Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿ: ಮತ್ತೆ ಲಘು ಭೂಕಂಪನ; ಆತಂಕದಲ್ಲಿ ಮನೆಯಿಂದ ಹೊರ ಬಂದು ಮಳೆಯಲ್ಲಿಯೇ ಕಾಲ ಕಳೆದ ಗ್ರಾಮಸ್ಥರು

ನಿನ್ನೇ ಕೂಡಾ ಚಿಂಚೋಳಿ ತಾಲೂಕಿನ ಗಡಿಕೇಶ್ವರ ಗ್ರಾಮದಲ್ಲಿ ಲಘು ಭೂಕಂಪನವಾಗಿತ್ತು. ಕಳೆದ ಕೆಲ ವರ್ಷಗಳಿಂದ ಭೂಮಿಯಿಂದ ಭಾರೀ ಸದ್ದು ಕೇಳಿ ಬರುತ್ತಿತ್ತು. ಇದೀಗ ಜನರಿಗೆ ಮೇಲಿಂದ ಮೇಲೆ ಲಘು ಭೂಕಂಪನದ ಅನುಭವವಾಗುತ್ತಿದೆ.

ಕಲಬುರಗಿ: ಮತ್ತೆ ಲಘು ಭೂಕಂಪನ; ಆತಂಕದಲ್ಲಿ ಮನೆಯಿಂದ ಹೊರ ಬಂದು ಮಳೆಯಲ್ಲಿಯೇ ಕಾಲ ಕಳೆದ ಗ್ರಾಮಸ್ಥರು
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: preethi shettigar

Updated on:Oct 09, 2021 | 7:32 AM

ಕಲಬುರಗಿ: ಜಿಲ್ಲೆಯ ಚಿಂಚೋಳಿ ತಾಲೂಕಿನ ಗಡಿಕೇಶ್ವರ ಗ್ರಾಮದಲ್ಲಿ ಮತ್ತೆ ಲಘು ಭೂಕಂಪದ ಅನುಭವವಾಗಿದೆ. ಇಂದು (ಅಕ್ಟೋಬರ್ 9) ನಸುಕಿನ ಜಾವ 5.40 ರ ಸಮಯದಲ್ಲಿ ಎರಡು ಬಾರಿ ಲಘು ಭೂಕಂಪನದ ಅನುಭವವಾಗಿದೆ. ಕಂಪನಕ್ಕೆ ಮನೆಯಲ್ಲಿದ್ದ ಪಾತ್ರೆಗಳು ಕೆಳಗೆ ಬಿದ್ದಿದ್ದು, ಆತಂಕದಿಂದ ಮನೆಯಿಂದ ಹೊರಬಂದ ಗ್ರಾಮಸ್ಥರು ಮಳೆಯಲ್ಲಿಯೇ ಕಾಲ ಕಳೆದಿದ್ದಾರೆ.

ನಿನ್ನೇ ಕೂಡಾ ಚಿಂಚೋಳಿ ತಾಲೂಕಿನ ಗಡಿಕೇಶ್ವರ ಗ್ರಾಮದಲ್ಲಿ ಲಘು ಭೂಕಂಪನವಾಗಿತ್ತು. ಕಳೆದ ಕೆಲ ವರ್ಷಗಳಿಂದ ಭೂಮಿಯಿಂದ ಭಾರೀ ಸದ್ದು ಕೇಳಿ ಬರುತ್ತಿತ್ತು. ಇದೀಗ ಜನರಿಗೆ ಮೇಲಿಂದ ಮೇಲೆ ಲಘು ಭೂಕಂಪನದ ಅನುಭವವಾಗುತ್ತಿದೆ.

ಮಳೆಯಲ್ಲಿಯೇ ಕಾಲ ಕಳೆದ ಗ್ರಾಮಗಳ ಜನರು ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಕೆಲವಡೆ ಲಘು ಭೂಕಂಪನವಾದ ಹಿನ್ನೆಲೆ, ಮನೆಯಿಂದ ಹೊರ ಬಂದಿದ್ದ ಜನರು, ಮಳೆಯಲ್ಲೇ ನಿಲ್ಲಬೇಕಾಯಿತು. ಕಳೆದ ರಾತ್ರಿಯಿಂದ ಜಿಲ್ಲೆಯಲ್ಲಿ ಮಳೆಯಾಗುತ್ತಿದ್ದು, ಗಡಿಕೇಶ್ವರ, ಹಲಚೇರಾ ಗ್ರಾಮದ ಜನರು ಮಳೆಯಲ್ಲೇ ನೆನೆಯುವಂತಾಯಿತು.

ನಿನ್ನೆ ಜಿಲ್ಲೆಯಲ್ಲಿ 2.6 ತೀವ್ರತೆ ಕಂಪನ ಆಗಿತ್ತು. ಕಾಳಗಿ‌ ತಾಲೂಕಿನ ಹಲಚೇರಾ ಗ್ರಾಮದ ಕೇಂದ್ರ ಬಿಂದುವಿನಲ್ಲಿ ಭೂಕಂಪನ ನಡೆದಿತ್ತು. ಇಂದು ಕೂಡಾ ಲಘು ಭೂ ಕಂಪನವಾಗಿದೆ. ಕೆಲವೇ ಹೊತ್ತಲ್ಲಿ ಭೂಕಂಪನದ ತೀವ್ರತೆ ಬಗ್ಗೆ ಮಾಹಿತಿ ಸಿಗಲಿದೆ. ದೇಶದ ಅನೇಕ ಕಡೆ ಲಘು ಭೂಕಂಪನಗಳು ಆಗುತ್ತಿವೆ. ಅದೇ ರೀತಿ ಕಲಬುರಗಿ ಜಿಲ್ಲೆಯಲ್ಲಿ ಕೂಡಾ ಲಘು ಭೂಕಂಪನ ಸಂಭವಿಸುತ್ತಿವೆ. ಕಾಳಗಿ ತಾಲೂಕಿನ ಹ‌ಲಚೇರಾ, ತೇಗಲತಿಪ್ಪಿ, ಹೊಸಳ್ಳಿ ಗ್ರಾಮದಲ್ಲಿ ಕೂಡಾ ಲಘು ಭೂಕಂಪನ ಅನುಭವವಾಗಿದೆ ಎಂದು ಟಿವಿ9 ಡಿಜಿಟಲ್​ಗೆ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಸಿಬ್ಬಂದಿ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ವಿಜಯಪುರದ ತಿಕೋಟಾ ತಾಲೂಕಿನಲ್ಲಿ ಭೂಕಂಪನ; ರಿಕ್ಟರ್ ಮಾಪಕದಲ್ಲಿ 2.5 ರಷ್ಟು ತೀವ್ರತೆ ದಾಖಲು

ಕಲಬುರಗಿ: ರಾತ್ರಿ ಒಂದು ಗಂಟೆಗೆ ಲಘು ಭೂಕಂಪದ ಅನುಭವ; ಆತಂಕದಲ್ಲಿ ಮನೆಯಿಂದ ಹೊರಬಂದ ಜನರು

Published On - 7:25 am, Sat, 9 October 21

ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ
ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್
ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್
ಸವದತ್ತಿ: ಫುಲ್​ ಟೈಟ್ ಆಗಿ ರೋಗಿಗೆ ಚಿಕಿತ್ಸೆ ನೀಡಿದ ಸರ್ಕಾರಿ ವೈದ್ಯ
ಸವದತ್ತಿ: ಫುಲ್​ ಟೈಟ್ ಆಗಿ ರೋಗಿಗೆ ಚಿಕಿತ್ಸೆ ನೀಡಿದ ಸರ್ಕಾರಿ ವೈದ್ಯ