AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿ: ಮಹಿಳಾ ಕಾನ್ಸ್​ಟೇಬಲ್​ CDR​ ಪಡೆದು ಮಾನಸಿಕ ಕಿರುಕುಳ ನೀಡಿದ್ದ ಆರೋಪಿ ವಿರುದ್ಧ FIR

ಮಹಿಳಾ ಕಾನ್ಸ್​ಟೇಬಲ್​ CDR​ ಪಡೆದು ಮಾನಸಿಕ ಕಿರುಕುಳ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಕಲಬುರಗಿಯಲ್ಲಿ ಎಂಒಬಿ (ಅಪರಾಧ ಹಿನ್ನೆಲೆಯುಳ್ಳವರು) ಮಹೇಶ್ ಸಂಗಾವಿ ವಿರುದ್ಧ FIR ದಾಖಲಾಗಿದೆ. ಮಹಿಳಾ ಕಾನ್ಸ್​ಟೇಬಲ್ ಅಶೋಕ ನಗರ ಪೊಲೀಸ್ ಠಾಣೆಯಲ್ಲಿ 7 ವರ್ಷ ಕರ್ತವ್ಯ ನಿರ್ವಹಿಸಿದ್ದರು. ಆಗ ಪರಿಚಯವಾದ ಮಹೇಶ್ ಸಂಗಾವಿ ಬಳಿಕ ನಂಬರ್ ಪಡೆದು ಕಾಲ್ ಮಾಡಿ ಮಾತನಾಡುತ್ತಿದ್ದ.

ಕಲಬುರಗಿ: ಮಹಿಳಾ ಕಾನ್ಸ್​ಟೇಬಲ್​ CDR​ ಪಡೆದು ಮಾನಸಿಕ ಕಿರುಕುಳ ನೀಡಿದ್ದ ಆರೋಪಿ ವಿರುದ್ಧ FIR
ಸಾಂದರ್ಭಿಕ ಚಿತ್ರ
ದತ್ತಾತ್ರೇಯ ಪಾಟೀಲ, ಕಲಬುರಗಿ
| Edited By: |

Updated on: Dec 29, 2023 | 9:00 AM

Share

ಕಲಬುರಗಿ, ಡಿ.29: ಮಹಿಳಾ ಕಾನ್ಸ್​ಟೇಬಲ್​ CDR​ (Call Detail Record) ಪಡೆದು ಮಾನಸಿಕ ಕಿರುಕುಳ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಕಲಬುರಗಿಯಲ್ಲಿ ಎಂಒಬಿ (ಅಪರಾಧ ಹಿನ್ನೆಲೆಯುಳ್ಳವರು) ಮಹೇಶ್ ಸಂಗಾವಿ ವಿರುದ್ಧ FIR ದಾಖಲಾಗಿದೆ. ಮಹಿಳಾ ಕಾನ್ಸ್​ಟೇಬಲ್ (Lady Constable) ನೀಡಿದ ದೂರಿನನ್ವಯ ಕಲಬುರಗಿ ನಗರದ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ. FIRನಲ್ಲಿ ಕಾನ್ಸ್​ಟೇಬಲ್​ಗೆ ಮಾನಸಿಕ ಕಿರುಕುಳ ನೀಡಲಾಗಿರುವ ಅಂಶಗಳನ್ನು ಉಲ್ಲೇಖಿಸಲಾಗಿದೆ.

