AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿ: ಗಡಿಕೇಶ್ವರ ಗ್ರಾಮದಲ್ಲಿ ಭೂಮಿಯಿಂದ ಕೇಳಿಬಂದ ಭಾರೀ ಶಬ್ದ; ಭೂಕಂಪನದ ಅನುಭವ

ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಗಡಿಕೇಶ್ವರ ಗ್ರಾಮದಲ್ಲಿ ಇಂದು ಸಂಜೆ 5 ಗಂಟೆಗೆ ಮತ್ತು 5.20 ನಿಮಿಷಕ್ಕೆ ಎರಡು ಬಾರಿ, ಭೂಮಿಯಿಂದ ಭಾರೀ ಶಬ್ದ ಕೇಳಿಸಿದೆ.

ಕಲಬುರಗಿ: ಗಡಿಕೇಶ್ವರ ಗ್ರಾಮದಲ್ಲಿ ಭೂಮಿಯಿಂದ ಕೇಳಿಬಂದ ಭಾರೀ ಶಬ್ದ; ಭೂಕಂಪನದ ಅನುಭವ
ಭೂಮಿಯ ಕಂಪನಕ್ಕೆ ಬಿರುಕು ಬಿಟ್ಟ ಗೋಡೆ
TV9 Web
| Edited By: ವಿವೇಕ ಬಿರಾದಾರ|

Updated on:Sep 19, 2022 | 6:41 PM

Share

ಕಲಬುರಗಿ: ಚಿಂಚೋಳಿ ತಾಲೂಕಿನ ಗಡಿಕೇಶ್ವರ ಗ್ರಾಮದಲ್ಲಿ ಇಂದು ಸಂಜೆ 5 ಗಂಟೆಗೆ ಮತ್ತು 5.20 ನಿಮಿಷಕ್ಕೆ ಎರಡು ಬಾರಿ, ಭೂಮಿಯಿಂದ (Earth) ಭಾರೀ ಶಬ್ದ (Sound) ಕೇಳಿಸಿದೆ. ಈ ವೇಳೆ ಗ್ರಾಮದ ಜನರಿಗೆ ಲಘು ಭೂಕಂಪನದ (Earthquake) ಅನುಭವವಾಗಿದೆ. ಇದರಿಂದ ಗಾಬರಿಗೊಂಡ ಜನರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ. ಕಳೆದ ವರ್ಷ ಕೂಡ ಗಡಿಕೇಶ್ವರ ಗ್ರಾಮದಲ್ಲೇ ಅನೇಕ ಬಾರಿ ಭೂಮಿಯಿಂದ ಸದ್ದು ಕೇಳಿಸಿತ್ತು. ಆಗ ಭೂ ವಿಜ್ಞಾನಿಗಳು ಭೂಮಿಯೊಳಗಿನ ರಾಸಾಯನಿಕ ಪಕ್ರಿಯೆಯಿಂದ ಇಂತಹ ಸದ್ದು ಬರ್ತಿದೆ, ಜನರು ಆತಂಕ ಪಡಬಾರದು ಅಂತ ಹೇಳಿದ್ದರು. ಆದರೆ ಇದೀಗ ಮತ್ತೆ ಗ್ರಾಮದ ಜನರಿಗೆ ಸದ್ದು ಕೇಳಿಸಿದ್ದು, ಗ್ರಾಮದಲ್ಲಿ ಆತಂಕದ ವಾತಾವರಣ ಸೃಷ್ಠಿಯಾಗಿದೆ.

ನಿರಂತರ‌ ಸದ್ದಿನಿಂದ ಕಂಗಾಲಾದ ಜನರು

ಗಡಿಕೇಶ್ವರ ಗ್ರಾಮದಲ್ಲಿ ಭೂಮಿಯಿಂದ ಸದ್ದು ಬರುವದು, ಲಘು ಭೂಕಂಪನದ ಅನುಭವವಾಗುವದು ಇದೇ ಮೊದಲಲ್ಲಾ. ಕಳೆದ ವರ್ಷ ಕೂಡಾ ಗಡಿಕೇಶ್ವರ ಗ್ರಾಮದಲ್ಲಿ ಅನೇಕ ಬಾರಿ ಭೂಮಿಯಿಂದ ಸದ್ದು ಬಂದಿತ್ತು. ಹೀಗಾಗಿ ಗ್ರಾಮಕ್ಕೆ ಅನೇಕ ಭೂವಿಜ್ಞಾನಿಗಳು ಆಗಮಿಸಿ ಪರಿಶೀಲನೆ ನಡೆಸಿದ್ದರು. ಈ ಭಾಗದಲ್ಲಿ ಸುಣ್ಣದ ಕಲ್ಲು ಹೆಚ್ಚಾಗಿದೆ. ಜೊತೆಗೆ ಭೂಮಿಯೊಳಗಿನ ರಾಸಾಯನಿಕ ಪಕ್ರಿಯೆಯಿಂದ ಸದ್ದು ಬರುತ್ತಿದೆ. ಜನರು ಆತಂಕ ಪಡಬಾರದು ಅಂತ ಭೂ ವಿಜ್ಞಾನಿಗಳು ಹೇಳಿದ್ದರು. ಹೀಗಾಗಿ ಗ್ರಾಮದ ಜನರಿಗೆ, ಸರ್ಕಾರದ ವತಿಯಿಂದ ಎರಡು ಕೋಟಿ ವೆಚ್ಚದಲ್ಲಿ ಟಿನ್ ಶೆಡ್​ಗಳನ್ನು ನಿರ್ಮಿಸಿ ಕೊಡಲಾಗಿತ್ತು.

ಮಳೆಗಾಲದಲ್ಲಿ ಭೂಮಿಯಿಂದ ಆಗಾಗ ಭಾರಿ ಸದ್ದು ಕೇಳುವುದು ಇಲ್ಲಿ ಸಾಮಾನ್ಯವಾಗಿದೆ. ಆದರು ಕೂಡಾ ಸದ್ದಿನ ಮೂಲದ ಬಗ್ಗೆ ಇನ್ನಷ್ಟು ಅಧ್ಯಯನಗಳು ಆಗಬೇಕು ಎಂದು ಗ್ರಾಮಸ್ಥರು ಒತ್ತಾಯಿಸುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:59 pm, Mon, 19 September 22

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