AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಲಬರ್ಗಾ ವಿಶ್ವವಿದ್ಯಾಲಯದ‌ ಅತಿಥಿ ಉಪನ್ಯಾಸಕನ ಕಾಮಕೇಳಿ ಆಡಿಯೋ ವೈರಲ್

Kalaburagi News: ಗುಲಬರ್ಗಾ ವಿಶ್ವವಿದ್ಯಾಲಯದ‌ ಅತಿಥಿ ಉಪನ್ಯಾಸಕರದ್ದು ಎನ್ನಲಾದ ಕಾಮಕೇಳಿ ಆಡಿಯೋ ಒಂದು ಇದೀಗ ವೈರಲ್ ಆಗಿದ್ದು, ವಿವಿ ಕ್ಯಾಂಪಸ್​ನಲ್ಲಿ ಇದೀಗ ಈ ಆಡಿಯೋ ಭಾರೀ ಸದ್ದು ಮಾಡುತ್ತಿದೆ.

ಗುಲಬರ್ಗಾ ವಿಶ್ವವಿದ್ಯಾಲಯದ‌ ಅತಿಥಿ ಉಪನ್ಯಾಸಕನ ಕಾಮಕೇಳಿ ಆಡಿಯೋ ವೈರಲ್
ಸಾಂದರ್ಭಿಕ ಚಿತ್ರ
Follow us
ರಮೇಶ್ ಬಿ. ಜವಳಗೇರಾ
|

Updated on:Jun 07, 2023 | 10:00 AM

ಕಲಬುರಗಿ: ಗುಲಬರ್ಗಾ ವಿಶ್ವವಿದ್ಯಾಲಯದ‌(gulbarga university )ಅತಿಥಿ ಉಪನ್ಯಾಸಕರದ್ದು ಎನ್ನಲಾದ ಕಾಮಕೇಳಿ ಆಡಿಯೋ ಒಂದು ಇದೀಗ ವೈರಲ್ ಆಗಿದೆ. ವಿಶ್ವವಿದ್ಯಾಲಯದ ಎಂಬಿಎ ವಿಭಾಗದ ಅತಿಥಿ ಉಪನ್ಯಾಸಕ(guest lecturer), ವಿದ್ಯಾರ್ಥಿನಿಗೆ ಕರೆ ಮಾಡಿ ಮಂಚಕ್ಕೆ ಕರೆದಿರುವುದು ಆಡಿಯೋದಲ್ಲಿದೆ.  ಈ ಆಡಿಯೋ ಎಂಬಿಎ ವಿಭಾಗದ ಅತಿಥಿ ಉಪನ್ಯಾಸಕನದ್ದು ಎನ್ನಲಾಗಿದ್ದು,ಅತಿಥಿ ಉಪನ್ಯಾಸಕ ವಿದ್ಯಾರ್ಥಿನಿ ಜೊತೆ ಒಟ್ಟು 23 ನಿಮಿಷ ಮಾತನಾಡಿರುವ ಈ ಆಡಿಯೋ ವಿಶ್ವವಿದ್ಯಾಯಲದ ಕ್ಯಾಂಪಸ್​ನಲ್ಲಿ ಕಂಪನ ಸೃಷ್ಟಿಸಿದೆ.

ಇದನ್ನು ಓದಿ: On duty romance: ಬಿಲ್ ಕಲೆಕ್ಟರ್​- ಕಂಪ್ಯೂಟರ್​ ಆಪರೇಟರ್​​ ತಮ್ಮ ಸರ್ಕಾರಿ ಕಚೇರಿಯ ಟೇಬಲ್ ಮೇಲೆಯೇ ಕಾಮಕೇಳಿ ಆಡ್ತಿದ್ದವು, ಮೇಲಾಧಿಕಾರಿ ಇಬ್ಬರನ್ನೂ ಮನೆಗೆ ಕಳಿಸಿದರು!

ಎಂಬಿಎ ವಿಭಾಗದ ಕೊನೆಯ ಸೆಮಿಸ್ಟರ್ ನಲ್ಲಿ ಓದುತ್ತಿದ್ದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿರುವುದು ಆಡಿಯೋದಲ್ಲಿದೆ. ನೀನು ನನಗೆ ಗರ್ಲ್ ಪ್ರೆಂಡ್ ಆಗಿರು ಎಂದು ಅತಿಥಿ ಉಪನ್ಯಾಸಕ ವಿದ್ಯಾರ್ಥಿನಿಗೆ ಪೀಡಿಸಿದ್ದಾರೆ. ಆದ್ರೆ, ಅತಿಥಿ ಉಪನ್ಯಾಸಕನ ಮಾತಿಗೆ ವಿದ್ಯಾರ್ಥಿನಿ ನೋ ಎಂದಿದ್ದಾಳೆ. ಆರು ತಿಂಗಳ ಹಿಂದೆ ಮಾತನಾಡಿದ್ದ ಆಡಿಯೋ ಇದೀಗ ವೈರಲ್ ಆಗಿದ್ದು, ಈ ಬಗ್ಗೆ ಯಾವುದೇ ದೂರು ದಾಖಲಾಗಿಲ್ಲ. ಆದ್ರೆ, ಇದೀಗ ಈ ಆಡಿಯೋ ಫುಲ್ ವೈರಲ್ ಆಗಿದ್ದು,  ಗುಲಬರ್ಗಾ ವಿಶ್ವವಿದ್ಯಾಲಯದ ಕ್ಯಾಂಪಸ್​ನಲ್ಲಿ ಭಾರೀ ಸಂಚಲನ ಮೂಡಿಸಿದೆ.

23 ನಿಮಿಷ ಆಡಿಯೋದಲ್ಲಿ ಅನೇಕ ಸಂಗತಿಗಳ ಬಗ್ಗೆ ಮಾತನಾಡಿದ್ದು, ಇದು ಹೇಗೆ ಲೀಕ್ ಆಯ್ತು? ಯಾರು ಲೀಕ್ ಮಾಡಿದ್ರು? ಯಾರು ಆ ಅತಿಥಿ ಉಪನ್ಯಾಸಕ? ಎನ್ನುವುದು ನಿಗೂಢವಾಗಿದ್ದು, ಈ ಬಗ್ಗೆ ಕ್ಯಾಂಪಸ್​ನಲ್ಲಿ ವಿದ್ಯಾರ್ಥಿಗಳ ಮಧ್ಯೆ ಗುಸು-ಗುಸು ಶುರುವಾಗಿದೆ.

ಮತ್ತಷ್ಟು ಕಲಬುರಗಿ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 8:31 am, Wed, 7 June 23

ಚಿತ್ರರಂಗದಲ್ಲಿ 50 ವರ್ಷ ಪೂರೈಸಿದ ಸಾಯಿ ಕುಮಾರ್; ‘ರಂಗಿತರಂಗ’ ಸ್ಪೆಷಲ್
ಚಿತ್ರರಂಗದಲ್ಲಿ 50 ವರ್ಷ ಪೂರೈಸಿದ ಸಾಯಿ ಕುಮಾರ್; ‘ರಂಗಿತರಂಗ’ ಸ್ಪೆಷಲ್
ಪುರಿ ಜಗನ್ನಾಥ ದೇವಾಲಯದ ರಥಯಾತ್ರೆಯಲ್ಲಿ 10 ಲಕ್ಷಕ್ಕೂ ಹೆಚ್ಚು ಜನ ಭಾಗಿ
ಪುರಿ ಜಗನ್ನಾಥ ದೇವಾಲಯದ ರಥಯಾತ್ರೆಯಲ್ಲಿ 10 ಲಕ್ಷಕ್ಕೂ ಹೆಚ್ಚು ಜನ ಭಾಗಿ
ಧಾರವಾಡ ಟು ಬೆಂಗಳೂರು ವಂದೇ ಭಾರತ್​ ರೈಲಿನಲ್ಲಿ ಬೆಂಕಿ
ಧಾರವಾಡ ಟು ಬೆಂಗಳೂರು ವಂದೇ ಭಾರತ್​ ರೈಲಿನಲ್ಲಿ ಬೆಂಕಿ
ಹುಲಿಗಳ ಅಸಹಜ ಸಾವನ್ನು ಸರ್ಕಾರ ಹಗುರವಾಗಿ ಪರಿಗಣಿಸಿದಂತಿದೆ
ಹುಲಿಗಳ ಅಸಹಜ ಸಾವನ್ನು ಸರ್ಕಾರ ಹಗುರವಾಗಿ ಪರಿಗಣಿಸಿದಂತಿದೆ
ತಾಜ್​ ಮಹಲ್ ಮುಂದೆ ವಿಜಯಲಕ್ಷ್ಮಿಗೆ ಪ್ರಪೋಸ್ ಮಾಡಿದ ಪ್ರೇಮ್ ಥಾಪ: ವಿಡಿಯೋ
ತಾಜ್​ ಮಹಲ್ ಮುಂದೆ ವಿಜಯಲಕ್ಷ್ಮಿಗೆ ಪ್ರಪೋಸ್ ಮಾಡಿದ ಪ್ರೇಮ್ ಥಾಪ: ವಿಡಿಯೋ
ಕೊನೆಯ ಎಸೆತ, 1 ರನ್ ಬೇಕು; ಕ್ಯಾಚ್ ಬಿಟ್ಟ ನೈಟ್ ರೈಡರ್ಸ್ ತಂಡಕ್ಕೆ ಸೋಲು
ಕೊನೆಯ ಎಸೆತ, 1 ರನ್ ಬೇಕು; ಕ್ಯಾಚ್ ಬಿಟ್ಟ ನೈಟ್ ರೈಡರ್ಸ್ ತಂಡಕ್ಕೆ ಸೋಲು
ಶಾಸಕ ಅಶ್ವಥ್ ನಾರಾಯಣ್ ಮನೇಲಿ ಬಿಜೆಪಿ ನಾಯಕರ ಸಭೆ ನಡೆದಿದ್ದು ಯಾಕೆ?
ಶಾಸಕ ಅಶ್ವಥ್ ನಾರಾಯಣ್ ಮನೇಲಿ ಬಿಜೆಪಿ ನಾಯಕರ ಸಭೆ ನಡೆದಿದ್ದು ಯಾಕೆ?
ಮಂಗಳಮುಖಿಯರ ಅಶ್ಲೀಲ ಡ್ಯಾನ್ಸ್, ಕೆಂಪೇಗೌಡರ ಜಯಂತಿಯಲ್ಲಿ ಇದೆಂಥಾ ನೃತ್ಯ...?
ಮಂಗಳಮುಖಿಯರ ಅಶ್ಲೀಲ ಡ್ಯಾನ್ಸ್, ಕೆಂಪೇಗೌಡರ ಜಯಂತಿಯಲ್ಲಿ ಇದೆಂಥಾ ನೃತ್ಯ...?
ನಂದಿನಿ ಸ್ಕೂಟರ್​ಗೆ ಗುದ್ದಿದ ಕಾರು ಓಡಿಸುತ್ತಿದ್ದ ಮಹಿಳೆ ಕುಡಿದಿದ್ದಳೇ?
ನಂದಿನಿ ಸ್ಕೂಟರ್​ಗೆ ಗುದ್ದಿದ ಕಾರು ಓಡಿಸುತ್ತಿದ್ದ ಮಹಿಳೆ ಕುಡಿದಿದ್ದಳೇ?
ಕಾಂಗ್ರೆಸ್​ಗೆ ಸ್ವಾತಂತ್ರ್ಯಕ್ಕಾಗಿ ನಡೆದ ಕ್ರಾಂತಿ ಮಾತ್ರ ಗೊತ್ತು: ಪಾಟೀಲ್
ಕಾಂಗ್ರೆಸ್​ಗೆ ಸ್ವಾತಂತ್ರ್ಯಕ್ಕಾಗಿ ನಡೆದ ಕ್ರಾಂತಿ ಮಾತ್ರ ಗೊತ್ತು: ಪಾಟೀಲ್