AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಲ್ಬರ್ಗಾ ವಿವಿ ಕುಲಪತಿಗೆ ಆ್ಯಸಿಡ್ ದಾಳಿ ಬೆದರಿಕೆ: ಬಿಇಡಿ ಅಂಕ ಹಗರಣ ಬಯಲಿಗೆಳೆದಿದ್ದೇ ಮುಳುವಾಯ್ತು

ಬಿಇಡಿ ಪರೀಕ್ಷಾ ಅಕ್ರಮ ಬಯಲಿಗೆಳೆದ ಗುಲ್ಬರ್ಗಾ ವಿವಿ ಕುಲಪತಿ ಪ್ರೊ. ಶಶಿಕಾಂತ್ ಅವರಿಗೆ ಆ್ಯಸಿಡ್ ದಾಳಿಯ ಬೆದರಿಕೆ ಬಂದಿದೆ. ಮರುಮೌಲ್ಯಮಾಪನದಲ್ಲಿ ಅಂಕ ಕಡಿಮೆಯಾದರೆ ದಾಳಿ ಮಾಡುವುದಾಗಿ ಅನಾಮಧೇಯ ಪತ್ರ ಬಂದಿದೆ. ಅಕ್ರಮ ಬಯಲಿಗೆಳೆದಿದ್ದೇ ಇದೀಗ ಕುಲಪತಿಗೆ ಮುಳುವಾಯ್ತಾ ಎಂಬ ಪ್ರಶ್ನೆ ಮೂಡಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.

ಗುಲ್ಬರ್ಗಾ ವಿವಿ ಕುಲಪತಿಗೆ ಆ್ಯಸಿಡ್ ದಾಳಿ ಬೆದರಿಕೆ: ಬಿಇಡಿ ಅಂಕ ಹಗರಣ ಬಯಲಿಗೆಳೆದಿದ್ದೇ ಮುಳುವಾಯ್ತು
ಪ್ರೊ. ಶಶಿಕಾಂತ್ & ಗುಲ್ಬರ್ಗಾ ವಿವಿImage Credit source: tv9
ದತ್ತಾತ್ರೇಯ ಪಾಟೀಲ, ಕಲಬುರಗಿ
| Edited By: |

Updated on: May 09, 2026 | 9:40 AM

Share

ಕಲಬುರಗಿ, ಮೇ 9: ಗುಲ್ಬರ್ಗಾ ವಿಶ್ವವಿದ್ಯಾಲಯದ (Gulbarga University) ಕುಲಪತಿ ಪ್ರೊ. ಶಶಿಕಾಂತ್ ಅವರಿಗೆ ಅನಾಮಧೇಯ ವ್ಯಕ್ತಿಯೊಬ್ಬ ಆ್ಯಸಿಡ್ ದಾಳಿ ಮಾಡುವುದಾಗಿ ಬೆದರಿಕೆ ಪತ್ರ ಬರೆದಿದ್ದಾನೆ. 2024ರಲ್ಲಿ ನಡೆದ ಬಿಇಡಿ ಪರೀಕ್ಷೆಯ ಮೌಲ್ಯಮಾಪನದಲ್ಲಿ ನಡೆದಿದ್ದ ಭ್ರಷ್ಟಾಚಾರ ಮತ್ತು ಅಕ್ರಮಗಳನ್ನು ಕುಲಪತಿಗಳು ಪತ್ತೆಹಚ್ಚಿ ತನಿಖೆಗೆ ಆದೇಶಿಸಿದ ಹಿನ್ನೆಲೆಯಲ್ಲಿ ಈ ಬೆದರಿಕೆ ಹಾಕಲಾಗಿದೆ. ವಿಶ್ವವಿದ್ಯಾಲಯದ ಇತಿಹಾಸದಲ್ಲೇ ಕುಲಪತಿಗಳ ವಿರುದ್ಧ ಈ ಮಟ್ಟದ ಬೆದರಿಕೆ ಬಂದಿರುವುದು ಇದೇ ಮೊದಲಾಗಿದ್ದು, ಆತಂಕಕ್ಕೆ ಕಾರಣವಾಗಿದೆ.

ಮುಖ್ಯಾಂಶಗಳು

  • 2024ರ ಬಿಇಡಿ ಮೌಲ್ಯಮಾಪನ ಅಕ್ರಮ ಪತ್ತೆಹಚ್ಚಿದ್ದ ಕುಲಪತಿ ಪ್ರೊ. ಶಶಿಕಾಂತ್.
  • ಅಂಕ ತಿದ್ದುಪಡಿ ಹಗರಣದ ಬಗ್ಗೆ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ.
  • ಮರುಮೌಲ್ಯಮಾಪನದಲ್ಲಿ ಫೇಲ್ ಆದರೆ ಮುಖಕ್ಕೆ ಆ್ಯಸಿಡ್ ಹಾಕುವುದಾಗಿ ಅನಾಮಧೇಯ ಬೆದರಿಕೆ.

ಅಕ್ರಮಕ್ಕೆ ತಡೆಯೊಡ್ಡಿದ್ದೇ ಮುಳುವಾಯಿತೇ?

ಕಳೆದ ಬಿಇಡಿ ಪರೀಕ್ಷೆಯ ಮೌಲ್ಯಮಾಪನದಲ್ಲಿ ದೊಡ್ಡ ಮಟ್ಟದ ಅಕ್ರಮ ನಡೆದಿರುವುದು ವಿವಿಯ ಆಂತರಿಕ ಸಮಿತಿಯ ವರದಿಯಿಂದ ದೃಢಪಟ್ಟಿತ್ತು. ಕುಲಪತಿಗಳು ಈ ವಿಷಯವನ್ನು ತಕ್ಷಣವೇ ಸರ್ಕಾರ ಮತ್ತು ರಾಜ್ಯಪಾಲರ ಗಮನಕ್ಕೆ ತಂದಿದ್ದರು. ರಾಜ್ಯಪಾಲರ ಆದೇಶದಂತೆ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖಾ ಸಮಿತಿ ರಚನೆಯಾಗಿದ್ದು, ಸಮಿತಿಯ ಸೂಚನೆಯ ಮೇರೆಗೆ ಸದ್ಯ ಮರುಮೌಲ್ಯಮಾಪನ ಪ್ರಕ್ರಿಯೆ ನಡೆಯುತ್ತಿದೆ. ಈ ಮರುಮೌಲ್ಯಮಾಪನದಿಂದಾಗಿ ಅಕ್ರಮವಾಗಿ ಅಂಕ ಪಡೆದವರಿಗೆ ಸಂಕಷ್ಟ ಎದುರಾಗಿದೆ.

ಬೆದರಿಕೆ ಪತ್ರದಲ್ಲೇನಿತ್ತು?

‘2 ಲಕ್ಷ ರೂಪಾಯಿ ನೀಡಿ ಬಿಇಡಿ ಪ್ರವೇಶ ಪಡೆದು ಫಲಿತಾಂಶಕ್ಕಾಗಿ ಕಾಯುತ್ತಿದ್ದೇವೆ. ವಿವಿಯ ಸತ್ಯಶೋಧನಾ ಸಮಿತಿಯ ನಿರ್ಧಾರ ನಮಗೆ ಇಷ್ಟವಾಗಿಲ್ಲ. ಒಂದು ವೇಳೆ ಮರುಮೌಲ್ಯಮಾಪನದಿಂದಾಗಿ ಅಂಕಗಳು ಕಡಿಮೆಯಾದರೆ ಅಥವಾ ನಾವು ಅನುತ್ತೀರ್ಣರಾದರೆ, ನಿಮ್ಮ ಮುಖಕ್ಕೆ ಆ್ಯಸಿಡ್ ಹಾಕಿ ನರಳಿ ಬದುಕುವಂತೆ ಮಾಡುತ್ತೇವೆ’ ಎಂದು ಪತ್ರದಲ್ಲಿ ಎಚ್ಚರಿಕೆ ನೀಡಲಾಗಿದೆ.

ಇದನ್ನೂ ಓದಿ: ಹಣ ಕೊಟ್ಟವರಿಗೆ ಬೇಕಾಬಿಟ್ಟಿ ಅಂಕ: ಗುಲಬರ್ಗಾ ವಿವಿಯ ಕರ್ಮಕಾಂಡ ಬಯಲು

ಈ ಅನಾಮಧೇಯ ಪತ್ರದಿಂದ ಆತಂಕಗೊಂಡ ಕುಲಪತಿಗಳು ನ್ಯಾಯಾಲಯದ ಮೊರೆ ಹೋಗಿದ್ದು, ಈಗ ಕೋರ್ಟ್ ನಿರ್ದೇಶನದಂತೆ ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್