AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kalaburagi News: ಜಮೀನಿನಲ್ಲಿ ವಿದ್ಯುತ್ ತಂತಿ ತಗುಲಿ ರೈತನ ಜೊತೆ ಎತ್ತು ಬಲಿ

ಜಮೀನಿನಿಂದ ಮನೆಗೆ ಬರುವಾಗ ಜಮೀನಿನಲ್ಲಿ ಜೋತುಬಿದ್ದ ವಿದ್ಯುತ್ ತಂತಿಗೆ ಬಾರುಕೋಲು ತಗುಲಿ ಯುವ ರೈತ ಹಾಗೂ ಎತ್ತು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ನಿನ್ನೆ ಮಳೆಯಿಂದಾಗಿ ಮನೆ ಗೋಡೆ ಕುಸಿದು ಮಹಿಳೆ ಮೃತಪಟ್ಟಿದ್ದರು.

Kalaburagi News: ಜಮೀನಿನಲ್ಲಿ ವಿದ್ಯುತ್ ತಂತಿ ತಗುಲಿ ರೈತನ ಜೊತೆ ಎತ್ತು ಬಲಿ
ಮೃತ ಬಸವರಾಜ್ ಹೆಗಲೇರಿ ಮತ್ತು ಎತ್ತು
ಸಂಜಯ್ಯಾ ಚಿಕ್ಕಮಠ
| Edited By: |

Updated on: Jul 25, 2023 | 9:07 AM

Share

ಕಲಬುರಗಿ, ಜುಲೈ 25: ಜಮೀನಿನಲ್ಲಿ ವಿದ್ಯುತ್ ತಂತಿ ತಗುಲಿ(Electrocuted ) ಸ್ಥಳದಲ್ಲೇ ಯುವ ರೈತ(Farmer) ಹಾಗೂ ಎತ್ತು(Ox) ಮೃತಪಟ್ಟ ಘಟನೆ ಕಲಬುರಗಿ ಜಿಲ್ಲೆ ಚಿತ್ತಾಪುರ ತಾಲೂಕಿನ ಕರದಾಳ ಗ್ರಾಮದಲ್ಲಿ ನಡೆದಿದೆ. ಬಸವರಾಜ್ ಹೆಗಲೇರಿ (24) ಹಾಗೂ ಎತ್ತು ಸ್ಥಳದಲ್ಲೇ ಸಾವನ್ನಪ್ಪಿದೆ. ಸಂಜೆ ಜಮೀನಿನಿಂದ ಮನೆಗೆ ಬರುವಾಗ ಜಮೀನಿನಲ್ಲಿ ಜೋತುಬಿದ್ದ ವಿದ್ಯುತ್ ತಂತಿಗೆ ಬಾರುಕೋಲು ತಗುಲಿ ಘಟನೆ ಸಂಭವಿಸಿದೆ. ಚಿತ್ತಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿರಂತರ ಮಳೆಗೆ ಕುಸಿದ ಮಣ್ಣಿನ ಗೋಡೆ: ಮಹಿಳೆ ಸಾವು

ಕಲಬುರಗಿ ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಮಳೆ ಸುರಿಯುತ್ತಿದೆ. ನಿರಂತರ ಮಳೆಯಿಂದ ಮಣ್ಣಿನಿಂದ ನಿರ್ಮಾಣ ಮಾಡಿರೋ ಗೋಡೆಗಳು ಬೀಳುತ್ತಿವೆ. ಮನೆ ಗೋಡೆ ಬಿದ್ದಿದ್ದರಿಂದ ಮಹಿಳೆಯೋರ್ವಳು ಮೃತಪಟ್ಟಿರೋ ಘಟನೆ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಬಿರಾಳ್ ಬಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಮೂವತ್ತೈದು ವರ್ಷದ ಬಸಮ್ಮ ಮೃತ ಮಹಿಳೆ, ಮನೆಯಲ್ಲಿ ಇದ್ದಾಗ ದಿಡೀರನೆ ಮನೆಯ ಗೋಡೆ ಬಿದ್ದಿದ್ದು, ಬಸಮ್ಮ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಈ ಬಗ್ಗೆ ಜೇವರ್ಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Karnataka Breaking Kannada News Live: ಸಿಎಂ ಆದ ನಂತರ ಮೊದಲ ಬಾರಿ ಹಾವೇರಿಗೆ ಭೇಟಿ ನೀಡಲಿರುವ ಸಿದ್ದರಾಮಯ್ಯ

