AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿ: ಸಹೋದರಿ ಮೇಲೆ ಕಣ್ಣು ಹಾಕಿದ್ದವನ ಕಾಲು ಮುರಿದಿದ್ದ ಸಹೋದರನ ಕೊಲೆ

ತನ್ನ ಸಹೋದರಿ ಹಿಂದೆ ಬಿದ್ದಿದ್ದ ವ್ಯಕ್ತಿಯ ಕಾಲನ್ನು ಸಹೋದರ ಮುರಿದಿದ್ದನು. ಆದರೆ ಈ ವಿಚಾರವಾಗಿ ದ್ವೇಷ ಬೆಳೆಸಿದ್ದ ಕಾಲು ಮುರಿತಕ್ಕೊಳಗಾಗಿದ್ದ ವ್ಯಕ್ತಿ ತನ್ನ ಸಹಚರನೊಂದಿಗೆ ಸೇರಿಕೊಂಡು ಮಹಿಳೆಯ ಸಹೋದರನನ್ನ ಕೊಲೆ ಮಾಡಿದ್ದಾನೆ. ಈ ಘಟನೆ ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಚೌಡಾಪುರ ಗ್ರಾಮದಲ್ಲಿ ಭಾನುವಾರ (ಜುಲೈ 30) ನಡೆದಿದೆ.

ಕಲಬುರಗಿ: ಸಹೋದರಿ ಮೇಲೆ ಕಣ್ಣು ಹಾಕಿದ್ದವನ ಕಾಲು ಮುರಿದಿದ್ದ ಸಹೋದರನ ಕೊಲೆ
ಕೊಲೆಯಾದ ಮಹಾಂತಪ್ಪ ಮತ್ತು ಕೊಲೆ ಆರೋಪಿಗಳಾದ ಪ್ರಶಾಂತ್, ದಶರಥ್
ಸಂಜಯ್ಯಾ ಚಿಕ್ಕಮಠ
| Edited By: Rakesh Nayak Manchi|

Updated on: Jul 31, 2023 | 3:52 PM

Share

ಕಲಬುರಗಿ, ಜುಲೈ 31: ಅನೈತಿಕ ಸಂಬಂಧ ಬೆಳೆಸುವಂತೆ ತನ್ನ ಸಹೋದರಿಗೆ ಒತ್ತಾಯಿಸುತ್ತಿದ್ದ ವ್ಯಕ್ತಿಯ ಕಾಲನ್ನು ಮುರಿದಿದ್ದ ಸಹೋದರನೇ ಇದೀಗ ಕೊಲೆಯಾಗಿದ್ದಾನೆ. ಅಫಜಲಪುರ ತಾಲೂಕಿನ ಚೌಡಾಪುರ ಗ್ರಾಮದಲ್ಲಿ ಭಾನುವಾರ (ಜುಲೈ 30) ರಾತ್ರಿ ಮಾರಕಾಸ್ತ್ರದಿಂದ ಹಲ್ಲೆ ನಡೆಸಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಮಹಾಂತಪ್ಪ ಗಂಡೋಳಿ (26) ಎಂಬವರನ್ನು ಕೊಲೆ (Murder) ಮಾಡಲಾಗಿದೆ.

ನಿನ್ನೆ ರಾತ್ರಿ ತನ್ನ ಸಂಬಂಧಿ ಜೊತೆ ಚೌಡಾಪುರ ಗ್ರಾಮದಲ್ಲಿರುವ ಬಾರ್ ಆಂಡ್ ರೆಸ್ಟೋರಂಟ್​ಗೆ ಹೋಗಿದ್ದ ಮಹಾಂತಪ್ಪ ಮದ್ಯ ಸೇವನೆ ಮಾಡುತ್ತಿದ್ದ. ಇದೇ ಸಂದರ್ಭದಲ್ಲಿ ಬಾರ್​ಗೆ ಬಂದಿದ್ದ ಇಬ್ಬರು ಯುವಕರು, ಮಹಾಂತಪ್ಪನ ಜೊತೆ ಜಗಳ ಆರಂಭಿಸಿದ್ದರು. ಬಾರ್​ನವರು ಹೊರಗೆ ಹೋಗಿ ಅಂತ ಹೇಳಿದ್ದಾರೆ. ಇದೇ ವೇಳೆ ತನ್ನ ಕೊಲೆಗೆ ಯತ್ನಿಸುತ್ತಿದ್ದಾರೆ ಎಂದು ಅರಿತ ಮಹಾಂತಪ್ಪ ಅಲ್ಲಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದಾರೆ.

ತಪ್ಪಿಸಿಕೊಳ್ಳುತ್ತಿದ್ದ ಮಹಾಂತಪ್ಪರನ್ನು ಬಿಡದ ಯುವಕರು ಮಾರಕಾಸ್ತ್ರದೊಂದಿಗೆ ಅಟ್ಟಾಡಿಸಿ ಹಲ್ಲೆ ನಡೆಸಿದ್ದಾರೆ. ನಂತರ ತಲೆ ಮೇಲೆ ಕಲ್ಲು ಎತ್ತಿಹಾಕಿ ಬರ್ಬರವಾಗಿ ಕೊಲೆ ಮಾಡಿ ಸ್ಥಳದಿಂದ ಪರಾರಿಯಾಗಿದ್ದಾರೆ. ಮಹಾಂತಪ್ಪರನ್ನು ಚೌಡಾಪುರ ಗ್ರಾಮದ ನಿವಾಸಿಗಳಾದ ಪ್ರಶಾಂತ್ ಮತ್ತು ದಶರಥ್ ಎಂಬವರು ಕೊಲೆ ಮಾಡಿದ್ದಾರೆ.

