AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿ: ರಾತ್ರಿ ಒಂದು ಗಂಟೆಗೆ ಲಘು ಭೂಕಂಪದ ಅನುಭವ; ಆತಂಕದಲ್ಲಿ ಮನೆಯಿಂದ ಹೊರಬಂದ ಜನರು

ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಗಡಿಕೇಶ್ವರ, ತೇಗಲತಿಪ್ಪಿ ಗ್ರಾಮಗಳಲ್ಲಿ, ಕಳೆದ ರಾತ್ರಿ ಒಂದು ಗಂಟೆ ಸಮಯದಲ್ಲಿ ಲಘು ಭೂಕಂಪನದ ಅನುಭವವಾಗಿದೆ. ಇದರಿಂದ ಆತಂಕಗೊಂಡ ಜನರು ಮನೆಯಿಂದ ಹೊರ ಬಂದಿದ್ದಾರೆ.

ಕಲಬುರಗಿ: ರಾತ್ರಿ ಒಂದು ಗಂಟೆಗೆ ಲಘು ಭೂಕಂಪದ ಅನುಭವ; ಆತಂಕದಲ್ಲಿ ಮನೆಯಿಂದ ಹೊರಬಂದ ಜನರು
ಸಾಂದರ್ಭಿಕ ಚಿತ್ರ
Follow us
TV9 Web
| Updated By: preethi shettigar

Updated on:Oct 08, 2021 | 12:00 PM

ಕಲಬುರಗಿ: ಜಿಲ್ಲೆಯ ಚಿಂಚೋಳಿ‌ ತಾಲೂಕಿನ ಕೆಲ ಗ್ರಾಮದಲ್ಲಿ ಲಘು ಭೂಕಂಪದ ಅನುಭವವಾಗಿದೆ. ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಗಡಿಕೇಶ್ವರ, ತೇಗಲತಿಪ್ಪಿ ಗ್ರಾಮಗಳಲ್ಲಿ, ಕಳೆದ ರಾತ್ರಿ ಒಂದು ಗಂಟೆ ಸಮಯದಲ್ಲಿ ಲಘು ಭೂಕಂಪನದ ಅನುಭವವಾಗಿದೆ. ಇದರಿಂದ ಆತಂಕಗೊಂಡ ಜನರು ಮನೆಯಿಂದ ಹೊರ ಬಂದಿದ್ದಾರೆ. ಗಡಿಕೇಶ್ವರ ಗ್ರಾಮದಲ್ಲಿ ಅನೇಕ ತಿಂಗಳಿಂದ ಭೂಮಿಯಿಂದ ಭಾರೀ ಸದ್ದು ಬರುತ್ತಿತ್ತು. ಈ ಮೊದಲೇ ಸದ್ದಿನಿಂದ ಕಂಗಾಲಾಗಿದ್ದ ಗ್ರಾಮದ ಜನರು, ಇದೀಗ ಲಘು ಭೂಕಂಪನದಿಂದ ಮತ್ತಷ್ಟು ಆತಂಕಕ್ಕೆ ಒಳಗಾಗಿದ್ದಾರೆ.

ವಿಜಯಪುರ ನಗರದ ಹಲವೆಡೆ ಭೂಮಿ ಕಂಪಿಸಿದ ಅನುಭವ ವಿಜಯಪುರ ಜಿಲ್ಲೆಯ ರೈಲ್ವೆ ಸ್ಟೇಷನ್ ಪ್ರದೇಶ, ಅಲ್ಲಾಪುರ ಓಣಿ, ಶಿವಗಿರಿ ಬಡಾವಣೆ, ಅಲ್ಲಾಪುರ ತಾಂಡಾ, ಗೋಳಗುಮ್ಮಟ ಸೇರಿ ಹಲವೆಡೆ ಭೂಕಂಪನವಾಗಿದೆ. ತಡರಾತ್ರಿ 12.20ರ ಸುಮಾರಿಗೆ ಭೂಮಿ ಕಂಪಿಸಿದ ಅನುಭವವಾಗಿದೆ. ಪದೇ ಪದೇ ಭೂಕಂಪನವಾಗುತ್ತಿದ್ದು, ಇಲ್ಲಿನ ಜನರು ಆತಂಕಗೊಂಡಿದ್ದಾರೆ.

