AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯಿಂದ ಬೆಂಗಳೂರಿಗೆ ತೆರಳುವ ಕೆಕೆ ಎಕ್ಸ್​ಪ್ರೆಸ್ ರೈಲಿಗೆ ಹುಸಿ ಬಾಂಬ್​ ಬೆದರಿಕೆ ಕರೆ: ಓರ್ವ ವ್ಯಕ್ತಿ ಅರೆಸ್ಟ್​

ದೆಹಲಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆಕೆ ಎಕ್ಸ್‌ಪ್ರೆಸ್ ರೈಲಿಗೆ ಮಧ್ಯರಾತ್ರಿ ವ್ಯಕ್ತಿಯೋರ್ವನಿಂದ ಹುಸಿ ಬಾಂಬ್ ಬೆದರಿಕೆ ಕರೆ ಮಾಡಲಾಗಿದೆ. ಕೂಡಲೇ ವಾಡಿ ಜಂಕ್ಷನ್ ಬಳಿ ರೈಲು ತಪಾಸಣೆ ನಡೆಸಲಾಯಿತು. ಪೊಲೀಸರು ಹುಸಿ ಬಾಂಬ್ ಬೆದರಿಕೆ ಕರೆ ಮಾಡಿದ ವ್ಯಕ್ತಿಯನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ.

ದೆಹಲಿಯಿಂದ ಬೆಂಗಳೂರಿಗೆ ತೆರಳುವ ಕೆಕೆ ಎಕ್ಸ್​ಪ್ರೆಸ್ ರೈಲಿಗೆ ಹುಸಿ ಬಾಂಬ್​ ಬೆದರಿಕೆ ಕರೆ: ಓರ್ವ ವ್ಯಕ್ತಿ ಅರೆಸ್ಟ್​
ಪೊಲೀಸರಿಂದ ತೀವ್ರ ತಪಾಸಣೆ
ದತ್ತಾತ್ರೇಯ ಪಾಟೀಲ, ಕಲಬುರಗಿ
| Edited By: |

Updated on:May 11, 2025 | 2:01 PM

Share

ಬೆಂಗಳೂರು, ಮೇ 11: ದೆಹಲಿಯಿಂದ ಬೆಂಗಳೂರಿಗೆ ತೆರಳುವ ಕೆಕೆ ಎಕ್ಸ್​ಪ್ರೆಸ್ (KK Express) ರೈಲಿಗೆ ಓರ್ವ ವ್ಯಕ್ತಿಯಿಂದ ಹುಸಿ ಬಾಂಬ್​ ಬೆದರಿಕೆ ಕರೆ (Fake Bomb Threat) ಮಾಡಲಾಗಿದೆ. ಮಧ್ಯರಾತ್ರಿ ಒಂದು ಗಂಟೆ ಸುಮಾರಿಗೆ ಹುಸಿ ಬಾಂಬ್ ಕರೆ ಬಂದ ಕೂಡಲೇ ವಾಡಿ ಜಂಕ್ಷನ್ ಬಳಿ ರೈಲ್ವೆ ಪೊಲೀಸರಿಂದ ತೀವ್ರ ತಪಾಸಣೆ ಮಾಡಲಾಗಿದೆ. ಬಳಿಕ ಹುಸಿಬಾಂಬ್ ಕರೆ ಅನ್ನೋದನ್ನು ಅಧಿಕಾರಿಗಳು ದೃಢಪಡಿಸಿದ್ದಾರೆ. ಹುಸಿಬಾಂಬ್ ಕರೆ ಮಾಡಿದ ಆರೋಪಿ ದೀಪಕ್​ ಸಿಂಗ್​ ಎಂಬಾತನನ್ನು ಪೊಲೀಸರು ಬಂಧಿಸಿದ್ದು, ವಿಚಾರಣೆ ನಡೆಸಿದ್ದಾರೆ.

ಬಂಧಿತ ವ್ಯಕ್ತಿ ಉತ್ತರ ಪ್ರದೇಶ ಮೂಲದ ದೀಪ್ ಸಿಂಗ್ ರಾಥೋಡ್ (33) ಎಂದು ಗುರುತಿಸಲಾಗಿದೆ. ದೆಹಲಿ-ಬೆಂಗಳೂರು ಮಾರ್ಗವಾಗಿ ಸಂಚರಿಸುವ ಕೆಕೆ ಎಕ್ಸ್​ಪ್ರೆಸ್​ ರೈಲಿನಲ್ಲಿ ಆತನು ಪ್ರಯಾಣಿಸುತ್ತಿದ್ದ. ಈ ವೇಳೆ ಭಾನುವಾರ ಬೆಳಿಗ್ಗೆ ರೈಲ್ವೆ ನಿಯಂತ್ರಣ ಕೊಠಡಿಗೆ ರೈಲಿನಲ್ಲಿ ಬಾಂಬ್​ ಇಡಲಾಗಿದೆ ಎಂದು ಬೆದರಿಕೆ ಕರೆ ಮಾಡುವ ಮೂಲಕ ಭಾರಿ ಭದ್ರತಾ ಭೀತಿಯನ್ನುಂಟುಮಾಡಿದ್ದಾನೆ. ಈ ಹಿನ್ನೆಲೆ ಪೊಲೀಸ್​ ಅಧಿಕಾರಿಗಳು ರೈಲನ್ನು ವಾಡಿ ರೈಲ್ವೆ ನಿಲ್ದಾಣದಲ್ಲಿ ನಿಲ್ಲಿಸಿ, ನಾಲ್ಕು ಗಂಟೆಗಳ ಕಾಲ ಸಂಪೂರ್ಣ ಭದ್ರತಾ ತಪಾಸಣೆ ಮಾಡಿದ್ದಾರೆ.