ಇದನ್ನೂ ಓದಿ: 10 ವರ್ಷದ ಹಿಂದಿನ ಪ್ರೇಮ ವಿವಾಹದ ಸಿಟ್ಟು: ಮೊಹರಂ ಹಬ್ಬದ ವೇಳೆ ಎರಡು ಕುಟುಂಬಗಳ ನಡುವೆ ಗಲಾಟೆ, 8 ಜನರಿಗೆ ಗಾಯ

ಕೊಲೆಯಾಗಿರುವ ಮಹಾಂತಪ್ಪನ ಸಹೋದರಿ ಸುನಿತಾಗೆ ಮದುವೆಯಾಗಿದ್ದು, ಕೆಲವು ವರ್ಷಗಳ ಹಿಂದೆ ಆಕೆಯ ಪತಿ ಮೃತಪಟ್ಟಿದ್ದಾರೆ. ತನ್ನ ಪತಿ ಸಾವಿನ ನಂತರ ಮೂವರು ಮಕ್ಕಳೊಂದಿಗೆ ಸುನಿತಾ ತವರು ಸೇರಿದ್ದರು. ಜೀವನ ಸಾಗಿಸಲು ಕೂಲಿ ಕೆಲಸ ಮಾಡಿಕೊಂಡಿದ್ದರು. ಆದರೆ ಈಕೆಯ ಮೇಲೆ ಕಣ್ಣು ಹಾಕಿದ ಆರೋಪಿ ಪ್ರಶಾಂತ್, ತನ್ನೊಂದಿಗೆ ಅನೈತಿಕ ಸಂಬಂಧ ಇಟ್ಟುಕೊಳ್ಳುವಂತೆ ಸುನಿತಾಗೆ ಪೀಡಿಸಲು ಆರಂಭಿಸಿದ್ದನು.

ಒಂದು ಬಾರಿ ಸುನಿತಾಳ ಮೇಲೆ ಅತ್ಯಾಚಾರಕ್ಕೂ ಪ್ರಶಾಂತ್ ಯತ್ನಸಿದ್ದನಂತೆ. ಎರಡು ವರ್ಷಗಳ ಹಿಂದೆ ಈ ವಿಚಾರವಾಗಿ ಮಹಾಂತಪ್ಪ, ಪ್ರಶಾಂತ್​ನನ್ನು ಹಿಡಿದು ಕಾಲು ಮುರಿದಿದ್ದನು. ಈ ಕಾರಣಕ್ಕೆ ಪ್ರಶಾಂತ್ ಮಹಾಂತಪ್ಪನ ಮೇಲೆ ದ್ವೇಷ ಬೆಳೆಸಿದ್ದನು. ಅದರಂತೆ ನಿನ್ನೆ ಮಹಾಂತಪ್ಪರನ್ನು ಪ್ರಶಾಂತ್ ಮತ್ತು ಸಹಚರ ಅಟ್ಟಾಡಿಸಿ ಕೊಲೆ ಮಾಡಿದ್ದಾರೆ.

ಕೊಲೆ ಪ್ರಕರಣ ಸಂಬಂಧ ಗಾಣಗಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳಿಬ್ಬರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಆದರೆ ಇದ್ದೊಬ್ಬ ಗಂಡು ಮಗನನ್ನು ಕಳೆದುಕೊಂಡ ಕುಟುಂಬ ಇದೀಗ ಕಂಗಾಲಾಗಿದೆ.

ಪ್ರಕರಣದ ಬಗ್ಗೆ ಮಾತನಾಡಿದ ಕಲಬುರಗಿ ಎಸ್​.ಪಿ. ಇಶಾ ಪಂತ್, ಮಹಾಂತಪ್ಪನ ಕೊಲೆಗೆ ಸಂಬಂಧಿದಂತೆ ಆರೋಪಿಗಳನ್ನು ವಶಕ್ಕೆ ಪಡೆದಿದ್ದೇವೆ. ತನ್ನ ಸಹೋದರಿ ಜೊತೆ ಕಿರಿಕ್ ಮಾಡಿದ್ದನ್ನು ಪ್ರಶ್ನಿಸಿದ್ದಕ್ಕೆ ಆರೋಪಿ, ಮಹಾಂತಪ್ಪನನ್ನು ಕೊಲೆ ಮಾಡಿದ್ದಾನೆ. ಆರೋಪಿಗಳಿಗೆ ಕಠೀಣ ಶಿಕ್ಷೆಯಾಗುವಂತೆ ನೋಡಿಕೊಳ್ಳಲಾಗುವುದು ಎಂದರು.

ಕ್ರೈಂ ಸುದ್ದಿಗಳಣ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