AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪ್ರಾಪ್ರ ಬಾಲಕಿ ಮೇಲೆ 4 ದಿನಗಳ ಕಾಲ ಅತ್ಯಾಚಾರ; ಆರೋಪಿಗೆ 20 ವರ್ಷ ಜೈಲು, 95 ಸಾವಿರ ದಂಡ

ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಕರಜಗಿ ಗ್ರಾಮದಲ್ಲಿರುವ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಓದುತ್ತಿದ್ದ ಅಪ್ರಾಪ್ತ ಬಾಲಕಿ, ಕಾಲೇಜು ಮುಗಿಸಿಕೊಂಡು ಮರಳಿ ಮನೆಗೆ ಹೋಗುತ್ತಿದ್ದ ಸಮಯದಲ್ಲಿ ಬಾಲಕಿಯನ್ನು ಆರೋಪಿ ಅಂಬರೀಶ್ ಹೊನ್ನಳ್ಳಿ ಅನ್ನೋ ಯುವಕ ಅಪಹರಿಸಿ ಕೆರದುಕೊಂಡು ಹೋಗಿದ್ದ.

ಅಪ್ರಾಪ್ರ ಬಾಲಕಿ ಮೇಲೆ 4 ದಿನಗಳ ಕಾಲ ಅತ್ಯಾಚಾರ; ಆರೋಪಿಗೆ 20 ವರ್ಷ ಜೈಲು, 95 ಸಾವಿರ ದಂಡ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Dec 23, 2021 | 9:01 AM

Share

ಕಲಬುರಗಿ: ಅಪ್ರಾಪ್ತ ಬಾಲಕಿಯನ್ನು ಅಪಹರಿಸಿಕೊಂಡು ಹೋಗಿ, ನಾಲ್ಕು ದಿನಗಳ ಕಾಲ ಬಾಲಕಿ ಮೇಲೆ ಒತ್ತಾಯಪೂರ್ಕವಾಗಿ ಅತ್ಯಾಚಾರ ನಡೆಸಿದ್ದ ಆರೋಪಿಗೆ ಇಪ್ಪತ್ತು ವರ್ಷ ಕಠಿಣ ಜೈಲು ಶಿಕ್ಷೆ ಮತ್ತು 95 ಸಾವಿರ ದಂಡವನ್ನು ವಿಧಿಸಿ, ಕಲಬುರಗಿಯ ಎರಡನೇ ಅಪರ ಜಿಲ್ಲಾ ವಿಶೇಷ ಸತ್ರ ನ್ಯಾಯಾಲಯ ಆದೇಶ ಮಾಡಿದೆ. ಈ ಬಗ್ಗೆ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಶ್ರೀಮತಿ ಹೇಮಾವತಿ ಅವರು ಆದೇಶ ಹೊರಡಿಸಿದ್ದಾರೆ. ಜೊತೆಗೆ ಸುಳ್ಳು ಸಾಕ್ಷಿ ಹೇಳಿದ ನೊಂದ ಬಾಲಕಿ ಮತ್ತು ಬಾಲಕಿಯ ತಂದೆ ವಿರುದ್ಧ ಕೂಡಾ ಪ್ರಕರಣ ದಾಖಲಿಸಲು ಆದೇಶ ಹೊರಡಿಸಿದ್ದಾರೆ.

