AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kalaburagi News: ಜಮೀನಿನಲ್ಲಿ ವಿದ್ಯುತ್ ತಂತಿ ತಗುಲಿ ರೈತನ ಜೊತೆ ಎತ್ತು ಬಲಿ

ಜಮೀನಿನಿಂದ ಮನೆಗೆ ಬರುವಾಗ ಜಮೀನಿನಲ್ಲಿ ಜೋತುಬಿದ್ದ ವಿದ್ಯುತ್ ತಂತಿಗೆ ಬಾರುಕೋಲು ತಗುಲಿ ಯುವ ರೈತ ಹಾಗೂ ಎತ್ತು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ನಿನ್ನೆ ಮಳೆಯಿಂದಾಗಿ ಮನೆ ಗೋಡೆ ಕುಸಿದು ಮಹಿಳೆ ಮೃತಪಟ್ಟಿದ್ದರು.

Kalaburagi News: ಜಮೀನಿನಲ್ಲಿ ವಿದ್ಯುತ್ ತಂತಿ ತಗುಲಿ ರೈತನ ಜೊತೆ ಎತ್ತು ಬಲಿ
ಮೃತ ಬಸವರಾಜ್ ಹೆಗಲೇರಿ ಮತ್ತು ಎತ್ತು
Follow us
ಸಂಜಯ್ಯಾ ಚಿಕ್ಕಮಠ, ಕೊಪ್ಪಳ
| Updated By: ಆಯೇಷಾ ಬಾನು

Updated on: Jul 25, 2023 | 9:07 AM

ಕಲಬುರಗಿ, ಜುಲೈ 25: ಜಮೀನಿನಲ್ಲಿ ವಿದ್ಯುತ್ ತಂತಿ ತಗುಲಿ(Electrocuted ) ಸ್ಥಳದಲ್ಲೇ ಯುವ ರೈತ(Farmer) ಹಾಗೂ ಎತ್ತು(Ox) ಮೃತಪಟ್ಟ ಘಟನೆ ಕಲಬುರಗಿ ಜಿಲ್ಲೆ ಚಿತ್ತಾಪುರ ತಾಲೂಕಿನ ಕರದಾಳ ಗ್ರಾಮದಲ್ಲಿ ನಡೆದಿದೆ. ಬಸವರಾಜ್ ಹೆಗಲೇರಿ (24) ಹಾಗೂ ಎತ್ತು ಸ್ಥಳದಲ್ಲೇ ಸಾವನ್ನಪ್ಪಿದೆ. ಸಂಜೆ ಜಮೀನಿನಿಂದ ಮನೆಗೆ ಬರುವಾಗ ಜಮೀನಿನಲ್ಲಿ ಜೋತುಬಿದ್ದ ವಿದ್ಯುತ್ ತಂತಿಗೆ ಬಾರುಕೋಲು ತಗುಲಿ ಘಟನೆ ಸಂಭವಿಸಿದೆ. ಚಿತ್ತಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿರಂತರ ಮಳೆಗೆ ಕುಸಿದ ಮಣ್ಣಿನ ಗೋಡೆ: ಮಹಿಳೆ ಸಾವು

ಕಲಬುರಗಿ ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಮಳೆ ಸುರಿಯುತ್ತಿದೆ. ನಿರಂತರ ಮಳೆಯಿಂದ ಮಣ್ಣಿನಿಂದ ನಿರ್ಮಾಣ ಮಾಡಿರೋ ಗೋಡೆಗಳು ಬೀಳುತ್ತಿವೆ. ಮನೆ ಗೋಡೆ ಬಿದ್ದಿದ್ದರಿಂದ ಮಹಿಳೆಯೋರ್ವಳು ಮೃತಪಟ್ಟಿರೋ ಘಟನೆ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಬಿರಾಳ್ ಬಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಮೂವತ್ತೈದು ವರ್ಷದ ಬಸಮ್ಮ ಮೃತ ಮಹಿಳೆ, ಮನೆಯಲ್ಲಿ ಇದ್ದಾಗ ದಿಡೀರನೆ ಮನೆಯ ಗೋಡೆ ಬಿದ್ದಿದ್ದು, ಬಸಮ್ಮ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಈ ಬಗ್ಗೆ ಜೇವರ್ಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Karnataka Breaking Kannada News Live: ಸಿಎಂ ಆದ ನಂತರ ಮೊದಲ ಬಾರಿ ಹಾವೇರಿಗೆ ಭೇಟಿ ನೀಡಲಿರುವ ಸಿದ್ದರಾಮಯ್ಯ

ಜೂನ್ ಮತ್ತು ಜುಲೈ ಆರಂಭದ ದಿನಗಳಲ್ಲಿ ಮಳೆ ಕಾಣಿಸಿಕೊಂಡಿರಲಿಲ್ಲ. ಹೀಗಾಗಿ ಬರದ ಕಾರ್ಮೋಡ ಕವಿದಿತ್ತು. ಆದರೆ ಜುಲೈ 15 ರಿಂದ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದೆ. ನಿರಂತರ ಮಳೆಯಿಂದ ಅನ್ನದಾತರ ಮೊಗದಲ್ಲಿ ಮಂದಹಾಸ ಮೂಡಿದೆ. ಜೊತೆಗೆ ಅನೇಕ ಅವಘಡಗಳು ಕೂಡ ಸಂಭವಿಸುತ್ತಿವೆ. ನಗರದ ಶಹಬಜಾರ್ ಪ್ರದೇಶದಲ್ಲಿ ಮೂರು ದಿನದ ಹಿಂದೆಯಷ್ಟೇ ಮಣ್ಣು ಮತ್ತು ಕಲ್ಲಿನಿಂದ ನಿರ್ಮಾಣ ಮಾಡಿದ್ದ ದೊಡ್ಡ ಗೋಡೆ ಕುಸಿದು ಬಿದ್ದಿತ್ತು. ಅದೃಷ್ಟವಶಾತ್ ಮನೆಯಲ್ಲಿ ಯಾರು ಇಲ್ಲದೇ ಇದ್ದಿದ್ದರಿಂದ ದೊಡ್ಡ ಅನಾಹುತ ತಪ್ಪಿತ್ತು.

