AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಇಎ ಪರೀಕ್ಷೆ ಅಕ್ರಮದ ಕಿಂಗ್​ಪಿನ್​ RD ಪಾಟೀಲ್​ನ​ ಅರೆಸ್ಟ್ ಮಾಡುವಲ್ಲಿ ನಿರ್ಲಕ್ಷ್ಯ: ಸಿಪಿಐ ಸಸ್ಪೆಂಡ್​

ಕೆಇಎ ನಡೆಸಿದ ಎಫ್​ಡಿಎ ನೇಮಕಾತಿ ಪರೀಕ್ಷಾ ಹಗರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ಪ್ರಮುಖ ಆರೋಪಿ ಆರ್​ಡಿ ಪಾಟೀಲ್​​ನನ್ನು​ ಬಂಧಿಸುವಲ್ಲಿ ಪೊಲೀಸರು ನಿರ್ಲಕ್ಷ್ಯ ವಹಿಸಿದರು ಎಂಬ ಆರೋಪದ ಮೇಲೆ ಅಫಜಲಪುರದ ಸಿಪಿಐ ಪಂಡಿತ ಸಗರ ಅವರನ್ನು ಅಮಾನತು ಮಾಡಲಾಗಿದೆ.

ಕೆಇಎ ಪರೀಕ್ಷೆ ಅಕ್ರಮದ ಕಿಂಗ್​ಪಿನ್​ RD ಪಾಟೀಲ್​ನ​ ಅರೆಸ್ಟ್ ಮಾಡುವಲ್ಲಿ ನಿರ್ಲಕ್ಷ್ಯ: ಸಿಪಿಐ ಸಸ್ಪೆಂಡ್​
ಸಾಂದರ್ಭಿಕ ಚಿತ್ರ
ದತ್ತಾತ್ರೇಯ ಪಾಟೀಲ, ಕಲಬುರಗಿ
| Edited By: ವಿವೇಕ ಬಿರಾದಾರ|

Updated on:Nov 22, 2023 | 2:50 PM

Share

ಕಲಬುರಗಿ ನ.22: ಕೆಇಎ(KEA) ನಡೆಸಿದ ಎಫ್​ಡಿಎ (FDA) ನೇಮಕಾತಿ ಪರೀಕ್ಷಾ ಹಗರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ಪ್ರಮುಖ ಆರೋಪಿ ಆರ್​ಡಿ ಪಾಟೀಲ್​ನನ್ನು ಬಂಧಿಸುವಲ್ಲಿ ಪೊಲೀಸರು ನಿರ್ಲಕ್ಷ್ಯ ವಹಿಸಿದರು ಎಂಬ ಆರೋಪದ ಮೇಲೆ ಅಫಜಲಪುರದ ಸಿಪಿಐ ಪಂಡಿತ ಸಗರ ಅವರನ್ನು ಅಮಾನತು ಮಾಡಲಾಗಿದೆ. ನವೆಂಬರ್​ 6ರಂದು ಪ್ರಕರಣದ ಪ್ರಮುಖ ಆರೋಪಿ ಆರ್.ಡಿ.ಪಾಟೀಲ್​ನನ್ನು ಪೊಲೀಸರು ಬಂಧಿಸಲು ತೆರಳಿದ್ದರು. ಈ ವೇಳೆ ಆರ್​ಡಿ ಪಾಟೀಲ್​ ತಾನು ಇದ್ದ ವಸತಿ ಸಮುಚ್ಚಯದಿಂದ ಪರಾರಿಯಾಗಿದ್ದನು. ಹೀಗಾಗಿ ಪೊಲೀಸರು ಸರಿಯಾದ ಪ್ಲ್ಯಾನ್ ಮಾಡದೆ ನಿರ್ಲಕ್ಷ್ಯ ವಹಿಸಿದ್ದಾರೆಂದು ಸಿಪಿಐ ಪಂಡಿತ ಸಗರ ಅವರನ್ನು ಅಮಾನತು ಮಾಡಿ ಐಜಿಪಿ ಆದೇಶ ಹೊರಡಿಸಿದ್ದಾರೆ.

ಯುವಕ ಆತ್ಮಹತ್ಯೆ ಪ್ರಕರಣ: ಇಬ್ಬರು ಪೊಲೀಸ್ ಸಿಬ್ಬಂದಿ ಅಮಾನತು

ಮೈಸೂರು: ಯುವಕ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಪೊಲೀಸ್ ಸಿಬ್ಬಂದಿ ಅಮಾನತು ಮಾಡಿ ಎಸ್​ಪಿ ಸೀಮಾ ಲಾಟ್ಕರ್ ಆದೇಶ ಹೊರಡಿಸಿದ್ದಾರೆ. ನವೆಂಬರ್ 12 ರಂದು ಬಿಳಿಗೆರೆ ಗ್ರಾಮದಲ್ಲಿ ನಡೆದ ಗಲಾಟೆಗೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಿಳಿಗೆರೆ ಪೊಲೀಸ್ ಠಾಣೆಗೆ ಕರೆ ತರಲಾಗಿತ್ತು. ಈ ವೇಳೆ ಹೆಡ್ ಕಾನ್ಸಟೇಬಲ್ ನಂಜೇಶ್, ಕಾನ್ಸಟೇಬಲ್ ಪ್ರಸನ್ನ ಕುಮಾರ್ ಕರ್ತವ್ಯದಲ್ಲಿದ್ದರು. ಇಬ್ಬರು ಆರೋಪಿಗಳಲ್ಲಿ, ಓರ್ವ ಆರೋಪಿ ಕಿರಣ್ ಕುಮಾರ್ (22) ಪೊಲೀಸರ ವಿಚಾರಣೆಗೆ ಹೆದರಿ ಠಾಣೆಯಿಂದ ತಪ್ಪಿಸಿಕೊಂಡಿದ್ದನು. ಬಳಿಕ ತನ್ನ ಸ್ವಗ್ರಾಮಕ್ಕೆ ಹೋಗಿ ಬೆಂಕಿಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದನು.

ಈ ಸಂಬಧ ನಂಜನಗೂಡಿನ ಡಿವೈಎಸ್‌ಪಿ ಗೋವಿಂದರಾಜು ನೀಡಿದ ವರದಿ ಆಧರಿಸಿ ಬಿಳಿಗೆರೆ ಪೊಲೀಸ್ ಠಾಣೆಯ ಹೆಡ್ ಕಾನ್ಸಟೇಬಲ್ ನಂಜೇಶ್, ಕಾನ್ಸಟೇಬಲ್ ಪ್ರಸನ್ನ ಕುಮಾರ್ ಅವರನ್ನು ಅಮಾನತು ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 2:48 pm, Wed, 22 November 23

Follow Us
ಮಂಗಳೂರು-ಕಾರ್ಕಳ ಹೆದ್ದಾರಿಯಲ್ಲಿ ಭೂಕುಸಿತ: ಸ್ಥಳೀಯರಲ್ಲಿ ಹೆಚ್ಚಿದ ಆತಂಕ
ಮಂಗಳೂರು-ಕಾರ್ಕಳ ಹೆದ್ದಾರಿಯಲ್ಲಿ ಭೂಕುಸಿತ: ಸ್ಥಳೀಯರಲ್ಲಿ ಹೆಚ್ಚಿದ ಆತಂಕ
ವಯನಾಡು ಭೂಕುಸಿತ: ಭಯಾನಕ ದೃಶ್ಯದಲ್ಲಿ ಸೆರೆಯಾದ ಟ್ಯಾಂಕರ್ ಕರ್ನಾಟಕದ್ದು!
ವಯನಾಡು ಭೂಕುಸಿತ: ಭಯಾನಕ ದೃಶ್ಯದಲ್ಲಿ ಸೆರೆಯಾದ ಟ್ಯಾಂಕರ್ ಕರ್ನಾಟಕದ್ದು!
ಬೆಂಗಳೂರಿನ ಪ್ಯಾಲೇಸ್ ರಸ್ತೆ ಮಧ್ಯೆ ಹೆಡೆಬಿಚ್ಚಿ ನಿಂತ ನಾಗರಹಾವು
ಬೆಂಗಳೂರಿನ ಪ್ಯಾಲೇಸ್ ರಸ್ತೆ ಮಧ್ಯೆ ಹೆಡೆಬಿಚ್ಚಿ ನಿಂತ ನಾಗರಹಾವು
24 ಗಂಟೆಗಳಿಂದ ಕೆಸರಿನಲ್ಲಿ ಸಿಲುಕಿ ನರಳಾಡುತ್ತಿರುವ ಕಾಡಾನೆ
24 ಗಂಟೆಗಳಿಂದ ಕೆಸರಿನಲ್ಲಿ ಸಿಲುಕಿ ನರಳಾಡುತ್ತಿರುವ ಕಾಡಾನೆ
ಬೆಳಗಾವಿಯಲ್ಲಿ RSS ವಾರ್ಷಿಕ ಸಭೆ ಬಗ್ಗೆ ಪ್ರಿಯಾಂಕ್ ಖರ್ಗೆ ಖಡಕ್ ಮಾತು
ಬೆಳಗಾವಿಯಲ್ಲಿ RSS ವಾರ್ಷಿಕ ಸಭೆ ಬಗ್ಗೆ ಪ್ರಿಯಾಂಕ್ ಖರ್ಗೆ ಖಡಕ್ ಮಾತು
ವಯನಾಡು ಭೂಕುಸಿತದ ಬಗ್ಗೆ ಡಿಸಿ ಮೇಘಶ್ರೀ ಮಾಹಿತಿ
ವಯನಾಡು ಭೂಕುಸಿತದ ಬಗ್ಗೆ ಡಿಸಿ ಮೇಘಶ್ರೀ ಮಾಹಿತಿ
ವಯನಾಡು ಗುಡ್ಡ ಕುಸಿತ ದುರಂತದ ಬಗ್ಗೆ ಮಾಹಿತಿ ಬಿಚ್ಚಿಟ್ಟ ಹೊಟೇಲ್ ಮಾಲೀಕ
ವಯನಾಡು ಗುಡ್ಡ ಕುಸಿತ ದುರಂತದ ಬಗ್ಗೆ ಮಾಹಿತಿ ಬಿಚ್ಚಿಟ್ಟ ಹೊಟೇಲ್ ಮಾಲೀಕ
ಚಾರ್ಮಾಡಿ ಘಾಟ್‌ನಲ್ಲಿ ಗುಡ್ಡ ಕುಸಿತ: ಕುಸಿದು ಬೀಳುತ್ತಿರುವ ಬಂಡೆಗಲ್ಲುಗಳು
ಚಾರ್ಮಾಡಿ ಘಾಟ್‌ನಲ್ಲಿ ಗುಡ್ಡ ಕುಸಿತ: ಕುಸಿದು ಬೀಳುತ್ತಿರುವ ಬಂಡೆಗಲ್ಲುಗಳು
ಇಂಡೋನೇಷ್ಯಾದ ಭವ್ಯ 'ಪ್ರಂಬಾನನ್' ಶಿವ ದೇವಾಲಯಕ್ಕೆ ಪಿಎಂ ಮೋದಿ ಭೇಟಿ
ಇಂಡೋನೇಷ್ಯಾದ ಭವ್ಯ 'ಪ್ರಂಬಾನನ್' ಶಿವ ದೇವಾಲಯಕ್ಕೆ ಪಿಎಂ ಮೋದಿ ಭೇಟಿ
ಭಾರತ-ಇಂಡೋನೇಷ್ಯಾ ಸ್ನೇಹ ಅತ್ಯಂತ ಗಟ್ಟಿ ಮತ್ತು ರೋಮಾಂಚಕ: ಮೋದಿ
ಭಾರತ-ಇಂಡೋನೇಷ್ಯಾ ಸ್ನೇಹ ಅತ್ಯಂತ ಗಟ್ಟಿ ಮತ್ತು ರೋಮಾಂಚಕ: ಮೋದಿ