AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಲಬರ್ಗಾ ವಿಶ್ವವಿದ್ಯಾಲಯದ‌ ಅತಿಥಿ ಉಪನ್ಯಾಸಕನ ಕಾಮಕೇಳಿ ಆಡಿಯೋ ವೈರಲ್

Kalaburagi News: ಗುಲಬರ್ಗಾ ವಿಶ್ವವಿದ್ಯಾಲಯದ‌ ಅತಿಥಿ ಉಪನ್ಯಾಸಕರದ್ದು ಎನ್ನಲಾದ ಕಾಮಕೇಳಿ ಆಡಿಯೋ ಒಂದು ಇದೀಗ ವೈರಲ್ ಆಗಿದ್ದು, ವಿವಿ ಕ್ಯಾಂಪಸ್​ನಲ್ಲಿ ಇದೀಗ ಈ ಆಡಿಯೋ ಭಾರೀ ಸದ್ದು ಮಾಡುತ್ತಿದೆ.

ಗುಲಬರ್ಗಾ ವಿಶ್ವವಿದ್ಯಾಲಯದ‌ ಅತಿಥಿ ಉಪನ್ಯಾಸಕನ ಕಾಮಕೇಳಿ ಆಡಿಯೋ ವೈರಲ್
ಸಾಂದರ್ಭಿಕ ಚಿತ್ರ
ರಮೇಶ್ ಬಿ. ಜವಳಗೇರಾ
|

Updated on:Jun 07, 2023 | 10:00 AM

Share

ಕಲಬುರಗಿ: ಗುಲಬರ್ಗಾ ವಿಶ್ವವಿದ್ಯಾಲಯದ‌(gulbarga university )ಅತಿಥಿ ಉಪನ್ಯಾಸಕರದ್ದು ಎನ್ನಲಾದ ಕಾಮಕೇಳಿ ಆಡಿಯೋ ಒಂದು ಇದೀಗ ವೈರಲ್ ಆಗಿದೆ. ವಿಶ್ವವಿದ್ಯಾಲಯದ ಎಂಬಿಎ ವಿಭಾಗದ ಅತಿಥಿ ಉಪನ್ಯಾಸಕ(guest lecturer), ವಿದ್ಯಾರ್ಥಿನಿಗೆ ಕರೆ ಮಾಡಿ ಮಂಚಕ್ಕೆ ಕರೆದಿರುವುದು ಆಡಿಯೋದಲ್ಲಿದೆ.  ಈ ಆಡಿಯೋ ಎಂಬಿಎ ವಿಭಾಗದ ಅತಿಥಿ ಉಪನ್ಯಾಸಕನದ್ದು ಎನ್ನಲಾಗಿದ್ದು,ಅತಿಥಿ ಉಪನ್ಯಾಸಕ ವಿದ್ಯಾರ್ಥಿನಿ ಜೊತೆ ಒಟ್ಟು 23 ನಿಮಿಷ ಮಾತನಾಡಿರುವ ಈ ಆಡಿಯೋ ವಿಶ್ವವಿದ್ಯಾಯಲದ ಕ್ಯಾಂಪಸ್​ನಲ್ಲಿ ಕಂಪನ ಸೃಷ್ಟಿಸಿದೆ.

ಇದನ್ನು ಓದಿ: On duty romance: ಬಿಲ್ ಕಲೆಕ್ಟರ್​- ಕಂಪ್ಯೂಟರ್​ ಆಪರೇಟರ್​​ ತಮ್ಮ ಸರ್ಕಾರಿ ಕಚೇರಿಯ ಟೇಬಲ್ ಮೇಲೆಯೇ ಕಾಮಕೇಳಿ ಆಡ್ತಿದ್ದವು, ಮೇಲಾಧಿಕಾರಿ ಇಬ್ಬರನ್ನೂ ಮನೆಗೆ ಕಳಿಸಿದರು!

ಎಂಬಿಎ ವಿಭಾಗದ ಕೊನೆಯ ಸೆಮಿಸ್ಟರ್ ನಲ್ಲಿ ಓದುತ್ತಿದ್ದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿರುವುದು ಆಡಿಯೋದಲ್ಲಿದೆ. ನೀನು ನನಗೆ ಗರ್ಲ್ ಪ್ರೆಂಡ್ ಆಗಿರು ಎಂದು ಅತಿಥಿ ಉಪನ್ಯಾಸಕ ವಿದ್ಯಾರ್ಥಿನಿಗೆ ಪೀಡಿಸಿದ್ದಾರೆ. ಆದ್ರೆ, ಅತಿಥಿ ಉಪನ್ಯಾಸಕನ ಮಾತಿಗೆ ವಿದ್ಯಾರ್ಥಿನಿ ನೋ ಎಂದಿದ್ದಾಳೆ. ಆರು ತಿಂಗಳ ಹಿಂದೆ ಮಾತನಾಡಿದ್ದ ಆಡಿಯೋ ಇದೀಗ ವೈರಲ್ ಆಗಿದ್ದು, ಈ ಬಗ್ಗೆ ಯಾವುದೇ ದೂರು ದಾಖಲಾಗಿಲ್ಲ. ಆದ್ರೆ, ಇದೀಗ ಈ ಆಡಿಯೋ ಫುಲ್ ವೈರಲ್ ಆಗಿದ್ದು,  ಗುಲಬರ್ಗಾ ವಿಶ್ವವಿದ್ಯಾಲಯದ ಕ್ಯಾಂಪಸ್​ನಲ್ಲಿ ಭಾರೀ ಸಂಚಲನ ಮೂಡಿಸಿದೆ.

23 ನಿಮಿಷ ಆಡಿಯೋದಲ್ಲಿ ಅನೇಕ ಸಂಗತಿಗಳ ಬಗ್ಗೆ ಮಾತನಾಡಿದ್ದು, ಇದು ಹೇಗೆ ಲೀಕ್ ಆಯ್ತು? ಯಾರು ಲೀಕ್ ಮಾಡಿದ್ರು? ಯಾರು ಆ ಅತಿಥಿ ಉಪನ್ಯಾಸಕ? ಎನ್ನುವುದು ನಿಗೂಢವಾಗಿದ್ದು, ಈ ಬಗ್ಗೆ ಕ್ಯಾಂಪಸ್​ನಲ್ಲಿ ವಿದ್ಯಾರ್ಥಿಗಳ ಮಧ್ಯೆ ಗುಸು-ಗುಸು ಶುರುವಾಗಿದೆ.

ಮತ್ತಷ್ಟು ಕಲಬುರಗಿ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 8:31 am, Wed, 7 June 23

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!