AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿಯಲ್ಲಿ ಭೂಮಿಯಿಂದ ಮತ್ತೆ ಕೇಳಿ ಬಂತು ಭಾರಿ ಶಬ್ದ!

ಇಂದು ಬೆಳಗ್ಗೆ 9.50ರ ಸುಮಾರಿಗೆ ಮತ್ತೆ ಭೂಮಿಯಿಂದ ಭಾರಿ ಶಬ್ದ ಕೇಳಿಬಂದಿದೆ. ಈಗಾಗಲೇ ಲಘು ಭೂಕಂಪನದಿಂದ ಜನರು ಕಂಗಾಲಾಗಿದ್ದಾರೆ.

ಕಲಬುರಗಿಯಲ್ಲಿ ಭೂಮಿಯಿಂದ ಮತ್ತೆ ಕೇಳಿ ಬಂತು ಭಾರಿ ಶಬ್ದ!
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Oct 28, 2021 | 11:58 AM

Share

ಕಲಬುರಗಿ: ಚಿಂಚೋಳಿ ತಾಲೂಕಿನ ಗಡಿಕೇಶ್ವರ ಮತ್ತು ಹೊಸಳ್ಳಿ ಹೆಚ್ ಗ್ರಾಮಗಳಲ್ಲಿ ಭಾರಿ ಶಬ್ದ ಕೇಳಿಬಂದಿದೆ. ಕೆಲ ದಿನಗಳ ಹಿಂದೆ ನಿರಂತರವಾಗಿ ಭೂಮಿ ಕಂಪಿಸುತ್ತಿತ್ತು. ಒಂದು ವಾರದಿಂದ ಯಾವುದೇ ರೀತಿಯ ಶಬ್ದ ಇರಲಿಲ್ಲ. ಆದರೆ ಇಂದು (ಅ.28) ಬೆಳಗ್ಗೆ 9.50ರ ಸುಮಾರಿಗೆ ಮತ್ತೆ ಭೂಮಿಯಿಂದ ಭಾರಿ ಶಬ್ದ ಕೇಳಿಬಂದಿದೆ. ಈಗಾಗಲೇ ಲಘು ಭೂಕಂಪನದಿಂದ ಜನರು ಕಂಗಾಲಾಗಿದ್ದಾರೆ. ಇಂದು ಕೇಳಿ ಬಂದ ಭಾರಿ ಶಬ್ದದಿಂದ ಜನರು ಆತಂಕಗೊಂಡಿದ್ದಾರೆ.

ಜಿಲ್ಲೆಯ ಹಲವೆಡೆ ಪದೇಪದೆ ಭೂಕಂಪ ವಿಚಾರಕ್ಕೆ ಸಂಬಂಧಿಸಿ ಪರಿಶೀಲನೆ ನಡೆಸಲು ಭೂಕಂಪ ಪೀಡಿತ ಗ್ರಾಮಗಳಿಗೆ ಭೂವಿಜ್ಞಾನಿಗಳ ತಂಡ ಭೇಟಿ ಅಕ್ಟೋಬರ್ 13 ರಂದು ನೀಡಿದ್ದರು. ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ತಂಡದಿಂದ ಪರಿಶೀಲನೆ ಮಾಡಲಾಗಿತ್ತು. ಕಿರಿಯ ಭೂವಿಜ್ಞಾನಿ ರಮೇಶ್ ದಿಕ್ಬಾಲ್, ವೈಜ್ಞಾನಿಕ ಸಹಾಯಕ ಸಂತೋಷ್ ಸೇರಿ ಆರು ಜನರು ಭೇಟಿ ಮಾಡಿದ್ದರು. ಗಡಿಕೇಶ್ವರ, ಹಲಚೇರಾ, ಹೊಸಳ್ಳಿ ಸೇರಿ ಕೆಲ ಗ್ರಾಮಕ್ಕೆ ಭೇಟಿ ಕೊಟ್ಟಿದ್ದಾರೆ. ಭೂಕಂಪದ ಕೇಂದ್ರ ಬಿಂದುವಿಗೂ ಭೇಟಿ ನೀಡಿ ಪರಿಶೀಲನೆ ಮಾಡಿದ್ದರು.

ಕಾಳಗಿ, ಚಿಂಚೋಳಿ ತಾಲೂಕಿನ ಅನೇಕ ಹಳ್ಳಿಗಳಲ್ಲಿ ಭೂಕಂಪನ ಆಗಿತ್ತು. ಕಳೆದ ಕೆಲವು ದಿನಗಳಲ್ಲಿ ಕೆಲವು ಬಾರಿ ಭೂಕಂಪನ ಉಂಟಾಗಿತ್ತು. ಇದರಿಂದ ಜನರು ಬಹಳಷ್ಟು ಆತಂಕಕ್ಕೆ ಒಳಗಾಗಿದ್ದರು. ಗಡಿಕೇಶ್ವರ ಗ್ರಾಮದಲ್ಲಿ ನಿರಂತರವಾಗಿ ಭೂಕಂಪನ ಹಿನ್ನೆಲೆ ಸ್ಥಳೀಯ ಜನರು ಗ್ರಾಮ ತೊರೆದು ಹೋಗಲು ಶುರುಮಾಡಿದ್ದಾರೆ. ಇಂದು ಕೂಡಾ ಜನರು ಗ್ರಾಮ ತೊರೆದು ಹೋಗುತ್ತಿರುವ ದೃಶ್ಯ ಕಂಡುಬಂದಿತ್ತು. ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಗಡಿಕೇಶ್ವರ ಗ್ರಾಮದಲ್ಲಿ ಭೂಕಂಪ ಭಯ ಹಿನ್ನೆಲೆಯಲ್ಲಿ ಜನರು ಮನೆ ತೊರದು ಬೇರಡೆ ಹೋಗುತ್ತಿದ್ದಾರೆ. ಸಂಬಂಧಿಕರ ಬೇರೆ ಬೇರೆ ಗ್ರಾಮಗಳಿಗೆ ಜನ ತೆರಳಿದ್ದಾರೆ.

ಇದನ್ನೂ ಓದಿ

ವಿಮಾನದಲ್ಲಿ ತಯಾರಾಯ್ತು ರೆಸ್ಟೋರೆಂಟ್; ಗುಜರಾತ್​ನ ಫ್ಲೈಟ್ ಥೀಮ್ ರೆಸ್ಟೋರೆಂಟ್ ವಿಶೇಷತೆ ಏನು ಗೊತ್ತಾ?

ಜಮೀನು ವಿವಾದಕ್ಕೆ 2 ಗ್ರಾಮಗಳ ನಡುವೆ ಮಾರಾಮಾರಿ; 13 ಜನರಿಗೆ ಗಾಯ, ಇಬ್ಬರು ಅರೆಸ್ಟ್

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