AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾವನ ವಿಲ್ ಪ್ರಕಾರ ಅತ್ತೆಗೆ ಮನೆ ನೀಡದ‌ ಸೊಸೆ! ಜಿಲ್ಲಾಧಿಕಾರಿ ಕಚೇರಿಯಲ್ಲಿ ರಂಪಾಟ, ಪೊಲೀಸರಿಂದ ಅರೆಸ್ಟ್

Will: ಮಾವ ಶಿವಶರಣಪ್ಪ ಅವರು ತಮ್ಮ ಸ್ವಯಾರ್ಜಿತ ಮನೆಯನ್ನು ತಮ್ಮ ಪತ್ನಿ ಪುಷ್ಪಾವತಿ ಅವರಿಗೆ ನೀಡಬೇಕೆಂದು 2019ರಲ್ಲಿ ವಿಲ್ ಪತ್ರ ಬರೆದು 2020ರಲ್ಲಿ ನಿಧನ ಹೊಂದಿದರು. ಅದರಂತೆ ಕಲಬುರಗಿ ಸಹಾಯಕ ಆಯುಕ್ತರು 20-01-2020 ರಂದು ಆದೇಶ ನೀಡಿದ್ದರೂ ಸಪ್ನಾ ರಾಜಶೇಖರ ಮಂಗಲಗಿ ಅವರು ಮನೆಯನ್ನು ತನ್ನ ಅತ್ತೆಯಾದ ಪುಷ್ಪಾವತಿ ಅವರಿಗೆ ವಹಿಸದೇ, ಅನಧಿಕೃತವಾಗಿ ತಾವೇ ವಾಸವಾಗಿದ್ದಾರೆ.

ಮಾವನ ವಿಲ್ ಪ್ರಕಾರ ಅತ್ತೆಗೆ ಮನೆ ನೀಡದ‌ ಸೊಸೆ! ಜಿಲ್ಲಾಧಿಕಾರಿ ಕಚೇರಿಯಲ್ಲಿ ರಂಪಾಟ, ಪೊಲೀಸರಿಂದ ಅರೆಸ್ಟ್
ಕಲಬುರಗಿ ಜಿಲ್ಲಾಧಿಕಾರಿ
TV9 Web
| Edited By: ಸಾಧು ಶ್ರೀನಾಥ್​|

Updated on: May 05, 2022 | 5:50 PM

Share

ಕಲಬುರಗಿ: ಪ್ರಕರಣವೊಂದರ ವಿಚಾರಣೆ ನಡೆಸದಂತೆ ಕಲಬುರಗಿ ಜಿಲ್ಲಾಧಿಕಾರಿಗಳೂ ಆದ ಜಿಲ್ಲಾ ದಂಡಾಧಿಕಾರಿಗಳಿಗೆ ನೋಟೀಸ್ ನೀಡಿದ್ದಲ್ಲದೆ, ಕಚೇರಿ ಮುಂದೆ ಅನುಚಿತವಾಗಿ ವರ್ತಿಸಿ, ರಂಪಾಟ ಮಾಡಿದ ಮಹಿಳೆಯೋರ್ವಳನ್ನು ಸ್ಟೇಷನ್‌ ಬಜಾರ್ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಸಪ್ನಾ ರಾಜಶೇಖರ ಮಂಗಲಗಿ ಪೊಲೀಸರಿಂದ ಬಂಧಿತಳಾದ ಮಹಿಳೆ. ಹಿರಿಯ ನಾಗರಿಕರ ಪಾಲನೆ, ಪೋಷಣೆ ಮತ್ತು ಅಧಿನಿಯಮ-2007ರ ಕಲಂ 16ರ ಅಡಿ ಸಲ್ಲಿಸಲಾಗಿರುವ ಮೇಲ್ಮನವಿಗೆ ಬುಧವಾರ ಮಧ್ಯಾಹ್ನ 3 ಗಂಟೆಗೆ ಜಿಲ್ಲಾ ದಂಡಾಧಿಕಾರಿಗಳ ಕಚೇರಿಯಲ್ಲಿ ನಡೆದ ವಿಚಾರಣೆಗೆ ಮಹಿಳೆ ಹಾಜರಾಗಿದ್ದರು. ಈ ಸಂದರ್ಭದಲ್ಲಿ 30 ದಿನಗಳ ಕಾಲ ಮೇಲ್ಮನವಿಯ ವಿಚಾರಣೆ ಮಾಡಬಾರದು ಹಾಗೂ ಸದರಿ ಪ್ರಕರಣವನ್ನು ಬೇರೊಂದು ಪ್ರಾಧಿಕಾರಕ್ಕೆ ವರ್ಗಾಯಿಸಬೇಕೆಂದು ಜಿಲ್ಲಾ ದಂಡಾಧಿಕಾರಿಗಳಿಗೆ ನೋಟಿಸ್ ನೀಡಿದ್ದರು. ಜೊತೆಗೆ ನನ್ನ ವಿರುದ್ಧ ತೀರ್ಪು ನೀಡುತ್ತೀರಿ ಎಂದೆಲ್ಲಾ ಸದರಿ ಮಹಿಳೆ ಕಚೇರಿ ಮುಂದೆ ರಂಪಾಟ ಮಾಡಿದ್ದರಿಂದ ಪ್ರಕರಣ ದಾಖಲಿಸಿ, ಪೊಲೀಸರ ವಶಕ್ಕೆ ಒಪ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಯಶವಂತ್ ವಿ. ಗುರುಕರ್ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಪ್ರಕರಣದ ಹಿನ್ನೆಲೆ: ತನ್ನ ಮಗ ರಾಜಶೇಖರ ಶಿವಶರಣಪ್ಪ ಮಂಗಲಗಿ ಹಾಗೂ ಆತನ ಪತ್ನಿ ಶ್ರೀಮತಿ ಸಪ್ನಾ ಅವರು ತನ್ನನ್ನು ಹಾಗೂ ತನ್ನ ಪತ್ನಿಯನ್ನು ಪೋಷಣೆ ಮಾಡುತ್ತಿಲ್ಲ ಎಂದು ಶಿವಶರಣಪ್ಪ (ತಂದೆ ಶಿವಲಿಂಗಪ್ಪ ಮಂಗಲಗಿ) ಅವರು ದೂರಿಕೊಂಡಿದ್ದಾರೆ. ಆಳಂದ ರಸ್ತೆಯ ವಿಜಯ ನಗರ ಕಾಲೋನಿಯಲ್ಲಿ ಇರುವ ಸ್ವ-ಅರ್ಜಿತ ಮನೆಯನ್ನು ಸೊಸೆ ಮತ್ತು ಮಗ ಕಬ್ಜಾ ಮಾಡಿಕೊಂಡಿದ್ದು, ತನಗೆ ವಹಿಸಿಕೊಡುವಂತೆ ಹಿರಿಯ ನಾಗರಿಕರ ನಿರ್ವಹಣಾ ಮಂಡಳಿಯ ಅಧ್ಯಕ್ಷರೂ ಆಗಿರುವ ಕಲಬುರಗಿ ಸಹಾಯಕ ಆಯುಕ್ತರು ಹಾಗೂ ಉಪ ವಿಭಾಗೀಯ ದಂಡಾಧಿಕಾರಿಗಳಿಗೆ ಅರ್ಜಿ ಸಲ್ಲಿಸಿದ್ದರು.

ಈ ನಡುವೆ ದಿನಾಂಕ: 28-12-2013 ರಂದು ಕಲಬುರಗಿ ಕುಟುಂಬ ನ್ಯಾಯಾಲಯದಲ್ಲಿ ಶ್ರೀಮತಿ ಸಪ್ನಾ ಮತ್ತು ಗಂಡ ರಾಜಶೇಖರ ಮಂಗಲಗಿ ಅವರು ವಿಚ್ಛೇದನ ಪಡೆದಿರುತ್ತಾರೆ. ಕಲಬುರಗಿ ನ್ಯಾಯಾಲಯ ವಿಚ್ಛೇದನ ನೀಡಿರುವ ಹಿನ್ನೆಲೆಯಲ್ಲಿ ಪಾಲಕರ ಪೋಷಣೆ ಹಾಗೂ ಹಿರಿಯ ನಾಗರಿಕರ ಪಾಲನೆ, ಪೋಷಣೆ ಮತ್ತು ಕಲ್ಯಾಣ ಅಧಿನಿಯಮ 2007ರ ಕಲಂ 9ರ ಅಡಿ ಕಲಬುರಗಿ ಸಹಾಯಕ ಆಯುಕ್ತರು ಹಾಗೂ ಉಪ ವಿಭಾಗೀಯ ದಂಡಾಧಿಕಾರಿಗಳು, ಅನಧಿಕೃತವಾಗಿ ಕಬ್ಜಾ ಮಾಡಿರುವ ಮನೆಯನ್ನು ಮನವಿದಾರರರಾದ ಶಿವಶರಣಪ್ಪ (ತಂದೆ ಶಿವಲಿಂಗಪ್ಪ ಮಂಗಲಗಿ) ಅವರಿಗೆ ಹಸ್ತಾಂತರಿಸುವಂತೆ ದಿನಾಂಕ: 20-01-2020 ರಂದು ಆದೇಶ ನೀಡಿದ್ದಾರೆ.

ಈ ನಡುವೆ ಶಿವಶರಣಪ್ಪ (ತಂದೆ ಶಿವಲಿಂಗಪ್ಪ ಮಂಗಲಗಿ) ಅವರು ತನ್ನ ಸ್ವ-ಅರ್ಜಿತ ಮನೆಯನ್ನು ತಮ್ಮ ಧರ್ಮಪತ್ನಿ ಪುಷ್ಪಾವತಿ ಅವರಿಗೆ ನೀಡಬೇಕೆಂದು 2019ರಲ್ಲಿ ವಿಲ್ ಪತ್ರ ಬರೆದು 2020ರಲ್ಲಿ ನಿಧನ ಹೊಂದಿದರು.

ಕಲಬುರಗಿ ಸಹಾಯಕ ಆಯುಕ್ತರು 20-01-2020 ರಂದು ಆದೇಶ ನೀಡಿದ್ದರೂ ಸಪ್ನಾ ರಾಜಶೇಖರ ಮಂಗಲಗಿ ಅವರು ಮನೆಯನ್ನು ತನ್ನ ಅತ್ತೆಯಾದ ಪುಷ್ಪಾವತಿ ಅವರಿಗೆ ವಹಿಸದೇ ಅನಧಿಕೃತವಾಗಿ ತಾನೇ ವಾಸವಾಗಿದ್ದಲ್ಲದೆ, ಕಲಬುರಗಿ ಉಪ ವಿಭಾಗೀಯ ದಂಡಾಧಿಕಾರಿಗಳು ಮತ್ತು ಸಹಾಯಕ ಆಯುಕ್ತರ ಆದೇಶದ ವಿರುದ್ಧ ಜಿಲ್ಲಾ ದಂಡಾಧಿಕಾರಿಗಳಿಗೆ ಮೇಲ್ಮನವಿ ಸಲ್ಲಿಸಿದ್ದಾರೆ.

Follow Us
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