Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಫಜಲಪುರ-ಕಲಬುರಗಿ ಹೆದ್ದಾರಿಯಲ್ಲಿ ಭೀಕರ ಅಪಘಾತ: ನಾಲ್ವರು ಸ್ಥಳದಲ್ಲೇ ಸಾವು

ಕಲಬುಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಹೊರವಲಯದ ನೀರಾವರಿ ಕಚೇರಿ ಬಳಿ ಘಟನೆ ಭೀಕರ ಅಪಘಾತ ಸಂಭವಿಸಿದೆ. ತಡರಾತ್ರಿ ಸಂಭವಿಸಿದ ಈ ಅಪಘಾತದಲ್ಲಿ ಮಾಡ್ಯಾಳ ಗ್ರಾಮದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಲಬುರಗಿ ಕಡೆಯಿಂದ ಹೊರಟಿದ್ದ ಲಾರಿಗೆ ಜೀಪು ಡಿಕ್ಕಿಯಾಗಿ ಈ ದುರ್ಘಟನೆ ಸಂಭವಿಸಿದೆ.

ಅಫಜಲಪುರ-ಕಲಬುರಗಿ ಹೆದ್ದಾರಿಯಲ್ಲಿ ಭೀಕರ ಅಪಘಾತ: ನಾಲ್ವರು ಸ್ಥಳದಲ್ಲೇ ಸಾವು
ಅಫಜಲಪುರ-ಕಲಬುರಗಿ ಹೆದ್ದಾರಿಯಲ್ಲಿ ಭೀಕರ ಅಪಘಾತಕ್ಕೆ ಐವರು ಸಾವು
Follow us
ದತ್ತಾತ್ರೇಯ ಪಾಟೀಲ, ಕಲಬುರಗಿ
| Updated By: Rakesh Nayak Manchi

Updated on:Dec 21, 2023 | 7:40 AM

ಕಲಬುರಗಿ, ಡಿ.21: ಜಿಲ್ಲೆಯ (Kalaburagi) ಅಫಜಲಪುರ ತಾಲೂಕಿನ ಹೊರವಲಯದ ನೀರಾವರಿ ಕಚೇರಿ ಬಳಿ ತಡರಾತ್ರಿ ನಡೆದ ಭೀಕರ ಅಪಘಾತದಲ್ಲಿ (Accident) ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಲಬುರಗಿ ಕಡೆಯಿಂದ ಹೊರಟಿದ್ದ ಲಾರಿಗೆ ಜೀಪು ಡಿಕ್ಕಿಯಾಗಿ ಈ ದುರ್ಘಟನೆ ಸಂಭವಿಸಿದೆ.

ಸಂತೋಷ್ (40), ಶಂಕರ್ (55), ಸಿದ್ದಮ್ಮ (50), ಹುಚ್ಚಪ್ಪ (5) ಮೃತ ದುರ್ದೈವಿಗಳಾಗಿದ್ದಾರೆ. ಮೃತರೆಲ್ಲಾರು ಅಫಜಲಪುರ ಮಾಡ್ಯಾಳ ಗ್ರಾಮದ ನಿವಾಸಿಗಳಾಗಿದ್ದಾರೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ಪೂಜಾ ದೊಡ್ಡಮನಿ (30) ಪ್ರಾಣಾಪಾಯದಿಂದ ಪಾರಾಗಿದ್ದು, ಲಬುರಗಿ ಖಸಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.  ಅಫಜಲಪುರ ಕಡೆಯಿಂದ ಮಲ್ಲಾಬಾದ್ ಕಡೆ ಹೊರಟಿದ್ದ ಕಮಾಂಡೋ‌ ಜೀಪ್ ಕಲಬುರಗಿ ಕಡೆಯಿಂದ ಹೊರಟಿದ್ದ ಲಾರಿಗೆ ಡಿಕ್ಕಿ ಹೊಡೆದು ಜೀಪ್​ನಲ್ಲಿದ್ದ ಎಲ್ಲರೂ ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: ಕಲಬುರಗಿಯಲ್ಲಿ ಅಪರಿಚಿತ ಬೈಕ್​ ಡಿಕ್ಕಿ: ಕಾಂಗ್ರೆಸ್ ಎಂಎಲ್​ಸಿ ತಾಯಿ ಸಾವು

ಸಾವಿನಲ್ಲೂ ಒಂದಾದ ಗೆಳೆಯರು

ಮೈಸೂರು: ಜಿಲ್ಲೆಯ ನಂಜನಗೂಡು ತಾಲೂಕಿ‌ನ ಮಲ್ಲೂಪುರ ಗ್ರಾಮದ ಬಳಿ ಲಾರಿ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಸ್ನೇಹಿತರಿಬ್ಬರು ಸಾವನ್ನಪ್ಪಿದ್ದಾರೆ. ಮಹೇಶ (23) ಹಾಗೂ ಮಹೇಶ (24) ಮೃತ ದುರ್ದೈವಿಗಳು. ಬಾಲ್ಯದ ಗೆಳೆಯರಾಗಿದ್ದ ಇಬ್ಬರು ಅಳಗಂಚಿ ಗ್ರಾಮದ ಬಣ್ಣಾರಿ ಅಮ್ಮನ್ ಸಕ್ಕರೆ ಕಾರ್ಖಾನೆಯಲ್ಲಿ ಕಾರ್ಮಿಕರಾಗಿ ಕೆಲಸಕ್ಕೆ ಸೇರಿದ್ದರು.

