿಚಕ್ರ ವಾಹನ ಸವಾರರು ಈ ಗುಂಡಿಯಲ್ಲಿ ಬಿದ್ದು ಗಾಯಗೊಳ್ಳುತ್ತಿರುವುದನ್ನು ಕಂಡ ಪಿಸಿ ಚಂದ್ರಕಾಂತ್, ಇದಕ್ಕೆ ಪರಿಹಾರ ನೀಡಲು ಯೋಚಿಸಿದ್ದಾರೆ. ಹೀಗಾಗಿ ಗುಂಡಿಗಳಿಗೆ ಮಣ್ಣು ಹಾಕಿ, ಮುಚ್ಚಿದ್ದಾರೆ. ಪೊಲೀಸ್ ಕೆಲಸದಲ್ಲಿದ್ದರೂ ಸ್ವತಃ ತಾವೇ ಗುಂಡಿ ಮುಚ್ಚಿದ್ದಕ್ಕೆ ಜನರು ಶ್ಲಾಘಿಸಿದ್ದಾರೆ.

ಈ ಹಿಂದೆ ಮಂಗಳೂರಿನಲ್ಲಿಯೂ ಸಹ ಕರ್ತವ್ಯನಿರತ ಕಾನ್ಸ್​​ಟೇಬಲ್​ಗಳು ಅಪಘಾತವಾಗದಂತೆ ಸಾರ್ವಜನಿಕರ ನೆರವಿಗೆ ನಿಂತಿದ್ದಾರೆ.

ಮಂಗಳೂರು: ಅವಘಡ ಸಂಭವಿಸದಂತೆ ಎಚ್ಚರವಹಿಸಿ ರಸ್ತೆಯಲ್ಲಿ ಬಿದ್ದಿದ್ದ ಆಯಿಲ್​ಗೆ ಮರಳು ಹಾಕಿದ ಕಾನ್ಸ್​ಟೇಬಲ್​ ಪೊಲೀಸರು ಕೇವಲ ತಮಗೆ ವಹಿಸಿದ ಕರ್ತವ್ಯವನ್ನು ಸರಿಯಾಗಿ ಮಾಡುತ್ತಾರೆ ಎಂಬ  ವಿಚಾರಗಳನ್ನು ನಾವು ಪ್ರತಿನಿತ್ಯ ನೋಡುತ್ತಿರುತ್ತೇವೆ. ಆದರೆ ಮಂಗಳೂರಿನ ಈ ಪೊಲೀಸರಿಬ್ಬರು ತಮ್ಮ ಕರ್ತವ್ಯದ ನಡುವೆಯೂ ಸಮಯಪ್ರಜ್ಞೆಯನ್ನು ಮೆರೆದಿದ್ದಾರೆ. ಮಂಗಳೂರು ನಗರ ಪೊಲೀಸ್ ವ್ಯಾಪ್ತಿಯ ಉತ್ತರ ಪೊಲೀಸ್ ಠಾಣೆಯ ಇಬ್ಬರು ಪೊಲೀಸ್ ಕಾನ್ಸ್​ಟೇಬಲ್​ಗಳು ಸಾಮಾಜಿಕ ಕಳಕಳಿ ಮೆರೆದು ಈಗ ಪೊಲೀಸ್ ಹಿರಿಯ ಅಧಿಕಾರಿಗಳಿಂದ ಪ್ರಶಂಸೆಗೆ ಪಾತ್ರರಾಗಿದ್ದಾರೆ.

ಮಂಗಳೂರಿನ ಪಿವಿಎಸ್ ಸರ್ಕಲ್ ಬಳಿ ಪೊಲೀಸ್ ಕಾನ್ಸ್​ಟೇಬಲ್​ಗಳಾದ ಶಂಕರ್ ಮತ್ತು ಸತೀಶ್ ಹೋಗುತ್ತಿದ್ದರು. ಈ ವೇಳೆ ಸರ್ಕಲ್​ನಲ್ಲಿ ಇಂಜಿನ್ ಆಯಿಲ್ ಚೆಲ್ಲಿ ಎರಡು ಮೂರು ಬೈಕ್​ಗಳು ಸ್ಕಿಡ್ ಆಗಿ ಬಿದ್ದುದನ್ನು ಗಮನಿಸಿದ್ದಾರೆ‌. ಮುಂದಿನ ಅಪಾಯವನ್ನು ಅರಿತ ಪೊಲೀಸ್ ಕಾನ್ಸ್​ಟೇಬಲ್​ಗಳಿಬ್ಬರು ಅಲ್ಲಿಗೆ ಮರಳನ್ನು ತರಿಸಿ ಹಾಕಿ ಅದನ್ನು ಗುಡಿಸಿ ಆಯಿಲ್ ಹೋಗುವಂತೆ ಮಾಡಿದ್ದಾರೆ‌‌.

ಪೊಲೀಸ್ ಕಮಿಷನರ್​ನಿಂದ ಮೆಚ್ಚುಗೆ‌! ಇವರ ಈ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್. ಕುಮಾರ್ ಅವರು ಪೊಲೀಸ್ ಕಾನ್ಸ್​ಟೇಬಲ್​ಗಳ ಈ ಕಾರ್ಯಕ್ಕೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಪೊಲೀಸ್ ಸಿಬ್ಬಂದಿಗಳಾದ ಶಂಕರ್ ಮತ್ತು ಸತೀಶ್ ರನ್ನು ತಮ್ಮ ಕಚೇರಿಗೆ ಕರೆಸಿ ಡಿಸಿಪಿ, ಎಸಿಪಿ ಸೇರಿದಂತೆ ತಮ್ಮ ಸಿಬ್ಬಂದಿಗಳ ಸಮ್ಮುಖದಲ್ಲಿ ಶಾಲು ಹೊದಿಸಿ, ಹಾರ ಹಾಕಿ ಸನ್ಮಾನ ಮಾಡಿದ್ದಾರೆ.

ಇದನ್ನೂ ಓದಿ: ಅವಘಡ ಸಂಭವಿಸದಂತೆ ಎಚ್ಚರವಹಿಸಿ ರಸ್ತೆಯಲ್ಲಿ ಬಿದ್ದಿದ್ದ ಆಯಿಲ್​ಗೆ ಮರಳು ಹಾಕಿದ ಕನ್ಸ್​ಟೇಬಲ್ಸ್​​; ಪೊಲೀಸ್ ಕಮಿಷನರ್​ನಿಂದ ಮೆಚ್ಚುಗೆ‌​

ಕಾನ್ಸ್‌ಟೇಬಲ್‌ಗೆ ಪೇಟ ತೊಡಿಸಿ ಸನ್ಮಾನ; ಶಿವು ಉತ್ತಮ ಕಾರ್ಯಕ್ಕೆ ನಗರ ಪೊಲೀಸ್ ಆಯುಕ್ತ ಪಂತ್ ಶ್ಲಾಘನೆ

Follow Us
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?