AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿ: ಮತ್ತೆ ಲಘು ಭೂಕಂಪನ; ಆತಂಕದಲ್ಲಿ ಮನೆಯಿಂದ ಹೊರ ಬಂದು ಮಳೆಯಲ್ಲಿಯೇ ಕಾಲ ಕಳೆದ ಗ್ರಾಮಸ್ಥರು

ನಿನ್ನೇ ಕೂಡಾ ಚಿಂಚೋಳಿ ತಾಲೂಕಿನ ಗಡಿಕೇಶ್ವರ ಗ್ರಾಮದಲ್ಲಿ ಲಘು ಭೂಕಂಪನವಾಗಿತ್ತು. ಕಳೆದ ಕೆಲ ವರ್ಷಗಳಿಂದ ಭೂಮಿಯಿಂದ ಭಾರೀ ಸದ್ದು ಕೇಳಿ ಬರುತ್ತಿತ್ತು. ಇದೀಗ ಜನರಿಗೆ ಮೇಲಿಂದ ಮೇಲೆ ಲಘು ಭೂಕಂಪನದ ಅನುಭವವಾಗುತ್ತಿದೆ.

ಕಲಬುರಗಿ: ಮತ್ತೆ ಲಘು ಭೂಕಂಪನ; ಆತಂಕದಲ್ಲಿ ಮನೆಯಿಂದ ಹೊರ ಬಂದು ಮಳೆಯಲ್ಲಿಯೇ ಕಾಲ ಕಳೆದ ಗ್ರಾಮಸ್ಥರು
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Oct 09, 2021 | 7:32 AM

Share

ಕಲಬುರಗಿ: ಜಿಲ್ಲೆಯ ಚಿಂಚೋಳಿ ತಾಲೂಕಿನ ಗಡಿಕೇಶ್ವರ ಗ್ರಾಮದಲ್ಲಿ ಮತ್ತೆ ಲಘು ಭೂಕಂಪದ ಅನುಭವವಾಗಿದೆ. ಇಂದು (ಅಕ್ಟೋಬರ್ 9) ನಸುಕಿನ ಜಾವ 5.40 ರ ಸಮಯದಲ್ಲಿ ಎರಡು ಬಾರಿ ಲಘು ಭೂಕಂಪನದ ಅನುಭವವಾಗಿದೆ. ಕಂಪನಕ್ಕೆ ಮನೆಯಲ್ಲಿದ್ದ ಪಾತ್ರೆಗಳು ಕೆಳಗೆ ಬಿದ್ದಿದ್ದು, ಆತಂಕದಿಂದ ಮನೆಯಿಂದ ಹೊರಬಂದ ಗ್ರಾಮಸ್ಥರು ಮಳೆಯಲ್ಲಿಯೇ ಕಾಲ ಕಳೆದಿದ್ದಾರೆ.

ನಿನ್ನೇ ಕೂಡಾ ಚಿಂಚೋಳಿ ತಾಲೂಕಿನ ಗಡಿಕೇಶ್ವರ ಗ್ರಾಮದಲ್ಲಿ ಲಘು ಭೂಕಂಪನವಾಗಿತ್ತು. ಕಳೆದ ಕೆಲ ವರ್ಷಗಳಿಂದ ಭೂಮಿಯಿಂದ ಭಾರೀ ಸದ್ದು ಕೇಳಿ ಬರುತ್ತಿತ್ತು. ಇದೀಗ ಜನರಿಗೆ ಮೇಲಿಂದ ಮೇಲೆ ಲಘು ಭೂಕಂಪನದ ಅನುಭವವಾಗುತ್ತಿದೆ.

ಮಳೆಯಲ್ಲಿಯೇ ಕಾಲ ಕಳೆದ ಗ್ರಾಮಗಳ ಜನರು ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಕೆಲವಡೆ ಲಘು ಭೂಕಂಪನವಾದ ಹಿನ್ನೆಲೆ, ಮನೆಯಿಂದ ಹೊರ ಬಂದಿದ್ದ ಜನರು, ಮಳೆಯಲ್ಲೇ ನಿಲ್ಲಬೇಕಾಯಿತು. ಕಳೆದ ರಾತ್ರಿಯಿಂದ ಜಿಲ್ಲೆಯಲ್ಲಿ ಮಳೆಯಾಗುತ್ತಿದ್ದು, ಗಡಿಕೇಶ್ವರ, ಹಲಚೇರಾ ಗ್ರಾಮದ ಜನರು ಮಳೆಯಲ್ಲೇ ನೆನೆಯುವಂತಾಯಿತು.

ನಿನ್ನೆ ಜಿಲ್ಲೆಯಲ್ಲಿ 2.6 ತೀವ್ರತೆ ಕಂಪನ ಆಗಿತ್ತು. ಕಾಳಗಿ‌ ತಾಲೂಕಿನ ಹಲಚೇರಾ ಗ್ರಾಮದ ಕೇಂದ್ರ ಬಿಂದುವಿನಲ್ಲಿ ಭೂಕಂಪನ ನಡೆದಿತ್ತು. ಇಂದು ಕೂಡಾ ಲಘು ಭೂ ಕಂಪನವಾಗಿದೆ. ಕೆಲವೇ ಹೊತ್ತಲ್ಲಿ ಭೂಕಂಪನದ ತೀವ್ರತೆ ಬಗ್ಗೆ ಮಾಹಿತಿ ಸಿಗಲಿದೆ. ದೇಶದ ಅನೇಕ ಕಡೆ ಲಘು ಭೂಕಂಪನಗಳು ಆಗುತ್ತಿವೆ. ಅದೇ ರೀತಿ ಕಲಬುರಗಿ ಜಿಲ್ಲೆಯಲ್ಲಿ ಕೂಡಾ ಲಘು ಭೂಕಂಪನ ಸಂಭವಿಸುತ್ತಿವೆ. ಕಾಳಗಿ ತಾಲೂಕಿನ ಹ‌ಲಚೇರಾ, ತೇಗಲತಿಪ್ಪಿ, ಹೊಸಳ್ಳಿ ಗ್ರಾಮದಲ್ಲಿ ಕೂಡಾ ಲಘು ಭೂಕಂಪನ ಅನುಭವವಾಗಿದೆ ಎಂದು ಟಿವಿ9 ಡಿಜಿಟಲ್​ಗೆ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಸಿಬ್ಬಂದಿ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ವಿಜಯಪುರದ ತಿಕೋಟಾ ತಾಲೂಕಿನಲ್ಲಿ ಭೂಕಂಪನ; ರಿಕ್ಟರ್ ಮಾಪಕದಲ್ಲಿ 2.5 ರಷ್ಟು ತೀವ್ರತೆ ದಾಖಲು

ಕಲಬುರಗಿ: ರಾತ್ರಿ ಒಂದು ಗಂಟೆಗೆ ಲಘು ಭೂಕಂಪದ ಅನುಭವ; ಆತಂಕದಲ್ಲಿ ಮನೆಯಿಂದ ಹೊರಬಂದ ಜನರು

Published On - 7:25 am, Sat, 9 October 21

ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ನನ್ನ ಮಗಳು ಸರಿಯಾಗಿಯೇ ಹೇಳಿದ್ದಾಳೆ: ಸುದೀಪ್
ನನ್ನ ಮಗಳು ಸರಿಯಾಗಿಯೇ ಹೇಳಿದ್ದಾಳೆ: ಸುದೀಪ್
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ
ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ
ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ
ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ
ವರ್ಷದ ಕೊನೆಯ ಸೂರ್ಯಾಸ್ತ: ನಯನ ಮನೋಹರ ದೃಶ್ಯ ಸೆರೆ
ವರ್ಷದ ಕೊನೆಯ ಸೂರ್ಯಾಸ್ತ: ನಯನ ಮನೋಹರ ದೃಶ್ಯ ಸೆರೆ
ಒಡಿಶಾದಲ್ಲಿ 2 ಪ್ರಲೇ ಕ್ಷಿಪಣಿಗಳ ಯಶಸ್ವಿ ಉಡಾವಣೆ; ವಿಡಿಯೋ ಇಲ್ಲಿದೆ
ಒಡಿಶಾದಲ್ಲಿ 2 ಪ್ರಲೇ ಕ್ಷಿಪಣಿಗಳ ಯಶಸ್ವಿ ಉಡಾವಣೆ; ವಿಡಿಯೋ ಇಲ್ಲಿದೆ
ಗ್ರಾಹಕರಿಗೆ ಶಾಕ್​​ ಕೊಟ್ಟ ಡೆಲವರಿ ಬಾಯ್ಸ್​​​
ಗ್ರಾಹಕರಿಗೆ ಶಾಕ್​​ ಕೊಟ್ಟ ಡೆಲವರಿ ಬಾಯ್ಸ್​​​