ಅಪಫಜಲಪುರ ತಾಲೂಕಿನ ಸಿದನೂರು, ಚಿತ್ತಾಪುರ, ಚಿಂಚೋಳಿ ತಾಲೂಕಿನ ಅನೇಕ ಗ್ರಾಮಗಳಲ್ಲಿ ಸಾಕಷ್ಟು ಮನೆಗಳ ಗೋಡೆಗಳು ನಿರಂತರ ಮಳೆಯಿಂದ ಕುಸಿದು ಬಿದ್ದಿವೆ. ಜಿಲ್ಲೆಯಲ್ಲಿ ಹೆಚ್ಚಾಗಿ ಮಣ್ಣು ಮತ್ತು ಕಲ್ಲಿನಿಂದ ನಿರ್ಮಾಣ ಮಾಡಿರುವ ಬಹಳಷ್ಟು ಮನೆಗಳಿವೆ. ಅವುಗಳಿಗೆ ಅನೇಕರು ಸಿಮೆಂಟ್ ಕೂಡಾ ಹಾಕಿಲ್ಲ. ಭಾರೀ ಮಳೆಯಾದರೆ ಮಣ್ಣು ಕರಗುವುದರಿಂದ ಗೋಡೆಗಳು ಕುಸಿದು ಬೀಳುತ್ತಿವೆ.

ಕಲಬುರಗಿ ಜಿಲ್ಲೆಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಬೆಂಗಳೂರಿನ ಜಯನಗರದಲ್ಲಿ ಧರೆಗೆ ಉರುಳಿದ ಮರ
ಬೆಂಗಳೂರಿನ ಜಯನಗರದಲ್ಲಿ ಧರೆಗೆ ಉರುಳಿದ ಮರ
ಅಮೆರಿಕದ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದ ಅಪ್ಪು ಪುತ್ರಿ ಧ್ರುತಿ
ಅಮೆರಿಕದ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದ ಅಪ್ಪು ಪುತ್ರಿ ಧ್ರುತಿ
ಶಿವಣ್ಣನ ಮನೆಯ ಗೌಪ್ಯ ಸಭೆಯಲ್ಲಿ ಚರ್ಚೆಯಾದ ವಿಷಯಗಳೇನು: ನರಸಿಂಹಲು ಮಾಹಿತಿ
ಶಿವಣ್ಣನ ಮನೆಯ ಗೌಪ್ಯ ಸಭೆಯಲ್ಲಿ ಚರ್ಚೆಯಾದ ವಿಷಯಗಳೇನು: ನರಸಿಂಹಲು ಮಾಹಿತಿ
ದೇಶಕ್ಕಿಂತ ದೊಡ್ಡವರು ಯಾರೂ ಇಲ್ಲ, ದೇಶವುಳಿದರೆ ನಾವು ಉಳಿದಂತೆ: ಶಾಸಕ
ದೇಶಕ್ಕಿಂತ ದೊಡ್ಡವರು ಯಾರೂ ಇಲ್ಲ, ದೇಶವುಳಿದರೆ ನಾವು ಉಳಿದಂತೆ: ಶಾಸಕ
ತಿಂಗಳ ಅವಧಿಯಲ್ಲಿ ಭಕ್ತರಿಂದ ಹುಂಡಿಯಲ್ಲಿ ₹59, 28, 876 ಕಾಣಿಕೆ ಸಂಗ್ರಹ
ತಿಂಗಳ ಅವಧಿಯಲ್ಲಿ ಭಕ್ತರಿಂದ ಹುಂಡಿಯಲ್ಲಿ ₹59, 28, 876 ಕಾಣಿಕೆ ಸಂಗ್ರಹ
ಎರಡು ವರ್ಷಗಳಿಂದ ತಮ್ಮಯ್ಯ-ರವಿ ಮಧ್ಯೆ ಆಗಾಗ್ಗೆ ನಡೆಯುತ್ತಿದೆ ಮಾತಿನ ಕಲಹ
ಎರಡು ವರ್ಷಗಳಿಂದ ತಮ್ಮಯ್ಯ-ರವಿ ಮಧ್ಯೆ ಆಗಾಗ್ಗೆ ನಡೆಯುತ್ತಿದೆ ಮಾತಿನ ಕಲಹ
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್
ಒಡಿಷಾದಿಂದ ಬಂದಿರುವ ಕೊಹ್ಲಿ ಕಟ್ಟಾಭಿಮಾನಿಗೆ ಟಿಕೆಟ್ ಸಿಕ್ಕಿಲ್ಲ
ಒಡಿಷಾದಿಂದ ಬಂದಿರುವ ಕೊಹ್ಲಿ ಕಟ್ಟಾಭಿಮಾನಿಗೆ ಟಿಕೆಟ್ ಸಿಕ್ಕಿಲ್ಲ
ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ಮದುಮಗ ಸಾವು: ಅಸಲಿಗೆ ಆಗಿದ್ದೇನು?
ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ಮದುಮಗ ಸಾವು: ಅಸಲಿಗೆ ಆಗಿದ್ದೇನು?