AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿಯಲ್ಲಿ ಅಪರಾಧ ಕೃತ್ಯಗಳ ತಡೆಗೆ ಗೂಂಡಾ ಕಾಯ್ದೆ ಅಸ್ತ್ರ ಪ್ರಯೋಗ, ಕುಖ್ಯಾತ ರೌಡಿ ಬಂಧಿಸಿ ಜೈಲಿಗೆ ಕಳಿಸಿದ ಖಾಕಿ

ಚುನಾವಣೆ ಸಮೀಪಿಸುತ್ತಿದ್ದಂತೆ ಅಕ್ರಮಗಳು ಹೆಚ್ಚಾಗುವ ಹಿನ್ನೆಲೆ ಪೊಲೀಸರು ಅಲರ್ಟ್​ ಆಗಿದ್ದಾರೆ. ಕಲಬುರಗಿಯಲ್ಲಿ ಗೂಂಡಾ ಕಾಯ್ದೆಯಡಿ ರೌಡಿಯನ್ನು ಬಂಧಿಸಿ ಜೈಲಿಗೆ ಹಾಕಲಾಗಿದೆ. ಮೈಸೂರಿನಲ್ಲೂ ರೌಡಿಯನ್ನು ಗಡಿ ಪಾರು ಮಾಡಲಾಗಿದೆ.

ಕಲಬುರಗಿಯಲ್ಲಿ ಅಪರಾಧ ಕೃತ್ಯಗಳ ತಡೆಗೆ ಗೂಂಡಾ ಕಾಯ್ದೆ ಅಸ್ತ್ರ ಪ್ರಯೋಗ, ಕುಖ್ಯಾತ ರೌಡಿ ಬಂಧಿಸಿ ಜೈಲಿಗೆ ಕಳಿಸಿದ ಖಾಕಿ
ಕುಖ್ಯಾತ ರೌಡಿ ಸೈಯದ್​ ಆದೀಲ್​​
TV9 Web
| Edited By: |

Updated on:Dec 16, 2022 | 8:04 AM

Share

ಕಲಬುರಗಿ: ಜಿಲ್ಲೆಯಲ್ಲಿ ಅಪರಾಧ ಕೃತ್ಯಗಳ ತಡೆಗೆ ಗೂಂಡಾ ಕಾಯ್ದೆ ಅಸ್ತ್ರ(Goonda Act) ಪ್ರಯೋಗಿಸಲಾಗಿದೆ. ಕುಖ್ಯಾತ ರೌಡಿ ಸೈಯದ್​ ಆದೀಲ್​​ ವಿರುದ್ಧ ಗೂಂಡಾ ಕಾಯ್ದೆಯಡಿ ಕೇಸ್ ದಾಖಲಾಗಿದ್ದು ಸೈಯದ್ ಬಂಧಿಸಿ ಬೆಳಗಾವಿ ಜೈಲಿಗೆ ಕಳಿಸುವಂತೆ ಕಲಬುರಗಿ ನಗರ ಪೊಲೀಸ್ ಕಮಿಷನರ್​ ಡಾ.ರವಿಕುಮಾರ್ ಆದೇಶ ಹೊರಡಿಸಿದ್ದಾರೆ.

ಕಲಬುರಗಿಯ ವಿದ್ಯಾನಗರದ ನಿವಾಸಿಯಾಗಿರುವ ರೌಡಿ ಸೈಯದ್ ಆದೀಲ್​ ವಿರುದ್ಧ ಹಲವು ಪ್ರಕರಣಗಳು ದಾಖಲಾಗಿವೆ. ಕಲಬುರಗಿಯ ಅಶೋಕ ನಗರ ಠಾಣೆಯಲ್ಲಿ ಹಲವು ಕೇಸ್ ದಾಖಲಾಗಿದ್ದವು.

ಮೈಸೂರಿನ ರೌಡಿಶೀಟರ್ RX ಮನು ಗಡಿಪಾರು

ಇನ್ನು ಮೈಸೂರಿನಲ್ಲಿ ರೌಡಿ ಶೀಟರ್‌ಗಳ ವಿರುದ್ದ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಮೈಸೂರಿನ ಬನ್ನಿಮಂಟಪ ಹುಡ್ಕೋ ಬಡಾವಣೆಯ ನಿವಾಸಿ ಮನೋಜ್ ಕುಮಾರ್ ಅಲಿಯಾಸ್ RX ಮನು ಗಡಿ ಪಾರು ಮಾಡಲಾಗಿದೆ. ಅಪರಾಧ ಚಟುವಟಿಕೆಯಲ್ಲಿ ಭಾಗಿಯಾಗುತ್ತಿದ್ದ ಹಿನ್ನಲೆ ಮೈಸೂರು ನಗರ ವಿಶೇಷ ಕಾರ್ಯನಿರ್ವಾಹಕ ದಂಡಾಧಿಕಾರಿ, ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ ಪ್ರದೀಪ್ ಗುಂಟಿ ಒಂದು ತಿಂಗಳ ಕಾಲ ಮನು ಗಡಿಪಾರು ಮಾಡಿ ಆದೇಶಿಸಿದ್ದಾರೆ. ಮೈಸೂರಿನ ನರಸಿಂಹರಾಜ, ಲಷ್ಕರ್, ವಿಜಯನಗರ, ಮಂಡಿ, ಲಕ್ಷ್ಮಿಪುರಂ, ಜಯಲಕ್ಷ್ಮಿ ಪುರಂ, ಪೊಲೀಸ್ ಠಾಣೆಗಳಲ್ಲಿ ಈತನ ವಿರುದ್ದ ಹಲವು ಪ್ರಕರಣ ಹಲ್ಲೆ, ಕೊಲೆ ಯತ್ನ ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ: ವಿವಿಧ ಬೇಡಿಕೆ ಈಡೇರಿಕೆಗಾಗಿ ಇಂದು ಕೋಲಾರ, ಹಾಸನ ಬಂದ್; ಚಿನ್ನದ ನಾಡಲ್ಲಿ ಖಾಸಗಿ ಶಾಲೆಗಳಿಗೆ ರಜೆ

ಮೈಸೂರಿನಲ್ಲಿ ಮುಂದುವರಿದ ವಾಹನಗಳ ತಪಾಸಣಾ ಅಭಿಯಾನ

ಚುನಾವಣೆ ಸಮೀಪಿಸುತ್ತಿದ್ದಂತೆ ಅಕ್ರಮಗಳು ಹೆಚ್ಚಾಗುತ್ತಿವೆ.ಸದ್ಯ ವಾಹನಗಳಲ್ಲಿ ಮಾರಕಾಸ್ತ್ರಗಳು ಇಟ್ಟಿರುವ ಬಗ್ಗೆ ಮೈಸೂರಿನಲ್ಲಿ ತಪಾಸಣೆ ಮುಂದುವರೆದಿದೆ. ನಗರಕ್ಕೆ ಆಗಮಿಸುವ ವಾಹನಗಳನ್ನ ಪೊಲೀಸರು ಪರಿಶೀಲಿಸುತ್ತಿದ್ದಾರೆ. ಮೈಸೂರು ಪೊಲೀಸ್ ಕಮಿಷನರ್​ ರಮೇಶ್ ಸೂಚನೆ ಮೇರೆಗೆ ಜನರ ಸುರಕ್ಷತೆ, ಹಿತದೃಷ್ಟಿಯಿಂದ ಡಿಸಿಪಿ ಪ್ರದೀಪ್ ಗುಂಟಿ ನೇತೃತ್ವದಲ್ಲಿ ವಾಹನಗಳ ತಪಾಸಣೆ ಮಾಡಲಾಗುತ್ತಿದೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 8:04 am, Fri, 16 December 22

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?