ಮಹಿಳಾ ಕಾನ್ಸ್​ಟೇಬಲ್ ಅಶೋಕ ನಗರ ಪೊಲೀಸ್ ಠಾಣೆಯಲ್ಲಿ 7 ವರ್ಷ ಕರ್ತವ್ಯ ನಿರ್ವಹಿಸಿದ್ದರು. ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುವಾಗ ಪರಿಚಯವಾದ ಮಹೇಶ್ ಸಂಗಾವಿ ಬಳಿಕ ನಂಬರ್ ಪಡೆದು ಕಾಲ್ ಮಾಡಿ ಮಾತನಾಡುತ್ತಿದ್ದ. ಮಹಿಳಾ ಕಾನ್ಸ್​ಟೇಬಲ್ ಅಶೋಕ ನಗರ ಠಾಣೆಯಿಂದ ಆರ್.ಜಿ. ನಗರ ಠಾಣೆಗೆ ವರ್ಗಾವಣೆಯಾದರು. ಆಗ ಆರ್.ಜಿ. ನಗರ ಠಾಣೆಯಲ್ಲಿ ಎಮ್ ಓಬಿ ಫೈಲ್​ನಲ್ಲಿ ಮಹೇಶ್ ಹೆಸರು ನೋಡಿ ಮಹೇಶ್​ನಿಂದ ದೂರವಾಗೋದಕ್ಕೆ ಮುಂದಾಗಿದ್ರು. ಆಗ ಮಹಿಳಾ ಕಾನ್ಸ್​ಟೇಬಲ್ ಭೇಟಿಯಾಗಿ ಮಹೇಶ್ ಹಣ ನೀಡುವಂತೆ ಬೇಡಿಕೆ ಇಟ್ಟಿದ್ದ.

ಇದನ್ನೂ ಓದಿ: ಮಹಿಳಾ ಕಾನ್ಸ್​​​ಟೇಬಲ್ ಮೊಬೈಲ್ ಸಿಡಿಆರ್ ಕಳ್ಳನಿಗೆ ಮಾರಾಟ ಮಾಡಿ ಮದುವೆ ಮುರಿದ ಪೊಲೀಸರು: ಕಲಬುರಗಿ ಪೊಲೀಸ್ ಆಯುಕ್ತರಿಗೆ ದೂರು

ಹಣ ಕೊಡದಿದ್ರೆ ಖಾಸಗಿ ವಿಡಿಯೋ, ಫೋಟೋ ವೈರಲ್ ಮಾಡುವ ಬೆದರಿಕೆ ಹಾಕಿದ್ದ. ಇನ್ನು ವಿಡಿಯೋ ವೈರಲ್ ಮಾಡ್ತೇನೆ ಎಂದಿದ್ದಕ್ಕೆ ಮಹಿಳಾ ಕಾನ್ಸ್​ಟೇಬಲ್​ ಆರೋಪಿ ಮಹೇಶನಿಗೆ ಕಪಾಳ ಮೋಕ್ಷ ಮಾಡಿ ಅವನಿಂದ ದೂರವಾಗಿದ್ದರು. ಆದರೂ ಬಿಡದೆ ಮಹೇಶ ಮದುವೆ ಆಗುವಂತೆ ಮಹಿಳಾ ಕಾನ್ಸ್​ಟೇಬಲ್​ಗೆ ಪೀಡಿಸುತ್ತಿದ್ದ. ಮಹೇಶ್ ಮದುವೆಗೆ ನಿರಾಕರಿಸಿ ಮತ್ತೊಬ್ಬ ಕಾನ್ಸ್​ಟೇಬಲ್ ಜೊತೆ ಲೇಡಿ ಪಿಸಿ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಲೇಡಿ ಕಾನ್ಸ್​ಟೇಬಲ್ ಬಳಿ 1.5 ಲಕ್ಷ ಹಣ ವಸೂಲಿ ಮಾಡಿರೋದಾಗಿ ಎಫ್​ಐಆರ್​​ನಲ್ಲಿ ದಾಖಲಿಸಲಾಗಿದೆ. ನಿಶ್ಚಿತಾರ್ಥ ಆದ ಹುಡುಗನಿಗೆ ಸಿಡಿಆರ್​ ಫೋಟೋ ಕಳಿಸಿ ನಿಶ್ಚಿತಾರ್ಥ ಮುರಿದುಬೀಳುವಂತೆ ಮಾಡಲಾಗಿದೆ ಎಂದು ಮಹೇಶ್ ವಿರುದ್ಧ ಮಹಿಳಾ ಕಾನ್ಸ್​ಟೇಬಲ್ ಎಫ್​ಐಆರ್ ದಾಖಲಿಸಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