ಜೂನ್ ಮತ್ತು ಜುಲೈ ಆರಂಭದ ದಿನಗಳಲ್ಲಿ ಮಳೆ ಕಾಣಿಸಿಕೊಂಡಿರಲಿಲ್ಲ. ಹೀಗಾಗಿ ಬರದ ಕಾರ್ಮೋಡ ಕವಿದಿತ್ತು. ಆದರೆ ಜುಲೈ 15 ರಿಂದ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದೆ. ನಿರಂತರ ಮಳೆಯಿಂದ ಅನ್ನದಾತರ ಮೊಗದಲ್ಲಿ ಮಂದಹಾಸ ಮೂಡಿದೆ. ಜೊತೆಗೆ ಅನೇಕ ಅವಘಡಗಳು ಕೂಡ ಸಂಭವಿಸುತ್ತಿವೆ. ನಗರದ ಶಹಬಜಾರ್ ಪ್ರದೇಶದಲ್ಲಿ ಮೂರು ದಿನದ ಹಿಂದೆಯಷ್ಟೇ ಮಣ್ಣು ಮತ್ತು ಕಲ್ಲಿನಿಂದ ನಿರ್ಮಾಣ ಮಾಡಿದ್ದ ದೊಡ್ಡ ಗೋಡೆ ಕುಸಿದು ಬಿದ್ದಿತ್ತು. ಅದೃಷ್ಟವಶಾತ್ ಮನೆಯಲ್ಲಿ ಯಾರು ಇಲ್ಲದೇ ಇದ್ದಿದ್ದರಿಂದ ದೊಡ್ಡ ಅನಾಹುತ ತಪ್ಪಿತ್ತು.

ಅಪಫಜಲಪುರ ತಾಲೂಕಿನ ಸಿದನೂರು, ಚಿತ್ತಾಪುರ, ಚಿಂಚೋಳಿ ತಾಲೂಕಿನ ಅನೇಕ ಗ್ರಾಮಗಳಲ್ಲಿ ಸಾಕಷ್ಟು ಮನೆಗಳ ಗೋಡೆಗಳು ನಿರಂತರ ಮಳೆಯಿಂದ ಕುಸಿದು ಬಿದ್ದಿವೆ. ಜಿಲ್ಲೆಯಲ್ಲಿ ಹೆಚ್ಚಾಗಿ ಮಣ್ಣು ಮತ್ತು ಕಲ್ಲಿನಿಂದ ನಿರ್ಮಾಣ ಮಾಡಿರುವ ಬಹಳಷ್ಟು ಮನೆಗಳಿವೆ. ಅವುಗಳಿಗೆ ಅನೇಕರು ಸಿಮೆಂಟ್ ಕೂಡಾ ಹಾಕಿಲ್ಲ. ಭಾರೀ ಮಳೆಯಾದರೆ ಮಣ್ಣು ಕರಗುವುದರಿಂದ ಗೋಡೆಗಳು ಕುಸಿದು ಬೀಳುತ್ತಿವೆ.

ಕಲಬುರಗಿ ಜಿಲ್ಲೆಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
Sanjayya Chikkamath
Sanjayya Chikkamath

ಸಂಜಯ್ಯಾ ಚಿಕ್ಕಮಠ. ಹುಟ್ಟಿದ್ದು ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ರಾಮನಾಳ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 14 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ನಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಕೊಪ್ಪಳಕ್ಕೆ ಬಂದು ನಿಂತಿದೆ. ಕೃಷಿ ನನ್ನಿಷ್ಟ.ಆದ್ರೆ ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ಗಂಡನ ಜೊತೆಗಿದ್ದರೂ ಬರ್ತೀಯಾ ಎಂದು ಕೇಳ್ತಾರೆ
ಗಂಡನ ಜೊತೆಗಿದ್ದರೂ ಬರ್ತೀಯಾ ಎಂದು ಕೇಳ್ತಾರೆ