AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿ ಜಿಲ್ಲೆಯ ಹಲವೆಡೆ ಮತ್ತೆ ಕಂಪಿಸಿದ ಭೂಮಿ; ರಿಕ್ಟರ್ ಮಾಪಕದಲ್ಲಿ 3.4ರಷ್ಟು ತೀವ್ರತೆ ದಾಖಲು

ಅಧಿಕಾರಿಗಳು ಬರುತ್ತಾರೆ ಹೋಗುತ್ತಾರೆ. ನಮಗೆ ನಿಖರವಾದ ಮಾಹಿತಿ ಯಾರು ಹೇಳುವುದಿಲ್ಲ. ಅಪಾಯದ ಮುನ್ಸೂಚನೆ ಇದ್ದರೆ ಗ್ರಾಮಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಮಾಡಿ ಎಂದು ಭೀತಿಗೊಳಗಾದ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಲಬುರಗಿ ಜಿಲ್ಲೆಯ ಹಲವೆಡೆ ಮತ್ತೆ ಕಂಪಿಸಿದ ಭೂಮಿ; ರಿಕ್ಟರ್ ಮಾಪಕದಲ್ಲಿ 3.4ರಷ್ಟು ತೀವ್ರತೆ ದಾಖಲು
ಪ್ರಾತಿನಿಧಿಕ ಚಿತ್ರ
TV9 Web
| Updated By: preethi shettigar|

Updated on:Oct 11, 2021 | 9:56 AM

Share

ಕಲಬುರಗಿ: ಜಿಲ್ಲೆಯ ಹಲವೆಡೆ ಮತ್ತೆ ಭೂಕಂಪನವಾಗಿದೆ. ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಗಡಿಕೇಶ್ವರ, ಹಲಚೇರಾ, ತೇಗಲತಿಪ್ಪಿ, ಬೆನಕನಳ್ಳಿ, ಭೂತನೂರ, ಹೊಸಳ್ಳಿ ಸೇರಿ ಹಲವು ಗ್ರಾಮಗಳಲ್ಲಿ ಭೂಮಿ ಕಂಪಿಸಿದೆ. ಪದೇ ಪದೇ ಭೂಮಿ ಕಂಪಿಸುತ್ತಿದ್ದರು ಅಧಿಕಾರಿಗಳು ಮಾತ್ರ ಈ ಬಗ್ಗೆ ಗಮನಹರಿಸಿಲ್ಲ. ಹೀಗಾಗಿ ಸಿಟ್ಟಿಗೆದ್ದ ಗ್ರಾಮಸ್ಥರು ಇಂದು (ಅಕ್ಟೋಬರ್ 11) ಹೋರಾಟಕ್ಕೆ ಮುಂದಾಗಿದ್ದಾರೆ.

ಅಧಿಕಾರಿಗಳು ಬರುತ್ತಾರೆ ಹೋಗುತ್ತಾರೆ. ನಮಗೆ ನಿಖರವಾದ ಮಾಹಿತಿ ಯಾರು ಹೇಳುವುದಿಲ್ಲ. ಅಪಾಯದ ಮುನ್ಸೂಚನೆ ಇದ್ದರೆ ಗ್ರಾಮಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಮಾಡಿ ಎಂದು ಭೀತಿಗೊಳಗಾದ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಿನ್ನೆ 3.4 ರಷ್ಟು ಭೂಕಂಪನ ಸಂಭವಿಸಿತ್ತು. ಕಂಪನದ ತೀವ್ರತೆ ಹೆಚ್ಚುತ್ತಿರುವುದರಿಂದ ಕಂಗೆಟ್ಟಿರುವ ಗ್ರಾಮಸ್ಥರು, ಚಿಂಚೋಳಿಯ ಹೊಡೆಭೀರನಹಳ್ಳಿ ಕ್ರಾಸ್​ನಲ್ಲಿ ರಸ್ತೆ ತಡೆದು ಪ್ರತಿಭಟನೆಗೆ ಸಜ್ಜಾಗಿದ್ದಾರೆ. ಬೆಳಿಗ್ಗೆ 10.30 ಸುಮಾರಿಗೆ ಪ್ರತಿಭಟನೆ ಶುರುವಾಗಲಿದೆ.

