AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೈದ್ಯರ ನಿರ್ಲಕ್ಷ್ಯಕ್ಕೆ ಮಹಿಳೆ ಸಾವು ಆರೋಪ, ಆಸ್ಪತ್ರೆ ಎದುರು ಶವವಿಟ್ಟು ಕುಟುಂಬಸ್ಥರ ಪ್ರತಿಭಟನೆ

ಡಾ. ಎ.ಪಿ. ಜಂಪಾ ಅವರ ಸಂಜನಾ ಆಸ್ಪತ್ರೆಗೆ ವಾರದ ಹಿಂದಷ್ಟೇ ಇಟಗಾ ಗ್ರಾಮದ ನಾಗಮ್ಮ ಎಂಬಾಕೆ ದಾಖಲಾಗಿದ್ರು. ಗರ್ಭಕೋಶದ ಸಮಸ್ಯೆಯಿಂದ ಬಳಲುತ್ತಿದ್ದ ನಾಗಮ್ಮಗೆ ಶಸ್ತ್ರ ಚಿಕಿತ್ಸೆಯೂ ನಡೆದಿತ್ತು. ಆದ್ರೆ ಆ ಬಳಿಕ ರೋಗ ಮತ್ತಷ್ಟು ಉಲ್ಬಣಗೊಂಡಿದೆ.

ವೈದ್ಯರ ನಿರ್ಲಕ್ಷ್ಯಕ್ಕೆ ಮಹಿಳೆ ಸಾವು ಆರೋಪ, ಆಸ್ಪತ್ರೆ ಎದುರು ಶವವಿಟ್ಟು ಕುಟುಂಬಸ್ಥರ ಪ್ರತಿಭಟನೆ
ವೈದ್ಯರ ನಿರ್ಲಕ್ಷ್ಯಕ್ಕೆ ಮಹಿಳೆ ಸಾವು ಆರೋಪ, ಆಸ್ಪತ್ರೆ ಎದುರು ಶವವಿಟ್ಟು ಕುಟುಂಬಸ್ಥರ ಪ್ರತಿಭಟನೆ
TV9 Web
| Edited By: |

Updated on: Dec 26, 2021 | 9:03 AM

Share

ಕಲಬುರಗಿ: ವೈದ್ಯರನ್ನು ಜೀವಂತ ದೇವರು ಎಂದು ಕರೆಯುತ್ತೇವೆ. ಆದ್ರೆ ಅದೇ ವೈದ್ಯರ ಮೇಲೆ ಇಲ್ಲಿ ಪ್ರಾಣ ತೆಗೆದ ಆರೋಪ ಕೇಳಿಬಂದಿದೆ. ಡಾಕ್ಟರ್ ನಿರ್ಲಕ್ಷ್ಯದಿಂದಲೇ ಮಹಿಳೆ ಸಾವನ್ನಪ್ಪಿದ್ದಾರೆಂದು ಆರೋಪಿಸಿ ಪ್ರತಿಭಟನೆಯೂ ನಡೆದಿದೆ.

ವೈದ್ಯರ ನಿರ್ಲಕ್ಷ್ಯಕ್ಕೆ ಬಲಿಯಾಯ್ತಾ ಮಹಿಳೆಯ ಜೀವ? ವೈದ್ಯರ ನಿರ್ಲಕ್ಷ್ಯಕ್ಕೆ ಮಹಿಳೆಯೋರ್ವರು ಬಲಿಯಾಗಿರೋ ಆರೋಪ ಕಲಬುರಗಿಯಲ್ಲಿ ಕೇಳಿಬಂದಿದೆ. ನಗರದ ಕರುಣೇಶ್ವರ ಕಾಲೋನಿಯಲ್ಲಿರುವ ಸಂಜನಾ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆ ಸಾವನ್ನಪ್ಪಿದ್ದು, ವೈದ್ಯರ ನಿರ್ಲಕ್ಷ್ಯವೇ ಇದಕ್ಕೆ ಕಾರಣ ಅಂತಾ ಕುಟಂಬಸ್ಥರು ಆರೋಪಿಸಿದ್ದಾರೆ. ಆಸ್ಪತ್ರೆಯ ಮುಂಭಾಗ ಶವವಿಟ್ಟು ಪ್ರತಿಭಟನೆ ನಡೆಸಿದ್ದಾರೆ.

ಡಾ. ಎ.ಪಿ. ಜಂಪಾ ಅವರ ಸಂಜನಾ ಆಸ್ಪತ್ರೆಗೆ ವಾರದ ಹಿಂದಷ್ಟೇ ಇಟಗಾ ಗ್ರಾಮದ ನಾಗಮ್ಮ ಎಂಬಾಕೆ ದಾಖಲಾಗಿದ್ರು. ಗರ್ಭಕೋಶದ ಸಮಸ್ಯೆಯಿಂದ ಬಳಲುತ್ತಿದ್ದ ನಾಗಮ್ಮಗೆ ಶಸ್ತ್ರ ಚಿಕಿತ್ಸೆಯೂ ನಡೆದಿತ್ತು. ಆದ್ರೆ ಆ ಬಳಿಕ ರೋಗ ಮತ್ತಷ್ಟು ಉಲ್ಬಣಗೊಂಡಿದೆ. ಹೀಗಾಗಿ ಡಾ. ಜಂಪಾ ಅದೇ ನಾಗಮ್ಮಗೆ ಮತ್ತೊಮ್ಮೆ ಶಸ್ತ್ರ ಚಿಕಿತ್ಸೆ ಮಾಡಿದ್ರು. ಈ ವೇಳೆ ತೀವ್ರ ರಕ್ತಸ್ರಾವದಿಂದ ನಾಗಮ್ಮ ಚಿಂತಾಜನಕ ಸ್ಥಿತಿಗೆ ತಲುಪಿದ್ದು, ಬೇರೊಂದು ಖಾಸಗಿ ಆಸ್ಪತ್ರೆಗೆ ಆಕೆಯನ್ನು ಶಿಫ್ಟ್ ಮಾಡಲಾಗಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ನಾಗಮ್ಮ ಅಸುನೀಗಿದ್ದಾರೆ. ಈ ಸಾವಿಗೆ ವೈದ್ಯರೇ ಕಾರಣ ಅಂತಾ ಕುಟುಂಬಸ್ಥರು ಆರೋಪಿಸಿದ್ದಾರೆ.

ಆದ್ರೆ ವೈದ್ಯ ಡಾ. ಜಂಪಾ ಮಾತ್ರ ತಮ್ಮ ಮೇಲಿನ ಆರೋಪಗಳನ್ನು ಅಲ್ಲಗಳೆದಿದ್ದಾರೆ. ನಮ್ಮ ಕೈಲಾದ ಎಲ್ಲ ಪ್ರಯತ್ನ ಮಾಡಿದೀವಿ ಅಂತಾ ಸ್ಪಷ್ಟನೆ ಕೊಟ್ಟಿದ್ದಾರೆ. ವೈದ್ಯರ ಸ್ಪಷ್ಟನೆ ಅದೇನೇ ಇದ್ರೂ ಆಗಾಗ ಇಲ್ಲಿ ಇಂಥಹ ಘಟನೆ ಮಾಮೂಲು. ಈ ಆಸ್ಪತ್ರೆ ಅವ್ಯವಸ್ಥೆಯಿಂದ ಕೂಡಿರೋದು ನಿಜ ಅನ್ನೋದು ಸಾರ್ವಜನಿಕರ ಆರೋಪ.

ವರದಿ: ಸಂಜಯ್ ಟಿವಿ9, ಕಲಬುರಗಿ

ಇದನ್ನೂ ಓದಿ: Katrina Kaif: ವಿಕ್ಕಿ ತೋಳಿನಲ್ಲಿ ಕತ್ರಿನಾ ಬಂಧಿ; ಈ ಚಿತ್ರಕ್ಕಿದೆ ವಿಶೇಷ ಹಿನ್ನೆಲೆ

ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?