AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kalaburagi News: ಜಮೀನಿನಲ್ಲಿ ವಿದ್ಯುತ್ ತಂತಿ ತಗುಲಿ ರೈತನ ಜೊತೆ ಎತ್ತು ಬಲಿ

ಜಮೀನಿನಿಂದ ಮನೆಗೆ ಬರುವಾಗ ಜಮೀನಿನಲ್ಲಿ ಜೋತುಬಿದ್ದ ವಿದ್ಯುತ್ ತಂತಿಗೆ ಬಾರುಕೋಲು ತಗುಲಿ ಯುವ ರೈತ ಹಾಗೂ ಎತ್ತು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ನಿನ್ನೆ ಮಳೆಯಿಂದಾಗಿ ಮನೆ ಗೋಡೆ ಕುಸಿದು ಮಹಿಳೆ ಮೃತಪಟ್ಟಿದ್ದರು.

Kalaburagi News: ಜಮೀನಿನಲ್ಲಿ ವಿದ್ಯುತ್ ತಂತಿ ತಗುಲಿ ರೈತನ ಜೊತೆ ಎತ್ತು ಬಲಿ
ಮೃತ ಬಸವರಾಜ್ ಹೆಗಲೇರಿ ಮತ್ತು ಎತ್ತು
ಸಂಜಯ್ಯಾ ಚಿಕ್ಕಮಠ
| Edited By: ಆಯೇಷಾ ಬಾನು|

Updated on: Jul 25, 2023 | 9:07 AM

Share

ಕಲಬುರಗಿ, ಜುಲೈ 25: ಜಮೀನಿನಲ್ಲಿ ವಿದ್ಯುತ್ ತಂತಿ ತಗುಲಿ(Electrocuted ) ಸ್ಥಳದಲ್ಲೇ ಯುವ ರೈತ(Farmer) ಹಾಗೂ ಎತ್ತು(Ox) ಮೃತಪಟ್ಟ ಘಟನೆ ಕಲಬುರಗಿ ಜಿಲ್ಲೆ ಚಿತ್ತಾಪುರ ತಾಲೂಕಿನ ಕರದಾಳ ಗ್ರಾಮದಲ್ಲಿ ನಡೆದಿದೆ. ಬಸವರಾಜ್ ಹೆಗಲೇರಿ (24) ಹಾಗೂ ಎತ್ತು ಸ್ಥಳದಲ್ಲೇ ಸಾವನ್ನಪ್ಪಿದೆ. ಸಂಜೆ ಜಮೀನಿನಿಂದ ಮನೆಗೆ ಬರುವಾಗ ಜಮೀನಿನಲ್ಲಿ ಜೋತುಬಿದ್ದ ವಿದ್ಯುತ್ ತಂತಿಗೆ ಬಾರುಕೋಲು ತಗುಲಿ ಘಟನೆ ಸಂಭವಿಸಿದೆ. ಚಿತ್ತಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿರಂತರ ಮಳೆಗೆ ಕುಸಿದ ಮಣ್ಣಿನ ಗೋಡೆ: ಮಹಿಳೆ ಸಾವು

ಕಲಬುರಗಿ ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಮಳೆ ಸುರಿಯುತ್ತಿದೆ. ನಿರಂತರ ಮಳೆಯಿಂದ ಮಣ್ಣಿನಿಂದ ನಿರ್ಮಾಣ ಮಾಡಿರೋ ಗೋಡೆಗಳು ಬೀಳುತ್ತಿವೆ. ಮನೆ ಗೋಡೆ ಬಿದ್ದಿದ್ದರಿಂದ ಮಹಿಳೆಯೋರ್ವಳು ಮೃತಪಟ್ಟಿರೋ ಘಟನೆ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಬಿರಾಳ್ ಬಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಮೂವತ್ತೈದು ವರ್ಷದ ಬಸಮ್ಮ ಮೃತ ಮಹಿಳೆ, ಮನೆಯಲ್ಲಿ ಇದ್ದಾಗ ದಿಡೀರನೆ ಮನೆಯ ಗೋಡೆ ಬಿದ್ದಿದ್ದು, ಬಸಮ್ಮ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಈ ಬಗ್ಗೆ ಜೇವರ್ಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Karnataka Breaking Kannada News Live: ಸಿಎಂ ಆದ ನಂತರ ಮೊದಲ ಬಾರಿ ಹಾವೇರಿಗೆ ಭೇಟಿ ನೀಡಲಿರುವ ಸಿದ್ದರಾಮಯ್ಯ

