Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಮು ಗಲಭೆ ಆರೋಪಿ ವಿರುದ್ಧ ಗೂಂಡಾ ಕಾಯ್ದೆ ದಾಖಲು: ಗಡಿಪಾರು ಮಾಡಲು ಆದೇಶ

ಆಳಂದ ಪಟ್ಟಣದ ಲಾಡ್ಲೆ ಮಶಾಕ್ ದರ್ಗಾದಲ್ಲಿ ಶಿವಲಿಂಗ ಸ್ವಚ್ಛತೆಗೆ ಬಿಜೆಪಿ ಶಾಸಕರು ತೆರಳಿದ್ದ ವೇಳೆ ಗಲಭೆ ನಡೆದಿತ್ತು.

ಕೋಮು ಗಲಭೆ ಆರೋಪಿ ವಿರುದ್ಧ ಗೂಂಡಾ ಕಾಯ್ದೆ ದಾಖಲು: ಗಡಿಪಾರು ಮಾಡಲು ಆದೇಶ
ಅಳಂದದಲ್ಲಿ ಕೋಮು ಗಲಭೆ ವೇಳೆ ಪೊಲೀಸ್ ಬಂದೋಬಸ್ತ್ ಹಾಕಲಾಗಿತ್ತು.
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:May 26, 2022 | 3:18 PM

ಕಲಬುರಗಿ: ಕೋಮು ಗಲಭೆಕೋರರ ವಿರುದ್ಧ ಕಠಿಣ ಕ್ರಮ ಜರುಗಿಸಲು ಸರ್ಕಾರ ಮುಂದಾಗಿದೆ. ಆರೋಪಿಗಳ ವಿರುದ್ಧ ಗೂಂಡಾ ಕಾಯ್ದೆ ದಾಖಲಿಸಿ, ಗಡಿಪಾರು ಮಾಡಲು ಆದೇಶ ಹೊರಡಿಸಲಾಗಿದೆ. ಆಳಂದ ಪಟ್ಟಣದ ಲಾಡ್ಲೆ ಮಶಾಕ್ ದರ್ಗಾದಲ್ಲಿ ಶಿವಲಿಂಗ ಸ್ವಚ್ಛತೆಗೆ ಬಿಜೆಪಿ ಶಾಸಕರು ತೆರಳಿದ್ದ ವೇಳೆ ಗಲಭೆ ನಡೆದಿತ್ತು. ಕೇಂದ್ರ ಚಿವ ಭಗವಂತ ಖೂಬಾ, ಜಿಲ್ಲಾಧಿಕಾರಿ ಮತ್ತು ಪೊಲೀಸರು ಸಹ ಸ್ಥಳದಲ್ಲಿ ಇದ್ದರು. ಕಲ್ಲುತೂರಾಟದ ಹಿನ್ನೆಲೆಯಲ್ಲಿ ಘಟನೆಯ ಮಾಸ್ಟರ್​ಮೈಂಡ್ ಎನ್ನುವ ಆರೋಪದ ಮೇಲೆ ಆರೋಪಿ ಫಿರ್ದೋಸ್​ನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು. ಈ ಸದ್ಯ ಕಲಬುರಗಿ ಕೇಂದ್ರ ಕಾರಾಗೃಹದಲ್ಲಿದ್ದಾನೆ. ಈತನನ್ನು ಗಡಿಪಾರು‌ ಮಾಡಲು ಜಿಲ್ಲಾಡಳಿತ ಸಜ್ಜಾಗಿದೆ. ಈತನ ವಿರುದ್ಧ ಗಲಭೆಗೆ ಪ್ರಚೋದನೆ, ಕೊಲೆ ಯತ್ನ ಸೇರಿ ಒಟ್ಟು 29 ಪ್ರಕರಣಗಳು ದಾಖಲಾಗಿವೆ.

ಆರೋಪಿಯ ಮೇಲೆ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಿ ಗಡಿಪಾರು ಆದೇಶ ಹೊರಡಿಸಬೇಕು ಎಂದು ಪೊಲೀಸರು ಮನವಿ ಮಾಡಿಕೊಂಡಿದ್ದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಯಶವಂತ್ ಗುರುಕಾರ್​ಗಡಿಪಾರು ಆದೇಶ ಹೊರಡಿಸಿದ್ದಾರೆ. ಆದೇಶದ ಹಿನ್ನೆಲೆಯಲ್ಲಿ ಅನ್ಸಾರಿ ಇದೀಗ ಕಲಬುರಗಿಯಿಂದ ಬೆಳಗಾವಿ ಜೈಲಿಗೆ ಶಿಫ್ಟ್​ ಆಗಲಿದ್ದಾನನೆ.

ಕಲ್ಲು ತೂರಾಟ ನಡೆದ ಹಿನ್ನೆಲೆಯಲ್ಲಿ ಆಳಂದ ತಾಲ್ಲೂಕಿನಲ್ಲಿ 144ನೇ ವಿಧಿ ಅನ್ವಯ ವಿಧಿಸಿದ್ದ ನಿಷೇಧಾಜ್ಞೆ ವಿಧಿಸಲಾಗಿತ್ತು. ಶಾಂತಿ, ಸುವ್ಯವಸ್ಥೆ, ಕೋಮು ಸೌಹಾರ್ದ ಕಾಪಾಡುವ ಉದ್ದೇಶದಿಂದ ಈ ನಿರ್ಧಾರ ತೆಗೆದುಕೊಳ್ಳಬೇಕಾಯಿತು ಎಂದು ಜಿಲ್ಲಾಧಿಕಾರಿ ಹೇಳಿದ್ದರು. ಲಾಡ್ಲೆ ಮಶಾಕ್ ದರ್ಗಾದ ಆವರಣದಲ್ಲಿರುವ ರಾಘವ ಚೈತನ್ಯ ಶಿವಲಿಂಗ ಪೂಜೆ ವಿಚಾರದಲ್ಲಿ ಗಲಾಟೆ ನಡೆದಿತ್ತು. ಕೇಂದ್ರ ಸಚಿವ ಭಗವಂತ ಖೂಬಾ, ಶಾಸಕರು, ಡಿಸಿ, ಎಸ್​ಪಿ ಕಾರಿನ ಮೇಲೆ ಕಲ್ಲು ತೂರಾಟ ನಡೆದಿತ್ತು. ಈ ಹಿನ್ನೆಲೆಯಲ್ಲಿ 165 ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದರು.

ಕರ್ನಾಟಕದ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ. ದೇಶದ ಇತರ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:18 pm, Thu, 26 May 22

ಡಿಕೆ ಶಿವಕುಮಾರ್​ ಕೂಡ ಏಕನಾಥ ಶಿಂಧೆ ರೀತಿ ಆಗಬಹುದು: ಆರ್​ ಅಶೋಕ್
ಡಿಕೆ ಶಿವಕುಮಾರ್​ ಕೂಡ ಏಕನಾಥ ಶಿಂಧೆ ರೀತಿ ಆಗಬಹುದು: ಆರ್​ ಅಶೋಕ್
ಸದ್ಗುರು ವಾಸುದೇವ್ ಖುದ್ದಾಗಿ ಮನೆಗೆ ಬಂದು ಆಹ್ವಾನಿಸಿದ್ದರು: ಶಿವಕುಮಾರ್
ಸದ್ಗುರು ವಾಸುದೇವ್ ಖುದ್ದಾಗಿ ಮನೆಗೆ ಬಂದು ಆಹ್ವಾನಿಸಿದ್ದರು: ಶಿವಕುಮಾರ್
ಮಹಿಳಾ ಪಿಡಿಒಗೆ ಚಪ್ಪಲಿಯಿಂದ ಹೊಡೆದ ಗ್ರಾಮ ಪಂಚಾಯಿತಿ ಸದಸ್ಯೆ
ಮಹಿಳಾ ಪಿಡಿಒಗೆ ಚಪ್ಪಲಿಯಿಂದ ಹೊಡೆದ ಗ್ರಾಮ ಪಂಚಾಯಿತಿ ಸದಸ್ಯೆ
ಲೇಡಿ ಕಾನ್​ಸ್ಟೇಬಲ್​ರನ್ನು ಸಾರ್ವಜನಿಕವಾಗಿ ನಿಂದಿಸಿದ ಹೆಡ್ ಕಾನ್​ಸ್ಟೇಬಲ್
ಲೇಡಿ ಕಾನ್​ಸ್ಟೇಬಲ್​ರನ್ನು ಸಾರ್ವಜನಿಕವಾಗಿ ನಿಂದಿಸಿದ ಹೆಡ್ ಕಾನ್​ಸ್ಟೇಬಲ್
ವಿಧಾನಸೌಧ ಆವರಣದಲ್ಲಿ ಮೊದಲ ಬಾರಿಗೆ ಪುಸ್ತಕ ಮೇಳ ಆಯೋಜನೆ
ವಿಧಾನಸೌಧ ಆವರಣದಲ್ಲಿ ಮೊದಲ ಬಾರಿಗೆ ಪುಸ್ತಕ ಮೇಳ ಆಯೋಜನೆ
ಲಕ್ಷ್ಮಿ ಹೆಬ್ಬಾಳ್ಕರ್​ಗೆ ಭವತಿ ಭಿಕ್ಷಾಂ ದೇಹಿ ಎಂದ ವಿದ್ಯಾರ್ಥಿಗಳು !
ಲಕ್ಷ್ಮಿ ಹೆಬ್ಬಾಳ್ಕರ್​ಗೆ ಭವತಿ ಭಿಕ್ಷಾಂ ದೇಹಿ ಎಂದ ವಿದ್ಯಾರ್ಥಿಗಳು !
ರಾಜಸ್ಥಾನದ ಬಿಜೆಪಿ ಅಧ್ಯಕ್ಷರೆದುರೇ ಇಬ್ಬರು ನಾಯಕರ ಹೊಡೆದಾಟ; ವಿಡಿಯೋ ವೈರಲ್
ರಾಜಸ್ಥಾನದ ಬಿಜೆಪಿ ಅಧ್ಯಕ್ಷರೆದುರೇ ಇಬ್ಬರು ನಾಯಕರ ಹೊಡೆದಾಟ; ವಿಡಿಯೋ ವೈರಲ್
ಚಾಮುಂಡೇಶ್ವರಿ ದೇವಾಲಯಕ್ಕೆ ಬಂದ ದರ್ಶನ್ ಪುತ್ರ ವಿನೀಶ್
ಚಾಮುಂಡೇಶ್ವರಿ ದೇವಾಲಯಕ್ಕೆ ಬಂದ ದರ್ಶನ್ ಪುತ್ರ ವಿನೀಶ್
ಕಾಂಗ್ರೆಸ್ ಸಾಮೂಹಿಕ ನಾಯಕತ್ವದಲ್ಲಿ ವಿಶ್ವಾಸ ಹೊಂದಿದೆ: ಎಂಬಿ ಪಾಟೀಲ್
ಕಾಂಗ್ರೆಸ್ ಸಾಮೂಹಿಕ ನಾಯಕತ್ವದಲ್ಲಿ ವಿಶ್ವಾಸ ಹೊಂದಿದೆ: ಎಂಬಿ ಪಾಟೀಲ್
ಘಟನೆ ವಿವರಿಸಿದ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳು
ಘಟನೆ ವಿವರಿಸಿದ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳು