AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಕಲಿ ​ಪಿಸ್ತೂಲ್ ಹಿಡಿದು ಹುಚ್ಚುಚ್ಚು ರೀಲ್ಸ್; ಇಬ್ಬರು ಯುವಕರ ವಿರುದ್ಧ ದಾಖಲಾಯ್ತು ಎಫ್‌ಐಆರ್

ಯುವಕರೇ ಸೋಷಿಯಲ್ ಮೀಡಿಯಾದಲ್ಲಿ ಹುಚ್ಚುಚ್ಚು  ರೀಲ್ಸ್​ಗಳನ್ನ ಮಾಡುವ ಮುನ್ನ ತಪ್ಪದೇ ಈ ಸ್ಟೋರಿ ಓದಿ. ಅಷ್ಟಕ್ಕೂ ಇಲ್ಲಿ ಇಬ್ಬರು ಯುವಕರು ನಕಲಿ ಗನ್ ಹಿಡಿದು ಸಾಮಾಜಿಕ ಜಾಲತಾಣದಲ್ಲಿ ಹವಾ ಮೆಂಟೈನ್ ಮಾಡುವುದಕ್ಕೆ ಹೋಗಿ ಯುವಕರ ಪಿಸ್ತೂಲ್ ಶೋಕಿ ಪೊಲೀಸ್ ಠಾಣೆ ಮೆಟ್ಟಿಲು ಹತ್ತಿದಂತಹ ಘಟನೆ ನಡೆದಿದೆ. 

ನಕಲಿ ​ಪಿಸ್ತೂಲ್ ಹಿಡಿದು ಹುಚ್ಚುಚ್ಚು ರೀಲ್ಸ್; ಇಬ್ಬರು ಯುವಕರ ವಿರುದ್ಧ ದಾಖಲಾಯ್ತು ಎಫ್‌ಐಆರ್
ಬಂಧಿತ ಯುವಕರು
ದತ್ತಾತ್ರೇಯ ಪಾಟೀಲ, ಕಲಬುರಗಿ
| Edited By: ಕಿರಣ್ ಹನುಮಂತ್​ ಮಾದಾರ್|

Updated on: Mar 29, 2024 | 7:36 PM

Share

ಕಲಬುರಗಿ, ಮಾ.29: ಜಿಲ್ಲೆಯ ಸೇಡಂ(Sedam) ಪಟ್ಟಣದ ಮೂಲದವರಾದ ಮಹೇಶ್ ಮತ್ತು ಬಸವರಾಜ್ ಎಂಬ ಯುವಕರು ಸೇರಿಕೊಂಡು ನಕಲಿ ಪಿಸ್ತೂಲ್ ಹಿಡಿದು ರೀಲ್ಸ್(Reels) ಜೊತೆಗೆ ಫೋಟೋ ಶೂಟ್​ ಮಾಡಿ ಫೆಸ್‌ಬುಕ್ ಹಾಗೂ ಇನ್ಸ್ಟಾಗ್ರಾಂನಲ್ಲಿ ಹವಾ ಮೆಂಟೈನ್ ಮಾಡಲು ಪೋಸ್ಟ್ ಮಾಡಿದ್ದಾರೆ. ಪಿಸ್ತೂಲ್ ಹಿಡಿದು ರೀಲ್ಸ್ ಮಾಡಿದ ವಿಡಿಯೋಗಳನ್ನ ನೋಡಿದ ಸಾರ್ವಜನಿಕರು, ಯುವಕರ ಹುಚ್ಚಾಟ ಕಂಡು ಅಕ್ಷರಶಃ ಬೆಚ್ಚಿಬಿದ್ದಿದ್ದರು. ಇದನ್ನ ನೋಡಿದ ಪೊಲೀಸರು, ರೀಲ್ಸ್ ಮಾಡಿದ ಮಹೇಶ್ ಮತ್ತು ಬಸವರಾಜ್ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.

