AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿ ಏರ್​ಪೋರ್ಟ್​ನಲ್ಲಿ ಲ್ಯಾಂಡಿಂಗ್​ ಸಮಸ್ಯೆ; ಸಿಗ್ನಲ್ ಸಿಗದ ಹಿನ್ನೆಲೆ ಸ್ಟಾರ್ ಏರ್ ವಿಮಾನ ಹೈದರಾಬಾದ್​ನಲ್ಲಿ ಲ್ಯಾಂಡಿಂಗ್

ಸ್ಟಾರ್ ಏರ್ ವಿಮಾನದಲ್ಲಿ 40 ಜನ ಪ್ರಯಾಣಿಕರಿದ್ದರು. ಸದ್ಯ ಹೈದರಾಬಾದ್ ಏರ್​ಪೋರ್ಟ್​ಗೆ ವಿಮಾನ ತಲುಪಿದ್ದು, ಜನರು ಹೈದರಾಬಾದ್​ನಿಂದ ವಾಹನಗಳಲ್ಲಿ ಕಲಬುರಗಿಯತ್ತ ಬರುತ್ತಿದ್ದಾರೆ.

ಕಲಬುರಗಿ ಏರ್​ಪೋರ್ಟ್​ನಲ್ಲಿ ಲ್ಯಾಂಡಿಂಗ್​ ಸಮಸ್ಯೆ; ಸಿಗ್ನಲ್ ಸಿಗದ ಹಿನ್ನೆಲೆ ಸ್ಟಾರ್ ಏರ್ ವಿಮಾನ ಹೈದರಾಬಾದ್​ನಲ್ಲಿ ಲ್ಯಾಂಡಿಂಗ್
ಹವಾಮಾನ ವೈಪರೀತ್ಯ ಹಿನ್ನೆಲೆ ಸ್ಟಾರ್ ಏರ್ ವಿಮಾನ ಲ್ಯಾಂಡಿಗ್ ಬದಲಾವಣೆ
TV9 Web
| Edited By: |

Updated on:Nov 21, 2021 | 12:46 PM

Share

ಕಲಬುರಗಿ: ಜಿಲ್ಲೆಯಲ್ಲಿ ಮೋಡ ಕವಿದ ವಾತಾವರಣ ಹಿನ್ನಲೆ ಕಲಬುರಗಿ ಏರ್​ಪೋರ್ಟ್​ನಲ್ಲಿ (Airport) ಲ್ಯಾಂಡಿಂಗ್​ಗೆ ಸಮಸ್ಯೆ ಎದುರಾಗಿದೆ. ಹೀಗಾಗಿ ಕಲಬುರಗಿ ಬದಲು ಹೈದರಾಬಾದ್​ನಲ್ಲಿ ವಿಮಾನ ಲ್ಯಾಂಡಿಂಗ್​ಗೆ (Flight landing) ವ್ಯವಸ್ಥೆ ಮಾಡಲಾಗಿದೆ. ಬೆಂಗಳೂರಿನಿಂದ ಕಲಬುರಗಿಗೆ ಬಂದಿದ್ದ ವಿಮಾನ ಬೆಳಗ್ಗೆ 10 ಗಂಟೆಗೆ ಲ್ಯಾಂಡಿಂಗ್ ಕಲಬುರಗಿಯಲ್ಲಿ ಲ್ಯಾಂಡ್ ಆಗಬೇಕಿತ್ತು. ಆದರೆ ಹವಾಮಾನ ವೈಪರೀತ್ಯ ಹಿನ್ನೆಲೆಯಲ್ಲಿ ಸಿಗ್ನಲ್ ಸಿಗಲಿಲ್ಲ. ಹೀಗಾಗಿ ಸ್ಟಾರ್ ಏರ್ ವಿಮಾನ ಲ್ಯಾಂಡಿಗ್ ಅನ್ನು ಬದಲಾವಣೆ ಮಾಡಲಾಗಿದೆ.

ಸ್ಟಾರ್ ಏರ್ ವಿಮಾನದಲ್ಲಿ 40 ಜನ ಪ್ರಯಾಣಿಕರಿದ್ದರು. ಸದ್ಯ ಹೈದರಾಬಾದ್ ಏರ್​ಪೋರ್ಟ್​ಗೆ ವಿಮಾನ ತಲುಪಿದ್ದು, ಜನರು ಹೈದರಾಬಾದ್​ನಿಂದ ವಾಹನಗಳಲ್ಲಿ ಕಲಬುರಗಿಯತ್ತ ಬರುತ್ತಿದ್ದಾರೆ.

ಮಳೆ ನಿಂತರೂ ನಿಲ್ಲದ ಮಳೆ ಅನಾಹುತ ಕೋಲಾರದಲ್ಲಿ ಮಳೆ ನಿಂತರೂ ಅನಾಹುತ ನಿಂತಿಲ್ಲ. ತೋಟಗಳಲ್ಲಿ ಇನ್ನೂ ನೀರು ನಿಂತಿದ್ದು, ಟೊಮ್ಯಾಟೋ, ಕೋಸು, ಕ್ಯಾಪ್ಸಿಕಂ ಕೊಳೆತು ಹೋಗುವ ಭೀತಿ ಶುರುವಾಗಿದೆ. ನಿರಂತರ ಮಳೆಗೆ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಬೆಳೆದಿದ್ದ ಬೆಳೆಗಳು ನೀರು ಪಾಲಾಗಿವೆ.

ನೀರಲ್ಲಿ ಕೊಳೆತು ನಿಂತ ಈರುಳ್ಳಿ, ಜೋಳ ಬೆಳೆ ಇನ್ನು ಗದಗದಲ್ಲೂ ಮಳೆರಾಯನ ಅವಾಂತರಕ್ಕೆ ರೈತರು ಕಂಗಾಲಾಗಿದ್ದಾರೆ. ಈರುಳ್ಳಿ, ಗೋವಿನ ಜೋಳ ಬೆಳೆ ನೀರಲ್ಲಿ ಕೊಳೆತು ನಿಂತಿವೆ. ಕಟಾವಿಗೆ ಬಂದಿದ್ದ ಈರುಳ್ಳಿ ಈಗ ಕೊಳೆತು ನಾರುತ್ತಿದೆ ಅಂತ ರೈತರೊಬ್ಬರು ಕಣ್ಣೀರು ಹಾಕಿದ್ದಾರೆ. ಗೋವಿನ ಜೋಳ ಕೂಡಾ ಜಮೀನಿನಲ್ಲೇ ಮೊಳಕೆಯೊಡಿಯುತ್ತಿದೆ. ಲಕ್ಷಾಂತರ ರೂಪಾಯಿ ಆದಾಯ ನಿರೀಕ್ಷೆಯಲ್ಲಿದ್ದ ರೈತನಿಗೆ ಭಾರಿ ನಿರಾಸೆಯಾಗಿದೆ.

ಮಳೆ ಹಾನಿ ಪ್ರದೇಶಕ್ಕೆ ದಾವಣಗೆರೆ ಡಿಸಿ ಭೇಟಿ ದಾವಣಗೆರೆ ಜಿಲ್ಲೆಯ ಮಳೆ ಹಾನಿ ಪ್ರದೇಶಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿದ್ದಾರೆ. ನೀರಿನಲ್ಲೇ ನಡೆದು ಮಹಾಂತೇಶ ಬೀಳಗಿ ಸಮೀಕ್ಷೆ ನಡೆಸಿದ್ದಾರೆ. ಚನ್ನಗಿರಿ ತಾಲೂಕಿನ ವಿವಿಧ ಗ್ರಾಮಗಳಿಗೆ ಜಿಲ್ಲಾಧಿಕಾರಿ ಭೇಟಿ ನೀಡಿದ್ದಾರೆ. ದಾವಣಗೆರೆಯಲ್ಲಿ ಸುಮಾರು 3,063 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ. 2,894 ಹೆಕ್ಟೇರ್ ಪ್ರದೇಶದಲ್ಲಿದ್ದ ಭತ್ತ, ಮೆಕ್ಕೆಜೋಳ ನೀರು ಪಾಲಾಗಿದೆ. ಮಳೆಯಿಂದ ಮೂವರ ಸಾವನ್ನಪ್ಪಿದ್ದು, 316 ಮನೆಗಳಿಗೆ ಹಾನಿಯಾಗಿವೆ ಅಂತ ದಾವಣಗೆರೆ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಹಿರಿಯ ಅಧಿಕಾರಿಗಳ ಜೊತೆ ಚರ್ಚಿಸಿ ಮಳೆ ಪರಿಹಾರ ಘೋಷಣೆ- ಸಿಎಂ ಬೊಮ್ಮಾಯಿ

Spice jet: ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ತಪ್ಪಿದ ಭಾರಿ ವಿಮಾನ ದುರಂತ

Published On - 12:37 pm, Sun, 21 November 21

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?