AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Earthquake: ಕಲಬುರಗಿ ಜಿಲ್ಲೆಯ ಹಲವೆಡೆ ಲಘು ಭೂಕಂಪನ: ಭಾರಿ ಶಬ್ದಕ್ಕೆ ಬೆಚ್ಚಿಬಿದ್ದ ಗ್ರಾಮಸ್ಥರು

ರಾತ್ರಿ 11 ಗಂಟೆಯಲ್ಲಿ ಭಾರಿ ಶಬ್ದದೊಂದಿಗೆ  ಭೂಮಿ ಕಂಪಿಸಿದ್ದು, ಭಯದಿಂದ ಮನೆಗಳಿಂದ ಗ್ರಾಮಸ್ಥರು ಹೊರ ಓಡಿಬಂದಿದ್ದಾರೆ.

Earthquake: ಕಲಬುರಗಿ ಜಿಲ್ಲೆಯ ಹಲವೆಡೆ ಲಘು ಭೂಕಂಪನ: ಭಾರಿ ಶಬ್ದಕ್ಕೆ ಬೆಚ್ಚಿಬಿದ್ದ ಗ್ರಾಮಸ್ಥರು
ಭೂಕಂಪ (ಸಂಗ್ರಹ ಚಿತ್ರ)
TV9 Web
| Edited By: |

Updated on: Sep 01, 2022 | 8:13 AM

Share

ಕಲಬುರಗಿ: ಜಿಲ್ಲೆಯ ಚಿಂಚೋಳಿ ತಾಲೂಕಿನ ಹಲವೆಡೆ ಭೂಮಿ ಕಂಪಿಸಿದ ಅನುಭವ ಉಂಟಾಗಿದ್ದು, ಗಡಿಕೇಶ್ವರ ಸಮೀಪದ ಹಲವು ಗ್ರಾಮಗಳಲ್ಲಿ ಭಾರಿ ಶಬ್ದದೊಂದಿಗೆ ಲಘು ಭೂಕಂಪನ ಅನುಭವಾಗಿದೆ. ರಾತ್ರಿ 11 ಗಂಟೆಯಲ್ಲಿ ಭಾರಿ ಶಬ್ದದೊಂದಿಗೆ  ಭೂಮಿ ಕಂಪಿಸಿದ್ದು, ಭಯದಿಂದ ಮನೆಗಳಿಂದ ಗ್ರಾಮಸ್ಥರು ಹೊರ ಓಡಿಬಂದಿದ್ದಾರೆ. ಚಿಂಚೋಳಿ ತಾಲೂಕಿನ ಚಿಮ್ಮಾಇದ್ಲಾಯಿ, ದಸ್ತಾಪುರ, ಐಪಿ ಹೊಸಹಳ್ಳಿ, ಸುಲೇಪೇಟ್​ ಸೇರಿ ಹಲವೆಡೆ ಭೂಕಂಪನವಾಗಿದ್ದು, ಭಾರಿ ಶಬ್ದದಿಂದಾಗಿ  ಗ್ರಾಮಸ್ಥರು ಆತಂಕಗೊಂಡಿದ್ದಾರೆ.

ವಿಜಯಪುರ ಜಿಲ್ಲೆಯಲ್ಲಿ ಸರಣಿ ಭೂಕಂಪನ: 3.9ರಷ್ಟು ತೀವ್ರತೆ ದಾಖಲು

ವಿಜಯಪುರ: ಜಿಲ್ಲೆಯಲ್ಲಿ (ಆಗಸ್ಟ್​ 26) ಭೂಕಂಪನ (Earthquake) ಆಗಿದ್ದು, ನಿನ್ನೆ ರಾತ್ರಿ 8.51 ಸುಮಾರಿಗೆ ಮತ್ತು ಮಧ್ಯರಾತ್ರಿ 2.18ಕ್ಕೆ ಭೂಮಿ ಕಂಪಿಸಿದ್ದು, 3.9 ತೀವ್ರತೆ ರಿಕ್ಟರ್ ಮಾಪನದಲ್ಲಿ ದಾಖಲಾಗಿದೆ. ವಿಜಯಪುರ ತಾಲೂಕಿನ ಹೊನ್ನುಟಗಿ ಹಾಗೂ ಸುತ್ತಮುತ್ತಲೂ ಭೂಂಕಪನ ದೃಢವಾಗಿದ್ದು, ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿರ್ವಹಣಾ ಕೇಂದ್ರದಿಂದ ಅಧಿಕೃತ ಮಾಹಿತಿ  ನೀಡಲಾಗಿದೆ. ಮೇಲಿಂದ ಮೇಲೆ ಭೂಕಂಪನ ಉಂಟಾಗುತ್ತಿದ್ದು, ಈ ಕುರಿತು ಇಂದು ತಜ್ಞ ವಿಜ್ಞಾನಿಗಳು ಜಿಲ್ಲೆಗೆ ಆಗಮಿಸಿ ಪರೀಕ್ಷೆ ನಡೆಸಲಿದ್ದಾರೆ. ಜಿಲ್ಲೆಯ ವಿವಿಧ ಭಾಗಗಳಿಗೆ ತೆರಳಿ ಆಧ್ಯಯನ ಮಾಡಲಿದ್ದಾರೆ ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ.