ಜೂನ್ ಮತ್ತು ಜುಲೈ ಆರಂಭದ ದಿನಗಳಲ್ಲಿ ಮಳೆ ಕಾಣಿಸಿಕೊಂಡಿರಲಿಲ್ಲ. ಹೀಗಾಗಿ ಬರದ ಕಾರ್ಮೋಡ ಕವಿದಿತ್ತು. ಆದರೆ ಜುಲೈ 15 ರಿಂದ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದೆ. ನಿರಂತರ ಮಳೆಯಿಂದ ಅನ್ನದಾತರ ಮೊಗದಲ್ಲಿ ಮಂದಹಾಸ ಮೂಡಿದೆ. ಜೊತೆಗೆ ಅನೇಕ ಅವಘಡಗಳು ಕೂಡ ಸಂಭವಿಸುತ್ತಿವೆ. ನಗರದ ಶಹಬಜಾರ್ ಪ್ರದೇಶದಲ್ಲಿ ಮೂರು ದಿನದ ಹಿಂದೆಯಷ್ಟೇ ಮಣ್ಣು ಮತ್ತು ಕಲ್ಲಿನಿಂದ ನಿರ್ಮಾಣ ಮಾಡಿದ್ದ ದೊಡ್ಡ ಗೋಡೆ ಕುಸಿದು ಬಿದ್ದಿತ್ತು. ಅದೃಷ್ಟವಶಾತ್ ಮನೆಯಲ್ಲಿ ಯಾರು ಇಲ್ಲದೇ ಇದ್ದಿದ್ದರಿಂದ ದೊಡ್ಡ ಅನಾಹುತ ತಪ್ಪಿತ್ತು.

ಅಪಫಜಲಪುರ ತಾಲೂಕಿನ ಸಿದನೂರು, ಚಿತ್ತಾಪುರ, ಚಿಂಚೋಳಿ ತಾಲೂಕಿನ ಅನೇಕ ಗ್ರಾಮಗಳಲ್ಲಿ ಸಾಕಷ್ಟು ಮನೆಗಳ ಗೋಡೆಗಳು ನಿರಂತರ ಮಳೆಯಿಂದ ಕುಸಿದು ಬಿದ್ದಿವೆ. ಜಿಲ್ಲೆಯಲ್ಲಿ ಹೆಚ್ಚಾಗಿ ಮಣ್ಣು ಮತ್ತು ಕಲ್ಲಿನಿಂದ ನಿರ್ಮಾಣ ಮಾಡಿರುವ ಬಹಳಷ್ಟು ಮನೆಗಳಿವೆ. ಅವುಗಳಿಗೆ ಅನೇಕರು ಸಿಮೆಂಟ್ ಕೂಡಾ ಹಾಕಿಲ್ಲ. ಭಾರೀ ಮಳೆಯಾದರೆ ಮಣ್ಣು ಕರಗುವುದರಿಂದ ಗೋಡೆಗಳು ಕುಸಿದು ಬೀಳುತ್ತಿವೆ.

ಕಲಬುರಗಿ ಜಿಲ್ಲೆಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
Sanjayya Chikkamath
Sanjayya Chikkamath

ಸಂಜಯ್ಯಾ ಚಿಕ್ಕಮಠ. ಹುಟ್ಟಿದ್ದು ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ರಾಮನಾಳ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 14 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ನಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಕೊಪ್ಪಳಕ್ಕೆ ಬಂದು ನಿಂತಿದೆ. ಕೃಷಿ ನನ್ನಿಷ್ಟ.ಆದ್ರೆ ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​