Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಣ್ಣು ತುಂಬಿ ರಸ್ತೆಯಲ್ಲಿದ್ದ ಗುಂಡಿ ಮುಚ್ಚಿದ ಕಾನ್ಸ್‌ಟೇಬಲ್; ಸಂಚಾರಿ ಠಾಣೆ ಪಿಸಿ ಚಂದ್ರಕಾಂತ್ ಕೆಲಸಕ್ಕೆ ಸಾರ್ವಜನಿಕರ ಮೆಚ್ಚುಗೆ

ದ್ವಿಚಕ್ರ ವಾಹನ ಸವಾರರು ಈ ಗುಂಡಿಯಲ್ಲಿ ಬಿದ್ದು ಗಾಯಗೊಳ್ಳುತ್ತಿರುವುದನ್ನು ಕಂಡ ಪಿಸಿ ಚಂದ್ರಕಾಂತ್, ಇದಕ್ಕೆ ಪರಿಹಾರ ನೀಡಲು ಯೋಚಿಸಿದ್ದಾರೆ. ಹೀಗಾಗಿ ಗುಂಡಿಗಳಿಗೆ ಮಣ್ಣು ಹಾಕಿ, ಮುಚ್ಚಿದ್ದಾರೆ. ಪೊಲೀಸ್ ಕೆಲಸದಲ್ಲಿದ್ದರೂ ಸ್ವತಃ ತಾವೇ ಗುಂಡಿ ಮುಚ್ಚಿದ್ದಕ್ಕೆ ಜನರು ಶ್ಲಾಘಿಸಿದ್ದಾರೆ.

ಮಣ್ಣು ತುಂಬಿ ರಸ್ತೆಯಲ್ಲಿದ್ದ ಗುಂಡಿ ಮುಚ್ಚಿದ ಕಾನ್ಸ್‌ಟೇಬಲ್; ಸಂಚಾರಿ ಠಾಣೆ ಪಿಸಿ ಚಂದ್ರಕಾಂತ್ ಕೆಲಸಕ್ಕೆ ಸಾರ್ವಜನಿಕರ ಮೆಚ್ಚುಗೆ
ಮಣ್ಣು ತುಂಬಿ ರಸ್ತೆಯಲ್ಲಿದ್ದ ಗುಂಡಿ ಮುಚ್ಚಿದ ಕಾನ್ಸ್‌ಟೇಬಲ್
Follow us
TV9 Web
| Updated By: preethi shettigar

Updated on: Sep 26, 2021 | 10:23 AM

ಕಲಬುರಗಿ: ರಸ್ತೆಯಲ್ಲಿದ್ದ ಗುಂಡಿಗೆ ಮಣ್ಣು ತುಂಬಿ ಮುಚ್ಚಿದ ಕಾನ್ಸ್‌ಟೇಬಲ್ ಕಾರ್ಯಕ್ಕೆ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ. ಸಂಚಾರಿ ಠಾಣೆ ಪಿಸಿ ಚಂದ್ರಕಾಂತ್ ಕಲಬುರಗಿ ನಗರದ ಆಳಂದ ಚೆಕ್‌ಪೋಸ್ಟ್‌ನಲ್ಲಿದ್ದ ಗುಂಡಿಗಳನ್ನು ಮುಚ್ಚಿದ್ದಾರೆ. ಸಂಚಾರಿ ಪೊಲೀಸ್ ಠಾಣೆ 2 ರಲ್ಲಿ ಕಾರ್ಯನಿರ್ವಹಿಸುವ ಚಂದ್ರಕಾಂತ್, ನಿನ್ನೆ (ಸೆಪ್ಟೆಂಬರ್ 25) ಸ್ವತಃ ತಾವೇ ಗುಂಡಿಗಳನ್ನು ಮುಚ್ಚಿ ವಿಭಿನ್ನ ಕಾರ್ಯಕ್ಕೆ ಪಾತ್ರರಾಗಿದ್ದಾರೆ.

ದ್ವಿಚಕ್ರ ವಾಹನ ಸವಾರರು ಈ ಗುಂಡಿಯಲ್ಲಿ ಬಿದ್ದು ಗಾಯಗೊಳ್ಳುತ್ತಿರುವುದನ್ನು ಕಂಡ ಪಿಸಿ ಚಂದ್ರಕಾಂತ್, ಇದಕ್ಕೆ ಪರಿಹಾರ ನೀಡಲು ಯೋಚಿಸಿದ್ದಾರೆ. ಹೀಗಾಗಿ ಗುಂಡಿಗಳಿಗೆ ಮಣ್ಣು ಹಾಕಿ, ಮುಚ್ಚಿದ್ದಾರೆ. ಪೊಲೀಸ್ ಕೆಲಸದಲ್ಲಿದ್ದರೂ ಸ್ವತಃ ತಾವೇ ಗುಂಡಿ ಮುಚ್ಚಿದ್ದಕ್ಕೆ ಜನರು ಶ್ಲಾಘಿಸಿದ್ದಾರೆ.

ಈ ಹಿಂದೆ ಮಂಗಳೂರಿನಲ್ಲಿಯೂ ಸಹ ಕರ್ತವ್ಯನಿರತ ಕಾನ್ಸ್​​ಟೇಬಲ್​ಗಳು ಅಪಘಾತವಾಗದಂತೆ ಸಾರ್ವಜನಿಕರ ನೆರವಿಗೆ ನಿಂತಿದ್ದಾರೆ.

ಮಂಗಳೂರು: ಅವಘಡ ಸಂಭವಿಸದಂತೆ ಎಚ್ಚರವಹಿಸಿ ರಸ್ತೆಯಲ್ಲಿ ಬಿದ್ದಿದ್ದ ಆಯಿಲ್​ಗೆ ಮರಳು ಹಾಕಿದ ಕಾನ್ಸ್​ಟೇಬಲ್​ ಪೊಲೀಸರು ಕೇವಲ ತಮಗೆ ವಹಿಸಿದ ಕರ್ತವ್ಯವನ್ನು ಸರಿಯಾಗಿ ಮಾಡುತ್ತಾರೆ ಎಂಬ  ವಿಚಾರಗಳನ್ನು ನಾವು ಪ್ರತಿನಿತ್ಯ ನೋಡುತ್ತಿರುತ್ತೇವೆ. ಆದರೆ ಮಂಗಳೂರಿನ ಈ ಪೊಲೀಸರಿಬ್ಬರು ತಮ್ಮ ಕರ್ತವ್ಯದ ನಡುವೆಯೂ ಸಮಯಪ್ರಜ್ಞೆಯನ್ನು ಮೆರೆದಿದ್ದಾರೆ. ಮಂಗಳೂರು ನಗರ ಪೊಲೀಸ್ ವ್ಯಾಪ್ತಿಯ ಉತ್ತರ ಪೊಲೀಸ್ ಠಾಣೆಯ ಇಬ್ಬರು ಪೊಲೀಸ್ ಕಾನ್ಸ್​ಟೇಬಲ್​ಗಳು ಸಾಮಾಜಿಕ ಕಳಕಳಿ ಮೆರೆದು ಈಗ ಪೊಲೀಸ್ ಹಿರಿಯ ಅಧಿಕಾರಿಗಳಿಂದ ಪ್ರಶಂಸೆಗೆ ಪಾತ್ರರಾಗಿದ್ದಾರೆ.

ಮಂಗಳೂರಿನ ಪಿವಿಎಸ್ ಸರ್ಕಲ್ ಬಳಿ ಪೊಲೀಸ್ ಕಾನ್ಸ್​ಟೇಬಲ್​ಗಳಾದ ಶಂಕರ್ ಮತ್ತು ಸತೀಶ್ ಹೋಗುತ್ತಿದ್ದರು. ಈ ವೇಳೆ ಸರ್ಕಲ್​ನಲ್ಲಿ ಇಂಜಿನ್ ಆಯಿಲ್ ಚೆಲ್ಲಿ ಎರಡು ಮೂರು ಬೈಕ್​ಗಳು ಸ್ಕಿಡ್ ಆಗಿ ಬಿದ್ದುದನ್ನು ಗಮನಿಸಿದ್ದಾರೆ‌. ಮುಂದಿನ ಅಪಾಯವನ್ನು ಅರಿತ ಪೊಲೀಸ್ ಕಾನ್ಸ್​ಟೇಬಲ್​ಗಳಿಬ್ಬರು ಅಲ್ಲಿಗೆ ಮರಳನ್ನು ತರಿಸಿ ಹಾಕಿ ಅದನ್ನು ಗುಡಿಸಿ ಆಯಿಲ್ ಹೋಗುವಂತೆ ಮಾಡಿದ್ದಾರೆ‌‌.

ಪೊಲೀಸ್ ಕಮಿಷನರ್​ನಿಂದ ಮೆಚ್ಚುಗೆ‌! ಇವರ ಈ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್. ಕುಮಾರ್ ಅವರು ಪೊಲೀಸ್ ಕಾನ್ಸ್​ಟೇಬಲ್​ಗಳ ಈ ಕಾರ್ಯಕ್ಕೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಪೊಲೀಸ್ ಸಿಬ್ಬಂದಿಗಳಾದ ಶಂಕರ್ ಮತ್ತು ಸತೀಶ್ ರನ್ನು ತಮ್ಮ ಕಚೇರಿಗೆ ಕರೆಸಿ ಡಿಸಿಪಿ, ಎಸಿಪಿ ಸೇರಿದಂತೆ ತಮ್ಮ ಸಿಬ್ಬಂದಿಗಳ ಸಮ್ಮುಖದಲ್ಲಿ ಶಾಲು ಹೊದಿಸಿ, ಹಾರ ಹಾಕಿ ಸನ್ಮಾನ ಮಾಡಿದ್ದಾರೆ.

ಇದನ್ನೂ ಓದಿ: ಅವಘಡ ಸಂಭವಿಸದಂತೆ ಎಚ್ಚರವಹಿಸಿ ರಸ್ತೆಯಲ್ಲಿ ಬಿದ್ದಿದ್ದ ಆಯಿಲ್​ಗೆ ಮರಳು ಹಾಕಿದ ಕನ್ಸ್​ಟೇಬಲ್ಸ್​​; ಪೊಲೀಸ್ ಕಮಿಷನರ್​ನಿಂದ ಮೆಚ್ಚುಗೆ‌​

ಕಾನ್ಸ್‌ಟೇಬಲ್‌ಗೆ ಪೇಟ ತೊಡಿಸಿ ಸನ್ಮಾನ; ಶಿವು ಉತ್ತಮ ಕಾರ್ಯಕ್ಕೆ ನಗರ ಪೊಲೀಸ್ ಆಯುಕ್ತ ಪಂತ್ ಶ್ಲಾಘನೆ

