AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾವನ ವಿಲ್ ಪ್ರಕಾರ ಅತ್ತೆಗೆ ಮನೆ ನೀಡದ‌ ಸೊಸೆ! ಜಿಲ್ಲಾಧಿಕಾರಿ ಕಚೇರಿಯಲ್ಲಿ ರಂಪಾಟ, ಪೊಲೀಸರಿಂದ ಅರೆಸ್ಟ್

Will: ಮಾವ ಶಿವಶರಣಪ್ಪ ಅವರು ತಮ್ಮ ಸ್ವಯಾರ್ಜಿತ ಮನೆಯನ್ನು ತಮ್ಮ ಪತ್ನಿ ಪುಷ್ಪಾವತಿ ಅವರಿಗೆ ನೀಡಬೇಕೆಂದು 2019ರಲ್ಲಿ ವಿಲ್ ಪತ್ರ ಬರೆದು 2020ರಲ್ಲಿ ನಿಧನ ಹೊಂದಿದರು. ಅದರಂತೆ ಕಲಬುರಗಿ ಸಹಾಯಕ ಆಯುಕ್ತರು 20-01-2020 ರಂದು ಆದೇಶ ನೀಡಿದ್ದರೂ ಸಪ್ನಾ ರಾಜಶೇಖರ ಮಂಗಲಗಿ ಅವರು ಮನೆಯನ್ನು ತನ್ನ ಅತ್ತೆಯಾದ ಪುಷ್ಪಾವತಿ ಅವರಿಗೆ ವಹಿಸದೇ, ಅನಧಿಕೃತವಾಗಿ ತಾವೇ ವಾಸವಾಗಿದ್ದಾರೆ.

ಮಾವನ ವಿಲ್ ಪ್ರಕಾರ ಅತ್ತೆಗೆ ಮನೆ ನೀಡದ‌ ಸೊಸೆ! ಜಿಲ್ಲಾಧಿಕಾರಿ ಕಚೇರಿಯಲ್ಲಿ ರಂಪಾಟ, ಪೊಲೀಸರಿಂದ ಅರೆಸ್ಟ್
ಕಲಬುರಗಿ ಜಿಲ್ಲಾಧಿಕಾರಿ
TV9 Web
| Edited By: |

Updated on: May 05, 2022 | 5:50 PM

Share

ಕಲಬುರಗಿ: ಪ್ರಕರಣವೊಂದರ ವಿಚಾರಣೆ ನಡೆಸದಂತೆ ಕಲಬುರಗಿ ಜಿಲ್ಲಾಧಿಕಾರಿಗಳೂ ಆದ ಜಿಲ್ಲಾ ದಂಡಾಧಿಕಾರಿಗಳಿಗೆ ನೋಟೀಸ್ ನೀಡಿದ್ದಲ್ಲದೆ, ಕಚೇರಿ ಮುಂದೆ ಅನುಚಿತವಾಗಿ ವರ್ತಿಸಿ, ರಂಪಾಟ ಮಾಡಿದ ಮಹಿಳೆಯೋರ್ವಳನ್ನು ಸ್ಟೇಷನ್‌ ಬಜಾರ್ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಸಪ್ನಾ ರಾಜಶೇಖರ ಮಂಗಲಗಿ ಪೊಲೀಸರಿಂದ ಬಂಧಿತಳಾದ ಮಹಿಳೆ. ಹಿರಿಯ ನಾಗರಿಕರ ಪಾಲನೆ, ಪೋಷಣೆ ಮತ್ತು ಅಧಿನಿಯಮ-2007ರ ಕಲಂ 16ರ ಅಡಿ ಸಲ್ಲಿಸಲಾಗಿರುವ ಮೇಲ್ಮನವಿಗೆ ಬುಧವಾರ ಮಧ್ಯಾಹ್ನ 3 ಗಂಟೆಗೆ ಜಿಲ್ಲಾ ದಂಡಾಧಿಕಾರಿಗಳ ಕಚೇರಿಯಲ್ಲಿ ನಡೆದ ವಿಚಾರಣೆಗೆ ಮಹಿಳೆ ಹಾಜರಾಗಿದ್ದರು. ಈ ಸಂದರ್ಭದಲ್ಲಿ 30 ದಿನಗಳ ಕಾಲ ಮೇಲ್ಮನವಿಯ ವಿಚಾರಣೆ ಮಾಡಬಾರದು ಹಾಗೂ ಸದರಿ ಪ್ರಕರಣವನ್ನು ಬೇರೊಂದು ಪ್ರಾಧಿಕಾರಕ್ಕೆ ವರ್ಗಾಯಿಸಬೇಕೆಂದು ಜಿಲ್ಲಾ ದಂಡಾಧಿಕಾರಿಗಳಿಗೆ ನೋಟಿಸ್ ನೀಡಿದ್ದರು. ಜೊತೆಗೆ ನನ್ನ ವಿರುದ್ಧ ತೀರ್ಪು ನೀಡುತ್ತೀರಿ ಎಂದೆಲ್ಲಾ ಸದರಿ ಮಹಿಳೆ ಕಚೇರಿ ಮುಂದೆ ರಂಪಾಟ ಮಾಡಿದ್ದರಿಂದ ಪ್ರಕರಣ ದಾಖಲಿಸಿ, ಪೊಲೀಸರ ವಶಕ್ಕೆ ಒಪ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಯಶವಂತ್ ವಿ. ಗುರುಕರ್ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಪ್ರಕರಣದ ಹಿನ್ನೆಲೆ: ತನ್ನ ಮಗ ರಾಜಶೇಖರ ಶಿವಶರಣಪ್ಪ ಮಂಗಲಗಿ ಹಾಗೂ ಆತನ ಪತ್ನಿ ಶ್ರೀಮತಿ ಸಪ್ನಾ ಅವರು ತನ್ನನ್ನು ಹಾಗೂ ತನ್ನ ಪತ್ನಿಯನ್ನು ಪೋಷಣೆ ಮಾಡುತ್ತಿಲ್ಲ ಎಂದು ಶಿವಶರಣಪ್ಪ (ತಂದೆ ಶಿವಲಿಂಗಪ್ಪ ಮಂಗಲಗಿ) ಅವರು ದೂರಿಕೊಂಡಿದ್ದಾರೆ. ಆಳಂದ ರಸ್ತೆಯ ವಿಜಯ ನಗರ ಕಾಲೋನಿಯಲ್ಲಿ ಇರುವ ಸ್ವ-ಅರ್ಜಿತ ಮನೆಯನ್ನು ಸೊಸೆ ಮತ್ತು ಮಗ ಕಬ್ಜಾ ಮಾಡಿಕೊಂಡಿದ್ದು, ತನಗೆ ವಹಿಸಿಕೊಡುವಂತೆ ಹಿರಿಯ ನಾಗರಿಕರ ನಿರ್ವಹಣಾ ಮಂಡಳಿಯ ಅಧ್ಯಕ್ಷರೂ ಆಗಿರುವ ಕಲಬುರಗಿ ಸಹಾಯಕ ಆಯುಕ್ತರು ಹಾಗೂ ಉಪ ವಿಭಾಗೀಯ ದಂಡಾಧಿಕಾರಿಗಳಿಗೆ ಅರ್ಜಿ ಸಲ್ಲಿಸಿದ್ದರು.

ಈ ನಡುವೆ ದಿನಾಂಕ: 28-12-2013 ರಂದು ಕಲಬುರಗಿ ಕುಟುಂಬ ನ್ಯಾಯಾಲಯದಲ್ಲಿ ಶ್ರೀಮತಿ ಸಪ್ನಾ ಮತ್ತು ಗಂಡ ರಾಜಶೇಖರ ಮಂಗಲಗಿ ಅವರು ವಿಚ್ಛೇದನ ಪಡೆದಿರುತ್ತಾರೆ. ಕಲಬುರಗಿ ನ್ಯಾಯಾಲಯ ವಿಚ್ಛೇದನ ನೀಡಿರುವ ಹಿನ್ನೆಲೆಯಲ್ಲಿ ಪಾಲಕರ ಪೋಷಣೆ ಹಾಗೂ ಹಿರಿಯ ನಾಗರಿಕರ ಪಾಲನೆ, ಪೋಷಣೆ ಮತ್ತು ಕಲ್ಯಾಣ ಅಧಿನಿಯಮ 2007ರ ಕಲಂ 9ರ ಅಡಿ ಕಲಬುರಗಿ ಸಹಾಯಕ ಆಯುಕ್ತರು ಹಾಗೂ ಉಪ ವಿಭಾಗೀಯ ದಂಡಾಧಿಕಾರಿಗಳು, ಅನಧಿಕೃತವಾಗಿ ಕಬ್ಜಾ ಮಾಡಿರುವ ಮನೆಯನ್ನು ಮನವಿದಾರರರಾದ ಶಿವಶರಣಪ್ಪ (ತಂದೆ ಶಿವಲಿಂಗಪ್ಪ ಮಂಗಲಗಿ) ಅವರಿಗೆ ಹಸ್ತಾಂತರಿಸುವಂತೆ ದಿನಾಂಕ: 20-01-2020 ರಂದು ಆದೇಶ ನೀಡಿದ್ದಾರೆ.

ಈ ನಡುವೆ ಶಿವಶರಣಪ್ಪ (ತಂದೆ ಶಿವಲಿಂಗಪ್ಪ ಮಂಗಲಗಿ) ಅವರು ತನ್ನ ಸ್ವ-ಅರ್ಜಿತ ಮನೆಯನ್ನು ತಮ್ಮ ಧರ್ಮಪತ್ನಿ ಪುಷ್ಪಾವತಿ ಅವರಿಗೆ ನೀಡಬೇಕೆಂದು 2019ರಲ್ಲಿ ವಿಲ್ ಪತ್ರ ಬರೆದು 2020ರಲ್ಲಿ ನಿಧನ ಹೊಂದಿದರು.

ಕಲಬುರಗಿ ಸಹಾಯಕ ಆಯುಕ್ತರು 20-01-2020 ರಂದು ಆದೇಶ ನೀಡಿದ್ದರೂ ಸಪ್ನಾ ರಾಜಶೇಖರ ಮಂಗಲಗಿ ಅವರು ಮನೆಯನ್ನು ತನ್ನ ಅತ್ತೆಯಾದ ಪುಷ್ಪಾವತಿ ಅವರಿಗೆ ವಹಿಸದೇ ಅನಧಿಕೃತವಾಗಿ ತಾನೇ ವಾಸವಾಗಿದ್ದಲ್ಲದೆ, ಕಲಬುರಗಿ ಉಪ ವಿಭಾಗೀಯ ದಂಡಾಧಿಕಾರಿಗಳು ಮತ್ತು ಸಹಾಯಕ ಆಯುಕ್ತರ ಆದೇಶದ ವಿರುದ್ಧ ಜಿಲ್ಲಾ ದಂಡಾಧಿಕಾರಿಗಳಿಗೆ ಮೇಲ್ಮನವಿ ಸಲ್ಲಿಸಿದ್ದಾರೆ.

Follow Us
Web contact
Web contact

TV9 Kannada

Read More
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ
ವನ್ಯಜೀವಿ ಛಾಯಾಗ್ರಾಹಕಿಯಾದ ಸೋನಲ್ ಮೊಂತೆರೋ
ವನ್ಯಜೀವಿ ಛಾಯಾಗ್ರಾಹಕಿಯಾದ ಸೋನಲ್ ಮೊಂತೆರೋ
ಸಂಜೆಯಾದರೆ ರಸ್ತೆಗಿಳಿಯುವ ಈ ಒಂಟಿ ಸಲಗಕ್ಕೆ ವಾಹನಗಳೇ ಟಾರ್ಗೆಟ್!
ಸಂಜೆಯಾದರೆ ರಸ್ತೆಗಿಳಿಯುವ ಈ ಒಂಟಿ ಸಲಗಕ್ಕೆ ವಾಹನಗಳೇ ಟಾರ್ಗೆಟ್!