ಘಟನೆ ವಿವರ: ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಕರಜಗಿ ಗ್ರಾಮದಲ್ಲಿರುವ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಓದುತ್ತಿದ್ದ ಅಪ್ರಾಪ್ತ ಬಾಲಕಿ, ಕಾಲೇಜು ಮುಗಿಸಿಕೊಂಡು ಮರಳಿ ಮನೆಗೆ ಹೋಗುತ್ತಿದ್ದ ಸಮಯದಲ್ಲಿ ಬಾಲಕಿಯನ್ನು ಆರೋಪಿ ಅಂಬರೀಶ್ ಹೊನ್ನಳ್ಳಿ ಅನ್ನೋ ಯುವಕ ಅಪಹರಿಸಿ ಕೆರದುಕೊಂಡು ಹೋಗಿದ್ದ. ಜೂನ್ 26, 2019 ರಂದು ಬಾಲಕಿಯನ್ನು ಅಪಹರಿಸಿ ಕರೆದುಕೊಂಡು ಹೋಗಿದ್ದ ಯುವಕ ಒತ್ತಾಯಪೂರ್ವಕವಾಗಿ ತನ್ನ ಬೈಕ್ ಮೇಲೆ ಯುವತಿಯನ್ನು ಕರೆದುಕೊಂಡು ಮಹರಾಷ್ಟ್ರದ ಸೊಲ್ಲಾಪುರದಲ್ಲಿನ ಮನೆಯೊಂದರಲ್ಲಿ ಅಕ್ರಮವಾಗಿ ಬಂಧನದಲ್ಲಿಟ್ಟಿದ್ದ. ಅಕ್ರಮವಾಗಿ ಬಂಧನದಲ್ಲಿಟ್ಟದ್ದಲ್ಲದೆ, ನಾಲ್ಕು ದಿನಗಳ ಕಾಲ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ್ದ.

ಘಟನೆ ಬಗ್ಗೆ ಬಾಲಕಿಯ ತಂದೆ, ಅಫಜಲಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಆಗ ಅಫಜಲಪುರ ಠಾಣೆಯ ಸರ್ಕಲ್ ಇನ್ಸಪೆಕ್ಟರ್ ಮಹಾಂತೇಶ್ ಪಾಟೀಲ್, ತನಿಖೆ ನಡೆಸಿ ಆರೋಪಿಯ ವಿರುದ್ಧ ಐಪಿಸಿ ಸೆಕ್ಷನ್ 366( ಎ)506, 376(2)(ಐ)(ಎನ್) 342, ಪೋಕ್ಸೋ ಕಾಯ್ದೆಯಡಿ ಆರೋಪಿಯ ವಿರುದ್ಧ ದೋಷಾರೋಪಣೆ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿದ ಎರಡನೇ ಅಪರ ಜಿಲ್ಲಾ ಮತ್ತು ವಿಶೇಷ ಸತ್ರ ನ್ಯಾಯಾಧೀಶರಾದ ಶ್ರೀಮತಿ ಹೇಮಾವತಿ ಅವರು, ಪ್ರಕರಣ ಆರೋಪಿಗೆ, ಕಲಂ 366(ಎ) ಅಡಿಯಲ್ಲಿನ ಅಪರಾಧಕ್ಕೆ ಹತ್ತು ವರ್ಷ ಶಿಕ್ಷೆ ಹಾಗೂ 25 ಸಾವಿರ ರೂಪಾಯಿ ದಂಡ ವಿಧಿಸಿದೆ. ಕಲಂ 376(2)(ಐ) (ಎನ್) ಐಪಿಸಿ ಹಾಗೂ ಕಲಂ ಆರು ಪೋಕ್ಸೋ ಕಾಯ್ದೆ ಅಡಿಯಲ್ಲಿ ಆರೋಪಿತನಿಗೆ ಇಪ್ಪತ್ತು ವರ್ಷ ಕಠಿಣ ಶಿಕ್ಷೆ ಹಾಗೂ ಐವತ್ತು ಸಾವಿರ ರೂಪಾಯಿ ದಂಡ ವಿಧಿಸಿದೆ. ಕಲಂ 342 ಐಪಿಸಿ ಅಡಿಯಲ್ಲಿನ ಅಪರಾಧಕ್ಕೆ ಒಂದು ವರ್ಷ ಶಿಕ್ಷೆ ಹಾಗೂ ಹತ್ತು ಸಾವಿರ ದಂಡ ವಿಧಿಸಿದೆ. ಕಲಂ 506 ಐಪಿಸಿ ಅಡಿಯಲ್ಲಿನ ಅಪರಾಧಕ್ಕೆ ಎರಡು ವರ್ಷ ಶಿಕ್ಷೆ ಹಾಗೂ ಹತ್ತು ಸಾವಿರ ದಂಡ ವಿಧಿಸಲಾಗಿದೆ. 2021 ರ ಡಿಸೆಂಬರ್ 20 ರಂದು ಮಾನ್ಯ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ.

ನೊಂದ ಬಾಲಕಿಗೆ ಪರಿಹಾರ ಇನ್ನು ಅತ್ಯಾಚಾರದಿಂದ ನೊಂದ ಬಾಲಕಿಗೆ ಜಿಲ್ಲಾ ಕಾನೂನು ಪ್ರಾಧಿಕಾರದಿಂದ ಮೂರು ಲಕ್ಷ ರೂಪಾಯಿ ಪರಿಹಾರ ನೀಡಬೇಕೆಂದು ಆದೇಶ ಮಾಡಲಾಗಿದೆ. ಜೊತೆಗೆ ಆರೋಪಿಗೆ ವಿಧಿಸಿರುವ ದಂಡದ ಮೊತ್ತದಲ್ಲಿ 75 ಸಾವಿರ ರೂಪಾಯಿ ಹಣವನ್ನು ನೊಂದ ಬಾಲಿಕಿಗೆ ನೀಡಲು ಆದೇಶ ಹೊರಡಿಸಲಾಗಿದೆ.

ಸುಳ್ಳು ಕೇಸ್ ಹೇಳಿದವರ ವಿರುದ್ದ ಕೂಡಾ ಪ್ರಕರಣ ಇನ್ನು ನೊಂದ ಬಾಲಕಿಯ ತಂದೆಯೇ, ತನ್ನ ಮಗಳ ಮೇಲೆ ಅತ್ಯಾಚಾರವಾಗಿದ್ದರ ಬಗ್ಗೆ ಅಫಜಲಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪೂರಕ ವಿಚಾರಣೆ ವೇಳೆ ಕೂಡಾ ಬಾಲಕಿ ಮತ್ತು ಬಾಲಕಿಯ ತಂದೆ ಅತ್ಯಾಚಾರಕ್ಕೆ ಸಂಬಂಧಿಸಿದಂತೆ ಸಾಕ್ಷಿ ನುಡದಿದ್ದರು. ಆದರೆ ಮಾನ್ಯ ನ್ಯಾಯಾಲಯಕ್ಕೆ ಹಾಜರಾಗಿ ಸುಳ್ಳು ಸಾಕ್ಷಿ ನುಡಿದಿದ್ದರಿಂದ ನೊಂದ ಬಾಲಕಿ ಮತ್ತು ಬಾಲಕಿಯ ತಂದೆ ವಿರುದ್ಧ ಕೂಡಾ ಪ್ರಕರಣ ದಾಖಲಿಸಲು ಆದೇಶ ಹೊರಡಿಸಲಾಗಿದೆ. ಸರಕಾರದ ಪರವಾಗಿ ವಿಶೇಷ ಸರಕಾರಿ ಅಭಿಯೋಜಕರಾದ ಎಸ್ ಎಚ್ ಹಕೀಮ್ ಪ್ರಕರಣದ ವಾದವನ್ನು ಮಂಡಿಸಿದ್ದರು.

ವರದಿ- ಸಂಜಯ್ ಚಿಕ್ಕಮಠ

ಇದನ್ನೂ ಓದಿ: ಗರುಡ ಮಾಲ್​ನಲ್ಲಿ ಮೆಡಿವಲ್ ಆರ್ಟ್ ಶೋ, ಕ್ರಿಸ್ ಸಂತೆ; ಕೇಕ್ ಕತ್ತರಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ನಟಿ ರಾಧಿಕಾ ನಾರಾಯಣ್

ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