ಇದನ್ನೂ ಓದಿ: Bomb Thteat: ಚಾಮರಾಜನಗರ, ರಾಯಚೂರು ಡಿಸಿ ಕಚೇರಿ ಸ್ಫೋಟಿಸುವುದಾಗಿ ಬೆದರಿಕೆ ಸಂದೇಶ

ಇದನ್ನೂ ಓದಿ
Image
ನಾನಾ ಕಾರಣಗಳಿಂದ ರಜೆಗೆ ಬಂದಿದ್ದ ಕರ್ನಾಟಕದ ಯೋಧರು ದೇಶ ಸೇವೆಗೆ ವಾಪಸ್
Image
7 ದಿನದ ಕಂದಮ್ಮ, ಬಾಣಂತಿ ಹೆಂಡ್ತಿಯನ್ನು ಬಿಟ್ಟು ದೇಶ ಸೇವೆಗೆ ತೆರಳಿದ ಯೋಧ!
Image
ರಜೆ ಕ್ಯಾನ್ಸಲ್​ ಮಾಡಿ ದೇಶ ಸೇವೆಗೆ ತೆರಳಿದ ಹಾವೇರಿಯ ಯೋಧರು: ಭಾವುಕ ಕ್ಷಣ
Image
ಕೆಕೆ ಎಕ್ಸ್​ಪ್ರೆಸ್​ ರೈಲಿಗೆ ಹುಸಿ ಬಾಂಬ್​ ಬೆದರಿಕೆ ಕರೆ: ವ್ಯಕ್ತಿ ಬಂಧನ

ಬಾಂಬ್ ನಿಷ್ಕ್ರಿಯ ದಳ ಮತ್ತು ಶ್ವಾನ ದಳ ಸ್ಥಳಕ್ಕೆ ದೌಡಾಸಿದ್ದು, ರೈಲಿನ ಎಲ್ಲಾ 22 ಬೋಗಿಗಳನ್ನು ಪರಿಶೀಲಿಸಲಾಯಿತು. ಈ ತಪಾಸಣೆ ವೇಳೆ ಪ್ರಯಾಣಿಕರನ್ನು ಕೆಳಗಿಳಿಸಲಾಗಿತ್ತು. ಈ ವೇಳೆ ಯಾವುದೇ ಸ್ಫೋಟಕಗಳು ಕಂಡುಬಂದಿಲ್ಲ ಮತ್ತು ಇದೊಂದು ಹುಸಿ ಬಾಂಬ್ ಕರೆ ಎಂದು ಅಧಿಕಾರಿಗಳು ದೃಢಪಡಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಕಾಲೇಜಿಗೆ ಬಾಂಬ್ ಬೆದರಿಕೆ, ಪ್ರಾಂಶುಪಾಲರನ್ನು ಕತ್ತರಿಸಿ ಫ್ರಿಡ್ಜ್​ನಲ್ಲಿಡುತ್ತೇವೆ ಎಂದ ದುಷ್ಕರ್ಮಿಗಳು

ಸದ್ಯ ವಾಡಿ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ದೀಪ್ ಸಿಂಗ್ ರಾಥೋಡ್​​ ನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪಿಎಸ್ಐ ವೀರಭದ್ರಪ್ಪ ಹೆಚ್​​ಎಸ್​ ಹೇಳಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 12:01 pm, Sun, 11 May 25

‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?
ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?
ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್
ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್
ಹೂ, ಎಲೆಗಳ ಸಿಂಗಾರ; ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ
ಹೂ, ಎಲೆಗಳ ಸಿಂಗಾರ; ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು
ಮಂಗಳೂರಿನ ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಭಕ್ತರ ದಂಡು
ಮಂಗಳೂರಿನ ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಭಕ್ತರ ದಂಡು
ಪುಟಿನ್ ರಹಸ್ಯ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ
ಪುಟಿನ್ ರಹಸ್ಯ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ
ಕಾರ್ಮಿಕರ ಮೇಲೆ ಹಲ್ಲೆ ಮಾಡಿ ಚಹಾ ಅಂಗಡಿ ಧ್ವಂಸಗೊಳಿಸಿದ ಪೊಲೀಸಪ್ಪ!
ಕಾರ್ಮಿಕರ ಮೇಲೆ ಹಲ್ಲೆ ಮಾಡಿ ಚಹಾ ಅಂಗಡಿ ಧ್ವಂಸಗೊಳಿಸಿದ ಪೊಲೀಸಪ್ಪ!