AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೃತಿಯ ರಂಗ ಸ್ಥಾಪನೆ ಮಾಡುವುದು ಸದ್ಯಕ್ಕೆ ಕಷ್ಟ ಕಷ್ಟ, ಬಿಜೆಪಿ ಮೋದಿಯ ಒನ್ ಮ್ಯಾನ್ ಪಾರ್ಟಿಯಾಗಿದೆ -ಹೆಚ್ ಡಿ ದೇವೇಗೌಡ

ಕಾಂಗ್ರೆಸ್ ಪಕ್ಷದ ವತಿಯಿಂದ ಹಮ್ಮಿಕೊಂಡಿರುವ ಮೇಕೆದಾಟು ಹೋರಾಟ ವಿಚಾರ ಪ್ರಸ್ತಾಪಿಸಿದ ದೇವೇಗೌಡರು ನೀರಾವರಿ ವಿಷಯದಲ್ಲಿ ನಾನು ಲಘುವಾಗಿ ಮಾತನಾಡಲ್ಲ. ಅರ್ಜಿ ವಿಚಾರಣೆ ಬಗ್ಗೆ ಸುಪ್ರೀಂ ಕೋರ್ಟ್​ನಲ್ಲಿ ದಿನಾಂಕ ನಿಗದಿಯಾಗಿದೆ ಎಂದರು.

ತೃತಿಯ ರಂಗ ಸ್ಥಾಪನೆ ಮಾಡುವುದು ಸದ್ಯಕ್ಕೆ ಕಷ್ಟ ಕಷ್ಟ, ಬಿಜೆಪಿ ಮೋದಿಯ ಒನ್ ಮ್ಯಾನ್ ಪಾರ್ಟಿಯಾಗಿದೆ -ಹೆಚ್ ಡಿ ದೇವೇಗೌಡ
ಹಿಜಾಬ್​ ಆದೇಶ ಕುರಿತು ಪ್ರತಿಕ್ರಿಯೆ ನೀಡಿದ ಮಾಜಿ ಪ್ರಧಾನಿ ಹೆಚ್​.ಡಿ. ದೇವೇಗೌಡ, ಏನಂದರು?
TV9 Web
| Edited By: |

Updated on:Jan 05, 2022 | 12:01 PM

Share

ಕಲಬುರಗಿ: ಮುಂದಿನ ವರ್ಷವೇ ದೇಶದಲ್ಲಿ ಸಾರ್ವತ್ರಿಕ ಚುನಾವಣೆ ಪರ್ವ. ರಾಜ್ಯದಲ್ಲಿಯೂ ವಿಧಾನಸಭೆಗೆ ಮಹಾ ಚುನಾವಣೆ ನಡೆಯಲಿದೆ. ಹಾಗಾಗಿ ರಾಜಕೀಯ ಪಕ್ಷಗಳು ತನ್ನ ಶಕ್ತ್ಯಾನುಸಾರ ಅದಾಗಲೇ ಚುನಾವಣಾ ಕೆಲಸಗಳಲ್ಲಿ ತೊಡಗಿಸಿಕೊಂಡಿವೆ. ರಾಜಕೀಯ ಪಕ್ಷದ ಮುಖಂಡರೂ ಟೆಸ್ಟಿಂಗ್​ ದಿ ವಾಟರ್ಸ್ (Testing the Waters)​ ಎಂಬಂತೆ ಅಲ್ಲೊಂದು ಇಲ್ಲೊಂದು ಕಲ್ಲೆಸೆದು ಒಳಸುಳಿಗಳನ್ನು ಅರ್ಥೈಸಿಕೊಳ್ಳಲು ಮುಂದಾಗಿದ್ದಾರೆ. ಈ ನಡುವೆ ಪ್ರಾದೇಶಿಕ ಪಕ್ಷವಾದ ಜೆಡಿಎಸ್​ನ ಅಧಿನಾಯಕ, ​ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು ಕಲಬುರಗಿಯಲ್ಲಿ ಮಾತನಾಡಿದ್ದು, ಸದ್ಯದಲ್ಲೇ ನಡೆಯಲಿರುವ ಪಂಚ ರಾಜ್ಯ ಚುನಾವಣೆಗಳು ಲೋಕಸಭಾ ಚುನಾವಣೆಗೆ ದಿಕ್ಸೂಚಿ ಎಂದು ಬಣ್ಣಿಸಿದ್ದಾರೆ.

ಇನ್ನು ರಾಷ್ಟ್ರ ರಾಜಕಾರಣದ ಚಿತ್ರಣವನ್ನು ತೆರೆದಿಟ್ಟಿರುವ ಮಾಜಿ ಪ್ರಧಾನಿ ದೇವೇಗೌಡ ದೇಶದಲ್ಲಿ ತೃತಿಯ ರಂಗ ಸ್ಥಾಪನೆ ಮಾಡುವುದು ಸದ್ಯಕ್ಕೆ ಕಷ್ಟವಿದೆ. ಪಂಚ ರಾಜ್ಯ ಚುನಾವಣೆ ಲೋಕಸಭಾ ಚುನಾವಣೆಗೆ ದಿಕ್ಸೂಚಿಯಾಗಲಿದೆ ಎಂದು ವ್ಯಾಖ್ಯಾನಿಸಿದ್ದಾರೆ. ತಮ್ಮ JDS ಪಕ್ಷವನ್ನು ಸರ್ವನಾಶ ಮಾಡಲು ಬಿಜೆಪಿ, ಕಾಂಗ್ರೆಸ್ ಹೊರಟಿವೆ! ಆದರೆ ಸದ್ಯದ ಕಾಂಗ್ರೆಸ್ ಸ್ಥಿತಿ ಶೋಚನೀಯವಾಗಿದೆ. ಬಿಜೆಪಿಯನ್ನು ಈಗ ಬಿಜೆಪಿ ಅಂತ ಕರೆಯಬೇಕೋ, ಇಲ್ಲವೇ ಮೋದಿ ಪಾರ್ಟಿ ಅಂತ ಕರೆಯಬೇಕೋ ಗೊತ್ತಿಲ್ಲ. ಬಿಜೆಪಿ ಈಗ ಒನ್ ಮ್ಯಾನ್ ಪಾರ್ಟಿಯಾಗಿದೆ. ಅದರ ಮುಂದಿನ ಪರಿಣಾಮ ಏನಾಗುತ್ತೋ ಅದೂ ಗೊತ್ತಿಲ್ಲ ಎಂದು ಮಾರ್ಮಿಕವಾಗಿ ಹೇಳಿದರು.

ನಾನು ಆಕಸ್ಮಿಕವಾಗಿ ದೆಹಲಿಗೆ ಹೋದೆ. ನಾನು ಪ್ರಧಾನಿಯಾದ ಮೇಲೆ ಜೆ.ಎಚ್. ಪಟೇಲ್, ಸಿದ್ದರಾಮಯ್ಯ ರಾಜ್ಯದಲ್ಲಿ ಆಡಳಿತ ನಡೆಸಿದರು. ಅಂದಿನಿಂದ ರಾಜ್ಯದಲ್ಲಿ ಜನತಾದಳ ನಿಧಾನವಾಗಿ ವರ್ಚಸ್ಸು ಕಳೆದುಕೊಂಡಿತು. ಈ ಪಕ್ಷವನ್ನು ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷದವರು ಸರ್ವನಾಶ ಮಾಡಲು ಹೊರಟಿದ್ದಾರೆ ಎಂದು ದೇವೇಗೌಡ ಹೇಳಿದರು. ರಾಮನಗರದಲ್ಲಿ ಸಾರ್ವಜನಿಕ ವೇದಿಕೆಯ ಮೇಲೆಯೇ ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರ ನಡುವಣ ಗಲಾಟೆ ವಿಚಾರವಾಗಿ ಮಾತನಾಡಿದ ದೇವೇಗೌಡರು ಈ ರೀತಿಯ ಘಟನೆ ಆಗಬಾರದು. ಎರಡು ರಾಷ್ಟ್ರೀಯ ಪಕ್ಷದ ನಾಯಕರು ಈ ರೀತಿ ವರ್ತಿಸಬಾರದು ಎಂದು ಕಿವಿಮಾತು ಹೇಳಿದರು.

ಕಾಂಗ್ರೆಸ್ ಪಕ್ಷದ ವತಿಯಿಂದ ಹಮ್ಮಿಕೊಂಡಿರುವ ಮೇಕೆದಾಟು ಹೋರಾಟ ವಿಚಾರ ಪ್ರಸ್ತಾಪಿಸಿದ ದೇವೇಗೌಡರು ನೀರಾವರಿ ವಿಷಯದಲ್ಲಿ ನಾನು ಲಘುವಾಗಿ ಮಾತನಾಡಲ್ಲ. ಅರ್ಜಿ ವಿಚಾರಣೆ ಬಗ್ಗೆ ಸುಪ್ರೀಂ ಕೋರ್ಟ್​ನಲ್ಲಿ ದಿನಾಂಕ ನಿಗದಿಯಾಗಿದೆ. ಮೇಕೆದಾಟು ವಿಚಾರದಲ್ಲಿ ವರ್ಚಸ್ಸು ಹೆಚ್ಚಳಕ್ಕೆ ಈಗ ಮುಂದಾಗಿದ್ದಾರೆ. ಆದರೆ ಸಿದ್ದರಾಮಯ್ಯ 5 ವರ್ಷ ಅಧಿಕಾರದಲ್ಲಿದ್ದಾಗ ಏಕೆ ಮಾಡಲಿಲ್ಲ? ಫಲ ಸಿಗುತ್ತೆ ಅಂತ ಮಾಡ್ತಿದ್ದಾರೆ, ಆದ್ರೆ ಅದು ಸುಲಭವಲ್ಲ ಎಂದು ಮಾಜಿ ಪ್ರಧಾನಿ ದೇವೇಗೌಡ ಹೇಳಿದರು.

Published On - 11:56 am, Wed, 5 January 22

Follow Us
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