ಜಾತಿಗಣತಿ ವರದಿ ಜಾರಿ ವಿಚಾರ: ಸ್ವಪಕ್ಷದ ವಿರುದ್ಧ ಶಾಮನೂರು ವಾಗ್ದಾಳಿ
ಜಾತಿಗಣತಿ ವರದಿ ಜಾರಿ ವಿಚಾರ: ಸ್ವಪಕ್ಷದ ವಿರುದ್ಧ ಶಾಮನೂರು ವಾಗ್ದಾಳಿ
28 ಸೆಕೆಂಡಲ್ಲಿ 20 ಹೊಡೆತ; ಉತ್ತರಾಖಂಡದ ಮೆಡಿಕಲ್ ಶಾಪ್ ಮಾಲೀಕರ ಮೇಲೆ ಹಲ್ಲೆ
28 ಸೆಕೆಂಡಲ್ಲಿ 20 ಹೊಡೆತ; ಉತ್ತರಾಖಂಡದ ಮೆಡಿಕಲ್ ಶಾಪ್ ಮಾಲೀಕರ ಮೇಲೆ ಹಲ್ಲೆ
ಕಾಮಿಡಿ ಶೋಗಳಲ್ಲಿ ಅಡಲ್ಟ್ ಭಾಷೆ ಯಾಕೆ? ಸಮರ್ಥನೆ ನೀಡಿದ ನಿರೂಪ್, ಶ್ರವಣ್
ಕಾಮಿಡಿ ಶೋಗಳಲ್ಲಿ ಅಡಲ್ಟ್ ಭಾಷೆ ಯಾಕೆ? ಸಮರ್ಥನೆ ನೀಡಿದ ನಿರೂಪ್, ಶ್ರವಣ್
ಸಿದ್ದರಾಮಯ್ಯ ದಲಿತರ ಕೈ ಬಿಟ್ಟು ಮುಸಲ್ಮಾನರ ಕೈ ಹಿಡಿದಿದ್ದಾರೆ: ಅಶೋಕ
ಸಿದ್ದರಾಮಯ್ಯ ದಲಿತರ ಕೈ ಬಿಟ್ಟು ಮುಸಲ್ಮಾನರ ಕೈ ಹಿಡಿದಿದ್ದಾರೆ: ಅಶೋಕ
ಸ್ಟ್ಯಾಂಡಪ್ ಕಾಮಿಡಿಯನ್ ನಿರೂಪ್ ಮೋಹನ್ ಬಗ್ಗೆ ನಿಮಗೆಷ್ಟು ಗೊತ್ತು?
ಸ್ಟ್ಯಾಂಡಪ್ ಕಾಮಿಡಿಯನ್ ನಿರೂಪ್ ಮೋಹನ್ ಬಗ್ಗೆ ನಿಮಗೆಷ್ಟು ಗೊತ್ತು?
ಮತೀಯ ಭಾವನೆಗಳನ್ನು ಯಾರೂ ಕೆರಳಿಸಬಾರದು: ಕೋಲಾರ ಮಸೀದಿಯೊಂದರ ಮೌಲ್ವಿ
ಮತೀಯ ಭಾವನೆಗಳನ್ನು ಯಾರೂ ಕೆರಳಿಸಬಾರದು: ಕೋಲಾರ ಮಸೀದಿಯೊಂದರ ಮೌಲ್ವಿ
ವರದಿ ಮೇಲಿನ ಚರ್ಚೆಗೆ ಸಿಎಂ ವಿಶೇಷ ಅಧಿವೇಶನ ಕರೆಯಲು ಮನವಿ: ಜಾರಕಿಹೊಳಿ
ವರದಿ ಮೇಲಿನ ಚರ್ಚೆಗೆ ಸಿಎಂ ವಿಶೇಷ ಅಧಿವೇಶನ ಕರೆಯಲು ಮನವಿ: ಜಾರಕಿಹೊಳಿ
ಮಧ್ಯಂತರ ವರದಿಯನ್ನು ಅಧಿಕಾರಿಗಳು ಅಂತಿಮ ವರದಿ ಅಂದಿದ್ದಾರೆ: ಸ್ನೇಹಮಯಿ
ಮಧ್ಯಂತರ ವರದಿಯನ್ನು ಅಧಿಕಾರಿಗಳು ಅಂತಿಮ ವರದಿ ಅಂದಿದ್ದಾರೆ: ಸ್ನೇಹಮಯಿ
ಬನಶಂಕರಿ ದೇವಿ ಸನ್ನಿಧಿಯಲ್ಲಿ ಪವಿತ್ರಾ ಗೌಡ, ಇಲ್ಲಿದೆ ವಿಡಿಯೋ
ಬನಶಂಕರಿ ದೇವಿ ಸನ್ನಿಧಿಯಲ್ಲಿ ಪವಿತ್ರಾ ಗೌಡ, ಇಲ್ಲಿದೆ ವಿಡಿಯೋ
ಜಾತಿ ಗಣತಿ ಬೇಸಿಕ್ ಡಾಟಾ ಒದಗಿಸಿದೆ, ಆದರ ಆಧಾರದ ಮೇಲೆ ತೀರ್ಮಾನಗಳು: ಸಚಿವ
ಜಾತಿ ಗಣತಿ ಬೇಸಿಕ್ ಡಾಟಾ ಒದಗಿಸಿದೆ, ಆದರ ಆಧಾರದ ಮೇಲೆ ತೀರ್ಮಾನಗಳು: ಸಚಿವ