AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೈದ್ಯರ ನಿರ್ಲಕ್ಷ್ಯಕ್ಕೆ ಮಹಿಳೆ ಸಾವು ಆರೋಪ, ಆಸ್ಪತ್ರೆ ಎದುರು ಶವವಿಟ್ಟು ಕುಟುಂಬಸ್ಥರ ಪ್ರತಿಭಟನೆ

ಡಾ. ಎ.ಪಿ. ಜಂಪಾ ಅವರ ಸಂಜನಾ ಆಸ್ಪತ್ರೆಗೆ ವಾರದ ಹಿಂದಷ್ಟೇ ಇಟಗಾ ಗ್ರಾಮದ ನಾಗಮ್ಮ ಎಂಬಾಕೆ ದಾಖಲಾಗಿದ್ರು. ಗರ್ಭಕೋಶದ ಸಮಸ್ಯೆಯಿಂದ ಬಳಲುತ್ತಿದ್ದ ನಾಗಮ್ಮಗೆ ಶಸ್ತ್ರ ಚಿಕಿತ್ಸೆಯೂ ನಡೆದಿತ್ತು. ಆದ್ರೆ ಆ ಬಳಿಕ ರೋಗ ಮತ್ತಷ್ಟು ಉಲ್ಬಣಗೊಂಡಿದೆ.

ವೈದ್ಯರ ನಿರ್ಲಕ್ಷ್ಯಕ್ಕೆ ಮಹಿಳೆ ಸಾವು ಆರೋಪ, ಆಸ್ಪತ್ರೆ ಎದುರು ಶವವಿಟ್ಟು ಕುಟುಂಬಸ್ಥರ ಪ್ರತಿಭಟನೆ
ವೈದ್ಯರ ನಿರ್ಲಕ್ಷ್ಯಕ್ಕೆ ಮಹಿಳೆ ಸಾವು ಆರೋಪ, ಆಸ್ಪತ್ರೆ ಎದುರು ಶವವಿಟ್ಟು ಕುಟುಂಬಸ್ಥರ ಪ್ರತಿಭಟನೆ
TV9 Web
| Updated By: ಆಯೇಷಾ ಬಾನು|

Updated on: Dec 26, 2021 | 9:03 AM

Share

ಕಲಬುರಗಿ: ವೈದ್ಯರನ್ನು ಜೀವಂತ ದೇವರು ಎಂದು ಕರೆಯುತ್ತೇವೆ. ಆದ್ರೆ ಅದೇ ವೈದ್ಯರ ಮೇಲೆ ಇಲ್ಲಿ ಪ್ರಾಣ ತೆಗೆದ ಆರೋಪ ಕೇಳಿಬಂದಿದೆ. ಡಾಕ್ಟರ್ ನಿರ್ಲಕ್ಷ್ಯದಿಂದಲೇ ಮಹಿಳೆ ಸಾವನ್ನಪ್ಪಿದ್ದಾರೆಂದು ಆರೋಪಿಸಿ ಪ್ರತಿಭಟನೆಯೂ ನಡೆದಿದೆ.

ವೈದ್ಯರ ನಿರ್ಲಕ್ಷ್ಯಕ್ಕೆ ಬಲಿಯಾಯ್ತಾ ಮಹಿಳೆಯ ಜೀವ? ವೈದ್ಯರ ನಿರ್ಲಕ್ಷ್ಯಕ್ಕೆ ಮಹಿಳೆಯೋರ್ವರು ಬಲಿಯಾಗಿರೋ ಆರೋಪ ಕಲಬುರಗಿಯಲ್ಲಿ ಕೇಳಿಬಂದಿದೆ. ನಗರದ ಕರುಣೇಶ್ವರ ಕಾಲೋನಿಯಲ್ಲಿರುವ ಸಂಜನಾ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆ ಸಾವನ್ನಪ್ಪಿದ್ದು, ವೈದ್ಯರ ನಿರ್ಲಕ್ಷ್ಯವೇ ಇದಕ್ಕೆ ಕಾರಣ ಅಂತಾ ಕುಟಂಬಸ್ಥರು ಆರೋಪಿಸಿದ್ದಾರೆ. ಆಸ್ಪತ್ರೆಯ ಮುಂಭಾಗ ಶವವಿಟ್ಟು ಪ್ರತಿಭಟನೆ ನಡೆಸಿದ್ದಾರೆ.

ಡಾ. ಎ.ಪಿ. ಜಂಪಾ ಅವರ ಸಂಜನಾ ಆಸ್ಪತ್ರೆಗೆ ವಾರದ ಹಿಂದಷ್ಟೇ ಇಟಗಾ ಗ್ರಾಮದ ನಾಗಮ್ಮ ಎಂಬಾಕೆ ದಾಖಲಾಗಿದ್ರು. ಗರ್ಭಕೋಶದ ಸಮಸ್ಯೆಯಿಂದ ಬಳಲುತ್ತಿದ್ದ ನಾಗಮ್ಮಗೆ ಶಸ್ತ್ರ ಚಿಕಿತ್ಸೆಯೂ ನಡೆದಿತ್ತು. ಆದ್ರೆ ಆ ಬಳಿಕ ರೋಗ ಮತ್ತಷ್ಟು ಉಲ್ಬಣಗೊಂಡಿದೆ. ಹೀಗಾಗಿ ಡಾ. ಜಂಪಾ ಅದೇ ನಾಗಮ್ಮಗೆ ಮತ್ತೊಮ್ಮೆ ಶಸ್ತ್ರ ಚಿಕಿತ್ಸೆ ಮಾಡಿದ್ರು. ಈ ವೇಳೆ ತೀವ್ರ ರಕ್ತಸ್ರಾವದಿಂದ ನಾಗಮ್ಮ ಚಿಂತಾಜನಕ ಸ್ಥಿತಿಗೆ ತಲುಪಿದ್ದು, ಬೇರೊಂದು ಖಾಸಗಿ ಆಸ್ಪತ್ರೆಗೆ ಆಕೆಯನ್ನು ಶಿಫ್ಟ್ ಮಾಡಲಾಗಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ನಾಗಮ್ಮ ಅಸುನೀಗಿದ್ದಾರೆ. ಈ ಸಾವಿಗೆ ವೈದ್ಯರೇ ಕಾರಣ ಅಂತಾ ಕುಟುಂಬಸ್ಥರು ಆರೋಪಿಸಿದ್ದಾರೆ.

ಆದ್ರೆ ವೈದ್ಯ ಡಾ. ಜಂಪಾ ಮಾತ್ರ ತಮ್ಮ ಮೇಲಿನ ಆರೋಪಗಳನ್ನು ಅಲ್ಲಗಳೆದಿದ್ದಾರೆ. ನಮ್ಮ ಕೈಲಾದ ಎಲ್ಲ ಪ್ರಯತ್ನ ಮಾಡಿದೀವಿ ಅಂತಾ ಸ್ಪಷ್ಟನೆ ಕೊಟ್ಟಿದ್ದಾರೆ. ವೈದ್ಯರ ಸ್ಪಷ್ಟನೆ ಅದೇನೇ ಇದ್ರೂ ಆಗಾಗ ಇಲ್ಲಿ ಇಂಥಹ ಘಟನೆ ಮಾಮೂಲು. ಈ ಆಸ್ಪತ್ರೆ ಅವ್ಯವಸ್ಥೆಯಿಂದ ಕೂಡಿರೋದು ನಿಜ ಅನ್ನೋದು ಸಾರ್ವಜನಿಕರ ಆರೋಪ.

ವರದಿ: ಸಂಜಯ್ ಟಿವಿ9, ಕಲಬುರಗಿ

ಇದನ್ನೂ ಓದಿ: Katrina Kaif: ವಿಕ್ಕಿ ತೋಳಿನಲ್ಲಿ ಕತ್ರಿನಾ ಬಂಧಿ; ಈ ಚಿತ್ರಕ್ಕಿದೆ ವಿಶೇಷ ಹಿನ್ನೆಲೆ

ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?