AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬರದಿಂದ ತತ್ತರಿಸಿದ ಕರ್ನಾಟಕ: ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಮುಂದಾದ ಗ್ರಾಮೀಣಾಭಿವೃದ್ಧಿ ಇಲಾಖೆ

ಕರ್ನಾಟಕದ ಬಹುಪಾಲು ತಾಲ್ಲೂಕುಗಳಲ್ಲಿ ಮಳೆ ಕೊರತೆಯಾಗಿದ್ದು ಬರ ಸ್ಥಿತಿಯನ್ನು ಎದುರಾಗಿದೆ. ಈ ಹಿನ್ನಲೆಯಲ್ಲಿ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ಗ್ರಾಮೀಣ ಪ್ರದೇಶಗಳಲ್ಲಿ ನೀರು ಸರಬರಾಜು ಪರಿಸ್ಥಿತಿಯ ಮೇಲೆ ತೀವ್ರವಾಗಿ ನಿಗಾ ಇರಿಸಲು ಮುಂದಾಗಿದ್ದಾರೆ. ತೊಂದರೆಗೀಡಾಗಿರುವ ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ.

ಬರದಿಂದ ತತ್ತರಿಸಿದ ಕರ್ನಾಟಕ: ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಮುಂದಾದ ಗ್ರಾಮೀಣಾಭಿವೃದ್ಧಿ ಇಲಾಖೆ
ಸಚಿವ ಪ್ರಿಯಾಂಕ್ ಖರ್ಗೆ
ಸಂಜಯ್ಯಾ ಚಿಕ್ಕಮಠ
| Edited By: Rakesh Nayak Manchi|

Updated on: Oct 16, 2023 | 7:28 PM

Share

ಕಲಬುರಗಿ, ಅ.16: ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಬರ ದೊಡ್ಡ ತಲೆನೋವು ಹೆಚ್ಚಿಸಿದೆ. ರಾಜ್ಯದ ಬಹುಪಾಲು ತಾಲ್ಲೂಕುಗಳಲ್ಲಿ ಮಳೆ ಕೊರತೆಯಾಗಿದ್ದು ಬರ (Drought) ಸ್ಥಿತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಅವರು ಗ್ರಾಮೀಣ ಪ್ರದೇಶಗಳಲ್ಲಿ ನೀರು ಸರಬರಾಜು ಪರಿಸ್ಥಿತಿಯ ಮೇಲೆ ತೀವ್ರವಾಗಿ ನಿಗಾ ಇರಿಸಲು ಮುಂದಾಗಿದ್ದಾರೆ. ಗ್ರಾಮೀಣ ನೀರು ಸರಬರಾಜು ಇಲಾಖೆಯ ಅಧಿಕಾರಿಗಳೊಂದಿಗೆ ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ಪ್ರಿಯಾಂಕ್ ಖರ್ಗೆ ಅವರು ಗ್ರಾಮೀಣ ನೀರು ಸರಬರಾಜು ಸ್ಥಿತಿ ಬಗ್ಗೆ ಮಾಹಿತಿ ಪಡೆದಿದ್ದಾರೆ.

152 ಗ್ರಾಮಗಳಲ್ಲಿ ತೀರ್ವ ಕುಡಿಯುವ ನೀರಿನ ಕೊರತೆ

ರಾಜ್ಯದ 36 ತಾಲ್ಲೂಕುಗಳ 100 ಗ್ರಾಮ ಪಂಚಾಯತಿಗಳಲ್ಲಿನ 152 ಗ್ರಾಮಗಳು ಕುಡಿಯುವ ನೀರಿನ ತೀವ್ರ ಅಭಾವವನ್ನು ಎದುರಿಸುತ್ತಿದ್ದು, ತೊಂದರೆಗೀಡಾಗಿರುವ ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ. ಈ ಪೈಕಿ 22 ಗ್ರಾಮಗಳಿಗೆ ಇಲಾಖೆಯ ಟ್ಯಾಂಕರ್ ಹಾಗೂ 16 ಗ್ರಾಮಗಳಿಗೆ ಬಾಡಿಗೆ ಆಧಾರದ ಮೇಲೆ ಪಡೆಯಲಾಗಿರುವ ಟ್ಯಾಂಕರ್ ಬಳಸಲಾಗುತ್ತಿದ್ದು, ಪ್ರತಿ ಟ್ಯಾಂಕರ್ ಸರಾಸರಿ ಪ್ರತಿ ನಿತ್ಯ 17 ಟ್ರಿಪ್ ಮೂಲಕ ನೀರು ಸರಬರಾಜು ಮಾಡುತ್ತಿವೆ. 142 ಖಾಸಗಿ ಕೊಳವೆಬಾವಿಗಳನ್ನು ಬಾಡಿಗೆಗೆ ಪಡೆಯಲಾಗಿದ್ದು, ಈ ಮೂಲಕ 130 ಗ್ರಾಮಗಳಿಗೆ ನೀರು ಸರಬರಾಜಾಗುತ್ತಿದೆ.

ಇದನ್ನೂ ಓದಿ: ಭೀಕರ ಬರಗಾಲದಿಂದ ರಾಜ್ಯದ ರೈತರಿಗೆ 30 ಸಾವಿರ ಕೋಟಿ ರೂ. ನಷ್ಟ: ಸಿಎಂ ಸಿದ್ದರಾಮಯ್ಯ

ಗ್ರಾಮೀಣ ನೀರು ಸರಬರಾಜು ವ್ಯವಸ್ಥೆಯ ಮೇಲೆ ನಿಗಾ ಇರಿಸಿಕೊಳ್ಳುವಂತೆ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಇತ್ತೀಚಿಗೆ ನಡೆದ ಸಭೆಯಲ್ಲಿ ಸಚಿವರು ಸೂಚಿಸಿದ್ದಾರೆ. ಪ್ರತಿ ವಾರಾಂತ್ಯದಲ್ಲಿ ಜಿಲ್ಲೆಯ ಅಧಿಕಾರಿಗಳು ಕಳುಹಿಸುವ ಮಾಹಿತಿಯನ್ನು ಆಧರಿಸಿ ವಿಮರ್ಶೆ ಸಭೆ ನಡೆಸುವುದಾಗಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಗ್ರಾಮೀಣ ನೀರು ಸರಬರಾಜು ಮಾಡುವಲ್ಲಿ ತೊಂದರೆಯುಂಟಾದಲ್ಲಿ ತಕ್ಷಣವೇ ತಮ್ಮ ಗಮನಕ್ಕೆ ತರಬೇಕೆಂದು ಸಚಿವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