ಇದನ್ನೂ ಓದಿ: ಮುರುಘಾಶ್ರೀಗಳ ವಿರುದ್ಧ ಪೋಕ್ಸೋ ಕಾಯ್ದೆಯಡಿ ಕೇಸ್ ವಿಚಾರ: ಚಿತ್ರದುರ್ಗ ಎಸ್​​ಪಿ ಪರಶುರಾಮ್​ಗೆ NCPCR ನೋಟಿಸ್ ಜಾರಿ

ಸಾಯಂಕಾಲ ಹಾಗೂ ರಾತ್ರಿ ಭೂಮಿ‌ ಕಂಪಸಿದ್ದು ರಿಕ್ಟರ್ ಮಾಪನದಲ್ಲಿ ‌ದಾಖಲಾಗಿದೆ. ಇಷ್ಟರ ಬಳಿಕ ನಸುಕಿನ ಜಾವ 2-21ಕ್ಕೆ ಕಂಪಿಸ ಭೂಮಿ‌ ಕಂಪಿಸಿದ ಅನುಭವವಾಗಿದೆ. ವಿಜಯಪುರ ನಗರ ಬಸವನಬಾಗೇವಾಡಿ, ಸಿಂದಗಿ, ಇಂಡಿ, ನೆರೆಯ ಬಾಗಲಕೋಟೆಯ ಜಮಖಂಡಿ ಹಾಗೂ ನೆರೆಯ ಮಹಾರಾಷ್ಟ್ರದ ಸೊಲ್ಲಾಪುರದಲ್ಲೂ ಕಂಪನದ ಅನುಭವ ಉಂಟಾಗಿದೆ. ಇಷ್ಟೇ ಅಲ್ಲದೆ ಇಂದು ಮುಂಜಾನೆ 6.58ಕ್ಕೆ ಮತ್ತೇ ಭೂಕಂಪನದ ಅನುಭವವಾಗಿದೆ. ಈ ಕಂಪನಗಳ ಕುರಿತು ಇನ್ನೂ ಮಾಹಿತಿ ತಿಳಿದಿಲ್ಲ. ಎಷ್ಟು ಪ್ರಮಾಣದಲ್ಲಿ ಕಂಪನವಾಗಿದೆ ಎಂದು ಕರಾನೈವಿನಿ ಕೇಂದ್ರದ ಅಧಿಕಾರಿಗಳು ಮಾಹಿತಿ ನೀಡಬೇಕಿದೆ. ಮೇಲಿಂದ ಮೇಲೆ ಸರಣಿ ರೂಪದಲ್ಲಿ ಭೂಕಂಪನ ಕಾಡುತ್ತಿದ್ದು, ಇಂದು ಭೂಕಂಪನ ಕುರಿತು ತಜ್ಞ ವಿಜ್ಞಾನಿಗಳು ಪರೀಕ್ಷೆ ನಡೆಸಲಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ
ಪಡ್ಡೆ ಹುಡುಗರ ಅನೈತಿಕ ತಾಣವಾಗಿ ಮಾರ್ಪಟ್ಟ ಗೋರಿಪಾಳ್ಯ ಇಂದಿರಾ ಕ್ಯಾಂಟೀನ್!
ಪಡ್ಡೆ ಹುಡುಗರ ಅನೈತಿಕ ತಾಣವಾಗಿ ಮಾರ್ಪಟ್ಟ ಗೋರಿಪಾಳ್ಯ ಇಂದಿರಾ ಕ್ಯಾಂಟೀನ್!
Asia Cup Rising Stars: ಫೈನಲ್​ಗೇರಿದ ಟೀಮ್ ಇಂಡಿಯಾ
Asia Cup Rising Stars: ಫೈನಲ್​ಗೇರಿದ ಟೀಮ್ ಇಂಡಿಯಾ
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಲ್ಲಿ ಮನ್ನಣೆ
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಲ್ಲಿ ಮನ್ನಣೆ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು