ಕಲಬುರಗಿ: ಮಿಸ್ಬಾನಗರದಲ್ಲಿ ಐದು ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ!

ಕಲಬುರಗಿಯ ಮಿಸ್ಬಾನಗರದಲ್ಲಿ ಬಾಲಕನೊಬ್ಬನ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿದ ಘಟನೆ ನಡೆದಿದೆ. ಇದು ಒಂದು ವಾರದಲ್ಲಿ ನಡೆದ ಎಡರನೇ ಪ್ರಕರಣ ಆಗಿದ್ದು, ಅಧಿಕಾರಿಗಳು ಮಾತ್ರ ಇನ್ನೂ ಎಚ್ಚೆತ್ತುಕೊಂಡಿಲ್ಲ. ಸ್ಥಳೀಯರು ನಗರ ಪಾಲಿಕೆ ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರಹಾಕುತ್ತಿದ್ದಾರೆ.

ಕಲಬುರಗಿ: ಮಿಸ್ಬಾನಗರದಲ್ಲಿ ಐದು ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ!
ಕಲಬುರಗಿಯ ಮಿಸ್ಬಾನಗರದಲ್ಲಿ ಐದು ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ! (ಸಾಂದರ್ಭಿಕ ಚಿತ್ರ)
Edited By: Rakesh Nayak Manchi

Updated on: Jan 07, 2024 | 10:51 PM

ಕಲಬುರಗಿ, ಜ.7: ಬಾಲಕನೊಬ್ಬನ ಮೇಲೆ ಬೀದಿ ನಾಯಿಗಳು ದಾಳಿ (Dog Attack) ನಡೆಸಿ ಗಾಯಗೊಳಿಸಿದ ಘಟನೆ ಕಲಬುರಗಿಯ (Kalaburagi) ಮಿಸ್ಬಾನಗರದಲ್ಲಿ ನಡೆದಿದೆ. ರಶೀದ್ ಅಶ್ಫಕ್ (5) ಗಾಯಗೊಂಡ ಬಾಲಕನಾಗಿದ್ದು, ಜಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ಹಾಲು ತರುವಂತೆ ರಶೀದ್ ಅಶ್ಫಕ್​ನನ್ನು ಪೋಷಕರು ಅಂಗಡಿಗೆ ಕಳುಹಿಸಿದ್ದರು. ದಾರಿಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಬೀದಿನಾಯಿಗಳು ಏಕಾಏಕಿಯಾಗಿ ರಶೀದ್ ಮೇಲೆ ದಾಳಿ ನಡೆಸಿ ಗಾಯಗೊಳಿಸಿವೆ. ಕಳೆದ ವಾರ ಬಾಲಕಿಯ ಮೇಲೆ ಬೀದಿ ನಾಯಿಗಳ ದಾಳಿ ನಡೆದಿತ್ತು. ವಾರದಲ್ಲಿ ಎರಡು ಪ್ರಕರಣಗಳು ನಡೆದಿದ್ದರೂ ನಗರ ಪಾಲಿಕೆ ಅಧಿಕಾರಿಗಳು ಇನ್ನೂ ಎಚ್ಚೆತ್ತುಕೊಂಡಿಲ್ಲ ಎಂದು ಮಿಸ್ಬಾನಗರ ನಿವಾಸಿಗಳು ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ: ರಾಯಚೂರು: ತಾಯಿ, ಮಗನ ಮೇಲೆ ಬೀದಿ ನಾಯಿ ದಾಳಿ; ಭಯ ಹುಟ್ಟಿಸುತ್ತೆ ಸಿಸಿಟಿವಿ ದೃಶ್ಯ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Dattatraya Patil

ಮೂಲತಃ ಕಲಬುರಗಿ ಜಿಲ್ಲೆಯವರಾದ ದತ್ತಾತ್ರೇಯ ಪಾಟೀಲ್ ಸಧ್ಯ ಟಿರ್ವಿ ಕನ್ನಡ ವಾಹಿನಿಯ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಕಳೆದ 9 ವರ್ಷಗಳಿಂದ ಟಿರ್ವಿ ಸಂಸ್ಥೆಯಲ್ಲಿ ಕೆಲಸ‌ ಮಾಡುತ್ತಿದ್ದು ಜ,2015 ರಿಂದ 22 ರವೆಗೆ ಹುಬ್ಬಳ್ಳಿಯ ವರದಿಗಾರಾಗಿ, ಕಳೆದೊಂದು ವರ್ಷ ಕೊಪ್ಪಳ ಸಧ್ಯ ಮೂರು ತಿಂಗಳಿಮದ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದು, ಕೊರೊನಾ ಸಮಯದಲ್ಲಿ ವೈದ್ಯರ ಕಳ್ಳಾಟದ ಮಾಡಿದ ರಹಸ್ಯ ಕಾರ್ಯಚರಣೆ.ಆಪರೇಷನ್ ಕಮಲದ ಕುರಿತು ಸ್ಪೋಟಕ ಬಿಎಸ್ ವೈ ವಿಡಿಯೋ ದ ಎಕ್ಸಕ್ಲೂಸಿವ್ ವರದಿಯ ಜೊತೆಗೆ ರಾಜಕೀಯ ವರದಿಗಾರಿಕೆಯಲ್ಲಿಯೂ ಆಸಕ್ತಿ ಹೊಂದಿದ್ದು, ಬಿಡುವಿನ ಸಮಯದಲ್ಲಿ ಪುಸ್ತಕ ಓದುವುದು,ಪ್ರೇಕ್ಷಣೀಯ ಹಾಗೂ ಐತಿಹಾಸಿಕ ಸ್ಥಳಗಳ ಪ್ರವಾಸ,ಮತ್ತು ಟ್ರೆಕ್ಕಿಂಗ್ ಹವ್ಯಾಸ ರೂಢಿಸಿಕೊಂಡಿದ್ದಾರೆ.

Read More
Follow Us