ಅಕ್ಟೋಬರ್​ 9 ರಂದು ಕೂಡ ಭೂಮಿ ಕಂಪಿಸಿದೆ ಜಿಲ್ಲೆಯ ಚಿಂಚೋಳಿ ತಾಲೂಕಿನ ಗಡಿಕೇಶ್ವರ ಗ್ರಾಮದಲ್ಲಿ ಅಕ್ಟೋಬರ್ 9 ಲಘು ಭೂಕಂಪದ ಅನುಭವವಾಗಿತ್ತು. ನಸುಕಿನ ಜಾವ 5.40 ರ ಸಮಯದಲ್ಲಿ ಎರಡು ಬಾರಿ ಲಘು ಭೂಕಂಪನದ ಅನುಭವವಾಗಿತ್ತು. ಕಂಪನಕ್ಕೆ ಮನೆಯಲ್ಲಿದ್ದ ಪಾತ್ರೆಗಳು ಕೆಳಗೆ ಬಿದ್ದಿದ್ದು, ಆತಂಕದಿಂದ ಮನೆಯಿಂದ ಹೊರಬಂದ ಗ್ರಾಮಸ್ಥರು ಮಳೆಯಲ್ಲಿಯೇ ಕಾಲ ಕಳೆದಿದ್ದರು.

ಅಕ್ಟೋಬರ್​ 8 ರಂದು ಕೂಡಾ ಚಿಂಚೋಳಿ ತಾಲೂಕಿನ ಗಡಿಕೇಶ್ವರ ಗ್ರಾಮದಲ್ಲಿ ಲಘು ಭೂಕಂಪನವಾಗಿತ್ತು. ಕಳೆದ ಕೆಲ ವರ್ಷಗಳಿಂದ ಭೂಮಿಯಿಂದ ಭಾರೀ ಸದ್ದು ಕೇಳಿ ಬರುತ್ತಿತ್ತು. ಇದೀಗ ಜನರಿಗೆ ಮೇಲಿಂದ ಮೇಲೆ ಲಘು ಭೂಕಂಪನದ ಅನುಭವವಾಗುತ್ತಿದೆ.

ಮಳೆಯಲ್ಲಿಯೇ ಕಾಲ ಕಳೆದ ಗ್ರಾಮಗಳ ಜನರು ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಕೆಲವಡೆ ಲಘು ಭೂಕಂಪನವಾದ ಹಿನ್ನೆಲೆ, ಮನೆಯಿಂದ ಹೊರ ಬಂದಿದ್ದ ಜನರು, ಮಳೆಯಲ್ಲೇ ನಿಲ್ಲಬೇಕಾಯಿತು. ಕಳೆದ ರಾತ್ರಿಯಿಂದ ಜಿಲ್ಲೆಯಲ್ಲಿ ಮಳೆಯಾಗುತ್ತಿದ್ದು, ಗಡಿಕೇಶ್ವರ, ಹಲಚೇರಾ ಗ್ರಾಮದ ಜನರು ಮಳೆಯಲ್ಲೇ ನೆನೆಯುವಂತಾಯಿತು.

ಈ ಹಿಂದೆ  ಜಿಲ್ಲೆಯಲ್ಲಿ 2.6 ತೀವ್ರತೆ ಕಂಪನ ಆಗಿತ್ತು. ಕಾಳಗಿ‌ ತಾಲೂಕಿನ ಹಲಚೇರಾ ಗ್ರಾಮದ ಕೇಂದ್ರ ಬಿಂದುವಿನಲ್ಲಿ ಭೂಕಂಪನ ನಡೆದಿತ್ತು. ಇಂದು ಕೂಡಾ ಲಘು ಭೂ ಕಂಪನವಾಗಿದೆ. ದೇಶದ ಅನೇಕ ಕಡೆ ಲಘು ಭೂಕಂಪನಗಳು ಆಗುತ್ತಿವೆ. ಅದೇ ರೀತಿ ಕಲಬುರಗಿ ಜಿಲ್ಲೆಯಲ್ಲಿ ಕೂಡಾ ಲಘು ಭೂಕಂಪನ ಸಂಭವಿಸುತ್ತಿವೆ. ಕಾಳಗಿ ತಾಲೂಕಿನ ಹ‌ಲಚೇರಾ, ತೇಗಲತಿಪ್ಪಿ, ಹೊಸಳ್ಳಿ ಗ್ರಾಮದಲ್ಲಿ ಕೂಡಾ ಲಘು ಭೂಕಂಪನ ಅನುಭವವಾಗಿದೆ ಎಂದು ಟಿವಿ9 ಡಿಜಿಟಲ್​ಗೆ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಸಿಬ್ಬಂದಿ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಕಲಬುರಗಿ: ಮತ್ತೆ ಲಘು ಭೂಕಂಪನ; ಆತಂಕದಲ್ಲಿ ಮನೆಯಿಂದ ಹೊರ ಬಂದು ಮಳೆಯಲ್ಲಿಯೇ ಕಾಲ ಕಳೆದ ಗ್ರಾಮಸ್ಥರು

ವಿಜಯಪುರದಲ್ಲಿ ಮತ್ತೆ ನಡುಗಿದ ಭೂಮಿ; ಒಂದು ವಾರದಲ್ಲಿ ಎರಡನೇ ಬಾರಿಗೆ ಭೂಕಂಪನದ ಅನುಭವ

Published On - 9:42 am, Mon, 11 October 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