ಈಗಾಗಲೇ ವಿಜಯಪುರ ನಗರ ಸೇರಿದಂತೆ ಜಿಲ್ಲೆಯ ವಿವಿಧೆಡೆ ಒಂದೇ ತಿಂಗಳಿನಲ್ಲಿ ಆರು ಬಾರಿ ಭೂಮಿ ಕಂಪಿಸಿದೆ. ಇಂದು ಮತ್ತೆ ಭೂಮಿ ನಡುಗಿದ್ದು, ಜನರು ಭಯಭೀತರಾಗಿದ್ದಾರೆ. ಸೆಪ್ಟೆಂಬರ್ 4 ರಂದು, 3.9ನಷ್ಟು ತೀವ್ರತೆಯಲ್ಲಿ ಭೂಕಂಪನವಾಗಿತ್ತು. ಬಳಿಕ ಅಕ್ಟೋಬರ್ 1 ಹಾಗೂ 2 ರಂದು ಮತ್ತೆ ಭೂಕಂಪ ಸಂಭವಿಸಿತ್ತು. ಈ ವೇಳೆ 2.5 ನಷ್ಟು ಹಾಗೂ 2.0 ರಿಕ್ಟರ್ ಮಾಪಕದಲ್ಲಿ ತೀವ್ರತೆ ದಾಖಲಾಗಿತ್ತು. ನಂತರ ಸೆಪ್ಟೆಂಬರ್ 5 ರಂದು 2.9 ತೀವ್ರತೆಯಲ್ಲಿ ಭೂಕಂಪನವಾಗಿತ್ತು. ಇಂದು ಮಧ್ಯರಾತ್ರಿ ಮತ್ತೆ ಭೂಕಂಪನವಾಗಿದೆ.

ಇದನ್ನೂ ಓದಿ: ವಿಜಯಪುರ ಸಿಂದಗಿಯಲ್ಲಿ ಮತ್ತೆ ಭೂಕಂಪದ ಅನುಭವ! ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಆತಂಕ

ಸಿಂದಗಿ ಪಟ್ಟಣದಲ್ಲಿ ಭೂಕಂಪನವಾದದ್ದು ನಿಜ; ರಿಕ್ಟರ್ ಮಾಪಕದಲ್ಲಿ 2.5ರಷ್ಟು ತೀವ್ರತೆ ದಾಖಲು

Published On - 7:36 am, Fri, 8 October 21

ಸೋನು ನಿಗಮ್ ಬದಲಿಗೆ ಕನ್ನಡದ ಗಾಯಕನಿಗೆ ಅವಕಾಶ ಕೊಟ್ಟ ನಿರ್ಮಾಪಕ
ಸೋನು ನಿಗಮ್ ಬದಲಿಗೆ ಕನ್ನಡದ ಗಾಯಕನಿಗೆ ಅವಕಾಶ ಕೊಟ್ಟ ನಿರ್ಮಾಪಕ
ರೆಡ್ಡಿ ಜೈಲು ಸೇರುವಂತಾಗುವಲ್ಲಿ ಸಿಬಿಐ ಅಧಿಕಾರಿಗಳ ಪಾತ್ರ ದೊಡ್ಡದು: ಹಿರೇಮಠ
ರೆಡ್ಡಿ ಜೈಲು ಸೇರುವಂತಾಗುವಲ್ಲಿ ಸಿಬಿಐ ಅಧಿಕಾರಿಗಳ ಪಾತ್ರ ದೊಡ್ಡದು: ಹಿರೇಮಠ
ಉಗ್ರರ ದಾಳಿ ಖಂಡಿಸಿ ಜರ್ಮನಿಯಲ್ಲಿ ಅನಿವಾಸಿ ಭಾರತೀಯರಿಂದ ಮೆರವಣಿಗೆ
ಉಗ್ರರ ದಾಳಿ ಖಂಡಿಸಿ ಜರ್ಮನಿಯಲ್ಲಿ ಅನಿವಾಸಿ ಭಾರತೀಯರಿಂದ ಮೆರವಣಿಗೆ
ಅಪಾಯ ಉಂಟಾದಾಗ ಪಾರಾಗಲು ಮಾಕ್ ಡ್ರಿಲ್ ವೇಳೆ ಜಮ್ಮು ಶಾಲೆಯ ಮಕ್ಕಳಿಗೆ ತರಬೇತಿ
ಅಪಾಯ ಉಂಟಾದಾಗ ಪಾರಾಗಲು ಮಾಕ್ ಡ್ರಿಲ್ ವೇಳೆ ಜಮ್ಮು ಶಾಲೆಯ ಮಕ್ಕಳಿಗೆ ತರಬೇತಿ
ಸಿನಿಮಾದಿಂದ ಸೋನು ನಿಗಂ ಹಾಡು ಡ್ರಾಪ್, ನಿರ್ದೇಶಕ ಹೇಳಿದ್ದಿಷ್ಟು?
ಸಿನಿಮಾದಿಂದ ಸೋನು ನಿಗಂ ಹಾಡು ಡ್ರಾಪ್, ನಿರ್ದೇಶಕ ಹೇಳಿದ್ದಿಷ್ಟು?
ನನ್ನ ಮೇಲೆ ಹಲ್ಲೆ, ತಾತನ ವಿರುದ್ಧ ಅಟ್ರಾಸಿಟಿ ಕೇಸ್ ಹಾಕಲಾಗಿತ್ತು: ಗಣೇಶ್
ನನ್ನ ಮೇಲೆ ಹಲ್ಲೆ, ತಾತನ ವಿರುದ್ಧ ಅಟ್ರಾಸಿಟಿ ಕೇಸ್ ಹಾಕಲಾಗಿತ್ತು: ಗಣೇಶ್
ಮನೆಯೆದುರು ಮಕ್ಕಳು ಆಡುವಾಗ ಚಿರತೆ ಪ್ರತ್ಯಕ್ಷ; ಶಾಕಿಂಗ್ ವಿಡಿಯೋ ವೈರಲ್
ಮನೆಯೆದುರು ಮಕ್ಕಳು ಆಡುವಾಗ ಚಿರತೆ ಪ್ರತ್ಯಕ್ಷ; ಶಾಕಿಂಗ್ ವಿಡಿಯೋ ವೈರಲ್
ಪಾಕಿಸ್ತಾನೀಯರ ಬೆಂಬಲ ಭಾರತಕ್ಕಾ?
ಪಾಕಿಸ್ತಾನೀಯರ ಬೆಂಬಲ ಭಾರತಕ್ಕಾ?
ಐದು ವರ್ಷದಿಂದ ಸಿಎಂರನ್ನು ಟಾರ್ಗೆಟ್ ಮಾಡಿರುವ ಜೇಲ್ ವಾಚರ್: ಕಾಂಗ್ರೆಸ್
ಐದು ವರ್ಷದಿಂದ ಸಿಎಂರನ್ನು ಟಾರ್ಗೆಟ್ ಮಾಡಿರುವ ಜೇಲ್ ವಾಚರ್: ಕಾಂಗ್ರೆಸ್
ಕೇದಾರನಾಥದಲ್ಲಿ ಯುವಕರ ಹಾಡು, ಡ್ಯಾನ್ಸ್; ಯುವಕರ ವಿರುದ್ಧ ಕೇಸ್ ದಾಖಲು
ಕೇದಾರನಾಥದಲ್ಲಿ ಯುವಕರ ಹಾಡು, ಡ್ಯಾನ್ಸ್; ಯುವಕರ ವಿರುದ್ಧ ಕೇಸ್ ದಾಖಲು