AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತಿಥಿ ಉಪನ್ಯಾಸಕನ ಹತ್ಯೆ: ಬೈಕಿನಿಂದ ಗುದ್ದಿದ ದುಷ್ಕರ್ಮಿಗಳು, ಮಾರಕಾಸ್ತ್ರದಿಂದ ಇರಿದು ಬರ್ಬರವಾಗಿ ಕೊಲೆ ಮಾಡಿಬಿಟ್ಟರು!

ಉಪನ್ಯಾಸಕ ರವಿ ಯಾರ ತಂಟೆಗೂ ಹೋದವರಲ್ಲವಂತೆ. ತಾವಾಯ್ತು ತಮ್ಮ ಕೆಲಸವಾಯ್ತು ಅಂತ ಇದ್ದರಂತೆ. ಕುಸನೂರು ಸಮೀಪ ಬಾಡಿಗೆ ಮನೆ ಮಾಡಿಕೊಂಡು ಪತ್ನಿ ಜೊತೆ ವಾಸವಾಗಿದ್ದರು. ಮದುವೆಯಾಗಿ 3 ವರ್ಷವಾಗಿದ್ದು, ಮಗು ನಿರೀಕ್ಷೆಯಲ್ಲಿದ್ದರಂತೆ.

ಅತಿಥಿ ಉಪನ್ಯಾಸಕನ ಹತ್ಯೆ: ಬೈಕಿನಿಂದ ಗುದ್ದಿದ ದುಷ್ಕರ್ಮಿಗಳು, ಮಾರಕಾಸ್ತ್ರದಿಂದ ಇರಿದು ಬರ್ಬರವಾಗಿ ಕೊಲೆ ಮಾಡಿಬಿಟ್ಟರು!
ಅತಿಥಿ ಉಪನ್ಯಾಸಕ ರವಿ ಪಟ್ಟೇದಾರ್ ಬರ್ಬರ ಹತ್ಯೆ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Apr 15, 2023 | 11:46 AM

Share

ಆತ ಅತಿಥಿ ಉಪನ್ಯಾಸಕರಾಗಿ (Lecturer) ಕೆಲಸ ಮಾಡುತ್ತಿದ್ದ. ನೂರಾರು ಮಕ್ಕಳಿಗೆ ತಿದ್ದಿ ಬುದ್ದಿ ಹೇಳೋ ಗುರುವಿನ ಸ್ಥಾನದಲ್ಲಿದ್ದ. ಕಳೆದ ರಾತ್ರಿ ನಡೆದುಕೊಂಡು ಬರ್ತಿದ್ದ ಉಪನ್ಯಾಸಕನಿಗೆ ಹಿಂದಿನಿಂದ ಬಂದು ಬೈಕ್ ನಿಂದ ಗುದ್ದಿಸಿದ ದುಷ್ಕರ್ಮಿಗಳು, ಮಾರಕಾಸ್ತ್ರದಿಂದ ಇರಿದು ಬರ್ಬರ ಕೊಲೆ (Murder) ಮಾಡಿದ್ದಾರೆ. ಜನನಿಬಿಡ ರಸ್ತೆಯಲ್ಲಿಯೇ ಬರ್ಬರ ಕೊಲೆ ಕಲಬುರಗಿ (Kalaburagi) ಜನರು ಬೆಚ್ಚಿಬೀಳುವಂತೆ ಮಾಡಿದೆ. ಇದರಿಂದ ಮೃತನ ಕುಟುಂಬಕ್ಕಂತೂ ದಿಕ್ಕೇ ತೋಚದಂತಾಗಿದೆ. ರಸ್ತೆಯಲ್ಲಿಯೇ ಅನೇಕರು ಬಿದ್ದು ಒದ್ಡಾಡುತ್ತಿದ್ದರೆ, ಇನ್ನು ಅನೇಕರ ಆಕ್ರಂದನ ಮುಗಿಲು ಮುಟ್ಟಿತ್ತು. ಅದರಲ್ಲೂ ಪತ್ನಿಗೆ ದಿಕ್ಕೇ ತೋಚದಂತಹ ಸ್ಥಿತಿ ನಿರ್ಮಾಣವಾಗಿತ್ತು. ಮದುವೆಯಾಗಿ ಕೇವಲ ಮೂರು ವರ್ಷವಾಗಿತ್ತು. ಮಕ್ಕಳು ಕೂಡಾ ಇಲ್ಲ. ಆದ್ರೆ ಬಾಳಿ ಬದುಕಬೇಕಿದ್ದ ಪತಿ, ಬರ್ಬರವಾಗಿ ಕೊಲೆಯಾಗಿದ್ದ ಸುದ್ದಿ ಪತ್ನಿಗೆ ಬರಸಿಡಿಲು ಬಡಿದಂತೆ ಮಾಡಿದ್ರೆ, ಇತ್ತ ಹೆತ್ತವರಿಗೆ ಕೂಡಾ ಮಗನ ಕೊಲೆ ದೊಡ್ಡ ಶಾಕ್ ನೀಡಿದೆ.

ಹೌದು, ಕಲಬುರಗಿ ನಗರದ ಹೊರವಲಯದಲ್ಲಿರುವ ಕುಸನೂರು ಗ್ರಾಮದ ನಿವಾಸಿಯಾಗಿದ್ದ ರವಿ ಪಟ್ಟೇದಾರ್ ಅನ್ನೋ 35 ವರ್ಷದ ವ್ಯಕ್ತಿಯ ಬರ್ಬರ ಕೊಲೆಯಾಗಿದೆ. ರವಿ ಪಟ್ಟೇದಾರ್, ಚಿತ್ತಾಪುರ ಪಟ್ಟಣದಲ್ಲಿರುವ ಸರ್ಕಾರಿ ಡಿಗ್ರಿ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕನಾಗಿ ಕೆಲಸ ಮಾಡುತ್ತಿದ್ದ. ತಾನಾಯ್ತು ತನ್ನ ಕುಟುಂಬವಾಯ್ತು ಅಂತ ಇದ್ದ ರವಿ, ನಿನ್ನೆ ಸಹೋದರಿ ಮನೆಯಲ್ಲಿದ್ದ ತಾಯಿಯನ್ನು ಕುಸನೂರು ಗ್ರಾಮಕ್ಕೆ ಕರೆದುಕೊಂಡು ಬಂದು, ಮನೆಗೆ ಬಿಟ್ಟಿದ್ದನಂತೆ.

ಇತ್ತ ರಾತ್ರಿ ಎಂಟು ಗಂಟೆ ಸಮಯದಲ್ಲಿ ಪತ್ನಿಗೆ ಪೋನ್ ಮಾಡಿ, ಮಾತನಾಡುತ್ತಾ ತಾಯಿಗೆ ಸಮೀಪದ ಹೋಟೆಲ್ ನಿಂದ ಊಟ ತೆಗೆದುಕೊಂಡು ಹೋಗಲು ಬರ್ತಿದ್ದರಂತೆ. ಆದ್ರೆ ಬೈಕ್ ನಲ್ಲಿ ಬಂದಿದ್ದ ಕೆಲ ದುಷ್ಕರ್ಮಿಗಳು, ಮೊದಲು ರವಿಗೆ ಬೈಕ್ ನಿಂದ ಗುದ್ದಿಸಿದ್ದಾರೆ. ಹೀಗಾಗಿ ರವಿ, ರಸ್ತೆ ಪಕ್ಕದಲ್ಲಿ ಬಿದ್ದಿದ್ದಾರೆ.

ಆಗ ಆತನಿಗೆ ಮಾರಕಾಸ್ತ್ರದಿಂದ ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾರೆ. ಇತ್ತ ಪತ್ನಿ ಪೋನ್ ಕಾಲ್ ಕಟ್ ಕೂಡಾ ಆಗಿರಲಿಲ್ಲವಂತೆ. ಆದ್ರೆ ಪತಿ ಮಾತನಾಡದೇ ಇದ್ದಾಗ, ಮತ್ತೆ ಕಾಲ್ ಕಟ್ ಮಾಡಿ ಮತ್ತೊಮ್ಮೆ ಪತ್ನಿ ಕರೆ ಮಾಡಿದ್ದಾಳೆ. ಆಗ ಪೋನ್ ಯಾರು ಕೂಡಾ ರಿಸೀವ್ ಮಾಡಿರಲಿಲ್ಲವಂತೆ. ಆದ್ರೆ ನಂತರ ಕೆಲ ಸ್ಥಳೀಯರು ಪೋನ್ ಮಾಡಿ ಮಾಹಿತಿ ತಿಳಿಸಿದ್ದಾರೆ.

ಇನ್ನು ರವಿ ಯಾರ ತಂಟೆಗೆ ಕೂಡಾ ಹೋದವರಲ್ಲವಂತೆ. ತಾವಾಯ್ತು ತಮ್ಮ ಕೆಲಸವಾಯ್ತು ಅಂತ ಇದ್ದರಂತೆ. ಕುಸನೂರು ಸಮೀಪದಲ್ಲಿಯೇ ಬಾಡಿಗೆ ಮನೆ ಮಾಡಿಕೊಂಡು ಪತ್ನಿ ಜೊತೆ ವಾಸವಾಗಿದ್ದ ರವಿ, ಅತಿಥಿ ಉಪನ್ಯಾಸಕರಾಗಿ ನೂರಾರು ಮಕ್ಕಳಿಗೆ ಪಾಠ ಮಾಡುತ್ತಾ, ಬುದ್ದಿ ಮಾತು ಹೇಳುವ ಕೆಲಸ ಮಾಡುತ್ತಿದ್ದರು. ಮದುವೆಯಾಗಿ ಮೂರು ವರ್ಷವಾಗಿದ್ದು, ಮಕ್ಕಳ ನಿರೀಕ್ಷೆಯಲ್ಲಿ ಕೂಡಾ ದಂಪತಿ ಇದ್ದರಂತೆ.

ಆದ್ರೆ ಇದೇ ಸಮಯದಲ್ಲಿ ರವಿ ಬರ್ಬರ ಕೊಲೆಯಾಗಿದೆ. ಇನ್ನು ರವಿ ಕೊಲೆಗೆ ಹಳೆಯ ವೈಷಮ್ಯವೇ ಕಾರಣ ಅಂತ ಹೇಳಲಾಗುತ್ತಿದೆ. ಯಾಕಂದ್ರೆ ರವಿಯ ಸಹೋದರ ದತ್ತು ಅನ್ನೋನು ಕೆಲ ತಿಂಗಳ ಹಿಂದೆ ಆತನ ಸಂಬಂಧಿಯನ್ನು ಕೊಲೆ ಮಾಡಿದ್ದನಂತೆ. ಇದೇ ಕಾರಣಕ್ಕೆ ರವಿಯ ಸಹೋದರ ಜೈಲಲ್ಲಿ ಕೂಡಾ ಇದ್ದಾನಂತೆ. ಆದ್ರೆ ಈ ಕೊಲೆಗೂ ರವಿಗೂ ಯಾವುದೇ ಸಂಬಂಧ ಇರಲಿಲ್ಲವಂತೆ. ಆದ್ರು ಕೂಡಾ ಈ ಹಿಂದೆ ಕೊಲೆಯಾಗಿರುವ ಉದಯಕುಮಾರ್ ಅವರ ಕುಟುಂಬದವರೇ ಕೊಲೆ ಮಾಡಿರಬಹುದು ಅನ್ನೋ ಅನುಮಾನ ಇದೀಗ ರವಿ ಕುಟುಂಬದವರು ಮಾಡುತ್ತಿದ್ದಾರೆ.

ಸದ್ಯ ರವಿ ಕೊಲೆಗೆ ಸಂಬಂಧಿಸಿದಂತೆ ವಿಶ್ವವಿದ್ಯಾಲಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ಕೂಡಾ ಮಾಡುತ್ತಿದ್ದಾರೆ. ತನಿಖೆ ನಂತರ, ಕೊಲೆಗಾರರು ಯಾರು, ಕೊಲೆಗೆ ನಿಖರ ಕಾರಣವೇನು ಅನ್ನೋದು ಗೊತ್ತಾಗಲಿದೆ. ಆದ್ರೆ ಪ್ರತಿನಿತ್ಯ ನೂರಾರು ಮಕ್ಕಳಿಗೆ ಆದರ್ಶದ ಮಾತುಗಳನ್ನು ಹೇಳುತ್ತಾ, ಅನೇಕರ ಬಾಳಿಗೆ ಬೆಳಕು ನೀಡುವ ಸ್ಥಾನದಲ್ಲಿದ್ದ ಉಪನ್ಯಾಸಕನ ಬರ್ಬರ ಕೊಲೆಯಾಗಿರುವದು ಮಾತ್ರ ದುರ್ದೈವದ ಸಂಗತಿಯಾಗಿದೆ.

ವರದಿ: ಸಂಜಯ್, ಟಿವಿ9, ಕಲಬುರಗಿ

Published On - 11:46 am, Sat, 15 April 23

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