AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕಲಬುರಗಿ ಕಾನ್ಸ್​ಟೇಬಲ್​!

ಅಬ್ದುಲ್ ಮುಸ್ತಫಾ ಈ ವೇಳೆ ಠಾಣೆಗೆ ಕರೆಯಿಸಿ ಹಣ ನೀಡುವುದಾಗಿ ಬೇಡಿಕೆ ಇಟ್ಟಿದ್ದರು. ಈ ಹಿನ್ನೆಲೆ ಅಬ್ದುಲ್ ಮುಸ್ತಾಫಾ ಎಸಿಬಿಗೆ ದೂರು ನೀಡಿದ್ದರು.

ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕಲಬುರಗಿ ಕಾನ್ಸ್​ಟೇಬಲ್​!
ಕಾನ್ಸ್​ಟೇಬಲ್ ಭೀಮು ನಾಯ್ಕ್
TV9 Web
| Edited By: sandhya thejappa|

Updated on:Jun 10, 2022 | 4:38 PM

Share

ಕಲಬುರಗಿ: ಮೂವತ್ತು ಸಾವಿರ ಲಂಚ (Bribery) ಪಡೆಯುವಾಗ ಕಲಬುರಗಿ ನಗರದ ಬ್ರಹ್ಮಪುರ ಠಾಣೆ ಕಾನ್ಸ್​​ಟೇಬಲ್ ರೆಡ್ ಹ್ಯಾಂಡ್ (Red Hand) ಆಗಿ ಸಿಕ್ಕಿಬಿದ್ದಿದ್ದಾರೆ. ಭೀಮು ನಾಯ್ಕ್ ಎಸಿಬಿ ಬಲೆಗೆ ಬಿದ್ದ ಪೊಲೀಸ್ ಕಾನ್ಸ್​​ಟೇಬಲ್. ಅಬ್ದುಲ್ ಮುಸ್ತಫಾ ಅನ್ನೋರ ವಿರುದ್ಧ ಸೈಟ್ ವಿಚಾರವಾಗಿ ಕೆಲವರು ದೂರು ನೀಡಿದ್ದರು. ಅಬ್ದುಲ್ ಮುಸ್ತಫಾ ಈ ವೇಳೆ ಠಾಣೆಗೆ ಕರೆಯಿಸಿ ಹಣ ನೀಡುವುದಾಗಿ ಬೇಡಿಕೆ ಇಟ್ಟಿದ್ದರು. ಈ ಹಿನ್ನೆಲೆ ಅಬ್ದುಲ್ ಮುಸ್ತಾಫಾ ಎಸಿಬಿಗೆ ದೂರು ನೀಡಿದ್ದರು. ದೂರಿನನ್ವಯ ಎಸಿಬಿ ಅಧಿಕಾರಿಗಳು ಹಣ ಪಡೆಯುವಾಗ ರೆಂಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ.

ಭೀಮು ನಾಯ್ಕ್ ಅಬ್ದುಲ್ ಮುಸ್ತಾಫಾ ಅವರಿಗೆ ಒಂದು ಲಕ್ಷ ಹಣ ನೀಡುವಂತೆ ಬೇಡಿಕೆ ಇಟ್ಟಿದ್ದರಂತೆ. ನಿನ್ನೆ ರಾತ್ರಿ ಕಲಬುರಗಿ ನಗರದ ರೈಲ್ವೆ ನಿಲ್ದಾಣದ ಹೋಟೆಲ್ ಬಳಿ ಮೂವತ್ತು ಸಾವಿರ ಪಡೆಯುತ್ತಿದ್ದಂತೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ, ಕಾನ್ಸ್​​ಟೇಬಲ್ ಭೀಮು ನಾಯ್ಕ್​ನನ್ನು ಬಂಧಿಸಿದ್ದಾರೆ.

ಮಾದಕ ವಸ್ತು ಮನೆಯಲ್ಲಿಟ್ಟಿದ್ದ ಆರೋಪಿ ಬಂಧನ: ಬೆಂಗಳೂರು: ಕೆಜಿಗಟ್ಟಲೆ ಮಾದಕ ವಸ್ತುಗಳನ್ನ ಮನೆಯಲ್ಲಿಟ್ಟಿದ್ದ ಆರೋಪಿಗಳನ್ನ ಯಲಹಂಕ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಆಫ್ರಿಕಾ ಮೂಲದ ಜಾನ್ ಅಬ್ರಹಾಂ ಬಂಧಿತ ಆರೋಪಿ. ಬಂಧಿತನಿಂದ 1.4 ಕೆಜಿ MDMA, 6 ಕೆಜಿ ಗಾಂಜಾ, ಏಳು ಮೊಬೈಲ್ ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ
Image
Amarnath Yatra 2022 Registration: ಜೂನ್ 30 ರಂದು ಅಮರನಾಥ ಯಾತ್ರೆ ಆರಂಭ; ಟಿಕೆಟ್ ಬುಕ್ ಮಾಡುವುದು ಹೇಗೆ? ಇಲ್ಲಿದೆ ಮಾಹಿತಿ
Image
ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಇಂತಹ ಪ್ರಶ್ನೆಗಳನ್ನು ಕೇಳ್ತಾರಾ? ಯೋಚಿಸಿ ಉತ್ತರಿಸಿ
Image
ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕಲಬುರಗಿ ಕಾನ್ಸ್​ಟೇಬಲ್​!
Image
ಕ್ಷೇತ್ರಕ್ಕೆ ಘನತೆ ಮತ್ತು ಗೌರವ ತಂದುಕೊಟ್ಟಿರುವ ಪಕ್ಷದ ಅಭ್ಯರ್ಥಿಗೆ ವೋಟು ನೀಡಿದ್ದೇನೆ: ಶರತ್ ಬಚ್ಚಗೌಡ, ಪಕ್ಷೇತರ ಶಾಸಕ

ಇದನ್ನೂ ಓದಿ: Amarnath Yatra 2022 Registration: ಜೂನ್ 30 ರಂದು ಅಮರನಾಥ ಯಾತ್ರೆ ಆರಂಭ; ಟಿಕೆಟ್ ಬುಕ್ ಮಾಡುವುದು ಹೇಗೆ? ಇಲ್ಲಿದೆ ಮಾಹಿತಿ

ಅಪ್ರಾಪ್ತ ಬಾಲಕರು ಪೊಲೀಸರ ವಶಕ್ಕೆ: ಬೈಕ್ ಕಳ್ಳತನ ಮಾಡುತ್ತಿದ್ದ ಅಪ್ರಾಪ್ತ ಬಾಲಕರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಪ್ರಾಪ್ತರು ಮಾಗಡಿ ರಸ್ತೆ, ವಿಜಯನಗರ, ಸಿಟಿ ಮಾರ್ಕೆಟ್, ಅಶೋಕನಗರ, ಸಿ.ಕೆ ಅಚ್ಚುಕಟ್ಟು ಠಾಣಾ ವ್ಯಾಪ್ತಿಯಲ್ಲಿ ಬೈಕ್ ಕಳ್ಳತನ ಮಾಡಿದ್ದರು. ಬಾಲಕರಿಂದ 5 ಲಕ್ಷ ರೂ. ಮೌಲ್ಯದ 8 ದ್ವಿಚಕ್ರ ವಾಹನ ಜಪ್ತಿ ಮಾಡಲಾಗಿದೆ. ಸದ್ಯ ಈ ಪ್ರಕರಣ ಮಾಗಡಿ ರಸ್ತೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:19 pm, Fri, 10 June 22

Follow Us
TV9 Web
TV9 Web

TV9 Kannada

Read More
ಧಾರವಾಡದಲ್ಲಿ ಜೈಲರ್ ಆತ್ಮಹತ್ಯೆ: ಅಲೋಕ್ ಕುಮಾರ್ ವಿರುದ್ಧ ಗಂಭೀರ ಆರೋಪ
ಧಾರವಾಡದಲ್ಲಿ ಜೈಲರ್ ಆತ್ಮಹತ್ಯೆ: ಅಲೋಕ್ ಕುಮಾರ್ ವಿರುದ್ಧ ಗಂಭೀರ ಆರೋಪ
ಬೆಂಗಳೂರಿನಲ್ಲಿ ಭಾರಿ ಮಳೆ: ದ್ವಿಚಕ್ರ ವಾಹನ ಸವಾರರ ಪರದಾಟ
ಬೆಂಗಳೂರಿನಲ್ಲಿ ಭಾರಿ ಮಳೆ: ದ್ವಿಚಕ್ರ ವಾಹನ ಸವಾರರ ಪರದಾಟ
ಕೆ-ಸಿಇಟಿಯಲ್ಲಿ ವಿಜಯಪುರದ ವಿದ್ಯಾರ್ಥಿಗೆ ಟಾಪ್ 1ಕ್ಕಿಂತ ದೊಡ್ಡ ರ್ಯಾಂಕ್
ಕೆ-ಸಿಇಟಿಯಲ್ಲಿ ವಿಜಯಪುರದ ವಿದ್ಯಾರ್ಥಿಗೆ ಟಾಪ್ 1ಕ್ಕಿಂತ ದೊಡ್ಡ ರ್ಯಾಂಕ್
ಕೊಲ್ಲೂರು ಮೂಕಾಂಬಿಕಾ ದೇವಾಲಯದಲ್ಲಿ ವಿಜಯ್ ಮಾಡಿಸಿದ ಪೂಜೆ ಯಾವುದು?
ಕೊಲ್ಲೂರು ಮೂಕಾಂಬಿಕಾ ದೇವಾಲಯದಲ್ಲಿ ವಿಜಯ್ ಮಾಡಿಸಿದ ಪೂಜೆ ಯಾವುದು?
ಮೂಕಾಂಬಿಕಾ ದೇವಿಗೆ ಬೆಳ್ಳಿಯ ಖಡ್ಗ ಸಮರ್ಪಿಸಿದ ತಮಿಳುನಾಡು ಸಿಎಂ ವಿಜಯ್
ಮೂಕಾಂಬಿಕಾ ದೇವಿಗೆ ಬೆಳ್ಳಿಯ ಖಡ್ಗ ಸಮರ್ಪಿಸಿದ ತಮಿಳುನಾಡು ಸಿಎಂ ವಿಜಯ್
ನಸೀರ್ ಅಹ್ಮದ್‌ ‘ದಿವಾಳಿ’ ಎಂದು ಘೋಷಿಸಿದ NCLT: MLC ಸ್ಥಾನಕ್ಕೂ ಕುತ್ತು!
ನಸೀರ್ ಅಹ್ಮದ್‌ ‘ದಿವಾಳಿ’ ಎಂದು ಘೋಷಿಸಿದ NCLT: MLC ಸ್ಥಾನಕ್ಕೂ ಕುತ್ತು!
ಮೂಕಾಂಬಿಕೆಯ ಮಹಿಮೆ, ದೇವಿ ಶಕ್ತಿ ಬಗ್ಗೆ ಆಧ್ಯಾತ್ಮಕ ಚಿಂತಕ ಹೇಳಿದ್ದಿಷ್ಟು
ಮೂಕಾಂಬಿಕೆಯ ಮಹಿಮೆ, ದೇವಿ ಶಕ್ತಿ ಬಗ್ಗೆ ಆಧ್ಯಾತ್ಮಕ ಚಿಂತಕ ಹೇಳಿದ್ದಿಷ್ಟು
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ತಮಿಳುನಾಡು ಸಿಎಂ ವಿಜಯ್​
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ತಮಿಳುನಾಡು ಸಿಎಂ ವಿಜಯ್​
ನೀವೇ ಸಿಎಂ ಆಗಿ ಎಂದಾಗಲೂ ಆಗಿಲ್ಲವಲ್ಲ: ಹೆಚ್​.ಡಿ.ಕುಮಾರಸ್ವಾಮಿ ಟಾಂಗ್
ನೀವೇ ಸಿಎಂ ಆಗಿ ಎಂದಾಗಲೂ ಆಗಿಲ್ಲವಲ್ಲ: ಹೆಚ್​.ಡಿ.ಕುಮಾರಸ್ವಾಮಿ ಟಾಂಗ್
ಪ್ರಕಾಶ್ ರಾಜ್ ವಿರುದ್ಧ ಬೆಳಗಾವಿಯಲ್ಲಿ ಶ್ರೀರಾಮ ಸೇನೆ ಪ್ರತಿಭಟನೆ
ಪ್ರಕಾಶ್ ರಾಜ್ ವಿರುದ್ಧ ಬೆಳಗಾವಿಯಲ್ಲಿ ಶ್ರೀರಾಮ ಸೇನೆ ಪ್ರತಿಭಟನೆ