ನಿನ್ನೆ ಬೆಳಗ್ಗೆ ಕಾರ್ಖಾನೆಗೆ ಕೆಲಸಕ್ಕೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದ್ದು, ತಗಡೂರು ಗ್ರಾಮದ ಶಿವಮಲ್ಲೇಗೌಡ ಎಂಬುವರ ಪುತ್ರ ಮಹೇಶ್, ಅದೇ ಗ್ರಾಮದ ನಾಗರಾಜು ಎಂಬುವವರ ಪುತ್ರ ಮಹೇಶ್ ಸಾವನ್ನಪ್ಪಿದ್ದಾರೆ. ಘಟನೆ ನಂತರ ಲಾರಿ‌ ಬಿಟ್ಟು ಚಾಲಕ ಪರಾರಿಯಾಗಿದ್ದು, ಬಿಳಿಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:30 am, Thu, 21 December 23

ರಸ್ತೆಯಲ್ಲಿ ಆಟವಾಡುತ್ತಿದ್ದ ಮಗುವಿನ ಮೇಲೆ ಹರಿದ ಕಾರು
ರಸ್ತೆಯಲ್ಲಿ ಆಟವಾಡುತ್ತಿದ್ದ ಮಗುವಿನ ಮೇಲೆ ಹರಿದ ಕಾರು
ಹಾಲಿನ ದರ ಏರಿಕೆಯನ್ನು ಸಮರ್ಥಿಸಿಕೊಂಡ ಡಿಕೆ ಶಿವಕುಮಾರ್
ಹಾಲಿನ ದರ ಏರಿಕೆಯನ್ನು ಸಮರ್ಥಿಸಿಕೊಂಡ ಡಿಕೆ ಶಿವಕುಮಾರ್
ದರ್ಶನ್​ನಿಂದ ಸಿಕ್ಕ ಬೆಸ್ಟ್ ಗಿಫ್ಟ್ ಯಾವುದು? ವಿವರಿಸಿದ ಧನ್ವೀರ್
ದರ್ಶನ್​ನಿಂದ ಸಿಕ್ಕ ಬೆಸ್ಟ್ ಗಿಫ್ಟ್ ಯಾವುದು? ವಿವರಿಸಿದ ಧನ್ವೀರ್
VIDEO: LSG ಫೀಲ್ಡರ್​ಗಳ ಕಮಾಲ್: ವಾಟ್ ಎ ಕ್ಯಾಚ್..!
VIDEO: LSG ಫೀಲ್ಡರ್​ಗಳ ಕಮಾಲ್: ವಾಟ್ ಎ ಕ್ಯಾಚ್..!
ಚಿಕ್ಕಬಳ್ಳಾಪುರದಲ್ಲಿ ಅಗ್ನಿ ಅವಘಡ: ಬಸ್​, ಬೈಕ್​ಗಳು ಬೆಂಕಿಗಾಹುತಿ
ಚಿಕ್ಕಬಳ್ಳಾಪುರದಲ್ಲಿ ಅಗ್ನಿ ಅವಘಡ: ಬಸ್​, ಬೈಕ್​ಗಳು ಬೆಂಕಿಗಾಹುತಿ
Daily Devotional: ಕಾಲಭೈರವೇಶ್ವರನಿಗೆ ನೈವೇದ್ಯೆ ಹೇಗೆ ಸಮರ್ಪಿಸಬೇಕು?
Daily Devotional: ಕಾಲಭೈರವೇಶ್ವರನಿಗೆ ನೈವೇದ್ಯೆ ಹೇಗೆ ಸಮರ್ಪಿಸಬೇಕು?
Daily Horoscope: ಈ ರಾಶಿಯವರು ಆರ್ಥಿಕವಾಗಿ ಸ್ವಲ್ಪ ಸಂಕಷ್ಟ ಎದುರಿಸಬಹುದು
Daily Horoscope: ಈ ರಾಶಿಯವರು ಆರ್ಥಿಕವಾಗಿ ಸ್ವಲ್ಪ ಸಂಕಷ್ಟ ಎದುರಿಸಬಹುದು
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು