AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಇಎ ಪರೀಕ್ಷೆ ಅಕ್ರಮದ ಕಿಂಗ್​ಪಿನ್​ RD ಪಾಟೀಲ್​ನ​ ಅರೆಸ್ಟ್ ಮಾಡುವಲ್ಲಿ ನಿರ್ಲಕ್ಷ್ಯ: ಸಿಪಿಐ ಸಸ್ಪೆಂಡ್​

ಕೆಇಎ ನಡೆಸಿದ ಎಫ್​ಡಿಎ ನೇಮಕಾತಿ ಪರೀಕ್ಷಾ ಹಗರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ಪ್ರಮುಖ ಆರೋಪಿ ಆರ್​ಡಿ ಪಾಟೀಲ್​​ನನ್ನು​ ಬಂಧಿಸುವಲ್ಲಿ ಪೊಲೀಸರು ನಿರ್ಲಕ್ಷ್ಯ ವಹಿಸಿದರು ಎಂಬ ಆರೋಪದ ಮೇಲೆ ಅಫಜಲಪುರದ ಸಿಪಿಐ ಪಂಡಿತ ಸಗರ ಅವರನ್ನು ಅಮಾನತು ಮಾಡಲಾಗಿದೆ.

ಕೆಇಎ ಪರೀಕ್ಷೆ ಅಕ್ರಮದ ಕಿಂಗ್​ಪಿನ್​ RD ಪಾಟೀಲ್​ನ​ ಅರೆಸ್ಟ್ ಮಾಡುವಲ್ಲಿ ನಿರ್ಲಕ್ಷ್ಯ: ಸಿಪಿಐ ಸಸ್ಪೆಂಡ್​
ಸಾಂದರ್ಭಿಕ ಚಿತ್ರ
ದತ್ತಾತ್ರೇಯ ಪಾಟೀಲ, ಕಲಬುರಗಿ
| Edited By: ವಿವೇಕ ಬಿರಾದಾರ|

Updated on:Nov 22, 2023 | 2:50 PM

Share

ಕಲಬುರಗಿ ನ.22: ಕೆಇಎ(KEA) ನಡೆಸಿದ ಎಫ್​ಡಿಎ (FDA) ನೇಮಕಾತಿ ಪರೀಕ್ಷಾ ಹಗರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ಪ್ರಮುಖ ಆರೋಪಿ ಆರ್​ಡಿ ಪಾಟೀಲ್​ನನ್ನು ಬಂಧಿಸುವಲ್ಲಿ ಪೊಲೀಸರು ನಿರ್ಲಕ್ಷ್ಯ ವಹಿಸಿದರು ಎಂಬ ಆರೋಪದ ಮೇಲೆ ಅಫಜಲಪುರದ ಸಿಪಿಐ ಪಂಡಿತ ಸಗರ ಅವರನ್ನು ಅಮಾನತು ಮಾಡಲಾಗಿದೆ. ನವೆಂಬರ್​ 6ರಂದು ಪ್ರಕರಣದ ಪ್ರಮುಖ ಆರೋಪಿ ಆರ್.ಡಿ.ಪಾಟೀಲ್​ನನ್ನು ಪೊಲೀಸರು ಬಂಧಿಸಲು ತೆರಳಿದ್ದರು. ಈ ವೇಳೆ ಆರ್​ಡಿ ಪಾಟೀಲ್​ ತಾನು ಇದ್ದ ವಸತಿ ಸಮುಚ್ಚಯದಿಂದ ಪರಾರಿಯಾಗಿದ್ದನು. ಹೀಗಾಗಿ ಪೊಲೀಸರು ಸರಿಯಾದ ಪ್ಲ್ಯಾನ್ ಮಾಡದೆ ನಿರ್ಲಕ್ಷ್ಯ ವಹಿಸಿದ್ದಾರೆಂದು ಸಿಪಿಐ ಪಂಡಿತ ಸಗರ ಅವರನ್ನು ಅಮಾನತು ಮಾಡಿ ಐಜಿಪಿ ಆದೇಶ ಹೊರಡಿಸಿದ್ದಾರೆ.

ಯುವಕ ಆತ್ಮಹತ್ಯೆ ಪ್ರಕರಣ: ಇಬ್ಬರು ಪೊಲೀಸ್ ಸಿಬ್ಬಂದಿ ಅಮಾನತು

ಮೈಸೂರು: ಯುವಕ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಪೊಲೀಸ್ ಸಿಬ್ಬಂದಿ ಅಮಾನತು ಮಾಡಿ ಎಸ್​ಪಿ ಸೀಮಾ ಲಾಟ್ಕರ್ ಆದೇಶ ಹೊರಡಿಸಿದ್ದಾರೆ. ನವೆಂಬರ್ 12 ರಂದು ಬಿಳಿಗೆರೆ ಗ್ರಾಮದಲ್ಲಿ ನಡೆದ ಗಲಾಟೆಗೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಿಳಿಗೆರೆ ಪೊಲೀಸ್ ಠಾಣೆಗೆ ಕರೆ ತರಲಾಗಿತ್ತು. ಈ ವೇಳೆ ಹೆಡ್ ಕಾನ್ಸಟೇಬಲ್ ನಂಜೇಶ್, ಕಾನ್ಸಟೇಬಲ್ ಪ್ರಸನ್ನ ಕುಮಾರ್ ಕರ್ತವ್ಯದಲ್ಲಿದ್ದರು. ಇಬ್ಬರು ಆರೋಪಿಗಳಲ್ಲಿ, ಓರ್ವ ಆರೋಪಿ ಕಿರಣ್ ಕುಮಾರ್ (22) ಪೊಲೀಸರ ವಿಚಾರಣೆಗೆ ಹೆದರಿ ಠಾಣೆಯಿಂದ ತಪ್ಪಿಸಿಕೊಂಡಿದ್ದನು. ಬಳಿಕ ತನ್ನ ಸ್ವಗ್ರಾಮಕ್ಕೆ ಹೋಗಿ ಬೆಂಕಿಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದನು.

ಈ ಸಂಬಧ ನಂಜನಗೂಡಿನ ಡಿವೈಎಸ್‌ಪಿ ಗೋವಿಂದರಾಜು ನೀಡಿದ ವರದಿ ಆಧರಿಸಿ ಬಿಳಿಗೆರೆ ಪೊಲೀಸ್ ಠಾಣೆಯ ಹೆಡ್ ಕಾನ್ಸಟೇಬಲ್ ನಂಜೇಶ್, ಕಾನ್ಸಟೇಬಲ್ ಪ್ರಸನ್ನ ಕುಮಾರ್ ಅವರನ್ನು ಅಮಾನತು ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 2:48 pm, Wed, 22 November 23

Follow Us
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
"ಕಳೆದ 2 ವರ್ಷಗಳಲ್ಲಿ 3000ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ"
ಕಾವೇರಿ ಸಂಧಾನ ಸೂತ್ರಕ್ಕೆ‌ ದಿನಾಂಕ ಫಿಕ್ಸ್, ಆ.3ರಂದು ಸಿಎಂಗಳ ಸಭೆ ನಿಗದಿ
ಕಾವೇರಿ ಸಂಧಾನ ಸೂತ್ರಕ್ಕೆ‌ ದಿನಾಂಕ ಫಿಕ್ಸ್, ಆ.3ರಂದು ಸಿಎಂಗಳ ಸಭೆ ನಿಗದಿ
ಕೆ.ಆರ್.ಪೇಟೆ ಕಾಂಗ್ರೆಸ್ ಸಭೆಯಲ್ಲಿ ಕಾರ್ಯಕರ್ತರ ಹೈಡ್ರಾಮಾ!
ಕೆ.ಆರ್.ಪೇಟೆ ಕಾಂಗ್ರೆಸ್ ಸಭೆಯಲ್ಲಿ ಕಾರ್ಯಕರ್ತರ ಹೈಡ್ರಾಮಾ!
ಪಶುವೈದ್ಯರ ನೇಮಕಾತಿಯಲ್ಲಿ ಅಕ್ರಮ ಪ್ರಕರಣ: CID ತನಿಖೆಗೆ ಆದೇಶ
ಪಶುವೈದ್ಯರ ನೇಮಕಾತಿಯಲ್ಲಿ ಅಕ್ರಮ ಪ್ರಕರಣ: CID ತನಿಖೆಗೆ ಆದೇಶ
ಮಳೆ ಅಭಾವ: ತುಮಕೂರಲ್ಲಿ ಸಂಪೂರ್ಣ ಬತ್ತಿದ 300ಕ್ಕೂ ಹೆಚ್ಚು ಕೆರೆಗಳು
ಮಳೆ ಅಭಾವ: ತುಮಕೂರಲ್ಲಿ ಸಂಪೂರ್ಣ ಬತ್ತಿದ 300ಕ್ಕೂ ಹೆಚ್ಚು ಕೆರೆಗಳು
ಅಳ್ನಾವರದಲ್ಲಿ ನಾಲ್ಕು ಗಂಟೆಗೂ ಹೆಚ್ಚು ರೈಲುಗಳ ನಿಲುಗಡೆ: ಪ್ರಯಾಣಿಕರ ಪರದಾಟ
ಅಳ್ನಾವರದಲ್ಲಿ ನಾಲ್ಕು ಗಂಟೆಗೂ ಹೆಚ್ಚು ರೈಲುಗಳ ನಿಲುಗಡೆ: ಪ್ರಯಾಣಿಕರ ಪರದಾಟ
ಆರ್​ಎಸ್​ಎಸ್ ನೋಂದಣಿ ಬಗ್ಗೆ ರಾಷ್ಟ್ರಮಟ್ಟದಲ್ಲಿ ಅಭಿಯಾನ
ಆರ್​ಎಸ್​ಎಸ್ ನೋಂದಣಿ ಬಗ್ಗೆ ರಾಷ್ಟ್ರಮಟ್ಟದಲ್ಲಿ ಅಭಿಯಾನ
ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಪದಕ ಗೆದ್ದ ಕನ್ನಡತಿ; ಭಾರತೀಯ ವನಿತೆಯರ ಕಮಾಲ್
ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಪದಕ ಗೆದ್ದ ಕನ್ನಡತಿ; ಭಾರತೀಯ ವನಿತೆಯರ ಕಮಾಲ್
ಚಾಮರಾಜೇಶ್ವರಸ್ವಾಮಿ ಆಷಾಢ ಮಾಸದ ರಥೋತ್ಸವಕ್ಕೆ ಕ್ಷಣಗಣನೆ ಆರಂಭ
ಚಾಮರಾಜೇಶ್ವರಸ್ವಾಮಿ ಆಷಾಢ ಮಾಸದ ರಥೋತ್ಸವಕ್ಕೆ ಕ್ಷಣಗಣನೆ ಆರಂಭ