ಇನ್ನೂ ಸೇಡಂ ಪಟ್ಟಣದ ಇಂದಿರಾನಗರ ಬಡಾವಣೆಯ ನಿವಾಸಿಗಳಾದ ಮಹೇಶ್ ಮತ್ತು ಬಸವರಾಜ್ ಕಾಲೇಜು ಮುಗಿಸಿ, ಕೆಲಸ ಹುಡುಕದೇ ಬಿಡಾಡಿ ಥರ ಓಡಾಡಿಕೊಂಡು ಶೋಕಿ ಜೀವನ ಸಾಗಿಸುತ್ತಿದ್ದರು. ಇದೀಗ ಸೋಷಿಯಲ್ ಮಿಡಿಯಾದಲ್ಲಿ ಸೆನ್ಸೆಷನ್ ಕ್ರಿಯೆಟ್ ಮಾಡಲು ಹೋಗಿದ್ದ ಈ ಯುವಕರನ್ನ ಠಾಣೆಗೆ ಕರೆಯಿಸಿ ಪೊಲೀಸರು ಸಖತ್ ಕ್ಲಾಸ್ ತೆಗೆದುಕೊಂಡಿದ್ದಾರೆ. ಅಲ್ಲದೇ ಇಬ್ಬರು ಯುವಕರ ವಿರುದ್ಧ ಎಫ್‌ಐಆರ್ ದಾಖಲಿಸಿ ಮುಂದೆ ಈ ರೀತಿಯಲ್ಲಿ ಹುಚ್ಚುಚ್ಚು ರೀಲ್ಸ್ ಮಾಡಿದ್ರೆ ಜೈಲೂಟ ಗ್ಯಾರಂಟಿ ಎಂದು ಖಡಕ್ ಆಗಿ ವಾರ್ನ್ ಮಾಡಿ ಕಳುಹಿಸಿದ್ದಾರೆ.

ಇದನ್ನೂ ಓದಿ:ಕಲಬುರಗಿ: ಪಿಯು ಪರೀಕ್ಷೆಯಲ್ಲಿ ತಂಗಿಗೆ ನಕಲು ಮಾಡಲು ಬಿಡದ ಪೊಲೀಸ್ ಮೇಲೆ ಅಣ್ಣನಿಂದ ಹಲ್ಲೆ

ಅದೆನೇ ಇರಲಿ ಇತ್ತೀಚೆಗೆ ಯುವಕರು ಶೋಕಿ ಜೀವನಕ್ಕೆ ದಾಸರಾಗಿ ಸೋಷಿಯಲ್ ಮೀಡಿಯಾದಲ್ಲಿ ಹವಾ ಮೆಂಟೈನ್ ಮಾಡಲು ರೀಲ್ಸ್‌ಗಳನ್ನ ಮಾಡುತ್ತಿರುವುದು ದುರಂತವೇ ಸರಿ. ಇನ್ನಾದರೂ‌ ಯುವ ಪಿಳಿಗೆ ಇಂತಹ ದುಷ್ಕೃತ್ಯಗಳಿಗೆ ಬಲಿಯಾಗದಿರಲಿ ಎನ್ನುವುದೇ ನಮ್ಮ ಆಶಯ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Dattatraya Patil
Dattatraya Patil

ಮೂಲತಃ ಕಲಬುರಗಿ ಜಿಲ್ಲೆಯವರಾದ ದತ್ತಾತ್ರೇಯ ಪಾಟೀಲ್ ಸಧ್ಯ ಟಿರ್ವಿ ಕನ್ನಡ ವಾಹಿನಿಯ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಕಳೆದ 9 ವರ್ಷಗಳಿಂದ ಟಿರ್ವಿ ಸಂಸ್ಥೆಯಲ್ಲಿ ಕೆಲಸ‌ ಮಾಡುತ್ತಿದ್ದು ಜ,2015 ರಿಂದ 22 ರವೆಗೆ ಹುಬ್ಬಳ್ಳಿಯ ವರದಿಗಾರಾಗಿ, ಕಳೆದೊಂದು ವರ್ಷ ಕೊಪ್ಪಳ ಸಧ್ಯ ಮೂರು ತಿಂಗಳಿಮದ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದು, ಕೊರೊನಾ ಸಮಯದಲ್ಲಿ ವೈದ್ಯರ ಕಳ್ಳಾಟದ ಮಾಡಿದ ರಹಸ್ಯ ಕಾರ್ಯಚರಣೆ.ಆಪರೇಷನ್ ಕಮಲದ ಕುರಿತು ಸ್ಪೋಟಕ ಬಿಎಸ್ ವೈ ವಿಡಿಯೋ ದ ಎಕ್ಸಕ್ಲೂಸಿವ್ ವರದಿಯ ಜೊತೆಗೆ ರಾಜಕೀಯ ವರದಿಗಾರಿಕೆಯಲ್ಲಿಯೂ ಆಸಕ್ತಿ ಹೊಂದಿದ್ದು, ಬಿಡುವಿನ ಸಮಯದಲ್ಲಿ ಪುಸ್ತಕ ಓದುವುದು,ಪ್ರೇಕ್ಷಣೀಯ ಹಾಗೂ ಐತಿಹಾಸಿಕ ಸ್ಥಳಗಳ ಪ್ರವಾಸ,ಮತ್ತು ಟ್ರೆಕ್ಕಿಂಗ್ ಹವ್ಯಾಸ ರೂಢಿಸಿಕೊಂಡಿದ್ದಾರೆ.

Read More
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